MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಬಹಿಷ್ಕಾರ ಹಾಕಿದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸ್ವಾಮೀಜಿ

ರಾಹುಲ್ ಗಾಂಧಿಯನ್ನು ಹಿಂದೂ ಧರ್ಮದಿಂದ ಬಹಿಷ್ಕಾರ ಹಾಕಿದ ಶಂಕರಾಚಾರ್ಯ ಅವಿಮುಕ್ತೇಶ್ವರಾನಂದ ಸ್ವಾಮೀಜಿ

ರಾಹುಲ್ ಗಾಂಧಿ ಅವರನ್ನು ಹಿಂದೂ ಧರ್ಮದಿಂದ ಬಹಿಷ್ಕರಿಸಲಾಗುತ್ತಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ. ಸಂಸತ್ತಿನಲ್ಲಿ ಮನುಸ್ಮೃತಿ ಕುರಿತು ರಾಹುಲ್ ಗಾಂಧಿ ನೀಡಿದ ಹೇಳಿಕೆಯಿಂದ ಸನಾತನ ಧರ್ಮದ ಅನುಯಾಯಿಗಳ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಅವರು ಹೇಳಿದರು. 

1 Min read
Mahmad Rafik
Published : May 04 2025, 03:07 PM IST
Share this Photo Gallery
  • FB
  • TW
  • Linkdin
  • Whatsapp
15

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇನ್ಮುಂದೆ ಹಿಂದೂ ಧರ್ಮದ ಭಾಗವಾಗಿರುವುದಿಲ್ಲ. ರಾಹುಲ್ ಗಾಂಧಿ ಅವರನ್ನು  ಹಿಂದೂ ಧರ್ಮದಿಂದ ಸಾರ್ವಜನಿಕವಾಗಿ ಬಹಿಷ್ಕರಿಸಲಾಗುತ್ತಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಹೇಳಿದ್ದಾರೆ.

25

ಇಂದು ಬದರಿನಾಥದ ಶಂಕರಾಚಾರ್ಯ ಆಶ್ರಮದಲ್ಲಿ ಮಾಧ್ಯಮಗಳ ಜೊತೆ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ಮಾತನಾಡಿದರು. ಇತ್ತೀಚೆಗೆ ಸಂಸತ್ತಿನಲ್ಲಿ ರಾಹುಲ್ ಗಾಂಧಿ ಅವರು ಮನುಸ್ಮೃತಿ ಕುರಿತ ನೀಡಿದ ಹೇಳಿಕೆಯಿಂದ ಸನಾತನ ಧರ್ಮದ ಎಲ್ಲಾ ಅನುಯಾಯಿಗಳ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಹೇಳಿದರು.

Related Articles

Related image1
ಒಂದೇ ವೇದಿಕೆಯಲ್ಲಿ ಪಿಣರಾಯಿ-ತರೂರ್‌ನಿಂದ ಹಲವರ ನಿದ್ದೆ ಭಂಗ, ಹಾಸ್ಯದಲ್ಲೇ ಟಾಂಗ್ ಕೊಟ್ಟ ಮೋದಿ
Related image2
ಜಿ20 ಶೃಂಗಸಭೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಯುರೋಪ್‌ ಪ್ರವಾಸಕ್ಕೆ ಹೊರಟ ರಾಹುಲ್
35

ಸಂಸತ್ತಿನಲ್ಲಿ ಮಾತನಾಡುವಾಗ ರಾಹುಲ್ ಗಾಂಧಿ, ಅತ್ಯಾಚಾರಿಯನ್ನು ರಕ್ಷಿಸುವ ಸೂತ್ರವು ಸಂವಿಧಾನದಲ್ಲಿ ಬರೆಯಲ್ಪಟ್ಟಿಲ್ಲ.  ನಿಮ್ಮ ಪುಸ್ತಕವಾದ ಮನುಸ್ಮೃತಿಯಲ್ಲಿ ಬರೆಯಲ್ಪಟ್ಟಿದೆ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆ ಖಂಡನೀಯ ಎಂದು ಸ್ವಾಮೀಜಿಗಳು ಹೇಳಿದ್ದಾರೆ

45

ಮುಂದುವರಿದು ಮಾತನಾಡಿದ ಸ್ವಾಮೀಜಿಗಳು, ಮೂರು ತಿಂಗಳ ಹಿಂದೆ ರಾಹುಲ್ ಗಾಂಧಿ ಅವರಿಗೆ ನೋಟಿಸ್ ನೀಡಲಾಗಿತ್ತು. ನಿಮ್ಮ ಹೇಳಿಕೆ ಮನುಸ್ಮೃತಿಯಲ್ಲಿ ಎಲ್ಲಿ ಉಲ್ಲೇಖಿಸಲಾಗಿದೆ ಎಂದು ತೋರಿಸುವಂತೆ ಹೇಳಲಾಗಿತ್ತು. ನೋಟಿಸ್ ನೀಡಿ ಮೂರು ತಿಂಗಳಾದ್ರೂ ರಾಹುಲ್ ಗಾಂಧಿ ಅವರಿಂದ ಉತ್ತರ ಬಂದಿಲ್ಲ ಮತ್ತು ತಮ್ಮ ಹೇಳಿಕೆಗೂ ಕ್ಷಮೆಯನನ್ನು ಸಹ ಕೇಳಿಲ್ಲ ಎಂದಿದ್ದಾರೆ. ರಾಹುಲ್ ಗಾಂಧಿ ತಮ್ಮನ್ನು ಹಿಂದೂ ಎಂದು ಕರೆದುಕೊಳ್ಳಲು ಅನರ್ಹರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. 

55

ಒಬ್ಬ ವ್ಯಕ್ತಿ ನಿರಂತರವಾಗಿ ಹಿಂದೂ ಧರ್ಮಗ್ರಂಥಗಳನ್ನು ಅವಮಾನಿಸುತ್ತಾನೆ. ತನ್ನ ಹೇಳಿಕೆಗಳಿಗೆ ಯಾವುದೇ ಸ್ಪಷ್ಟನೆಯನ್ನು ನೀಡಿಲ್ಲ. ಅಂತಹ ವ್ಯಕ್ತಿಗೆ ಹಿಂದೂ ಧರ್ಮದಲ್ಲಿ ಸ್ಥಾನ ನೀಡಲಾಗುವುದಿಲ್ಲ ಎಂದು ಸ್ವಾಮೀಜಿಗಳು ಹೇಳಿದ್ದಾರೆ. ಎಲ್ಲಾ ದೇವಸ್ಥಾನಗಳು ರಾಹುಲ್ ಗಾಂಧಿಯನ್ನು ವಿರೋಧಿಸಬೇಕು. ರಾಹುಲ್ ಗಾಂಧಿಯವರ ಯಾವುದೇ ಪೂಜೆಗಳನ್ನು ಅರ್ಚಕರು ಮಾಡಬಾರದು ಎಂದು ಮನವಿ ಮಾಡಿಕೊಂಡಿದ್ದಾರೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ರಾಹುಲ್ ಗಾಂಧಿ
ಹಿಂದೂ ಧರ್ಮ
ಹಿಂದೂ
ಕಾಂಗ್ರೆಸ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved