MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಬಸ್‌ಗೆ ಡಿಕ್ಕಿ ಹೊಡೆದ ಟಿಪ್ಪರ್; ಪ್ರಯಾಣಿಕರ ಮೇಲೆ ಬಿದ್ದ ಜಲ್ಲಿಕಲ್ಲು, 20 ಸಾವು!

ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಬಸ್‌ಗೆ ಡಿಕ್ಕಿ ಹೊಡೆದ ಟಿಪ್ಪರ್; ಪ್ರಯಾಣಿಕರ ಮೇಲೆ ಬಿದ್ದ ಜಲ್ಲಿಕಲ್ಲು, 20 ಸಾವು!

Tipper lorry bus collision Telangana: ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಮತ್ತು ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 20 ಜನರು ಸಾವನ್ನಪ್ಪಿದ್ದಾರೆ. ಬಸ್‌ನೊಳಗೆ ಜಲ್ಲಿಕಲ್ಲು ತುಂಬಿದ್ದರಿಂದ ಅನೇಕ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

1 Min read
Mahmad Rafik
Published : Nov 03 2025, 10:15 AM IST
Share this Photo Gallery
  • FB
  • TW
  • Linkdin
  • Whatsapp
15
70 ಪ್ರಯಾಣಿಕರಿದ್ದ ಬಸ್‌ಗೆ ಡಿಕ್ಕಿ
Image Credit : Asianet News

70 ಪ್ರಯಾಣಿಕರಿದ್ದ ಬಸ್‌ಗೆ ಡಿಕ್ಕಿ

ಇಂದು ಬೆಳಗ್ಗೆ ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿಯೊಂದು 70 ಪ್ರಯಾಣಿಕರಿದ್ದ ಬಸ್‌ಗೆ ಡಿಕ್ಕಿಯಾದ್ದು, 20 ಜನರು ಸಾವನ್ನಪ್ಪಿದ್ದಾರೆ. 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಚೆವೆಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

25
20 ಜನರು ಮೃತ
Image Credit : Asianet News

20 ಜನರು ಮೃತ

ಚಾಲಕರಿಬ್ಬರು ಬಸ್‌ನೊಳಗೆ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಸದ್ಯ ವರದಿಗಳ ಪ್ರಕಾರ 20 ಜನರು ಮೃತರಾಗಿದ್ದು, ಬಸ್‌ನೊಳಗೆ ಟಿಪ್ಪರ್‌ನಲ್ಲಿದ್ದ ಜಲ್ಲಿಕಲ್ಲು ತುಂಬಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರು, ಅವಶೇಷಗಳಡಿ ಸಿಲುಕಿದ್ದ ಪ್ರಯಾಣಿಕರ ರಕ್ಷಣೆಗೆ ಮುಂದಾಗಿದ್ದರು.

Related Articles

Related image1
ಟೋಲ್‌ ಕೇಳಿದ್ದಕ್ಕೆ ನನ್ನ ಅಪ್ಪ ಯಾರು ಗೊತ್ತಾ? ಎಂದು ಕೇಳಿ ಟೋಲ್ ಸಿಬ್ಬಂದಿ ಮೇಲೆ ಹಲ್ಲೆ
Related image2
ಬೆಂಗಳೂರು : ಬರೋಬ್ಬರಿ 3.2 ಕೋಟಿ ಮೌಲ್ಯದ 1949 ಮೊಬೈಲ್‌ ಜಪ್ತಿ
35
ಹೈದರಾಬಾದ್-ಬಿಜಾಪುರ ಹೆದ್ದಾರಿ
Image Credit : Asianet News

ಹೈದರಾಬಾದ್-ಬಿಜಾಪುರ ಹೆದ್ದಾರಿ

ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ಮಿರ್ಜಗುಡ ಬಳಿ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಜಲ್ಲಿಕಲ್ಲು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ತಂಡೂರ್ ನಿಂದ ಹೈದರಾಬಾದ್ ತೆರಳುತ್ತಿತ್ತು. ಈ ವೇಳೆ ಎದುರಿಗೆ ಬರುತ್ತಿದ್ದ ಆರ್‌ಟಿಎಸ್‌ ಬಸ್‌ಗೆ (Telangana Road Transport Corporation) ಡಿಕ್ಕಿ ಹೊಡೆದಿದೆ. ಏನಾಗ್ತಿದೆ ಅಂತ ಪ್ರಯಾಣಿಕರು ನೋಡುವಷ್ಟರಲ್ಲಿ ಬಸ್‌ನೊಳಗೆ ಜಲ್ಲಿಕಲ್ಲು ತುಂಬಿತ್ತು.

45
ಬಸ್‌ನೊಳಗೆ ಜಲ್ಲಿಕಲ್ಲು
Image Credit : Asianet News

ಬಸ್‌ನೊಳಗೆ ಜಲ್ಲಿಕಲ್ಲು

ಬಸ್‌ನೊಳಗೆ ಜಲ್ಲಿಕಲ್ಲು ತುಂಬಿದ್ದರಿಂದ ಹೊರ ಬರಲಾಗದೇ ಪ್ರಯಾಣಿಕರು ಮೃತರಾಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಟಿಪ್ಪರ್‌ನಲ್ಲಿದ್ದ ಜಲ್ಲಿಕಲ್ಲು ಬಸ್‌ನೊಳಗೆ ಬಿದ್ದ ಕಾರಣ ನಮಗೆ ಪ್ರಯಾಣಿಕರನ್ನು ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ಕೂಡಲೇ ಪೊಲೀಸರಿಗೆ ಮಾಹಿತಿ ತಲುಪಿಸಲಾಯ್ತು ಎಂದು ಸ್ಥಳೀಯರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: ರಾಮನಗರದಲ್ಲಿ ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ: 130ಕ್ಕೂ ಹೆಚ್ಚು ಯುವಕ-ಯುವತಿಯರ ಬಂಧನ!

55
ವಾಹನದಟ್ಟಣೆ
Image Credit : Telugu Scribe/X

ವಾಹನದಟ್ಟಣೆ

ಅಪಘಾತದಿಂದ ಹೈದರಾಬಾದ್-ಬಿಜಾಪುರ ಹೆದ್ದಾರಿಯಲ್ಲಿ ವಾಹನದಟ್ಟಣೆ ಹೆಚ್ಚಾಗಿದ್ದರಿಂದ ಘಟನಾ ಸ್ಥಳಕ್ಕೆ ಅಂಬುಲೆನ್ಸ್ ತಲುಪಲು ವಿಳಂಬವಾಯ್ತು. ಸದ್ಯ ಸ್ಥಳಕ್ಕಾಗಮಿಸಿದ ಪೊಲೀಸರು ಜೆಸಿಬಿ ಮೂಲಕ ಜಲ್ಲಿಕಲ್ಲು, ಟಿಪ್ಪರ್ ಮತ್ತು ಬಸ್ ತೆರವುಗೊಳಿಸಿ ಟ್ರಾಫಿಕ್ ತಿಳಿಗೊಳಿಸಿದ್ದಾರೆ.

ಇದನ್ನೂ ಓದಿ: Bengaluru Vehicle Vandal Attack: ನಿಂತಿದ್ದ ಕಾರು ಬೈಕ್ ವಾಹನಗಳ ಗಾಜು ಒಡೆದ ಪುಂಡರು!

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಅಪಘಾತ
ತೆಲಂಗಾಣ
ಭಾರತ ಸುದ್ದಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved