MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಪಾಕ್‌ ಸೇನಾ ಮುಖ್ಯಸ್ಥ ಜನರಲ್ ಆಸೀಮ್ ಮುನೀರ್‌ ಹೇಳಿಕೆಗೆ ಓವೈಸಿ ಪ್ರತಿಕ್ರಿಯೆ

ಪಾಕ್‌ ಸೇನಾ ಮುಖ್ಯಸ್ಥ ಜನರಲ್ ಆಸೀಮ್ ಮುನೀರ್‌ ಹೇಳಿಕೆಗೆ ಓವೈಸಿ ಪ್ರತಿಕ್ರಿಯೆ

ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿರುವ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಪಾಕಿಸ್ತಾನವನ್ನು ‘ವಿಫಲ ರಾಷ್ಟ್ರ’ ಎಂದು ಕರೆದಿದ್ದಾರೆ. ಪಾಕಿಸ್ತಾನದ ಸೇನಾ ಮುಖ್ಯಸ್ಥರ ಹೇಳಿಕೆಗೆ ಪ್ರತಿಕ್ರಿಯಿಸಿದ ಓವೈಸಿ, ಪಾಕಿಸ್ತಾನದಲ್ಲಿ ಅಸಂಬದ್ಧವಾಗಿ ಮಾತನಾಡುವವರಿಗೆ ಇಸ್ಲಾಂ ಗೊತ್ತಿಲ್ಲ ಎಂದಿದ್ದಾರೆ.

1 Min read
Kannadaprabha News
Published : May 05 2025, 08:35 AM IST| Updated : May 05 2025, 10:36 AM IST
Share this Photo Gallery
  • FB
  • TW
  • Linkdin
  • Whatsapp
15

ಪಹಲ್ಗಾಂ ನರಮೇಧದ ಬಳಿಕ ಪಾಕಿಸ್ತಾನದ ವಿರುದ್ಧ ತೀವ್ರ ವಾಗ್ದಾಳಿ ನಡೆಸುತ್ತಿರುವ ಎಐಎಂಐಎಂ ಮುಖ್ಯಸ್ಥ, ಸಂಸದ ಅಸಾದುದ್ದೀನ್ ಓವೈಸಿ ಮತ್ತೆ ನೆರೆಯ ರಾಷ್ಟ್ರದ ವಿರುದ್ಧ ಕಿಡಿ ಕಾರಿದ್ದು, ‘ಪಾಕಿಸ್ತಾನದಲ್ಲಿ ಅಸಂಬದ್ಧವಾಗಿ ಮಾತನಾಡುವವರಿಗೆ ಇಸ್ಲಾಂ ಗೊತ್ತಿಲ್ಲ. ಪಾಕ್‌ ಒಂದು ವಿಫಲ ದೇಶ’ ಎಂದಿದ್ದಾರೆ.

25

ಇತ್ತೀಚೆಗೆ ‘ಕಾಶ್ಮೀರವು ನಮ್ಮ ಕಂಠನಾಳ. ಅದನ್ನು ಪಡೆದೇ ತೀರುತ್ತೇವೆ’ ಎಂಬ ಪಾಕ್‌ ಸೇನಾ ಮುಖ್ಯಸ್ಥ ಜನರಲ್ ಆಸೀಮ್ ಮುನೀರ್‌ ಅವರ ಹೇಳಿಕೆಗೆ ಹಾರಿಹಾಯ್ದ ಒವೈಸಿ, ‘ಪಾಕಿಸ್ತಾನದಲ್ಲಿ ಅಸಂಬದ್ಧವಾಗಿ ಮಾತನಾಡುವವರಿಗೆ ಇಸ್ಲಾಂ ಗೊತ್ತಿಲ್ಲ. ನೀವು ಜನರನ್ನು ಮಹಾಜಿರ್‌, ಪಠಾಣ್‌ಗಳು ಎಂದು ಕರೆಯುವ ದೇಶದಲ್ಲಿದ್ದೀರಿ ಎಂದು ಅಸಾದುದ್ದೀನ್ ಓವೈಸಿ ಎಂದು ಹೇಳಿದ್ದಾರೆ. 

Related Articles

Related image1
ನಮ್ಮ ಹಿಜಾಬ್‌, ಗಡ್ಡ ಕೊನೆಗೆ ನಾವು ಆಡುವ ಕ್ರಿಕೆಟ್‌ ಬಗ್ಗೆಯೂ ನಿಮಗೆ ದ್ವೇಷವಿದೆ: ಓವೈಸಿ!
Related image2
ಸರ್ಕಾರ ಕೆಡವಲು ಅಮೆರಿಕ ಸಂಚು: ಪಾಕ್‌ ವಿದೇಶಾಂಗ ಸಚಿವ!
35

ನಿಮ್ಮ ದೇಶವು ತುಂಬಾ ಬಡವಾಗಿದೆ. ಜನರು ಚಿಂತಿತರಾಗಿದ್ದಾರೆ. ನಿಮಗೆ ಅಪ್ಘಾನಿಸ್ತಾನದೊಂದಿಗೆ ಭಿನ್ನಾಭಿಪ್ರಾಯಗಳಿವೆ. ಇರಾನ್‌ನೊಂದಿಗೆ ಗಡಿ ವಿವಾದವಿದೆ. ಹೀಗಾಗಿ ಪಾಕಿಸ್ತಾನ ವಿಫಲ ರಾಷ್ಟ್ರವಾಗಿದೆ’ ಎಂದು ಅಸಾದುದ್ದೀನ್ ಓವೈಸಿ ತಿರುಗೇಟು ನೀಡಿದರು.

45

ಸೂಕ್ತ ಉತ್ತರ ನೀಡಲಾಗುವುದು

ಭಾರತದ ಮೇಲೆ ಕೆಟ್ಟ ದೃಷ್ಟಿ ಬೀರುವವರಿಗೆ ಸೂಕ್ತ ಉತ್ತರ ನೀಡುವುದು ಮತ್ತು ಸಶಸ್ತ್ರ ಪಡೆಗಳೊಂದಿಗೆ ಕೆಲಸ ಮಾಡುವುದು ತಮ್ಮ ಜವಾಬ್ದಾರಿ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

55

ಸಮಾರಂಭವೊದರಲ್ಲಿ ಮಾತನಾಡಿದ ಅವರು, ‘ರಕ್ಷಣಾ ಸಚಿವನಾಗಿ, ದೇಶದ ಗಡಿಗಳನ್ನು ರಕ್ಷಿಸುವುದು ಮತ್ತು ನಮ್ಮ ದೇಶದ ಮೇಲೆ ಕೆಟ್ಟ ದೃಷ್ಟಿ ಬೀರುವವರಿಗೆ ಸೂಕ್ತ ಉತ್ತರ ನೀಡುವುದು ನನ್ನ ಕರ್ತವ್ಯ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ, ಇದು ಖಂಡಿತವಾಗಿಯೂ ಸಂಭವಿಸುತ್ತದೆ ಎಂದು ನಾನು ಭರವಸೆ ನೀಡುತ್ತೇನೆ’ ಎಂದರು. ಈ ಮೂಲಕ ಶತ್ರುದೇಶ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಅಸಾದುದ್ದೀನ್ ಓವೈಸಿ
ಪಾಕಿಸ್ತಾನ
ಪಾಕಿಸ್ತಾನ ಸೇನೆ
ಇಸ್ಲಾಮ್
ಭಾರತ ಸುದ್ದಿ
ಎಐಎಂಐಎಂ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved