MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ತಿರುಪತಿ ಹುಂಡಿಯಿಂದ ಕದ್ದ 100 ಕೋಟಿ ಹೋಗಿದ್ದೆಲ್ಲಿಗೆ? CCTV ದೃಶ್ಯ ಬಿಡುಗಡೆ

ತಿರುಪತಿ ಹುಂಡಿಯಿಂದ ಕದ್ದ 100 ಕೋಟಿ ಹೋಗಿದ್ದೆಲ್ಲಿಗೆ? CCTV ದೃಶ್ಯ ಬಿಡುಗಡೆ

ವೈ.ಎಸ್. ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ತಿರುಪತಿ ದೇವಸ್ಥಾನದ ಹುಂಡಿಯಿಂದ 100 ಕೋಟಿ ರೂ.ಗೂ ಅಧಿಕ ಹಣ ಕಳ್ಳತನವಾಗಿದೆ ಎಂದು ಬಿಜೆಪಿ ನಾಯಕ ಭಾನು ಪ್ರಕಾಶ್ ರೆಡ್ಡಿ ಆರೋಪಿಸಿದ್ದಾರೆ. ಈ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿ, ಜಗನ್ ನಿವಾಸಕ್ಕೆ ಕಳುಹಿಸಲಾಗಿದೆ ಎಂದು ದೂರಿದ್ದಾರೆ.

2 Min read
Mahmad Rafik
Published : Sep 22 2025, 05:48 PM IST
Share this Photo Gallery
  • FB
  • TW
  • Linkdin
  • Whatsapp
17
ತಿರುಪತಿ ದೇವಸ್ಥಾನದಿಂದ 100 ಕೋಟಿ ರೂಪಾಯಿಗೂ ಅಧಿಕ ಹಣ ಕಳ್ಳತನ
Image Credit : Social Media

ತಿರುಪತಿ ದೇವಸ್ಥಾನದಿಂದ 100 ಕೋಟಿ ರೂಪಾಯಿಗೂ ಅಧಿಕ ಹಣ ಕಳ್ಳತನ

ವೈ.ಎಸ್. ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರದಲ್ಲಿ ತಿರುಪತಿ ದೇವಸ್ಥಾನದಿಂದ 100 ಕೋಟಿ ರೂಪಾಯಿಗೂ ಅಧಿಕ ಹಣ ಕಳ್ಳತನ ಮಾಡಲಾಗಿದೆ ಎಂಬ ಗಂಭೀರ ಆರೋಪವನ್ನು ಆಂಧ್ರ ಪ್ರದೇಶದ ಬಿಜೆಪಿ ನಾಯಕ ಗಂಭೀರ ಆರೋಪವನ್ನು ಮಾಡಿದ್ದಾರೆ.

27
ಸಿಟಿವಿ ದೃಶ್ಯಾವಳಿ
Image Credit : Social Media

ಸಿಟಿವಿ ದೃಶ್ಯಾವಳಿ

ಆಂಧ್ರ ಪ್ರದೇಶದ ಬಿಜೆಪಿ ನಾಯಕ ಮತ್ತು ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ಸದಸ್ಯ ಭಾನು ಪ್ರಕಾಶ್ ರೆಡ್ಡಿ ಈ ಗಂಭೀರವಾದ ಆರೋಪವನ್ನು ಮಾಡಿದ್ದಾರೆ. ದೇವಸ್ಥಾನದ ಉದ್ಯೋಗಿ ರವಿಕುಮಾರ್ ಎಂಬವರು ಹುಂಡಿಯಿಂದ ಹಣ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಸಿಸಿಟಿವಿ ದೃಶ್ಯಾವಳಿಯೊಂದನ್ನು ಸಹ ಬಿಡುಗಡೆ ಮಾಡಿದ್ದಾರೆ

Related Articles

Related image1
Top News Today: 33 ಕ್ರಿಶ್ಚಿಯನ್‌ ಜಾತಿಗೆ ಕೊಕ್‌, ಉದ್ದು, ಶೇಂಗಾಗೆ ಬೆಂಬಲ ಬೆಲೆ, ಬೆಳಗಾವಿಯಲ್ಲಿ ತಿರುಪತಿ ದೇಗುಲ
Related image2
ತಿರುಪತಿ ತಿಮ್ಮಪ್ಪನಿಗೆ ಉದ್ಯಮಿಯ 121 ಕೇಜಿ ಚಿನ್ನ ಕಾಣಿಕೆ: ಇದರ ಮೌಲ್ಯ ಎಷ್ಟು ಗೊತ್ತಾ?
37
 ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ
Image Credit : others

ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ

ತಿರುಪತಿ ದೇವಸ್ಥಾನದ ಹುಂಡಿಯಿಂದ ಕಳ್ಳತನ ಮಾಡಲಾದ ಕೋಟ್ಯಂತರ ರೂಪಾಯಿ ಹಣವನ್ನು ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಲಾಗಿದೆ. ಕಳ್ಳತನ ಮಾಡಲಾದ ಹಣವನ್ನು ಜಗನ್ ಮೋಹನ್ ರೆಡ್ಡಿ ಅವರ ನಿವಾಸವಾದ ತಾಡೇಪಲ್ಲಿಯ ಪ್ಯಾಲೇಸ್‌ಗೆ ಕಳುಹಿಸಾಲಾಗಿದೆ ಎಂದು ಭಾನು ಪ್ರಕಾಶ್ ರೆಡ್ಡಿ ಆರೋಪ ಮಾಡಿದ್ದಾರೆ.

47
 ವೈಎಸ್‌ಆರ್‌ಸಿಪಿ ಆಳ್ವಿಕೆ
Image Credit : social media

ವೈಎಸ್‌ಆರ್‌ಸಿಪಿ ಆಳ್ವಿಕೆ

2019 ಮತ್ತು 2024 ರ ನಡುವೆ ವೈಎಸ್‌ಆರ್‌ಸಿಪಿ ಆಳ್ವಿಕೆಯಲ್ಲಿ ನಡೆದ ಅತಿದೊಡ್ಡ ಕಳ್ಳತನವಾಗಿದೆ. 100 ಕೋಟಿ ರೂಪಾಯಿ ಕಳ್ಳತನ ಟಿಟಿಡಿ ಇತಿಹಾಸದಲ್ಲಿ ನಡೆದ ಅತಿದೊಡ್ಡ ದರೋಡೆಯಾಗಿದೆ. ಬಿಜೆಪಿ ನೇತೃತ್ವದ ಎನ್‌ಡಿಎಯ ಮಿತ್ರ ಪಕ್ಷ ಟಿಡಿಪಿಯ ನಾಯಕ ನಾರಾ ಲೋಕೇಶ್ ಎಂಬವರು ಕಾಣಿಕೆ ಹುಂಡಿ ಲೂಟಿ ಮಾಡುವ ದೃಶ್ಯಾವಳಿಗಳನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

57
 ನಾರಾ ಲೋಕೇಶ್
Image Credit : Getty

ನಾರಾ ಲೋಕೇಶ್

ಈ ಕುರಿತು ಪ್ರತಿಕ್ರಿಯಿಸಿರುವ ನಾರಾ ಲೋಕೇಶ್, ಹೈಕೋರ್ಟ್ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದೆ. ಒಂದು ತಿಂಗಳೊಳಗೆ ತನಿಖೆಯನ್ನು ಪೂರ್ಣಗೊಳಿಸಿ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಲು ಆದೇಶಿಸಿದೆ. ಮಂಡಳಿಯ ನಿರ್ಧಾರಗಳು ಮತ್ತು ಸಂಬಂಧಿತ ದಾಖಲೆಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಸಹ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರಿನ ಜನತೆಗಾಗಿ ತಿರುಪತಿಗೆ KSTDC ವಿಶೇಷ ಟೂರ್ ಪ್ಯಾಕೇಜ್; ಟಿಕೆಟ್ ಬೆಲೆ ಎಷ್ಟು?

67
ಲೋಕ್ ಅದಲಾತ್‌
Image Credit : Freepik

ಲೋಕ್ ಅದಲಾತ್‌

ಲೋಕ್ ಅದಲಾತ್‌ನಲ್ಲಿ ಈ ಪ್ರಕರಣವನ್ನು ಇತ್ಯರ್ಥಪಡಿಸಲಾಗಿತ್ತು. ಇದರಲ್ಲಿ ವೈಎಸ್‌ಆರ್‌ಸಿಪಿ ನಾಯಕರು ಮತ್ತು ಉನ್ನತ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಬಿಜೆಪಿಯ ಭಾನು ಪ್ರಕಾಶ್ ರೆಡ್ಡಿ ಆರೋಪಿಸಿದ್ದಾರೆ. 

ಇದನ್ನೂ ಓದಿ: ತಿರುಮಲದ ಮಹಿಳಾ ಭಕ್ತರಿಗೆ ಸ್ಪಂದಿಸಿದ ರಾಜ್ಯ ಸರ್ಕಾರ; ಶೀಘ್ರದಲ್ಲಿಯೇ ಅಧಿಕೃತ ಪ್ರಕಟಣೆ

77
ಲೂಟಿ ಹೊಡೆದ ಹಣವನ್ನು ಹಂಚಿಕೆ
Image Credit : our own

ಲೂಟಿ ಹೊಡೆದ ಹಣವನ್ನು ಹಂಚಿಕೆ

ಪೊಲೀಸ್ ಅಧಿಕಾರಿಯೊಬ್ಬರು ಅತ್ಯಂತ ಪ್ರಾಮಾಣಿಕತನದಿಂದ ಪೊಲೀಸ್ ಅಧಿಕಾರಿಯೊಬ್ಬರು ದೇವಸ್ಥಾನ ಲೂಟಿ ಹೊಡೆಯುವ ಕೆಲಸವನ್ನು ಮಾಡುತ್ತಿದ್ದರು. ಅಧಿಕಾರಿಗಳು, ಪೊಲೀಸರು ಮತ್ತು ರಾಜಕೀಯ ನಾಯಕರು ಲೂಟಿ ಹೊಡೆದ ಹಣವನ್ನು ಹಂಚಿಕೊಳ್ಳುತ್ತಿದ್ದರು. ಆ ಸಮಯದಲ್ಲಿ ಕರುಣಾಕರ್ ರೆಡ್ಡಿ ಟಿಟಿಡಿಯ ಅಧ್ಯಕ್ಷರಾಗಿದ್ದರು ಎಂದು ಹೇಳಿದ್ದರು.

#YCPTirumalaMahaPapam 
వైసిపి గజదొంగలు శ్రీవారి సొత్తూ దోచుకున్నారు. వందకోట్ల పరకా'మనీ దొంగ' వెనుక వైసీపీ నేతలు

జగన్ ఐదేళ్ల పాలనలో అవినీతి రాజ్యమేలింది. అరాచకం పెచ్చరిల్లింది. దొంగలు, దోపిడీదారులు, మాఫియా డాన్లకు ఏపీని కేరాఫ్ అడ్రస్ చేసారు జగన్. గనులు, భూములు, అడవులు, సమస్త… pic.twitter.com/Pwssua12YM

— Lokesh Nara (@naralokesh) September 20, 2025

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ತಿರುಮಲ ತಿರುಪತಿ ದೇವಸ್ಥಾನಂ
ತಿರುಪತಿ
ಆಂಧ್ರ ಪ್ರದೇಶ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved