MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಗೋಮಾಂಸ ಇತ್ತು ಎಂದ ತೆಲುಗುದೇಶಂ

ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಗೋಮಾಂಸ ಇತ್ತು ಎಂದ ತೆಲುಗುದೇಶಂ

ತಿರುಪತಿ ಲಡ್ಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಗೋಮಾಂಸದ ಅಂಶಗಳಿವೆ ಎಂದು ಟಿಡಿಪಿ ಆರೋಪಿಸಿದೆ. 2022 ಮತ್ತು 2023ರ ಪ್ರಯೋಗಾಲಯ ವರದಿಗಳು ತುಪ್ಪ ಕಲಬೆರಕೆಯಾಗಿದ್ದು, ಪ್ರಾಣಿಜನ್ಯ ಅಂಶಗಳನ್ನು ಹೊಂದಿದೆ ಎಂದು ದೃಢಪಡಿಸಿವೆ ಎಂದು ಆಡಳಿತಾರೂಢ ಪಕ್ಷ ಹೇಳಿದೆ. 

1 Min read
Author : Kannadaprabha News
Published : Feb 01 2026, 08:38 AM IST
Share this Photo Gallery
  • FB
  • TW
  • Linkdin
  • Whatsapp
14
ತಿರುಪತಿ ಲಡ್ಡು
Image Credit : National Geographic/Youtube

ತಿರುಪತಿ ಲಡ್ಡು

‘ತಿರುಪತಿ ಲಡ್ಡು ತಯಾರಿಕೆಗೆ ಪೂರೈಸಿದ್ದ ಕಲಬೆರಕೆ ತುಪ್ಪವನ್ನು ಸಸ್ಯಜನ್ಯ ಜಿಡ್ಡಿನಿಂದ ತಯಾರಿಸಲಾಗಿತ್ತೇ ಹೊರತೂ, ಅದರಲ್ಲಿ ಗೋಮಾಂಸ, ಹಂದಿಯ ಮಾಂಸದ ಅಂಶಗಳು ಇರಲಿಲ್ಲ’ ಎಂದು ಸಿಬಿಐ ಚಾರ್ಜ್‌ಶೀಟನ್ನು ಉಲ್ಲೇಖಿಸಿ ವೈಎಸ್‌ಆರ್‌ ಕಾಂಗ್ರೆಸ್‌ ನಾಯಕರು ನೀಡಿದ್ದ ಹೇಳಿಕೆಯನ್ನು ಆಡಳಿತಾರೂಢ ಟಿಡಿಪಿ (ತೆಲುಗುದೇಶಂ) ತಿರಸ್ಕರಿಸಿದೆ.

24
 ತುಪ್ಪ ಕಲಬೆರಕೆ ಆಗಿದೆ
Image Credit : National Geographic/Youtube

ತುಪ್ಪ ಕಲಬೆರಕೆ ಆಗಿದೆ

ಈ ಕುರಿತು ಹೇಳಿಕೆ ನೀಡಿರುವ ಆಂಧ್ರಪ್ರದೇಶ ಸರ್ಕಾರದ ಸಚಿವ ಪಿ.ಕೇಶವ, ‘ಟಿಟಿಡಿಗೆ (ತಿರುಮಲ ತಿರುಪತಿ ದೇವಸ್ಥಾನ) ಪೂರೈಸುವ ತುಪ್ಪ ಕಲಬೆರಕೆ ಆಗಿದೆ ಎಂದು 2022ರಲ್ಲಿ ಮೈಸೂರಿನ ಸಿಎಫ್‌ಟಿಆರ್‌ಐ ತನ್ನ ವರದಿಯಲ್ಲಿ ಸ್ಪಷ್ಟಪಡಿಸಿತ್ತು. ಅದರ ಹೊರತಾಗಿಯೂ ವೈಎಸ್ಸಾರ್ ಸರ್ಕಾರ ಕಲಬೆರಕೆ ತುಪ್ಪ ಖರೀದಿ ಮುಂದುವರೆದಿತ್ತು.

34
ತುಪ್ಪದಲ್ಲಿನ ಗೋಮಾಂಸ
Image Credit : National Geographic/Youtube

ತುಪ್ಪದಲ್ಲಿನ ಗೋಮಾಂಸ

2023ರಲ್ಲಿ ಗುಜರಾತ್‌ನ ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿ ಪ್ರಯೋಗಾಲಯದ ವರದಿ, ತುಪ್ಪದಲ್ಲಿ ಪ್ರಾಣಿಜನ್ಯ ಅಂಶಗಳಿವೆ ಎಂದು ಅತ್ಯಂತ ಸ್ಪಷ್ಟವಾಗಿ ಉಲ್ಲೇಖಿಸಿತ್ತು. ಅದರನ್ನು ಆಧರಿಸಿಯೇ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಕಲಬೆರಕೆ ತುಪ್ಪದಲ್ಲಿನ ಗೋಮಾಂಸದ ಬಗ್ಗೆ ಪ್ರಸ್ತಾಪಿಸಿದ್ದರು’ ಎಂದರು.

ಇದನ್ನೂ ಓದಿ: 46 ವರ್ಷಗಳ ಹಿಂದೆ ತಿರುಮಲದ ಗರ್ಭಗುಡಿಯಲ್ಲಿ ನಡೆದ ಘಟನೆಗೆ ಇಂದಿಗೂ ಸಿಕ್ಕಿಲ್ಲ ಉತ್ತರ

44
 ಸತ್ಯಾಂಶ ಬಹಿರಂಗ
Image Credit : National Geographic/Youtube

ಸತ್ಯಾಂಶ ಬಹಿರಂಗ

‘ಹಿಂದಿನ ಸಿಎಂ ಜಗನ್‌ಗೆ ತುಪ್ಪ ಖರೀದಿಗೆ ಕೇವಲ ವಾಣಿಜ್ಯ ವ್ಯವಹಾರವಾಗಿತ್ತೇ ವಿನಃ ವೆಂಕಟೇಶ್ವರನ ಮೇಲಿನ ಭಕ್ತಿಯ ವಿಷಯವಾಗಿರಲಿಲ್ಲ. ಅದರೆ ನಾಯ್ಡು ಅವರು ಜವಾಬ್ದಾರಿಯುತ ವ್ಯಕ್ತಿಯಾಗಿರುವ ಕಾರಣ, ಜನರ ಮುಂದೆ ಸತ್ಯಾಂಶ ಬಹಿರಂಗಪಡಿಸಿದ್ದಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಿರುಪತಿ ಲಡ್ಡು ತಯಾರಿಗೆ 68 ಲಕ್ಷ ಕೆಜಿ ನಕಲಿ ತುಪ್ಪ; 250 ಕೋಟಿ ಗೋಲ್ಮಾಲ್: CBI ತನಿಖೆಯ ಸತ್ಯ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ತಿರುಮಲ ತಿರುಪತಿ ದೇವಸ್ಥಾನಂ
ತಿರುಪತಿ

Latest Videos
Budget 2026 : SIP Calculator
Monthly Investment
₹
Expected Annual Return
%
Investment Duration
Yr
Recommended Stories
Recommended image1
Union Budget: ಇಂದು ಕೇಂದ್ರ ಸರ್ಕಾರದಿಂದ ಬಜೆಟ್ ಮಂಡನೆ; ವಾರ್ಷಿಕ ಆಯವ್ಯಯದ ಕುತೂಹಲಕಾರಿ ಮಾಹಿತಿ
Recommended image2
India Latest News Live: ಬಜೆಟ್‌ಗೂ ಮುನ್ನವೇ ಗ್ರಾಹಕರಿಗೆ ಬೆಲೆ ಏರಿಕೆಯ ಬಿಸಿ! LPG ಸಿಲಿಂಡರ್ ದರದಲ್ಲಿ ಹೆಚ್ಚಳ
Recommended image3
ಗಂಡನ ಚಿತೆ ಆರುವ ಮುನ್ನವೇ ಸುನೇತ್ರಾ ಪವಾರ್ ದಿಢೀರ್ ಪ್ರಮಾಣವಚನ! ಹಿಂದಿದೆ 4 ಪ್ರಮುಖ ಕಾರಣ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved