MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • 'ಆದಿ ಅನಂತ ಶಿವ...' ಕೇದಾರನಾಥದ ಶಿವಸ್ಥಳದಲ್ಲಿ ಮೋದಿ!

'ಆದಿ ಅನಂತ ಶಿವ...' ಕೇದಾರನಾಥದ ಶಿವಸ್ಥಳದಲ್ಲಿ ಮೋದಿ!

ಆದಿಯೂ ಶಿವ, ಅಂತ್ಯವೂ ಶಿವ.. ಶಿವನೆಂದರೆ ವಿನಾಶ. ಶಿವನೆಂದರೆ ಪ್ರಶಾಂತ.. ದೇಶದ ಪ್ರಖ್ಯಾತ ಶಿವನ ಆರಾಧನೆ ಸ್ಥಳಗಳಲ್ಲಿ ಒಂದಾದ ಉತ್ತರಾಖಂಡದ ಕೇದಾರನಾಥ ಹಾಗೂ ಬದ್ರಿನಾಥ ದೇಗುಲಗಳಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಅದರ ಚಿತ್ರಗಳು ಇಲ್ಲಿವೆ

2 Min read
Santosh Naik
Published : Oct 21 2022, 12:33 PM IST
Share this Photo Gallery
  • FB
  • TW
  • Linkdin
  • Whatsapp
112

ಎರಡು ದಿನಗಳ ಉತ್ತರಾಖಂಡ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ, ಶುಕ್ರವಾರ ಕೇದಾರನಾಥಕ್ಕೆ ಆಗಮಿಸಿದರು. ಈ ವೇಳೆ ಹಿಮಾಚಲ ಪ್ರದೇಶದ ಚಂಬಾದ ಮಹಿಳೆಯರು ಉಡುಗೊರೆಯಾಗಿ ನೀಡಿದ 'ಚೋಳ ಡೋರಾ' ಉಡುಪನ್ನು ಧರಿಸಿದ್ದರು.

212

ದೇಶದ ಅತೀ ಉದ್ದದ ರೋಪ್‌ವೇ ಚಾಲನೆ ನೀಡುವ ಮುನ್ನ ಪ್ರಧಾನಿ ನರೇಂದ್ರ ಮೋದಿ, ದೇಗುಲಕ್ಕೆ ತೆರಳಿ ಕೇದಾರನಾಥನಿಗೆ ಪೂಜೆಯನ್ನು ಸಲ್ಲಿಸಿದ್ದರು.

312

ಡೆಹ್ರಾಡೂನ್‌ನ ಜಾಲಿ ಗ್ರಾಂಟ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ. ಅವರನ್ನು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಮತ್ತು ಗವರ್ನರ್ ಲೆಫ್ಟಿನೆಂಟ್ ಜನರಲ್ (ನಿವೃತ್ತ) ಗುರ್ಮೀತ್ ಸಿಂಗ್ ಅವರು ಬರಮಾಡಿಕೊಂಡಿದ್ದರು.

412

ಕೇದಾರನಾಥದಲ್ಲಿ ರೋಪ್‌ವೇ ಸುಮಾರು 9.7 ಕಿಮೀ ಉದ್ದವಿರುತ್ತದೆ ಮತ್ತು ಗೌರಿಕುಂಡವನ್ನು ಕೇದಾರನಾಥಕ್ಕೆ ಸಂಪರ್ಕಿಸುತ್ತದೆ, ಎರಡು ಸ್ಥಳಗಳ ನಡುವಿನ ಪ್ರಯಾಣದ ಸಮಯವನ್ನು ಪ್ರಸ್ತುತ ಆರು-ಏಳು ಗಂಟೆಗಳಿಂದ ಕೇವಲ 30 ನಿಮಿಷಗಳಿಗೆ ಕಡಿಮೆ ಮಾಡುತ್ತದೆ.

512

ಮಾನಾ ಗ್ರಾಮದಲ್ಲಿ ರಸ್ತೆ ಮತ್ತು ರೋಪ್‌ವೇ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಿ, ರಿವರ್‌ಫ್ರಂಟ್‌ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಲಿದ್ದಾರೆ.

612
Narendra Modi

Narendra Modi

ಕೇದಾರನಾಥ ದೇಗುಲದಲ್ಲಿ ಪೂಜೆ ನೆರವೇರಿಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, ಅಲ್ಲಿಯೇ ಕುಳಿತು ಕೆಲ ಹೊತ್ತು ಧ್ಯಾನವನ್ನೂ ಮಾಡಿದರು.

712

ಕೇದಾರನಾಥದಲ್ಲಿ ಪೂಜೆ ಹಾಗೂ ಶಂಕುಸ್ಥಾಪನೆಗಳ ಬಳಿಕ ಬೆಳಗ್ಗೆ 11.30ರ ವೇಳೆಗ ಬದ್ರಿನಾಥ ದೇಗುಲವನ್ನು ತಲುಪಿದರು. ಅಲ್ಲಿಯೂ ದರ್ಶನ ಹಾಗೂ ಪೂಜೆಯನ್ನು ಮಾಡಿದ್ದಾರೆ.
 

812
Narendra Modi

Narendra Modi

ಕೇದಾರನಾಥಕ್ಕೆ ಇದು ಪ್ರಧಾನಿ ನರೇಂದ್ರ ಮೋದಿ ಅವರ ಆರನೇ ಭೇಟಿಯಾಗಿದೆ. ಪ್ರತಿ ಬಾರಿಯೂ ಇಲ್ಲಿ ಬಂದಾಗ ಅವರು ಪೂಜೆ ಸಲ್ಲಿಕೆ ಮಾಡಿದ್ದಾರೆ. ಪ್ರಧಾನಿ ಆದ ಬಳಿಕ ಬದ್ರಿನಾಥಕ್ಕೆ ಅವರ 2ನೇ ಭೇಟಿ.

912
Narendra Modi

Narendra Modi

ದೇಶದ ಎರಡು ಪ್ರಖ್ಯಾತ ಗಿರಿಧಾಮಗಳ ಮೇಲಿರುವ ದೇಗುಲಕ್ಕೆ ಪ್ರಧಾನಿ ಭೇಟಿಯ ಹಿನ್ನಲೆಯಲ್ಲಿ ಹಿಮಾಚಲ ಪ್ರದೇಶ ಸರ್ಕಾರ ಹಾಗೂ ಸ್ಥಳೀಯ ಸೇನಾ ತುಕಡಿಗಳು ಗರಿಷ್ಠ ಮಟ್ಟದ ಭದ್ರತೆ ಒದಗಿಸಿದ್ದವು.

1012
Narendra Modi

Narendra Modi

ಈ ಭೇಟಿಯ ವೇಳೆ, ಕೇದಾರನಾಥದಲ್ಲಿರುವ ಆದಿಗುರು ಶಂಕರಾಚಾರ್ಯ ಅವರ ಸಮಾಧಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಗಳ ಪರಿಶೀಲನೆಯನ್ನು ಮಾಡಿದ್ದಾರೆ.

1112
Narendra Modi

Narendra Modi

ಆದಿಗುರು ಶಂಕರಾಚಾರ್ಯ ಅವರ ಸಮಾಧಿ ಸ್ಥಳವನ್ನು ಅದ್ಭುತವಾಗಿ ಅಭಿವೃದ್ಧಿ ಮಾಡಲಾಗುತ್ತಿದ್ದು ಅವರ ಆಕರ್ಷಕ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

1212
Narendra Modi

Narendra Modi

ಕೇದಾರನಾಥದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಲ್ಲಿ ಕೆಲಸ ಮಾಡುತ್ತಿರುವ 'ಶ್ರಮಜೀವಿ'ಗಳೊಂದಿಗೆ ಪ್ರಧಾನಿ ಮೋದಿ ಸಂವಾದ ನಡೆಸಿದರು.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಉತ್ತರಾಖಂಡ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved