ಯುದ್ಧದಿಂದ ಎಲ್ಪಿಜಿ ಅಭಾವ: ಶವಾಗಾರದಲ್ಲಿ LPG ಬದಲು ಎಲೆಕ್ಟ್ರಿಕ್ ಅಂತ್ಯಕ್ರಿಯೆ!
ಮಧ್ಯಪ್ರಾಚ್ಯ ಯುದ್ಧದಿಂದ ಎಲ್ಪಿಜಿ ಕೊರತೆಯ ಭೀತಿ ಎದುರಾಗಿದ್ದು, ಪುಣೆಯ ಶವಾಗಾರವು ಎಲೆಕ್ಟ್ರಿಕ್ ಅಂತ್ಯಸಂಸ್ಕಾರಕ್ಕೆ ಮೊರೆಹೋಗಿದೆ. ಈ ಸಂಘರ್ಷವು 'ಜಲಯುದ್ಧ'ವಾಗಿ ಮಾರ್ಪಟ್ಟಿದ್ದು, ಇರಾನ್-ಅಮೆರಿಕ ನೀರಿನ ಘಟಕಗಳ ಮೇಲೆ ದಾಳಿ ನಡೆಸಿವೆ. ದುಬೈನಲ್ಲಿ ತೀವ್ರ ಆಹಾರದ ಕೊರತೆ ಉಂಟಾಗಿದೆ.

ಎಲ್ಪಿಜಿ ಕೊರತೆ
ಮಧ್ಯಪ್ರಾಚ್ಯ ಯುದ್ಧದಿಂದ ಎಲ್ಪಿಜಿ ಕೊರತೆಯ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಬೃಹತ್ ಶವಾಗಾರವಾಗಿರುವ ಪುಣೆ ವೈಕುಂಠ ಧಾಮವು ಎಲ್ಪಿಜಿ ಬದಲಿಗೆ ಎಲೆಕ್ಟ್ರಿಕ್ ಯಂತ್ರಗಳ ಮೂಲಕ ಶವಗಳ ಅಂತ್ಯಸಂಸ್ಕಾರಕ್ಕೆ ನಿರ್ಧರಿಸಿದೆ.
ಎಲೆಕ್ಟ್ರಿಕ್ ಯಂತ್ರದ ಮೂಲಕ ಶವಗಳ ಅಂತ್ಯಕ್ರಿಯೆ
ಪುಣೆಯ ನವಿ ಪೇಠದಲ್ಲಿ 17 ಕಿ.ಮೀ. ವ್ಯಾಪ್ತಿಯಲ್ಲಿ ವಿಸ್ತರಿಸಿರುವ ಈ ಶವಾಗಾರದಲ್ಲಿ ದಿನಕ್ಕೆ ಕನಿಷ್ಠ 20 ಶವಗಳ ದಹನಕ್ರಿಯೆ ನಡೆಯುತ್ತದೆ. ಇದೀಗ ಎಲ್ಪಿಜಿ ಕೊರತೆಯ ಆತಂಕ ಎದುರಾಗಿರುವುದರಿಂದ ಅದರ ಬಳಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬದಲಿದೆ ಎಲೆಕ್ಟ್ರಿಕ್ ಯಂತ್ರದ ಮೂಲಕ ಶವಗಳ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಲಯುದ್ಧ
ಸೇನಾ ನೆಲೆ, ರಾಯಭಾರ ಕಚೇರಿ, ತೈಲ ಡಿಪೋ, ಸರ್ಕಾರಿ ಕಚೇರಿಗಳ ಮೇಲಿನ ದಾಳಿಯ ಬಳಿಕ ಮಧ್ಯಪ್ರಾಚ್ಯದ ಯುದ್ಧವೀಗ ಜಲಯುದ್ಧವಾಗಿ ಮಾರ್ಪಟ್ಟಿದೆ. ಮಧ್ಯಪ್ರಾಚ್ಯದಲ್ಲಿ ಪೆಟ್ರೋಲ್ಗಿಂತಲೂ ಹೆಚ್ಚಿನ ಬೆಲೆ ಹೊಂದಿರುವ ನೀರಿನ ಘಟಕಗಳ ಮೇಲೆ ಇರಾನ್- ಅಮೆರಿಕ ಪರಸ್ಪರ ದಾಳಿ ನಡೆಸಿದ್ದು ಭಾರೀ ಆತಂಕ ಹುಟ್ಟುಹಾಕಿದೆ. ಬಹ್ರೇನ್ನ ನೀರು ಘಟಕ ಮೇಲೆ ಇರಾನ್, ಇರಾನ್ನ ನೀರು ಘಟಕದ ಮೇಲೆ ಅಮೆರಿಕ ದಾಳಿ ಮಾಡಿದೆ.
ಇರಾನ್ ಜತೆಗಿನ ಸಂಘರ್ಷ
ಇರಾನ್ ಜತೆಗಿನ ಸಂಘರ್ಷ 3 ತಿಂಗಳಾದರೂ ನಡೆಯುತ್ತದೆ ಎಂದಿದ್ದ ಅಮೆರಿಕ ಅಧ್ಯಕ್ಷ ಟ್ರಂಪ್, ಇದೀಗ ಇಸ್ರೇಲ್ಗೆ 6000 ಕೋಟಿ ರು. ಮೌಲ್ಯದ 20,000 ಬಾಂಬ್ಗಳನ್ನು ಇಸ್ರೇಲ್ಗೆ ರವಾನಿಸುವಂತೆ ತಮ್ಮ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
ಕೊಲ್ಲಿ ರಾಷ್ಟ್ರಗಳು
ಅಮೆರಿಕ, ಇರಾನ್ ಮತ್ತು ಇಸ್ರೇಲ್ ಸಂಘರ್ಷದಿಂದ ಕೊಲ್ಲಿ ರಾಷ್ಟ್ರಗಳು ಬಲಿಪಶುಗಳಾಗುತ್ತಿದ್ದು, ದುಬೈನಲ್ಲಿ ತಾಜಾ ಆಹಾರಕ್ಕೂ ಸಂಚಕಾರ ಬಂದೊದಗಿದೆ. ಇಲ್ಲಿ ಕೇವಲ 8 ದಿನಗಳಿಗೆ ಆಗುವಷ್ಟು ಮಾತ್ರವೇ ಆಹಾರ ದಾಸ್ತಾನುಗಳಿರುವುದು ಸದ್ಯ ಆತಂಕಕ್ಕೆ ಕಾರಣವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ

