MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • Breaking: ದಳಪತಿ ವಿಜಯ್‌ಗೆ ಕೊನೆಗೂ ಸಿಕ್ತು ರಾಜ್ಯಪಾಲರ ಗ್ರೀನ್‌ಸಿಗ್ನಲ್‌, ನಾಳೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ

Breaking: ದಳಪತಿ ವಿಜಯ್‌ಗೆ ಕೊನೆಗೂ ಸಿಕ್ತು ರಾಜ್ಯಪಾಲರ ಗ್ರೀನ್‌ಸಿಗ್ನಲ್‌, ನಾಳೆ 11 ಗಂಟೆಗೆ ಪ್ರಮಾಣವಚನ ಸ್ವೀಕಾರ

ತಮಿಳಗ ವೆಟ್ರಿ ಕಳಗಂ (TVK) ಸಂಸ್ಥಾಪಕ, ನಟ ವಿಜಯ್ ಅವರಿಗೆ ಸರ್ಕಾರ ರಚಿಸಲು ರಾಜ್ಯಪಾಲರು ಅಧಿಕೃತವಾಗಿ ಅನುಮತಿ ನೀಡಿದ್ದಾರೆ. ಈ ಐತಿಹಾಸಿಕ ಬೆಳವಣಿಗೆಯೊಂದಿಗೆ, ತಮಿಳುನಾಡಿನಲ್ಲಿ 62 ವರ್ಷಗಳ ದ್ರಾವಿಡ ಪಕ್ಷಗಳ ಆಡಳಿತಕ್ಕೆ ತೆರೆಬಿದ್ದಂತಾಗಿದೆ.

1 Min read
Author : Santosh Naik
Published : May 08 2026, 07:44 PM IST
Share this Photo Gallery
  • FB
  • TW
  • Linkdin
  • Whatsapp
15
ಸರ್ಕಾರ ರಚಿಸಲು ರಾಜ್ಯಪಾಲರ ಅನುಮತಿ
Image Credit : X

ಸರ್ಕಾರ ರಚಿಸಲು ರಾಜ್ಯಪಾಲರ ಅನುಮತಿ

ತಮಿಳುನಾಡು ರಾಜಕೀಯದಲ್ಲಿ ಸೃಷ್ಟಿಯಾಗಿದ್ದ ಸುದೀರ್ಘ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ತಮಿಳಗ ವೆಟ್ರಿ ಕಳಗಂ (TVK) ಸಂಸ್ಥಾಪಕ ಮತ್ತು ಸೂಪರ್ ಸ್ಟಾರ್ ವಿಜಯ್ ಅವರು ರಾಜ್ಯದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲ ಆರ್.ವಿ. ಅರ್ಲೇಕರ್ ಅಧಿಕೃತವಾಗಿ ಸಮ್ಮತಿ ನೀಡಿದ್ದಾರೆ.

25
ನಾಳೆ ಅಧಿಕಾರ ಸ್ವೀಕಾರ
Image Credit : X

ನಾಳೆ ಅಧಿಕಾರ ಸ್ವೀಕಾರ

ವಿಜಯ್ ಅವರು ನಾಳೆ (ಶನಿವಾರ) ಬೆಳಿಗ್ಗೆ 11 ಗಂಟೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇಂದು ಸಂಜೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್, ತಮ್ಮ ಮೈತ್ರಿಕೂಟಕ್ಕೆ ಇರುವ 118 ಶಾಸಕರ ಬೆಂಬಲದ ಪತ್ರವನ್ನು ಹಸ್ತಾಂತರಿಸಿದ್ದರು. ಸಂಖ್ಯಾಬಲದ ಬಗ್ಗೆ ತೃಪ್ತಿ ವ್ಯಕ್ತಪಡಿಸಿದ ರಾಜ್ಯಪಾಲರು, ಸರ್ಕಾರ ರಚನೆಗೆ ಆಹ್ವಾನ ನೀಡಿದ್ದಾರೆ.

Related Articles

Related image1
BREAKING: ಕೊನೆಗೂ ಮ್ಯಾಜಿಕ್ ನಂಬರ್ ತಲುಪಿದ ದಳಪತಿ ವಿಜಯ್, ಡಿಎಂಕೆಗೆ ಕೈಕೊಟ್ಟು ಟಿವಿಕೆಗೆ ಸಾಥ್ ನೀಡಿದ ಎಡಪಕ್ಷ ಮತ್ತು ವಿಸಿಕೆ!
Related image2
ತಮಿಳುನಾಡು ಇತಿಹಾಸದ ಮೊದಲ ಸಮ್ಮಿಶ್ರ ಸರ್ಕಾರಕ್ಕೆ ದಳಪತಿ ಸಾರಥಿ: ವಿಸಿಕೆಗೆ ಒಂದು, ಎಡಪಕ್ಷಕ್ಕೆ ಎರಡು ಸಚಿವ ಸ್ಥಾನ!
35
62 ವರ್ಷಗಳ ದ್ರಾವಿಡ ರಾಜಕಾರಣಕ್ಕೆ ಕೊನೆ
Image Credit : X

62 ವರ್ಷಗಳ ದ್ರಾವಿಡ ರಾಜಕಾರಣಕ್ಕೆ ಕೊನೆ

ಈ ಐತಿಹಾಸಿಕ ಕ್ಷಣದೊಂದಿಗೆ ತಮಿಳುನಾಡಿನಲ್ಲಿ 62 ವರ್ಷಗಳ ದ್ರಾವಿಡ ಪಕ್ಷಗಳ ಏಕಸ್ವಾಮ್ಯ ಅಂತ್ಯಗೊಂಡು, ಹೊಸ ಮೈತ್ರಿ ಸರ್ಕಾರದ ಆಡಳಿತ ಆರಂಭವಾಗಲಿದೆ. ನಾಳೆಯ ಸಮಾರಂಭದಲ್ಲಿ ವಿಜಯ್ ಅವರೊಂದಿಗೆ ಮಿತ್ರಪಕ್ಷಗಳಾದ ಕಾಂಗ್ರೆಸ್, ವಿಸಿಕೆ ಮತ್ತು ಎಡಪಕ್ಷಗಳ ಕೆಲವು ನಾಯಕರು ಕೂಡ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ.

45
ಚೆನ್ನೈನಲ್ಲಿ ಹಬ್ಬದ ವಾತಾವರಣ
Image Credit : X

ಚೆನ್ನೈನಲ್ಲಿ ಹಬ್ಬದ ವಾತಾವರಣ

ಚೆನ್ನೈನಲ್ಲಿ ಈಗ ಹಬ್ಬದ ವಾತಾವರಣ ನಿರ್ಮಾಣವಾಗಿದ್ದು, ಲಕ್ಷಾಂತರ ಅಭಿಮಾನಿಗಳು ತಮ್ಮ 'ದಳಪತಿ' ಮುಖ್ಯಮಂತ್ರಿ ಆಗುವುದನ್ನು ಸಂಭ್ರಮಿಸಲು ಸಜ್ಜಾಗಿದ್ದಾರೆ. ಇದರ ನಡುವೆ ಟಿವಿಕೆ ಸದಸ್ಯರು ರಾಜ್ಯಪಾಲರು ಸರ್ಕಾರ ರಚಿಸಲು ಅನುಮತಿ ನೀಡದ ಕಾರಣಕ್ಕೆ ಸುಪ್ರೀಂ ಕೋರ್ಟ್‌ ಕದ ತಟ್ಟಿದ್ದರು. ‘ಪಕ್ಷವು 118 ಸಹಿಗಳನ್ನು ಸ್ವೀಕರಿಸಿದ್ದು, ನಾಳೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ’ ಎಂದು ಹಿರಿಯ ಟಿವಿಕೆ ನಾಯಕ ಕೆ. ಸೆಂಗೋಟ್ಟಯನ್ ತಿಳಿಸಿದ್ದಾರೆ.

55
ಪ್ರಮಾಣವಚನ ಕಾರ್ಯಕ್ರಮದಲ್ಲಿ ಖರ್ಗೆ, ರಾಹುಲ್‌ ಗಾಂಧಿ
Image Credit : X

ಪ್ರಮಾಣವಚನ ಕಾರ್ಯಕ್ರಮದಲ್ಲಿ ಖರ್ಗೆ, ರಾಹುಲ್‌ ಗಾಂಧಿ

ವಿಜಯ್‌ ಜೋಸೆಫ್‌ ಅವರ ಟಿವಿಕೆ ಪಕ್ಷಕ್ಕೆ ಮೊದಲಿಗರಾಗಿ ಬೆಂಬಲ ನೀಡಿದ್ದ ಕಾಂಗ್ರೆಸ್‌ ಪಕ್ಷದಿಂದ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಹಾಗೂ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ತಮಿಳಗ ವೆಟ್ರಿ ಕಳಗಂ
ತಮಿಳುನಾಡು
ಚುನಾವಣೆ
ರಾಜಕೀಯ ಸುದ್ದಿ
ದಳಪತಿ ವಿಜಯ್
ಸುದ್ದಿ

Latest Videos
Recommended Stories
Recommended image1
Tamilu Nadu Breaking: ವಿಜಯ್​ ಮ್ಯಾಜಿಕ್​ ನಂಬರ್​ ದಾಟಿದ್ರೂ, 'ಸುಪ್ರೀಂ' ಮೆಟ್ಟಿಲೇರಿದ ಟಿವಿಕೆ- ಮುಂದೇನು?
Recommended image2
ರಮೇಶ್‌, ಸತೀಶ್‌ ಯಾರಿಗೂ ಇಲ್ಲ, ದೇವರ ನಾಡಿಗೆ ಸಿಎಂ ಆಗ್ತಾರಂತೆ ವೇಣುಗೋಪಾಲ!
Recommended image3
ಎಸ್‌ಬಿಐನಲ್ಲಿ ಕವಿದ ಕಾರ್ಮೋಡ: ಮೇ 25, 26ಕ್ಕೆ ಬ್ಯಾಂಕ್ ಸೇವೆ ವ್ಯತ್ಯಯ, ಒಟ್ಟು 4 ದಿನ ಬಂದ್ ಸಾಧ್ಯತೆ!
Related Stories
Recommended image1
BREAKING: ಕೊನೆಗೂ ಮ್ಯಾಜಿಕ್ ನಂಬರ್ ತಲುಪಿದ ದಳಪತಿ ವಿಜಯ್, ಡಿಎಂಕೆಗೆ ಕೈಕೊಟ್ಟು ಟಿವಿಕೆಗೆ ಸಾಥ್ ನೀಡಿದ ಎಡಪಕ್ಷ ಮತ್ತು ವಿಸಿಕೆ!
Recommended image2
ತಮಿಳುನಾಡು ಇತಿಹಾಸದ ಮೊದಲ ಸಮ್ಮಿಶ್ರ ಸರ್ಕಾರಕ್ಕೆ ದಳಪತಿ ಸಾರಥಿ: ವಿಸಿಕೆಗೆ ಒಂದು, ಎಡಪಕ್ಷಕ್ಕೆ ಎರಡು ಸಚಿವ ಸ್ಥಾನ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved