MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಕಾಶ್ಮೀರ ಪ್ರವಾಸಕ್ಕೆ ಬೇಕಿಲ್ಲ ಹೆಚ್ಚು ಸಮಯ, ಶೀಘ್ರದಲ್ಲೇ ದೆಹಲಿ-ಕಾಶ್ಮೀರ ವಂದೇ ಭಾರತ್ ರೈಲು!

ಕಾಶ್ಮೀರ ಪ್ರವಾಸಕ್ಕೆ ಬೇಕಿಲ್ಲ ಹೆಚ್ಚು ಸಮಯ, ಶೀಘ್ರದಲ್ಲೇ ದೆಹಲಿ-ಕಾಶ್ಮೀರ ವಂದೇ ಭಾರತ್ ರೈಲು!

ದೆಹಲಿ-ಕಾಶ್ಮೀರ ಸಂಪರ್ಕಿಸುವ ವಂದೇ ಭಾರತ್ ರೈಲು ಶೀಘ್ರದಲ್ಲೇ ಆರಂಭಗೊಳ್ಳುತ್ತಿದೆ. ವಿಶೇಷ ಅಂದರೆ ವಿಶ್ವದ ಅತೀ ಎತ್ತರದ ರೈಲು ಸೇತುವೆ ಚೆನಾಬ್ ಮೂಲಕ ಈ ರೈಲು ಸಾಗಲಿದೆ. ಇದೀಗ ಕಾಶ್ಮೀರ ಪ್ರವಾಸಕ್ಕೆ ಹೆಚ್ಚಿನ ಸಮಯ ಬೇಕಿಲ್ಲ. 

2 Min read
Chethan Kumar
Published : Nov 20 2024, 08:26 AM IST
Share this Photo Gallery
  • FB
  • TW
  • Linkdin
  • Whatsapp
16

ರೈಲು ಪ್ರಯಾಣಿಕರು, ಕಾಶ್ಮೀರಕ್ಕೆ ಪ್ರವಾಸಕ್ಕೆ ಹೊರಟಿರುವ ಪ್ರವಾಸಿಗರಿಗೆ ಭಾರತೀಯ ರೈಲ್ವೇ ಗುಡ್ ನ್ಯೂಸ್ ನೀಡಿದೆ. ಇದೀಗ ದೆಹಲಿಯಿಂದ ಕಾಶ್ಮೀರ ಸಂಪರ್ಕಿಸುವ ಹೊಸ ವಂದೇ ಭಾರತ್ ರೈಲು ಶೀಘ್ರದಲ್ಲೇ ಆರಂಭಗೊಳ್ಳುತ್ತಿದೆ. ಕೇಂದ್ರ ರೈಲ್ವೇ ರಾಜ್ಯ ಖಾತೆ ಸಚಿವ ರವನೀತ್ ಸಿಂಗ್ ಈ ಕುರಿತು ಅಧಿಕೃತ ಘೋಷಣೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ರೈಲಿಗೆ ಚಾಲನೆ ನೀಡಲಿದ್ದಾರೆ. ಅತೀ ಕಡಿಮೆ ಸಮಯದಲ್ಲಿ ಅತ್ಯಂತ ಸುಂದರ ತಾಣಗಳ ಮೂಲಕ ಹಾದು ಹೋಗುವ ವಂದೇ ಭಾರತ್ ರೈಲು ಸೇವೆ ಆರಂಭಗೊಳ್ಳುತ್ತಿದೆ.

26

ನವದೆಹಲಿ-ಉದಮಪುರ್-ಶ್ರೀನಗರ-ಬಾರಮುಲ್ಲಾ ರೈಲ್ ಲಿಂಕ್(USBRL) 2025ರ ಜನವರಿಯಲ್ಲಿ ಅಂದರೆ ಇನ್ನೆರಡು ತಿಂಗಳಲ್ಲಿ ಚಾಲನೆ ಸಿಗಲಿದೆ. ದೆಹಲಿ-ಕಾಶ್ಮೀರ ವಂದೇ ಭಾರತ್ ರೈಲು ಒಂದು ಫಸ್ಟ್ ಎಸಿ ಕೋಚ್, ನಾಲ್ಕು 2 ಟೈರ್ ಎಸಿ ಕೋಚ್ ಹಾಗೂ ಹನ್ನೊಂದು 3 ಟೈಯರ್ ಎಸಿ ಕೋಚ್ ಸೇರಿದಂತೆ ಒಟ್ಟು 17 ಬೋಗಿಗಳ ರೈಲು ಇದಾಗಿದೆ.  

36

ವಿಶೇಷ ಅಂದರೆ ಈ ರೈಲು ವಿಶ್ವದ ಅತೀ ಎತ್ತರದ ಹಾಗೂ ಅತ್ಯಂತ ಸೌಂದರ್ಯ ತಾಣವಾದ ಚೆನಾಬ್ ಸೇತುವೆ ಮೂಲಕ ಹಾದು ಹೋಗಲಿದೆ. ಒಟ್ಟು 272 ಕಿಲೋಮೀಟರ್ ದೂರದ USBRL ರೈಲು ಯೋಜನೆಯಲ್ಲಿ ಈಗಾಗಲೇ 255 ಕಿಲೋಮೀಟರ್ ರೈಲು ಮಾರ್ಗ ಪೂರ್ಣಗೊಂಡಿದೆ. ಇನ್ನುಳಿದ ಕಿಲೋಮೀಟರ್ ಡಿಸೆಂಬರ್ ಮೊದಲ ವಾರದಲ್ಲಿ ಪೂರ್ಣಗೊಳ್ಳಲಿದೆ.ಬಾಕಿ ಉಳಿದಿರುವ 17 ಕಿಲೋಮೀಟರ್ ದೂರದ   ಕತ್ರಾ ಹಾಗೂ ರೆಸಾಯಿ ನಡುವಿನ ಮಾರ್ಗದ ಕಾಮಾಗಾರಿ ನಡೆಯುತ್ತಿದೆ. ಡಿಸೆಂಬರ್ 2ನೇ ವಾರದಿಂದ ಪ್ರಾಯೋಗಿಕ ರೈಲು ಆರಂಭಗೊಳ್ಳಲಿದೆ.

46

ಚಳಿಗಾಲದ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರದ ಹಲವು ರಸ್ತೆ ಮಾರ್ಗಗಳು ಬಂದ್ ಆಗುತ್ತಿದೆ. ಇದರಿಂದ ಕಾಶ್ಮೀರ ಸಂಪರ್ಕ, ಸರಕು ಸಾಗಾಣೆ ಜೊತೆಗೆ ಪ್ರಮುಖವಾಗಿ ಪ್ರವಾಸೋದ್ಯಮಕ್ಕೆ ಹೊಡೆತ ಬೀಳುತ್ತಿದೆ. ಇದೀಗ ಅತೀ ಕಡಿಮೆ ಸಮಯದಲ್ಲಿ ದೆಹಲಿಯಿಂದ ಕಾಶ್ಮೀರ ಸಂಪರ್ಕಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭಗೊಳ್ಳುತ್ತಿದೆ. ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ರವನೀತ್ ಸಿಂಗ್ ಹೇಳಿದ್ದಾರೆ

56

ಈ ವಂದೇ ಭಾರತ್ ರೈಲು ಜಮ್ಮುವಿನಲ್ಲಿ ನಿಲುಗಡೆಯಾಗಲಿದೆ. ಇಷ್ಟೆ ಅಲ್ಲ ಮಾತಾ ವೈಷ್ಣೋ ದೇವಿ ಮಂದಿರದ ಬಳಿ ಇರುವ ರೈಲು ನಿಲ್ದಾಣದಲ್ಲೂ ನಿಲುಗಡೆಯಾಗಲಿದೆ. ಇದರಿಂದ ದೇಗುಲ ದರ್ಶನಕ್ಕೆ ತೆರಳುವ ಭಕ್ತರಿಗೂ ಅನುಕೂಲವಾಗಲಿದೆ. ದೆಹಲಿಯಿಂದ ಕಾಶ್ಮೀರ ಬೆಲೆ 1,500 ರೂಪಾಯಿಯಿಂದ 2100 ರೂಪಾಯಿ ನಿಗದಿಪಡಿಸಲಾಗುತ್ತದೆ ಎಂದಿದ್ದಾರೆ.

66

ಜಮ್ಮು ಮತ್ತು ಕಾಶ್ಮೀರ ಜನತೆಗೆ, ಭಾರತೀಯರಿಗೆ ಎನ್‌ಡಿಎ ಸರ್ಕಾರದ ಕೊಡುಗೆ ಇದು. ವಂದೇ ಭಾರತ್ ರೈಲು ಜಮ್ಮು ಮತ್ತು ಕಾಶ್ಮೀರದ ಪ್ರವಾಸೋದ್ಯ,ವ್ಯಾಪಾರ ವಹಿವಾಟು, ಸರಕು ಸಾಗಾಣೆ ಸೇರಿದಂತೆ ಎಲ್ಲಾ ರೀತಿಯಲ್ಲೂ ನೆರವಾಗಲಿದೆ. ಇದೇ ವೇಳೆ ರೈಲು ಪ್ರಯಾಣಿಕರ ಸುರಕ್ಷತೆಗೆ ಪ್ರಮುಖ ಆದ್ಯತೆ ನೀಡಲಾಗಿದೆ ಎಂದ ರವನೀತ್ ಸಿಂಗ್ ಹೇಳಿದ್ದಾರೆ.

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ದೆಹಲಿ
ನರೇಂದ್ರ ಮೋದಿ
ರೈಲು
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved