MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ರೈಲಿನಲ್ಲಿ ಇಡ್ಲಿ, ದೋಸೆ ಇಲ್ಲವೇ ಇಲ್ಲ; ಹಿಂದಿ ಭಾಷೆಯಾಯ್ತು, ಈಗ ಆಹಾರ ಹೇರಿಕೆ!

ರೈಲಿನಲ್ಲಿ ಇಡ್ಲಿ, ದೋಸೆ ಇಲ್ಲವೇ ಇಲ್ಲ; ಹಿಂದಿ ಭಾಷೆಯಾಯ್ತು, ಈಗ ಆಹಾರ ಹೇರಿಕೆ!

ದಕ್ಷಿಣ ಭಾರತದಲ್ಲಿ ಓಡಾಡುವ ವಂದೇ ಭಾರತ್ ರೈಲಿನಲ್ಲಿ ಉತ್ತರ ಭಾರತದ ಆಹಾರಗಳನ್ನು ಮಾತ್ರ ನೀಡಲಾಗುತ್ತಿದೆ ಎಂದು ಮಲಯಾಳಂ ಲೇಖಕರು ಆರೋಪಿಸಿದ್ದಾರೆ. ಇಡ್ಲಿ, ದೋಸೆಗಳಂತಹ ದಕ್ಷಿಣ ಭಾರತದ ತಿನಿಸುಗಳು ಮೆನುವಿನಲ್ಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದಿ ಭಾಷೆ ಆಯ್ತು, ಈಗ ಆಹಾರ ಹೇರಿಕೆ ಮಾಡಲಾಗುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗಳು ಆರಂಭವಾಗಿವೆ.

2 Min read
Sathish Kumar KH
Published : Apr 18 2025, 04:22 PM IST| Updated : Apr 18 2025, 04:31 PM IST
Share this Photo Gallery
  • FB
  • TW
  • Linkdin
  • Whatsapp
15

ಕೇಂದ್ರ ಸರ್ಕಾರ ಕೆಲವು ಸೌಲಭ್ಯಗಳನ್ನು ನೀಡುವ ಮೂಲಕ ದಕ್ಷಿಣ ಭಾರತದ ರಾಜ್ಯಗಳ ಜನತೆಯ ಮೇಲೆ ಹಿಂದಿ ಹೇರಿಕೆಯನ್ನು ಮಾಡುತ್ತಿದೆ ಎಂಬ ವಿರೋಧಾಭಾಸದ ಚರ್ಚೆಯ ನಡುವೆಯೇ ಇದೀಗ ರೈಲ್ವೆ ಇಲಾಖೆಯ ದಕ್ಷಿಣ ಭಾರತದಲ್ಲಿ ಓಡಾಡುವ ವಂದೇ ಭಾರತ್ ರೈಲಿನಲ್ಲಿಯೂ ಉತ್ತರ ಭಾರತದ ಆಹಾರಗಳನ್ನು ಬಲವಂತವಾಗಿ ಹೇರಿಕೆ ಮಾಡಲಾಗುತ್ತಿದೆ. ಇಲ್ಲಿ ದಕ್ಷಿಣ ಭಾರತೀಯರ ಆರೋಗ್ಯಕರ ಆಹಾರ ಹಾಗೂ ತಿಂಡಿಗಳಾದ ಇಡ್ಲಿ, ದೋಸೆ ಇತ್ಯಾದಿಗಳ ಮೆನು ಇಲ್ಲವೇ ಇಲ್ಲ ಎಂದು ಮಲಯಾಳಂ ಲೇಖಕರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಈ ಬಗ್ಗೆ ಭಾರೀ ಚರ್ಚೆ ಶುರುವಾಗಿದೆ.

25

ಜಾಗತಿಕ ಮಟ್ಟದಲ್ಲಿ ದಕ್ಷಿಣ ಭಾರತದ ಆಹಾರಗಳು ತುಂಬಾ ವಿಶೇಷತೆಯನ್ನು ಪಡೆದುಕೊಂಡಿವೆ. ದಕ್ಷಿಣ ಭಾರತದ ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಹಾಗೂ ಕೇರಳ ಸೇರಿ ಪ್ರತಿ ರಾಜ್ಯದಲ್ಲೂ ವಿಭಿನ್ನ ರೀತಿಯ ಆಹಾರ ಪದಾರ್ಥಗಳು ಸ್ಥಳೀಯ ಮಾನ್ಯತೆ ಪಡೆದಿವೆ. ದಕ್ಷಿಣ ಭಾರತೀಯ ಆಹಾರಗಳಲ್ಲಿ ಉಪ್ಪು, ಖಾರ, ಹುಳಿ, ಸಿಹಿ ಸಮನ್ವಯದ ಆಹಾರಗಳ ನಾವು ತರುಚಿಸಬಹುದು.

ಆದರೆ, ವಂದೇ ಭಾರತ್‌ ರೈಲಿನ ಆಹಾರ ಮೆನುವಿನಲ್ಲಿ ದಕ್ಷಿಣ ಭಾರತದ ತಿನಿಸುಗಳೇ ಇಲ್ಲವೆಂದು ಮಲಯಾಳಂ ಲೇಖಕ ಎನ್.ಎಸ್.ಮಾಧವನ್ ಅಸಮಾಧಾನ ವ್ಯಕ್ತಪಡಿಸಿ, ಎಕ್ಸ್‌ನಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿಕೊಂಡಿದ್ದಾರೆ. ಅವರ ಪೋಸ್ಟ್ ವೈರಲ್ ಆಗಿದ್ದು, ಉತ್ತರ ಭಾರತದ ಹಿಂದಿ ಭಾಷೆ ಹೇರಿಕೆ ನಂತರ ಆಹಾರ ಮತ್ತು ಸಂಸ್ಕೃತಿಯನ್ನೂ ಹೇರಿಕೆ ಮಾಡಲಾಗುತ್ತಿದೆ ಎಂಬ ಚರ್ಚೆಗೆ ವೇದಿಕೆಯನ್ನು ಕಲ್ಪಿಸಿಕೊಟ್ಟಂತಾಗಿದೆ.

35

ಸಾಮಾನ್ಯವಾಗಿ ರೈಲಿನಲ್ಲಿ ಸಿಗುವ ಎಲ್ಲ ಆಹಾರಗಳು ಉತ್ತರ ಭಾರತದ ಆಹಾರಗಳಾಗಿದ್ದು, ಈ ಬಗ್ಗೆ ಬಹುತೇಕ ದಕ್ಷಿಣ ಭಾರತದ ಪ್ರಯಾಣಿಕರಿಗೆ ಬೇಸರವಿದೆ. ರೈಲಿನಲ್ಲಿ ಕೊಡುವ ಟೀ, ಕಾಫಿ, ಪಲಾವ್‌ ಯಾವುದೂ ಕುಡ ಗುಣಮಟ್ಟ ಇರುವುದಿಲ್ಲ. ಉಪ್ಪು, ಖಾರ ಸೇರಿದಂತೆ ಯಾವುದೇ ರುಚಿಯೂ ಇರುವಿದಿಲ್ಲ ಎಂದು ಮಲಯಾಳಂನ ಲೇಖಕರು ಧ್ವನಿ ಎತ್ತಿದ್ದಾರೆ. ಒಂದೊಂದು ರಾಜ್ಯ, ಒಂದೊಂದು ಭಾಗದ ಸಂಸ್ಕೃತಿ, ಆಹಾರ ಪದ್ಧತಿ ಮತ್ತೂ ಅವರಿಗೆ ಅವರವರ ಊರಿನ ಆಹಾರಗಳೇ ಹೆಚ್ಚು ಮುಖ್ಯ ಎಂದು ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರೈಲ್ವೆ ಇಲಾಖೆಯಲ್ಲಿ ಭರ್ಜರಿ ಉದ್ಯೋಗ, 9970 ALP ಹುದ್ದೆಗಳಿಗೆ ನೇಮಕಾತಿ

45

ಹಿಂದಿ ಭಾಷೆ ಹೇರಿಕೆ ನಂತರ ಆಹಾರ ಹೇರಿಕೆ: ಇದೀಗ ಪೋಸ್ಟ್ ಹಂಚಿಕೊಂಡಿರುವ ಮಲಯಾಳಂ ಲೇಖಕ ಎನ್.ಎಸ್. ಮಾಧವನ್ ಅವರು ಬೆಂಗಳೂರಿನಿಂದ ಕೊಯಮತ್ತೂರಿಗೆ ವಂದೇ ಭಾರತ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಆಹಾರವನ್ನು ಆರ್ಡರ್‌ ಮಾಡುವಾಗ ದಕ್ಷಿಣ ಭಾರತದ ಆಹಾರವನ್ನು ಆಯ್ಕೆ ಮಾಡುವುದಕ್ಕೆ ಯಾವುದೇ ಆಹಾರವೂ ಅದರಲ್ಲಿ ಇರಲಿಲ್ಲ. ಇದರಿಂದ ಬೇಸರಗೊಂಡ ಮಾಧವನ್, 'ಅವರು ಭಾಷಾ ಹೇರಿಕೆಯ ಬಗ್ಗೆ ಮಾತನಾಡುತ್ತಾರೆ.

ಆಹಾರ ಹೇರಿಕೆಯ ಬಗ್ಗೆ ಏನು ಹೇಳುತ್ತೀರಿ? ಇವು ದಕ್ಷಿಣ ಭಾರತದ ವಂದೇ ಭಾರತ್ ರೈಲುಗಳಲ್ಲಿ ನೀಡಲಾಗುವ ವಿಶಿಷ್ಟ ತಿಂಡಿಗಳು. ಇದು ಬೆಂಗಳೂರು-ಕೊಯಮತ್ತೂರು ವಂದೇ ಭಾರತ್ ರೈಲಿನಿಂದ ಬಂದದ್ದು' (They speak about language imposition. What about food imposition. Typical snacks served in South Indian Vande Bharat trains. This one from Bengaluru-Coimbatore VB- @NSMlive) ಎಂದು ಪೋಸ್ಟ್‌ನಲ್ಲಿ ಬರೆದುಕೊಂಡು ಪೋಟೋ ಒಂದನ್ನು ಹಂಚಿಕೊಂಡಿದ್ದಾರೆ.

55

ಮಾಧವನ್ ಅವರ ಪೋಸ್ಟ್ ವೈರಲ್ ಆಗಿದ್ದು, ಅನೇಕ ನೆಟ್ಟಿಗರು ತರಹೇವಾರಿ ಅಭಿಪ್ರಾಯಗಳನ್ನು ಕಾಮೆಂಟ್‌ಗಳ ಮೂಲಕ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ಹಿಂದೆ ಭಾಷೆ ಹೇರಿಕೆ ಆಯ್ತು, ಆದರೆ 'ಆಹಾರ ಹೇರಿಕೆ' ಕೂಡ ವಾಸ್ತವವಾಗಿ ನಡೆಯುತ್ತಿದೆ ಎಂದು ಅಭಿಪ್ರಾಯ ತಿಳಿಸಿದ್ದಾರೆ.  ಒಬ್ಬ ನೆಟ್ಟಿಗರು 'ಹೌದು, ಇದು ನಿಜಕ್ಕೂ ಗಮನಿಸಬೇಕಾದ ವಿಷಯ. ಕೇಂದ್ರ ಸರ್ಕಾರವಾಗಲಿ ಅಥವಾ ರೈಲ್ವೆ ಇಲಾಖೆಯಾಗಲಿ ಇದರ ಬಗ್ಗೆ ಗಮನ ಕೊಟ್ಟಿಲ್ಲ. ಕ್ಯಾಟರಿಂಗ್ ಮಾಡುವವರಿಗೆ ಸರಿಯಾಗಿ ಅಡುಗೆ ಮಾಡಲು ಬರುವುದಿಲ್ಲ. ಅದು ಉತ್ತರ ಭಾರತದ ಊಟವಾಗಲಿ ಅಥವಾ ದಕ್ಷಿಣ ಭಾರತದ ಊಟವಾಗಲಿ. ನೀವು ಅತ್ಯಂತ ಕೆಟ್ಟ ಊಟವನ್ನು ತಿನ್ನಬೇಕೆಂದರೆ ರೈಲ್ವೆಗೆ ಹೋಗಿ' ಕಾಮೆಂಟ್ ಮಾಡಿದ್ದಾರೆ.

ಇದನ್ನೂ ಓದಿ: ನೀತಾ ಅಂಬಾನಿ ಯಾರ ಕೈ ಹಿಡಿದ್ರೂ ಸುದ್ದಿಯಾಗುತ್ತೆ !

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಭಾರತೀಯ ರೈಲ್ವೆ
ಭಾರತ ಸುದ್ದಿ
ಆಹಾರ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved