MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ದೆಹಲಿಯನ್ನು ಟಾರ್ಗೆಟ್‌ ಮಾಡಿ ಕ್ಷಿಪಣಿ ಹಾರಿಸಿದ ಪಾಕ್‌, ಹೊಡೆದುರಳಿಸಿದ ಭಾರತ

ದೆಹಲಿಯನ್ನು ಟಾರ್ಗೆಟ್‌ ಮಾಡಿ ಕ್ಷಿಪಣಿ ಹಾರಿಸಿದ ಪಾಕ್‌, ಹೊಡೆದುರಳಿಸಿದ ಭಾರತ

ಮೇ 10 ರಂದು ಪಾಕಿಸ್ತಾನ ಭಾರತದ ಮೇಲೆ ಕ್ಷಿಪಣಿ ದಾಳಿ ನಡೆಸಿದ್ದು, ಭಾರತ ಕ್ಷಿಪಣಿಯನ್ನು ತಡೆದು ಪ್ರತಿದಾಳಿ ನಡೆಸಿದೆ. ಪಾಕಿಸ್ತಾನವು ಭಾರತದ ವಾಯುನೆಲೆಗಳು, ಆಸ್ಪತ್ರೆಗಳು ಮತ್ತು ಶಾಲೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ, ಭಾರತವು ಪಾಕಿಸ್ತಾನದ ವಾಯುನೆಲೆಗಳ ಮೇಲೆ ಪ್ರತಿದಾಳಿ ನಡೆಸಿದೆ.

2 Min read
Author : Gowthami K
| Updated : May 10 2025, 12:19 PM IST
Share this Photo Gallery
  • FB
  • TW
  • Linkdin
  • Whatsapp
15

ಮೇ 10ರ ಶನಿವಾರ ಮುಂಜಾನೆ  ದೆಹಲಿಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನದ ದಾಳಿ ಮಾಡಿದ್ದು, ಹರಿಯಾಣದ ಸಿರ್ಸಾ ಬಳಿ ಪಾಕಿಸ್ತಾನದ ಫತಾಹ್ 2 ಕ್ಷಿಪಣಿಯನ್ನು ಭಾರತ ತಡೆ ಹಿಡಿದಿದೆ. ಪಾಕಿಸ್ತಾನದ ಪ್ರಯತ್ನವನ್ನು ವಿಫಲಗೊಳಿಸಲು  ಮೇಲ್ಮೈಗೆ ಚಿಮ್ಮುವ ಕ್ಷಿಪಣಿಯನ್ನು ಬಳಸಿದೆ ಎಂದು ಸರ್ಕಾರಿ ಉನ್ನತ ಮೂಲಗಳು ತಿಳಿಸಿವೆ. ಇದರ ಜೊತೆಗೆ ಭಾರತದ ವಾಯುನೆಲೆಗಳು, ಆಸ್ಪತ್ರೆಗಳು, ಶಾಲೆಗಳನ್ನು ಗುರಿಯಾಗಿಸಿಕೊಂಡು ರಾತ್ರಿ 1.40 ರಿಂದ ಪಾಕಿಸ್ತಾನ ನಿರಂತರ ದಾಳಿ ನಡೆಸಿದೆ. ಭಾರತದ ಎಲ್ಲಾ ವಾಯುನೆಲೆಗಳು ಸುರಕ್ಷಿತವಾಗಿವೆ.
 

25

ಪಾಕಿಸ್ತಾನ 26 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. ಪಾಕಿಸ್ತಾನವು ಪಶ್ಚಿಮದ ಮುಂಭಾಗದಲ್ಲಿರುವ ಭಾರತದ ಮಿಲಿಟರಿ ನೆಲೆಗಳ ಮೇಲೆ ದಾಳಿ ಮಾಡಲು ಡ್ರೋನ್‌ಗಳು, ದೀರ್ಘ-ಶ್ರೇಣಿಯ ಶಸ್ತ್ರಾಸ್ತ್ರಗಳು,  ಯುದ್ಧಸಾಮಗ್ರಿಗಳು, ಜೆಟ್‌ಗಳನ್ನು ಬಳಸಿದೆ.  ಪಾಕಿಸ್ತಾನದ ಕ್ಷಿಪಣಿಯನ್ನು ತಡೆಯಲು ಬ್ಯಾಲೆಸ್ಟಿಕ್‌ ಕ್ಷಿಪಣಿ ಯನ್ನು ಭಾರತ ಬಳಸಿದೆ. ಪಾಕಿಸ್ತಾನದ ಎರಡು ಫೈಟರ್‌ ಜೆಟ್‌ ಅನ್ನು ಹೊಡೆದುರುಳಿಸಲಾಗಿದೆ. ಪಾಕಿಸ್ತಾನವು ಯುದ್ಧ ಮಾಡುವಂತೆ ಪ್ರಚೋದಿಸುತ್ತಿದೆ ಎಂದು ಭಾರತ ಹೇಳಿದೆ. ಇದರ ಜೊತೆಗೆ ಪಾಕಿಸ್ತಾನವು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದೆ. ಇದಕ್ಕೆ ಭಾರತವು ದಾಖಲೆ ಸಮೇತ ಸ್ಪಷ್ಟ ಉತ್ತರ ನೀಡಿದೆ. ಫೋಟೋ ಮತ್ತು ವಿಡಿಯೋಗಳನ್ನು ಬಿಡುಗಡೆ ಮಾಡಿ ಸಿರ್ಸಾ ಏರ್ ಬೇಸ್ ಸುರಕ್ಷಿತವಾಗಿದೆ ಎಂದು ಹೇಳಿದೆ.
 

Related Articles

Related image1
ವಾಯುನೆಲೆ ಮೇಲೆ ಭಾರತದ ದಾಳಿ, ಪಾಕ್‌ ಅಣ್ವಸ್ತ್ರ ಮೇಲ್ವಿಚಾರಣೆ ಸಮಿತಿ ಸಭೆ ಕರೆದ ಪ್ರಧಾನಿ ಶೆಹಬಾಜ್‌ ಷರೀಫ್‌!
35

ಪಾಕಿಸ್ತಾನದ ನಿರಂತರ ದಾಳಿ ಪ್ರತ್ಯುತ್ತರವಾಗಿ ಭಾರತ ಕೂಡ ದಾಳಿ ನಡೆಸಿದ್ದು, ಪಾಕಿಸ್ತಾನದ 6 ವಾಯನೆಲೆಗಳ ಮೇಲೆ ದಾಳಿಮಾಡಿದೆ. ರಾವಲ್ಪಿಂಡಿಯ ಗ್ಯಾರಿಸನ್ ನಗರದಲ್ಲಿರುವ ನೂರ್ ಖಾನ್ ವಾಯುನೆಲೆ , ಚಕ್ಲಾಲಾ  ನಗರದ ಮುರಿಯ್ ವಾಯುನೆಲೆ , ಪೂರ್ವ ಪಂಜಾಬ್ ಪ್ರಾಂತ್ಯದ ಜಾಂಗ್ ಜಿಲ್ಲೆಯ ರಫೀಕಿ ವಾಯುನೆಲೆ, ಮುರಿಯದ್  ವಾಯುನೆಲೆ ,  ಸುಕ್ಕೂರ್ ಮತ್ತು ಚುನಿಯನ್‌ ವಾಯನೆಲೆ ಮೇಲೆ ದಾಳಿ ಮಾಡಿದೆ.

45

ಶನಿವಾರ ಮುಂಜಾನೆ ಪಾಕಿಸ್ತಾನ ಸೇನೆಯು ಶಂಭು ದೇವಸ್ಥಾನದಂತಹ ಹಲವು ಧಾರ್ಮಿಕ  ಸ್ಥಳಗಳು ಮತ್ತು ಜಮ್ಮುವಿನ ವಸತಿ ಪ್ರದೇಶಗಳನ್ನು ಗುರಿಯಾಗಿಸಿ ದಾಳಿ ಮಾಡಿದೆ ಎಂದು ರಕ್ಷಣಾ ಸಚಿವಾಲಯ  ಟ್ವೀಟ್ ಮಾಡಿ, "ಪಾಕಿಸ್ತಾನವು ಮೇ 10, 2025 ರಂದು ಪ್ರಸಿದ್ಧ ಶಂಭು ದೇವಸ್ಥಾನ ಮತ್ತು ಜಮ್ಮುವಿನ ವಸತಿ ಪ್ರದೇಶಗಳಂತಹ ಪೂಜಾ ಸ್ಥಳಗಳನ್ನು ಗುರಿಯಾಗಿಸಿಕೊಂಡು  ದಾಳಿ ಮಾಡುವುದನ್ನು ಮುಂದುವರೆಸಿದೆ. ರಾತ್ರಿಯಿಡೀ ಸಶಸ್ತ್ರ ಡ್ರೋನ್‌ಗಳನ್ನು ಹಾರಿಸಿದ್ದು, ನಾಗರಿಕರು ಮತ್ತು ಧಾರ್ಮಿಕ ಸ್ಥಳಗಳನ್ನೇ ಟಾಗೆಟ್‌ ಮಾಡಿ ಅಪಾಯವನ್ನುಂಟುಮಾಡುತ್ತಿದೆ. ಭಾರತೀಯ ಸಶಸ್ತ್ರ ಪಡೆಗಳು ಜಾಗರೂಕವಾಗಿವೆ ಮತ್ತು ರಾಷ್ಟ್ರದ ಸಾರ್ವಭೌಮತ್ವವನ್ನು ರಕ್ಷಿಸಲು ಬದ್ಧವಾಗಿವೆ." ಎಂದು ಹೇಳಿದೆ.
 

55

ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ , ವಿಂಗ್ ಕಮಾಂಡರ್ ವ್ಯೋಮಿಕಾ ಸಿಂಗ್ ಮತ್ತು ಕರ್ನಲ್ ಸೋಫಿಯಾ ಖುರೇಷಿ  ಪತ್ರಿಕಾಗೋಷ್ಠಿ ನಡೆಸಿದ್ದು, ಪಾಕಿಸ್ತಾನವು ಶ್ರೀನಗರ, ಅವಂತಿಪುರ ಮತ್ತು ಉಧಂಪುರದಲ್ಲಿನ ವೈದ್ಯಕೀಯ ಸೌಲಭ್ಯಗಳ ಮೇಲೆ ದಾಳಿ ಮಾಡಿದೆ. ಭಾರತದ ಮೇಲೆ ಪದೇ ಪದೇ ಪಾಕಿಸ್ತಾನ ದಾಳಿ ಮಾಡಿ ಯುದ್ಧಕ್ಕೆ ಪ್ರಚೋದಿಸುತ್ತಿದೆ. ನಾವು ಪಾಕಿಸ್ತಾನದ ಏರ್‌ ಬೇಸ್ ಮೇಲೆ ಮಾತ್ರ ದಾಳಿ ಮಾಡಿದ್ದೇವೆ. ಆದರೆ ಪಾಕ್ ನಮ್ಮ ನಾಗರೀಕರನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದೆ ಎಂದಿದ್ದಾರೆ. 
 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಪಾಕಿಸ್ತಾನ
ಆಪರೇಷನ್ ಸಿಂಧೂರ
ಭಾರತ ಸುದ್ದಿ
ಭಾರತೀಯ ಸೇನೆ

Latest Videos
Recommended Stories
Recommended image1
ರೈಲಿನಲ್ಲಿ ಚೆಲ್ಲಿದ್ದ ಚಿಪ್ಸ್‌ನ್ನು ಪುಟ್ಟ ಮಗನ ಕೈಯಲ್ಲೇ ಹೆಕ್ಕಿಸಿ ಆತನಿಗೆ ಮೂಲಭೂತ ಕರ್ತವ್ಯದ ಪಾಠ ಮಾಡಿದ ಅಪ್ಪ
Recommended image2
ಐಷಾರಾಮಿ ಹೋಟೆಲ್‌ಗಿಂತಲೂ ಚಂದ ಈ ರೈಲ್ವೆ ಸ್ಟೇಷನ್ ವಾಸ್ತವ್ಯ! ನೀಲಗಿರಿ ತಪ್ಪಲಿನಲ್ಲಿ 'ರಾಜಮನೆತನದ' ಅನುಭವ!
Recommended image3
Shirtless Protest: ಶರ್ಟ್ ಬಿಚ್ಚಿ ಪ್ರತಿಭಟನೆ: ಇದೊಂದು ನಾಚಿಕೆಗೇಡು, ಕಾಂಗ್ರೆಸ್ ವಿರುದ್ಧ ನಿರ್ಮಲಾ ಗರಂ
Related Stories
Recommended image1
ವಾಯುನೆಲೆ ಮೇಲೆ ಭಾರತದ ದಾಳಿ, ಪಾಕ್‌ ಅಣ್ವಸ್ತ್ರ ಮೇಲ್ವಿಚಾರಣೆ ಸಮಿತಿ ಸಭೆ ಕರೆದ ಪ್ರಧಾನಿ ಶೆಹಬಾಜ್‌ ಷರೀಫ್‌!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved