MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • Punjab Elections: ಪ್ರಮುಖ ಸಿಖ್ ನಾಯಕರ ಭೇಟಿಯಾದ ಮೋದಿ, ತಾನೇ ಊಟದ ತಟ್ಟೆ ಕೊಟ್ಟು ಸತ್ಕರಿಸಿದ ಪಿಎಂ!

Punjab Elections: ಪ್ರಮುಖ ಸಿಖ್ ನಾಯಕರ ಭೇಟಿಯಾದ ಮೋದಿ, ತಾನೇ ಊಟದ ತಟ್ಟೆ ಕೊಟ್ಟು ಸತ್ಕರಿಸಿದ ಪಿಎಂ!

ಫೆಬ್ರವರಿ 20 ರಂದು ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಸಿಖ್ಖರನ್ನು ತನ್ನತ್ತ ಸೆಳೆಯಲು ಯತ್ನಿಸುತ್ತಿದೆ. ಇದೇ ನಿಟ್ಟಿನಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ದೇಶಾದ್ಯಂತದ ಪ್ರಮುಖ ಸಿಖ್ ಸಂಘಟನೆಗಳ ಪ್ರತಿನಿಧಿಗಳನ್ನು ಭೇಟಿ ಮಾಡಿದರು. ಈ ವೇಳೆ ಪ್ರಧಾನಿಯವರು ಸಿಖ್ ನಾಯಕರನ್ನು ಸ್ವಾಗತಿಸುತ್ತಿರುವುದು ಕಂಡುಬಂದಿತು. ಊಟದ ಸಮಯದಲ್ಲಿ ಖುದ್ದು ಮೋದಿ ಸಿಖ್ ನಾಯಕರಿಗೆ ತಟ್ಟೆಯನ್ನು ಕೊಟ್ಟು ಸತ್ಕರಿಸಿದ್ದಾರೆ.

2 Min read
Suvarna News
Published : Feb 18 2022, 04:48 PM IST
Share this Photo Gallery
  • FB
  • TW
  • Linkdin
  • Whatsapp
18

ಪ್ರಧಾನಿ ನರೇಂದ್ರ ಶುಕ್ರವಾರ ತಮ್ಮ ನಿವಾಸದಲ್ಲಿ ದೇಶದ ಪ್ರಮುಖ ಸಿಖ್ ಸಂಘಟನೆಗಳ ಪ್ರತಿನಿಧಿಗಳನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ, ಅವರು ನನ್ನ ರಕ್ತದಲ್ಲಿ ಸಿಖ್ ಧರ್ಮವಿದೆ. ಸೇವೆ ಎಂಬುವುದು ನನಗೆ ರಕ್ತದಲ್ಲೇ ಬಂದಿದೆ. ನಾನು ಏನು ಮಾಡಿದರೂ ಅದನ್ನು ಹೃದಯದಿಂದ ಮಾಡುತ್ತೇನೆ ಎಂದಿದ್ದಾರೆ. 
 

28

ನರೇಂದ್ರ ಮೋದಿ ಮತ್ತು ಸಿಖ್ ಸಮಾಜದ ಮುಖಂಡರ ನಡುವೆ ಹಲವು ವಿಷಯಗಳ ಕುರಿತು ಮಾತುಕತೆ ನಡೆದಿದೆ. ಪ್ರಧಾನಿ ಮೋದಿ ಸಿಖ್ ನಾಯಕರಿಗೆ ತಮ್ಮ ನೀತಿಗಳನ್ನು ತಿಳಿಸಿದರು ಮತ್ತು ಏಳು ವರ್ಷಗಳಲ್ಲಿ ಮಾಡಿದ ಕೆಲಸಗಳ ಬಗ್ಗೆ ತಿಳಿಸಿದರು.
 

38

ಕರ್ತಾರ್‌ಪುರ ಕಾರಿಡಾರ್‌ನಿಂದ ಸಿಖ್ ಗಲಭೆ ಮತ್ತು ಅವರ ಅಪರಾಧಿಗಳಿಗೆ ಶಿಕ್ಷೆಯವರೆಗಿನ ಎಲ್ಲಾ ಹಂತಗಳ ಬಗ್ಗೆ ಪ್ರಧಾನಿ ಮೋದಿ ಸಿಖ್ ಸಂಘಟನೆಗಳಿಗೆ ತಿಳಿಸಿದರು. ಸಿಖ್ ನಾಯಕರು ತಮ್ಮ ಬೇಡಿಕೆಗಳು ಮತ್ತು ಕಳವಳಗಳನ್ನು ಪ್ರಧಾನಿ ಮುಂದೆ ಮಂಡಿಸಿದರು.

48

ಸಿಖ್ ಸಂಘಟನೆಗಳ ಪ್ರತಿನಿಧಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಮಾತನ್ನು ಆಲಿಸಿದರು ಮತ್ತು ಶಾಲು ಮತ್ತು ಕತ್ತಿಯನ್ನು ನೀಡಿ ಗೌರವಿಸಿದರು. ಪಂಜಾಬ್ ಚುನಾವಣೆಗೆ ಸಂಬಂಧಿಸಿದಂತೆ ನರೇಂದ್ರ ಮೋದಿ ಮತ್ತು ಸಿಖ್ ನಾಯಕರ ಸಭೆಯನ್ನು ಅತ್ಯಂತ ಪ್ರಮುಖ ಎಂದು ಹೇಳಲಾಗುತ್ತಿದೆ.
 

58

ಪ್ರಧಾನಿ ನರೇಂದ್ರ ಮೋದಿ ಅವರು ಸಿಖ್ ಸಂಘಟನೆಗಳ ಮುಖಂಡರನ್ನು ಭೇಟಿಯಾದ ಸಂದರ್ಭದಲ್ಲಿ ತುಂಬಾ ಉತ್ಸುಕರಾಗಿದ್ದರಂತೆ. ನಾಯಕರ ಕೈ ಹಿಡಿದು ಅವರೊಂದಿಗೆ ಮಾತನಾಡುತ್ತಾ ಹೆಜ್ಜೆ ಹಾಕಿದ್ದಾರೆ.

68

ಪ್ರಧಾನಿ ನರೇಂದ್ರ ಮೋದಿ ಅವರು ಸಿಖ್ ಸಂಘಟನೆಗಳ ಮುಖಂಡರೊಂದಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಸಮಯದಲ್ಲಿ, ಅವರು ಸಿಖ್ ಧರ್ಮದ ನಿಯಮಗಳ ಪ್ರಕಾರ ತಮ್ಮ ತಲೆಯನ್ನು ಮುಚ್ಚಿದ್ದರು.

78

ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ನಿವಾಸದಲ್ಲಿ ನಡೆದ ಸಭೆಯಲ್ಲಿ ಸಿಖ್ ನಾಯಕರನ್ನು ಸ್ವಾಗತಿಸುತ್ತಿರುವುದು ಕಂಡುಬಂದಿದೆ. ಪ್ರಧಾನಿ ನಿವಾಸದಲ್ಲಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಬಂದ ದೇಶದ ಸಿಖ್ ನಾಯಕರಿಗೆ ಊಟದ ವ್ಯವಸ್ಥೆ ಮಾಡಲಾಗಿತ್ತು. ಊಟದ ಸಮಯದಲ್ಲಿ ಅವರೇ ತಟ್ಟೆ ಕೊಟ್ಟರು.
 

88

ದೆಹಲಿ ಗುರುದ್ವಾರ ಸಮಿತಿ ಅಧ್ಯಕ್ಷ ಹರ್ಮೀತ್ ಸಿಂಗ್ ಕಲ್ಕಾ, ಪದ್ಮಶ್ರೀ ಬಾಬಾ ಬಲ್ಬೀರ್ ಸಿಂಗ್ ಜಿ ಸಿಚೆವಾಲ್ (ಸುಲ್ತಾನ್ಪುರ್ ಲೋಧಿ), ಮಹಂತ್ ಕರಮ್ಜಿತ್ ಸಿಂಗ್, ಅಧ್ಯಕ್ಷ ಸೇವಾಪಂಥಿ ಯಮುನಾನಗರ, ಬಾಬಾ ಜೋಗಾ ಸಿಂಗ್, ಡೇರಾ ಬಾಬಾ ಜಂಗ್ ಸಿಂಗ್ (ನಾನಕ್ಸರ್) ಕರ್ನಾಲ್, ಸಂತ ಬಾಬಾ ಮೇಜರ್ ಸಿಂಗ್, ಮುಖಿ ಡೇರಾ ಬಾಬಾ ತಾರಾ ಸಿಂಗ್, ಅಮೃತಸರ, ಜತೇದಾರ್ ಬಾಬಾ ಸಾಹಿಬ್ ಸಿಂಗ್ ಜಿ, ಕರ್ ಸೇವಾ ಆನಂದಪುರ ಸಾಹಿಬ್, ಸುರೀಂದರ್ ಸಿಂಗ್ ನಾಮಧಾರಿ ದರ್ಬಾರ್ (ಭಾನಿ ಸಾಹಿಬ್), ಬಾಬಾ ಜಸ್ಸಾ ಸಿಂಗ್ ಶಿರೋಮಣಿ ಅಕಾಲಿ ಬುದ್ಧ ದಳ, ಪಂಜ್ವಾ ತಖ್ತೋ, ಡಾ. ಹರ್ಭಜನ್ ಸಿಂಗ್, ದಮ್ದಾಮಿ, ತಕ್ಸಲ್ , ಚೌಕ್ ಮೆಹ್ತಾ, ಸಿಂಗ್ ಸಾಹಿಬ್, ಗಿಯಾನಿ ರಂಜಿತ್ ಸಿಂಗ್ ಜಿ, ಜತೇದಾರ್ ತಖ್ತ್ ಶ್ರೀ ಪಾಟ್ನಾ ಸಾಹಿಬ್ ಮೋದಿಯನ್ನು ಭೇಟಿಯಾಗಲು ಬಂದಿದ್ದರು. 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Suvarna News
ನರೇಂದ್ರ ಮೋದಿ
Latest Videos
Recommended Stories
Recommended image1
India Latest News Live: ಟಿಪ್ಪು ಸುಲ್ತಾನ್‌ ವಂಶಸ್ಥೆ ನೂರ್‌ ಇನಾಯತ್‌ಗೆ ವಿಶೇಷ ಗೌರವ
Recommended image2
ರೈತರಿಂದಲೇ ಉತ್ಪನ್ನ ಖರೀದಿಸಿ : ಹೋಟೆಲ್‌ಗಳಿಗೆ ಸರ್ಕಾರ ಸಲಹೆ
Recommended image3
ರಾಮಮಂದಿರದಲ್ಲಿಂದು ಮೋದಿ ಕೇಸರಿ ಧ್ವಜಾರೋಹಣ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved