MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • K Annamalai: ನನಗೆ ಅದೆಲ್ಲಾ ಇಷ್ಟವಾಗಲ್ಲ ಪ್ಲೀಸ್: ಅಭಿಮಾನಿಗಳಿಗೆ ಅಣ್ಣಾಮಲೈ ವಿಶೇಷ ಮನವಿ

K Annamalai: ನನಗೆ ಅದೆಲ್ಲಾ ಇಷ್ಟವಾಗಲ್ಲ ಪ್ಲೀಸ್: ಅಭಿಮಾನಿಗಳಿಗೆ ಅಣ್ಣಾಮಲೈ ವಿಶೇಷ ಮನವಿ

K Annamalai request to fans: ತಮಿಳುನಾಡು ಬಿಜೆಪಿ ನಾಯಕ ಕೆ. ಅಣ್ಣಾಮಲೈ  ಇಂತಹ ಚಟುವಟಿಕೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಮತ್ತು ತಮ್ಮ ಕುಟುಂಬದ ಕಡೆಗೆ ಗಮನ ಹರಿಸುವಂತೆ ಅಣ್ಣಾಮಲೈ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ.

2 Min read
Author : Mahmad Rafik
Published : Oct 18 2025, 02:38 PM IST
Share this Photo Gallery
  • FB
  • TW
  • Linkdin
  • Whatsapp
15
ಅಣ್ಣಾಮಲೈ ವಿಶೇಷ ಮನವಿ
Image Credit : Asianet News

ಅಣ್ಣಾಮಲೈ ವಿಶೇಷ ಮನವಿ

ತಮಿಳುನಾಡು ಬಿಜೆಪಿ ಘಟಕದ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅಭಿಮಾನಿಗಳಲ್ಲಿ ವಿಶೇಷ ಮನವಿಯೊಂದನ್ನು ಮಾಡಿಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ತಮ್ಮ ಹೆಸರನ್ನು ಈ ರೀತಿ ಬಳಸುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ. ಏನಿದು ವಿಶೇಷ ಮನವಿ ಎಂಬುದರ ಮಾಹಿತಿ ಇಲ್ಲಿದೆ.

25
ಅಣ್ಣಾಮಲೈ ನರ್ಪಣಿ ಮಂಟ್ರಂ
Image Credit : Asianet News

ಅಣ್ಣಾಮಲೈ ನರ್ಪಣಿ ಮಂಟ್ರಂ

ಅಣ್ಣಾಮಲೈ ಅವರ ಬೆಂಬಲಿಗರು ತಿರುನಲ್ವೇಲಿ ಪ್ರದೇಶದಲ್ಲಿ 'ಅಣ್ಣಾಮಲೈ ನರ್ಪಣಿ ಮಂಟ್ರಂ'('ಅಣ್ಣಾಮಲೈ ಚಾರಿಟಿ ಫೌಂಡೇಶನ್') ಆರಂಭಿಸಿದ್ದರು. ಈ ಚಾರಿಟಿ ಫೌಂಡೇಶನ್ ಲೋಗೋ ಮತ್ತು ಧ್ವಜ ಬಿಡುಗಡೆ ಮಾಡಲಾಗಿತ್ತು. ಈ ಚಾರಿಟಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ನೆಲ್ಲೈ ವೇಲ್ಕಣ್ಣನ್ ಎಂಬವರು ಈ ಚಾರಿಟಿಯ ಅಧ್ಯಕ್ಷರಾಗಿದ್ದರು. ನೆಲ್ಲೈ ವೇಲ್ಕಣ್ಣನ್ ಅವರೇ ಧ್ವಜ ಅನಾವರಣ ಮಾಡಿದ್ದರು.

Related Articles

Related image1
ರೆಡ್ಡಿ ವಿರುದ್ಧ ಕೇಸ್ ಹಾಕಿ ಅಣ್ಣಾಮಲೈ ಎಳೆದು ತಂದ ಸೆಂಥಿಲ್, ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್!
Related image2
DMK ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಅಣ್ಣಾಮಲೈ; ಕೇಂದ್ರ ಸಚಿವ ಅಮಿತ್ ಶಾ ನಿಗಿ ನಿಗಿ ಕೆಂಡ!
35
ಚಾರಿಟಿ ಫೌಂಡೇಶನ್ ಆರಂಭ
Image Credit : Asianet News

ಚಾರಿಟಿ ಫೌಂಡೇಶನ್ ಆರಂಭ

ತಮ್ಮಿಂದ ಯಾವುದೇ ಅನುಮತಿ ಪಡೆಯದೇ, ತಮ್ಮ ಫೋಟೋ ಮತ್ತು ಹೆಸರಿನಲ್ಲಿ ಚಾರಿಟಿ ಫೌಂಡೇಶನ್ ಆರಂಭವಾಗಿರುವ ವಿಷಯ ಅಣ್ಣಾಮಲೈ ಅವರ ಗಮನಕ್ಕೆ ಬಂದಿದೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಅಣ್ಣಾಮಲೈ ಕೆಲವೊಂದು ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಗ್ಯಾರಂಟಿಗಳಿಗೆ ಫೇಕ್ ಸರ್ಟಿಫಿಕೇಟ್ ಮೂಲಕ ಕಾಂಗ್ರೆಸ್ ಸರ್ಕಾರ ಸಮರ್ಥನೆ: ಸಿ.ಟಿ. ರವಿ ಆರೋಪ

45
ಅಣ್ಣಾಮಲೈ ಸ್ಪಷ್ಟನೆ
Image Credit : Google

ಅಣ್ಣಾಮಲೈ ಸ್ಪಷ್ಟನೆ

ತಿರುನಲ್ವೇಲಿಯಲ್ಲಿ ನನ್ನ ಹೆಸರಿನಲ್ಲಿ ನರ್ಪಣಿ ಮಂಟ್ರಂ ಸ್ಥಾಪಿಸಿ, ಧ್ವಜ ಪರಿಚಯಿಸಲಾಗಿದೆ ಎಂಬುದನ್ನು ಮಾಧ್ಯಮಗಳಲ್ಲಿ ನೋಡಿದ್ದೇನೆ. ನೀವು ನನ್ನ ಮೇಲೆ ಇಟ್ಟಿರುವ ಪ್ರೀತಿಗೆ ನಾನು ಸದಾ ಋಣಿಯಾಗಿರುತ್ತೇನೆ. ಆದ್ರೆ ಇಂತಹ ಸಂಘ ಮತ್ತು ಧ್ವಜಗಳಿಗೆ ನನ್ನ ಒಪ್ಪಿಗೆ ಇಲ್ಲ ಎಂದು ಅಣ್ಣಾಮಲೈ ತಿಳಿಸಿದ್ದಾರೆ.

ಇದನ್ನೂ ಓದಿ: 25ನೇ ವಯಸ್ಸಿಗೆ ಬಿಜೆಪಿ ಟಿಕೆಟ್ ಪಡೆದ ಗಾಯಕಿ ಮೈಥಿಲಿ ಠಾಕೂರ್ ಆಸ್ತಿ ಎಷ್ಟು? ಆದಾಯದ ಮೂಲವೇನು?

55
 ಮನವಿ
Image Credit : ANI

ಮನವಿ

ದಯವಿಟ್ಟು ನನ್ನ ಹೆಸರು, ಫೋಟೋ ಇತ್ಯಾದಿಗಳನ್ನು ಬಳಸುವ ಇಂತಹ ಚಟುವಟಿಕೆಗಳನ್ನು ತಕ್ಷಣವೇ ಕೈಬಿಡುವಂತೆ ಕೇಳಿಕೊಳ್ಳುತ್ತೇನೆ. ಮುಂದಿನ ದಿನಗಳಲ್ಲೂ ಇಂತಹ ಚಟುವಟಿಕೆಗಳನ್ನು ಮಾಡದಂತೆ ಎಲ್ಲರಲ್ಲೂ ಮನವಿ ಮಾಡುತ್ತೇನೆ. ಗೋಡೆ ಇದ್ದರೆ ತಾನೇ ಚಿತ್ರ ಬರೆಯಲು ಸಾಧ್ಯ. ಹಾಗಾಗಿ, ಎಲ್ಲರೂ ಮೊದಲು ನಿಮ್ಮ ಜೀವನಕ್ಕೆ, ನಿಮ್ಮ ಕುಟುಂಬದವರ ಒಳಿತನ್ನು ಸುಧಾರಿಸಲು ಆದ್ಯತೆ ನೀಡಿ ಎಂದು ಕೇಳಿಕೊಳ್ಳುತ್ತೇನೆ. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಮತ್ತೊಮ್ಮೆ ನನ್ನ ಮನಃಪೂರ್ವಕ ಧನ್ಯವಾದಗಳು

அன்புள்ள சகோதர சகோதரிகளுக்கு,

வணக்கம். இன்றைய தினம், திருநெல்வேலியில், எனது பெயரில் நற்பணி மன்றம் அமைத்து, கொடி அறிமுகம் செய்துள்ளதாக, ஊடகங்களில் வந்த செய்தி கண்டேன். நீங்கள் என் மீது வைத்திருக்கும் அன்புக்கு மிகுந்த கடமைப்பட்டிருக்கிறேன். எனினும், இது போன்ற அமைப்புகள், கொடி…

— K.Annamalai (@annamalai_k) October 17, 2025

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಅಣ್ಣಾಮಲೈ
ತಮಿಳುನಾಡು
ಬಿಜೆಪಿ
ಭಾರತ ಸುದ್ದಿ

Latest Videos
Recommended Stories
Recommended image1
ವಿದ್ಯಾರ್ಥಿಗಳಿಗೆ ಲೈ0ಗಿಕ ಕಿರುಕುಳ, ಅವಿಮುಕ್ತೇಶ್ವರಾನಂದ ಸ್ವಾಮಿ ವಿರುದ್ಧ ಕೇಸ್‌ಗೆ ಕೋರ್ಟ್ ಸೂಚನೆ
Recommended image2
CBSE Exam: ಮ್ಯಾಥ್ಸ್ ಪೇಪರ್ ಟಫ್ ಇತ್ತು, ಸಿಬಿಎಸ್‌ನಿಂದ ಮೋಸ ಎಂದು ವಿದ್ಯಾರ್ಥಿಗಳ ಆಕ್ರೋಶ
Recommended image3
ಮುಂಬೈ ಬೀದಿಗಳಲ್ಲಿ 'ಟಾಕ್ಸಿಕ್' ನಟ ಯಶ್ ಹೆಂಡ್ತಿ ಹವಾ! ಕುತೂಹಲ ಮೂಡಿಸಿದ ರಾಧಿಕಾ ಪಂಡಿತ್ 'ಮುಂಬೈ ಡೈರೀಸ್' ಪೋಸ್ಟ್!
Related Stories
Recommended image1
ರೆಡ್ಡಿ ವಿರುದ್ಧ ಕೇಸ್ ಹಾಕಿ ಅಣ್ಣಾಮಲೈ ಎಳೆದು ತಂದ ಸೆಂಥಿಲ್, ಧರ್ಮಸ್ಥಳ ಕೇಸ್ ಗೆ ಬಿಗ್ ಟ್ವಿಸ್ಟ್!
Recommended image2
DMK ಬಗ್ಗೆ ಶಾಕಿಂಗ್ ಹೇಳಿಕೆ ನೀಡಿದ ಅಣ್ಣಾಮಲೈ; ಕೇಂದ್ರ ಸಚಿವ ಅಮಿತ್ ಶಾ ನಿಗಿ ನಿಗಿ ಕೆಂಡ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved