MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • 'ಬೆಳಿಗ್ಗೆಯಿಂದ ಸಂಜೆಯವರೆಗೆ ಎಲ್ಲವೂ ಫ್ರೀ ಅಂದ್ರೆ ಕೆಲಸ ಮಾಡೋರು ಯಾರು?' ಉಚಿತ ಭಾಗ್ಯದ ವಿರುದ್ಧ ಸುಪ್ರೀಂ ಕೋರ್ಟ್ ಗರಂ!

'ಬೆಳಿಗ್ಗೆಯಿಂದ ಸಂಜೆಯವರೆಗೆ ಎಲ್ಲವೂ ಫ್ರೀ ಅಂದ್ರೆ ಕೆಲಸ ಮಾಡೋರು ಯಾರು?' ಉಚಿತ ಭಾಗ್ಯದ ವಿರುದ್ಧ ಸುಪ್ರೀಂ ಕೋರ್ಟ್ ಗರಂ!

ಚುನಾವಣೆಗೂ ಮುನ್ನ ಘೋಷಿಸುವ ಉಚಿತ ಕೊಡುಗೆಗಳ ಸಂಸ್ಕೃತಿಯನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಖಂಡಿಸಿದೆ. ದೇಶದ ಆರ್ಥಿಕತೆಗೆ ಮಾರಕವಾದ ಇಂತಹ ನೀತಿಗಳ ಬದಲು, ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಬೇಕೆಂದು ನ್ಯಾಯಾಲಯವು ಎಲ್ಲಾ ರಾಜ್ಯ ಸರ್ಕಾರಗಳಿಗೆ ಒತ್ತಿಹೇಳಿದೆ.

2 Min read
Author : Santosh Naik
Published : Feb 19 2026, 03:56 PM IST
Share this Photo Gallery
  • FB
  • TW
  • Linkdin
  • Whatsapp
18
 ಎಲ್ಲಾ ರಾಜ್ಯಗಳ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌
Image Credit : X

ಎಲ್ಲಾ ರಾಜ್ಯಗಳ ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್‌

ಚುನಾವಣೆಗೂ ಮುನ್ನ ಘೋಷಿಸುವ ಉಚಿತ ಹಂಚಿಕೆಯ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಎಲ್ಲಾ ರಾಜ್ಯ ಸರ್ಕಾರಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಉಚಿತ ಘೋಷಣೆ ಸಂಸ್ಕೃತಿಯನ್ನು ಖಂಡಿಸಿದ ಸುಪ್ರೀಂ ಕೋರ್ಟ್, ದೇಶದ ಆರ್ಥಿಕ ಅಭಿವೃದ್ಧಿಗೆ ಅಡ್ಡಿಯಾಗುವ ಇಂತಹ ನೀತಿಗಳನ್ನು ಮರುಪರಿಶೀಲಿಸುವ ಸಮಯ ಬಂದಿದೆ ಎಂದು ಹೇಳಿದೆ.

28
ಎಂಥಾ ಸಂಸ್ಕೃತಿ ಬೆಳೆಸುತ್ತಿದ್ದೀರಿ?
Image Credit : AI

ಎಂಥಾ ಸಂಸ್ಕೃತಿ ಬೆಳೆಸುತ್ತಿದ್ದೀರಿ?

"ದೇಶದಲ್ಲಿ ನಾವು ಎಂತಹ ಸಂಸ್ಕೃತಿಯನ್ನು ಬೆಳೆಸುತ್ತಿದ್ದೇವೆ? ಕಲ್ಯಾಣ ಯೋಜನೆಯ ಭಾಗವಾಗಿ, ವಿದ್ಯುತ್ ಶುಲ್ಕವನ್ನು ಪಾವತಿಸಲು ಅಶಕ್ತರಾಗಿರುವವರಿಗೆ ಸಹಾಯ ಮಾಡುವುದು ಅರ್ಥವಾಗುವಂತಹ ವಿಚಾರ," ಎಂದು ನ್ಯಾಯಪೀಠ ಹೇಳಿದೆ.

Related Articles

Related image1
ಮತದಾನ ಮಾಡಿದ ಮಹಿಳೆಯರಿಗೆ ಕನ್ನಡತಿ ನ್ಯಾಚುರಲ್‌ ಬ್ಯೂಟಿ ಪಾರ್ಲರ್‌ನಿಂದ ಉಚಿತ ಐಬ್ರೊ ಭಾಗ್ಯ!
Related image2
ಭಾಗ್ಯಲಕ್ಷ್ಮಿ, ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಕಾಂಗ್ರೆಸ್ ಪಕ್ಷ ನೀಡಿದ್ದಾ: ಬೊಮ್ಮಾಯಿ ಪ್ರಶ್ನೆ
38
ತುಷ್ಟೀಕರಣ ನೀತಿ ಅಲ್ಲವೆ..
Image Credit : x

ತುಷ್ಟೀಕರಣ ನೀತಿ ಅಲ್ಲವೆ..

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಹಾಗೂ ವಿಪುಲ್ ಎಂ. ಪಾಂಚೋಲಿ ಅವರನ್ನೊಳಗೊಂಡ ಪೀಠವು, "ಶಕ್ತಿ ಇರುವವರು ಮತ್ತು ಇಲ್ಲದವರ ನಡುವೆ ಯಾವುದೇ ವ್ಯತ್ಯಾಸ ಮಾಡದೆ ಉಚಿತ ಘೋಷಣೆಗಳನ್ನು ಹಂಚುವುದು ತುಷ್ಟೀಕರಣದ ನೀತಿಯಾಗುವುದಿಲ್ಲವೇ?" ಎಂದು ರಾಜ್ಯಗಳನ್ನು ಪ್ರಶ್ನಿಸಿತು.

48
ತಮಿಳುನಾಡು ಸರ್ಕಾರದ ವಿರುದ್ಧ ಕಿಡಿ
Image Credit : Asianet News

ತಮಿಳುನಾಡು ಸರ್ಕಾರದ ವಿರುದ್ಧ ಕಿಡಿ

ಗ್ರಾಹಕರ ಆರ್ಥಿಕ ಸ್ಥಿತಿಯನ್ನು ಪರಿಗಣಿಸದೆ ಎಲ್ಲರಿಗೂ ಉಚಿತ ವಿದ್ಯುತ್ ನೀಡುವ ತಮಿಳುನಾಡು ವಿದ್ಯುತ್ ವಿತರಣಾ ನಿಗಮದ ಪ್ರಸ್ತಾವನೆಯನ್ನು ಗಮನಿಸಿದ ನ್ಯಾಯಾಲಯ, "ರಾಜ್ಯಗಳು ಬಡವರಿಗೆ ಆಸರೆಯಾಗುವುದು ಅರ್ಥಪೂರ್ಣ. ಆದರೆ, ಪಾವತಿಸುವ ಸಾಮರ್ಥ್ಯ ಇರುವವರು ಮತ್ತು ಇಲ್ಲದವರ ನಡುವೆ ವ್ಯತ್ಯಾಸವನ್ನೇ ಗುರುತಿಸದೆ ನೀವು ಉಚಿತವಾಗಿ ನೀಡಲು ಹೊರಟಿದ್ದೀರಿ" ಎಂದು ಸಿಜೆಐ ಸೂರ್ಯಕಾಂತ್ ಆಕ್ಷೇಪ ವ್ಯಕ್ತಪಡಿಸಿದರು.

58
ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ
Image Credit : X

ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿ

ಉಚಿತ ಘೋಷಣೆಗಳು ದೇಶದ ಆರ್ಥಿಕ ಪ್ರಗತಿಯನ್ನು ಕುಂಠಿತಗೊಳಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಸರ್ಕಾರಗಳು ಎಲ್ಲರಿಗೂ ಉಚಿತ ಆಹಾರ, ಸೈಕಲ್, ವಿದ್ಯುತ್ ನೀಡುವ ಬದಲು ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಆದ್ಯತೆ ನೀಡಬೇಕು ಎಂದು ನ್ಯಾಯಾಲಯ ಒತ್ತಿಹೇಳಿದೆ.

68
ರಾಜ್ಯಗಳ ಕಂದಾಯ ಕೊರತೆ ಹೆಚ್ಚಿದೆ
Image Credit : X

ರಾಜ್ಯಗಳ ಕಂದಾಯ ಕೊರತೆ ಹೆಚ್ಚಿದೆ

"ದೇಶದ ಹೆಚ್ಚಿನ ರಾಜ್ಯಗಳು ಕಂದಾಯ ಕೊರತೆಯನ್ನು ಎದುರಿಸುತ್ತಿವೆ. ಹೀಗಿದ್ದರೂ ಅಭಿವೃದ್ಧಿಯನ್ನು ನಿರ್ಲಕ್ಷಿಸಿ ಇಂತಹ ಉಚಿತ ಕೊಡುಗೆಗಳನ್ನು ನೀಡಲಾಗುತ್ತಿದೆ," ಎಂದು ಪೀಠವು ಹೇಳಿತು.

78
ಕೆಲಸ ಮಾಡುವವರು ಯಾರು?
Image Credit : ANI

ಕೆಲಸ ಮಾಡುವವರು ಯಾರು?

"ರಾಜ್ಯಗಳು ಉದ್ಯೋಗದ ಹಾದಿಗಳನ್ನು ತೆರೆಯಲು ಶ್ರಮಿಸಬೇಕು. ನೀವು ಬೆಳಿಗ್ಗೆಯಿಂದ ಸಂಜೆಯವರೆಗೆ ಉಚಿತ ಆಹಾರ, ಉಚಿತ ವಿದ್ಯುತ್, ಉಚಿತ ಗ್ಯಾಸ್ ನೀಡುತ್ತಾ ನೇರವಾಗಿ ಖಾತೆಗೆ ಹಣ ವರ್ಗಾವಣೆ ಮಾಡಿದರೆ, ಮುಂದೆ ಯಾರು ಕೆಲಸ ಮಾಡುತ್ತಾರೆ? ಆಗ ಕೆಲಸದ ಸಂಸ್ಕೃತಿ ಏನಾಗುತ್ತದೆ? ಇದೇನಾ ನೀವುಗಳು ಮಾಡುವ ರಾಷ್ಟ್ರ ನಿರ್ಮಾಣ?" ಎಂದು ಸಿಜೆಐ ಸೂರ್ಯಕಾಂತ್ ಪ್ರಶ್ನೆ ಮಾಡಿದ್ದಾರೆ.

88
ಎಲ್ಲಾ ರಾಜ್ಯಗಳಿಗೂ ಅನ್ವಯಿಸುವ ವಿಚಾರ
Image Credit : Social Media

ಎಲ್ಲಾ ರಾಜ್ಯಗಳಿಗೂ ಅನ್ವಯಿಸುವ ವಿಚಾರ

ನ್ಯಾಯಮೂರ್ತಿ ಬಾಗ್ಚಿ ಅವರು ಈ ವಿಷಯವಾಗಿ ಮಾತನಾಡಿ, "ಇದು ಕೇವಲ ಒಂದು ರಾಜ್ಯದ ವಿಷಯವಲ್ಲ, ಎಲ್ಲಾ ರಾಜ್ಯಗಳಿಗೂ ಅನ್ವಯಿಸುತ್ತದೆ. ಇದು ಯೋಜಿತ ವೆಚ್ಚವಾಗಿದ್ದು, ಬಜೆಟ್ ಪ್ರಸ್ತಾಪಗಳಲ್ಲಿ ನಿರುದ್ಯೋಗ ನಿರ್ಮೂಲನೆಗೆ ಎಷ್ಟು ಹಣ ವ್ಯಯಿಸಲಾಗುತ್ತಿದೆ ಎಂಬ ಸಮರ್ಥನೆಯನ್ನು ಸರ್ಕಾರಗಳು ಏಕೆ ನೀಡುವುದಿಲ್ಲ?" ಎಂದು ಪ್ರಶ್ನಿಸಿದರು.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಸುಪ್ರೀಂ ಕೋರ್ಟ್
ನ್ಯಾಯಾಲಯ
ಗ್ಯಾರಂಟಿ ಯೋಜನೆಗಳು
ಸುದ್ದಿ
ಭಾರತ
ಭಾರತ ಸುದ್ದಿ

Latest Videos
Recommended Stories
Recommended image1
Vijay-Rashmika Wedding: ರಶ್ಮಿಕಾ ಜೊತೆ ಮದುವೆ ನಂತರ ವಿಜಯ್ ದೇವರಕೊಂಡ ಹಣೆಬರಹ ಬದಲಾಗಲಿದೆಯೇ? ಜ್ಯೋತಿಷಿ ಹೇಳಿದ್ದೇನು?
Recommended image2
ತನ್ನ ಮೂರು ಮಕ್ಕಳನ್ನು ಕೊಂದು 18 ವರ್ಷ ಜೈಲಿಗೆ ಹೋಗಿ ಬಂದವನಿಂದ ಆಶ್ರಯ ನೀಡಿದ ಮಹಿಳೆಯ ಕೊಲೆ
Recommended image3
ಹೆಂಡತಿ ಖಾಸಗಿ ವಿಡಿಯೋ ಸೆರೆ ಹಿಡಿದು ಹರಿಬಿಟ್ಟ ಪತಿ, ಕೋಲಾಹಲ ಸೃಷ್ಟಿಸಿದ ಕ್ಲಿಪ್
Related Stories
Recommended image1
ಮತದಾನ ಮಾಡಿದ ಮಹಿಳೆಯರಿಗೆ ಕನ್ನಡತಿ ನ್ಯಾಚುರಲ್‌ ಬ್ಯೂಟಿ ಪಾರ್ಲರ್‌ನಿಂದ ಉಚಿತ ಐಬ್ರೊ ಭಾಗ್ಯ!
Recommended image2
ಭಾಗ್ಯಲಕ್ಷ್ಮಿ, ಪಂಪ್‌ಸೆಟ್‌ಗೆ ಉಚಿತ ವಿದ್ಯುತ್ ಕಾಂಗ್ರೆಸ್ ಪಕ್ಷ ನೀಡಿದ್ದಾ: ಬೊಮ್ಮಾಯಿ ಪ್ರಶ್ನೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved