ಇದು ಒಂದು ದೇಶ, ಒಂದು ಗಂಡ ಯೋಜನೆಯೇ? ಆಪರೇಷನ್ ಸಿಂದೂರ್ ಬಗ್ಗೆ ಮಾನ್ ವಿವಾದಾತ್ಮಕ ಹೇಳಿಕೆ
ಆಪರೇಷನ್ ಸಿಂದೂರದ ಯಶಸ್ಸನ್ನು ತಿಳಿಸುವ ದೇಶವ್ಯಾಪಿ ಅಭಿಯಾನಕ್ಕೆ ಇತ್ತೀಚೆಗೆ ಬಿಜೆಪಿ ಕರೆ ನೀಡಿತ್ತು.

ಚಂಡೀಗಢ: ‘ಬಿಜೆಪಿಯು ಸಿಂದೂರವನ್ನು ತಮಾಷೆಯಾಗಿ ಪರಿವರ್ತಿಸಿದೆ. ಆಪರೇಷನ್ ಸಿಂದೂರ ಒಂದು ದೇಶ, ಒಂದು ಗಂಡ ಯೋಜನೆಯೇ?’ ಎಂದು ಪ್ರಶ್ನಿಸುವ ಮೂಲಕ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ವಿವಾದ ಸೃಷ್ಟಿಸಿದ್ದಾರೆ.
ಬಿಜೆಪಿ ಕಾರ್ಯಕರ್ತರು ಆಪರೇಷನ್ ಸಿಂದೂರದ ಹೆಸರಿನಲ್ಲಿ ಲೂಧಿಯಾನಾ ಉಪಚುನಾವಣೆಯಲ್ಲಿ ಮತ ಕೇಳುತ್ತಿದ್ದಾರೆ ಎಂಬ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯು ಆಪರೇಷನ್ ಸಿಂದೂರದ ಹೆಸರಿನಲ್ಲಿ ಮತ ಕೇಳುತ್ತಿದೆ ಎಂದು ಹೇಳಿದರು.
ಅವರು ಸಿಂದೂರವನ್ನು ತಮಾಷೆಯಾಗಿ ಪರಿವರ್ತಿಸಿದ್ದಾರೆ. ಪ್ರತಿ ಮನೆಗೂ ಸಿಂದೂರ ತಲುಪಿಸುತ್ತಿದ್ದಾರೆ. ನೀವೀಗ ಪ್ರಧಾನಿ ಮೋದಿಯವರ ಹೆಸರಲ್ಲಿ ಸಿಂಧೂರವನ್ನು ಧರಿಸುತ್ತೀರೇ? ಇದು ಒಂದು ದೇಶ, ಒಂದು ಗಂಡ ಯೋಜನೆಯೇ?’ ಎಂದು ಪ್ರಶ್ನಿಸಿದರು.
ಆಪರೇಷನ್ ಸಿಂದೂರದ ಯಶಸ್ಸನ್ನು ತಿಳಿಸುವ ದೇಶವ್ಯಾಪಿ ಅಭಿಯಾನಕ್ಕೆ ಇತ್ತೀಚೆಗೆ ಬಿಜೆಪಿ ಕರೆ ನೀಡಿತ್ತು. ಅಭಿಯಾನದ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಪ್ರತಿ ಮನೆಗೆ ಸಿಂದೂರ (ಕುಂಕುಮ) ತಲುಪಿಸುತ್ತಿದ್ದಾರೆ ಎಂಬ ಸುದ್ದಿಯಾಗಿತ್ತು. ಆದರೆ ಸರ್ಕಾರದ ಪತ್ರಿಕಾ ಮಾಹಿತಿ ಬ್ಯೂರೋ ಈ ವದಂತಿಯನ್ನು ಅಲ್ಲಗಳೆದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ

