MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ದುರಂತದಲ್ಲಿ ಮಡಿದ ಮಕ್ಕಳೆಷ್ಟು? ವಯನಾಡು ಸಂತ್ರಸ್ಥರ ಭೇಟಿಯಾಗಿ ಭಾವುಕರಾದ ಮೋದಿ!

ದುರಂತದಲ್ಲಿ ಮಡಿದ ಮಕ್ಕಳೆಷ್ಟು? ವಯನಾಡು ಸಂತ್ರಸ್ಥರ ಭೇಟಿಯಾಗಿ ಭಾವುಕರಾದ ಮೋದಿ!

ವಯನಾಡು ದುರಂತ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಭೂಕುಸಿದಿಂದ ಆಗಿರುವ ಹಾನಿ ಪರಿಶೀಲಿಸಿದ್ದಾರೆ. ಇದೇ ವೇಳೆ ದುರಂತದಲ್ಲಿ ಬದುಕುಳಿದವರು, ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ.

1 Min read
Chethan Kumar
Published : Aug 10 2024, 04:40 PM IST| Updated : Aug 10 2024, 04:41 PM IST
Share this Photo Gallery
  • FB
  • TW
  • Linkdin
  • Whatsapp
110

ಕೇರಳದ ಭೀಕರ ವಯನಾಡು ದುರಂತ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾರೆ. ದುರಂತ ಸ್ಥಳಗಳಿಗೆ ಬೇಟಿ ನೀಡಿದ ಮೋದಿ, ದುರಂತದ ಬೀಕರತೆಯನ್ನು ಪರಿಶೀಲಿಸಿದ್ದಾರೆ. 

210

ಭೂಕುಸಿತದಿಂದ ತೀವ್ರವಾಗಿ ಹಾನಿಯಾಗಿರುವ ವಯನಾಡಿನ ಪುಂಚಿರಿಮಟ್ಟಂ, ಚೂರ್ಮಲಾ ಹಾಗೂ ಮುಂಡಕೈ ಪ್ರದೇಶಗಳಿಗೆ ಮೋದಿ  ಭೇಟಿ ನೀಡಿ ಪರಿಶೀಲಿಸಿದ್ದಾರೆ. ಇದೇ ವೇಳೆ ಎಷ್ಟು ಮಕ್ಕಳು ಈ ದುರಂತದಲ್ಲಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ಕೇಳಿದ್ದಾರೆ. ಇಷ್ಟೇ ಅಲ್ಲ ಸಾವು ನೋವು ಮೋದಿಯನ್ನು ಭಾವುಕರನ್ನಾಗಿ ಮಾಡಿದೆ.

310

ನರೇಂದ್ರ ಮೋದಿ ಜೊತೆ ಕೇಂದ್ರ ಸಚಿವ, ಕೇರಳದ ಏಕೈಕ ಬಿಜೆಪಿ ಸಂಸದ ಸುರೇಶ್ ಗೋಪಿ, ಕೇರಳ ರಾಜ್ಯ ಸರ್ಕಾರದ ಅಧಿಕಾರಿಗಳ ತಂಡ ತೆರಳಿ ದುರಂತ ಸ್ಥಳದ ಮಾಹಿತಿ ನೀಡಿದರು.

410

ಭೂಕುಸಿತದಿಂದ ಪ್ರಾಣ ಕಳೆದುಕೊಂಡ ಗ್ರಾಮದ ನಿವಾಸಿಗಳ  ಕುರಿತು ಮಾಹಿತಿಯನ್ನು ಮೋದಿ ಪಡೆದುಕೊಂಡಿದ್ದರೆ. ಇದೇ ವೇಳೆ ಅಂದಾಜು ನಷ್ಟದ ಕುರಿತ ಮಾಹಿತಿಯನ್ನು ಅಧಿಕಾರಿಗಳು ನೀಡಿದ್ದಾರೆ.

510

ದುರಂತ ಸ್ಥಳದಲ್ಲಿನ ಪರಿಹಾರ ಕಾರ್ಯಗಳ ಕುರಿತು ಮೋದಿ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಮೋದಿ ದುರಂತದಲ್ಲಿ ಬದುಕುಳಿದವರ ಜೊತೆ ಮಾತನಾಡಿದ್ದಾರೆ. 

610

ದುರಂತದಿಂದ ಆಪ್ತರನ್ನು ಕಳೆದುಕೊಂಡ ಜರ್ಝರಿತವಾಗಿರುವ ಕುಟುಂಬ ಸದಸ್ಯರ ಬೇಟಿಯಾದ ಮೋದಿ, ಅವರಿಗೆ ಧೈರ್ಯ ತುಂಬಿದ್ದಾರೆ. ಜೊತೆಗೆ ಬದುಕು ಕಟ್ಟಿಕೊಳ್ಳಲು ಎಲ್ಲಾ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ.

710

ವಯನಾಡಿನ ಸರ್ಕಾರಿ ಕೇಂದ್ರಗಳಲ್ಲಿ ಉಳಿದುಕೊಂಡಿರುವ ಹಲವರು ಮೋದಿ ಜೊತೆ ನೋವು ಹಂಚಿಕೊಂಡು ಭಾವುಕರಾಗಿದ್ದಾರೆ. ಇದೇ ವೇಳೆ ಘಟನೆ ಭೀಕರತೆಯನ್ನೂ ವಿವರಿಸಿದ್ದಾರೆ.

810

ಇದೇ ವೇಳೆ ಮೋದಿ ಆಸ್ಪತ್ರೆ ವೈದ್ಯರು, ನರ್ಸ್ ಸೇರಿದಂತೆ ಸಿಬ್ಬಂದಿಗಳನ್ನು ಅಭಿನಂದಿಸಿದ್ದಾರೆ. ತುರ್ತು ಸೇವೆ ಒದಗಿಸುವ ಮೂಲಕ ಅಮೂಲ್ಯ ನೆರವನ್ನು ಸ್ಮರಿಸಿದ್ದಾರೆ.

910

ಇದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಇಳಿದು ಬಳಿಕ ಹೆಲಿಕಾಪ್ಟರ್ ಮೂಲಕ ವೈಮಾನಿಕ ವಯನಾಡಿನ ದುರಂತ ಸ್ಥಳಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದರು.

1010

ವೈಮಾನಿಕ ಸಮೀಕ್ಷೆ ವೇಳೆ ಮೋದಿಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಸೇರಿದಂತೆ ಕೆಲ ಅಧಿಕಾರಿಗಳು ಸಾಥ್ ನೀಡಿದ್ದರು.
 

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಕೇರಳ
ನರೇಂದ್ರ ಮೋದಿ
Latest Videos
Recommended Stories
Related Stories
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved