MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಮೊದಲು ಹಿಂದೇಟು, ನಂತ್ರ ಒಪ್ಪಿಗೆ: ಕಾಂಗ್ರೆಸ್‌ಗೆ ಗುಡ್‌ನ್ಯೂಸ್ ನೀಡಿದ ಮಮತಾ ಬ್ಯಾನರ್ಜಿ

ಮೊದಲು ಹಿಂದೇಟು, ನಂತ್ರ ಒಪ್ಪಿಗೆ: ಕಾಂಗ್ರೆಸ್‌ಗೆ ಗುಡ್‌ನ್ಯೂಸ್ ನೀಡಿದ ಮಮತಾ ಬ್ಯಾನರ್ಜಿ

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ವಿರುದ್ಧ ವಿಪಕ್ಷಗಳು ಅವಿಶ್ವಾಸ ಗೊತ್ತುವಳಿ ಮಂಡಿಸಿದ್ದು, ಕಾಂಗ್ರೆಸ್‌ ತನ್ನ ಸಂಸದರಿಗೆ ವಿಪ್ ಜಾರಿಗೊಳಿಸಿದೆ. ಆರಂಭದಲ್ಲಿ ಹಿಂದೇಟು ಹಾಕಿದ್ದ ಟಿಎಂಸಿ ಕೂಡಾ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದೆ.

2 Min read
Author : Mahmad Rafik
Published : Mar 07 2026, 12:55 PM IST
Share this Photo Gallery
  • FB
  • TW
  • Linkdin
  • Whatsapp
16
ಅವಿಶ್ವಾಸ ಗೊತ್ತುವಳಿ
Image Credit : FB

ಅವಿಶ್ವಾಸ ಗೊತ್ತುವಳಿ

ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ವಿರುದ್ಧ ವಿಪಕ್ಷಗಳ ಅವಿಶ್ವಾಸ ಗೊತ್ತುವಳಿ ಮಾ.9ರಿಂದ ಮಂಡನೆಯಾಗುವ ಸಾಧ್ಯತೆ ಹಿನ್ನೆಲೆ ಮಾ. 9-11ರ ತನಕ ಸಂಸತ್‌ ಅಧಿವೇಶನದಲ್ಲಿ ಕಡ್ಡಾಯ ಹಾಜರಿರುವಂತೆ ತನ್ನ ಸಂಸದರಿಗೆ ಕಾಂಗ್ರೆಸ್‌ ವಿಪ್‌ ಜಾರಿಗೊಳಿಸಿದೆ. ಈ ನಡುವೆ ಕಾಂಗ್ರೆಸ್‌ಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಗುಡ್‌ನ್ಯೂಸ್ ನೀಡಿದ್ದಾರೆ ಎಂದು ವರದಿಯಾಗಿದೆ.

26
ಕಾಂಗ್ರೆಸ್‌ಗೆ ಟಿಎಂಸಿ ಬೆಂಬಲ
Image Credit : Asianet News

ಕಾಂಗ್ರೆಸ್‌ಗೆ ಟಿಎಂಸಿ ಬೆಂಬಲ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯದಲ್ಲಿ ಮಮತಾ ಬ್ಯಾನರ್ಜಿ ಅವರ ಟಿಎಂಸಿ ಸದಸ್ಯರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್‌ಗೆ ಟಿಎಂಸಿ ಬೆಂಬಲ ಸಿಗಲಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

Related Articles

Related image1
ಲೋಕಸಭೆಯಲ್ಲಿ ಸೋದರಿ ಪ್ರಿಯಾಂಕಾ ಕೆನ್ನೆ ಗಿಂಡಿದ ರಾಹುಲ್‌ ಗಾಂಧಿ, ಶಿಸ್ತಿನ ಪಾಠ ಮಾಡಿದ ಸ್ಪೀಕರ್ ಓಂ ಬಿರ್ಲಾ!
Related image2
ಸಂಸತ್‌ ಕಲಾಪದ ವೇಳೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ, ರಾಹುಲ್‌ ಗಾಂಧಿ ಜಟಾಪಟಿ
36
ಅವಿಶ್ವಾಸ ನಿರ್ಣಯ ಸೂಚನೆ
Image Credit : x

ಅವಿಶ್ವಾಸ ನಿರ್ಣಯ ಸೂಚನೆ

ಈ ಮೊದಲು ಟಿಎಂಸಿ ಸಂಸದರು ಅವಿಶ್ವಾಸ ನಿರ್ಣಯ ಸೂಚನೆಗೆ ಸಹಿ ಹಾಕಿರಲಿಲ್ಲ. ಆರಂಭದಲ್ಲಿ ಟಿಎಂಸಿ ನೇರವಾಗಿ ಅವಿಶ್ವಾಸ ನಿರ್ಣಯವನ್ನು ಮಂಡಿಸುವ ಬದಲು, ಮೊದಲು ಸ್ಪೀಕರ್‌ಗೆ ಪತ್ರ ಬರೆದು ಮೂರು ದಿನಗಳ ಕಾಲಾವಕಾಶ ನೀಡಬೇಕು ಎಂದು ವಾದಿಸಿತ್ತು. ಇದೀಗ ಕಾಂಗ್ರೆಸ್‌ಗೆ ಬೆಂಬಲ ಸೂಚಿಸಿದೆ.

46
ಮಾರ್ಚ್ 9ರಿಂದ ಅಧಿವೇಶನ ಆರಂಭ
Image Credit : Om Birla X

ಮಾರ್ಚ್ 9ರಿಂದ ಅಧಿವೇಶನ ಆರಂಭ

ಬಜೆಟ್ ಅಧಿವೇಶನದ ಮೊದಲ ಹಂತದ ಕೊನೆಯ ವಾರದಲ್ಲಿ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಓಂ ಬಿರ್ಲಾ ಅವರನ್ನು ಸ್ಪೀಕರ್ ಸ್ಥಾನದಿಂದ ತೆಗೆದುಹಾಕುವಂತೆ ಪ್ರಸ್ತಾವನೆಯ ನೋಟೀಸ್ ಸಲ್ಲಿಸಿದವು. ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ಹಂತವು ಮಾರ್ಚ್ 9 ರಂದು ಪ್ರಾರಂಭವಾಗಲಿದ್ದು, ಆ ದಿನದಂದು ಈ ಪ್ರಸ್ತಾವನೆಯ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ

56
ಕಾಂಗ್ರೆಸ್‌ನಿಂದ ವಿಪ್ ಜಾರಿ
Image Credit : Asianet News

ಕಾಂಗ್ರೆಸ್‌ನಿಂದ ವಿಪ್ ಜಾರಿ

ಬಜೆಟ್‌ ಅಧಿವೇಶನದ ಎರಡನೇ ಅವಧಿಯು ಮಾ.9ರಿಂದ ಆರಂಭವಾಗಲಿದೆ. ಈ ಅವಧಿಯಲ್ಲಿ ಪಕ್ಷಪಾತಿಯಾಗಿ ವರ್ತಿಸಿದ್ದಾರೆ ಎಂಬ ಆರೋಪದ ಮೇಲೆ ವಿಪಕ್ಷಗಳು ಬಿರ್ಲಾ ವಿರುದ್ಧ ಮಂಡಿಸಿದ್ದ ಅವಿಶ್ವಾಸ ಮಂಡನೆ ಕೈಗೆತ್ತಿಕೊಳ್ಳುವ ಸಾಧ್ಯತೆಯಿದೆ. ಹೀಗಾಗಿ ಕಾಂಗ್ರೆಸ್‌ ಮೊದಲ ಮೂರು ದಿನಗಳವರೆಗೆ ಎಲ್ಲಾ ಸಂಸದರು ಸಂಸತ್ತಿನ ಕೆಳಮನೆಯಲ್ಲಿ ಹಾಜರಿರಬೇಕು ಎಂದು ವಿಪ್‌ ನೀಡಿದೆ.

ಇದನ್ನೂ ಓದಿ: ಬೆಂಗಳೂರಲ್ಲಿ ಓದಿದ ಹುಡುಗ, ಮಾಜಿ ಮೇಯರ್‌ ಬಾಲೆನ್‌ ಷಾ ನೇಪಾಳದ ಮುಂದಿನ ಪ್ರಧಾನಿ

66
ಸಂಖ್ಯಾಬಲ
Image Credit : Asianet News

ಸಂಖ್ಯಾಬಲ

541 ಸದಸ್ಯ ಬಲದ ಲೋಕಸಭೆಯಲ್ಲಿ ಆಡಳಿತಾರೂಢ ಎನ್‌ಡಿಎ 293 ಸಂಸದರನ್ನು ಹೊಂದಿದೆ. ಹಾಗಾಗಿ ವಿರೋಧ ಪಕ್ಷಗಳ ಅವಿಶ್ವಾಸ ಗೊತ್ತುವಳಿಗೆ ಸೋಲಾಗೋದು ಬಹುತೇಕ ಖಚಿತ. ಆದರೂ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಅವಿಶ್ವಾಸ ಗೊತ್ತುವಳಿ ಮಂಡಿಸಿವೆ. ಆರಂಭದಲ್ಲಿ ಕೆಲವು ವಿರೋಧ ಪಕ್ಷಗಳು ಸ್ಪೀಕರ್ ಅವರನ್ನು ಬೆಂಬಲಿಸಲು ನಿರಾಕರಿಸಿದ್ದವು. ವಿರೋಧ ಪಕ್ಷದ ಹೊರಗಿನಿಂದ ಸ್ಪೀಕರ್ ಅವರಿಗೆ ಬೆಂಬಲ ಸಿಗಬಹುದು ಎಂದು ಆಡಳಿತರೂಢ ಪಕ್ಷ ಭಾವಿಸಿತ್ತು. ಮೇಲ್ನೋಟಕ್ಕೆ ವಿಪಕ್ಷಗಳು ಒಗ್ಗಟ್ಟು ಪ್ರದರ್ಶನಕ್ಕೆ ಮುಂದಾದಂತೆ ಕಾಣಿಸುತ್ತಿದೆ. 

ಇದನ್ನೂ ಓದಿ: Karnataka Budget 2026: ಅಲ್ಪಸಂಖ್ಯಾತರಿಗೆ ಬಂಪರ್ ಗಿಫ್ಟ್, ಬಡಮಕ್ಕಳಿಗೆ ಲ್ಯಾಪ್‌ಟಾಪ್, ಶಿಕ್ಷಣ, ಉದ್ಯೋಗ, ಮಹಿಳೆಯರಿಗೆ ಹಲವು ಯೋಜನೆಗಳು!

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ರಾಹುಲ್ ಗಾಂಧಿ
ಲೋಕಸಭಾ
ತೃಣಮೂಲ ಕಾಂಗ್ರೆಸ್
ಮಮತಾ ಬ್ಯಾನರ್ಜಿ
ಕಾಂಗ್ರೆಸ್

Latest Videos
Recommended Stories
Recommended image1
'ಗೋ ಟು ಪೀಪಲ್' ಎಂದಿದ್ಯಾಕೆ ತ್ರಿಷಾ ಕೃಷ್ಣನ್? ಮಾತಿಗಿಂತ ಕೃತಿ ಮೇಲು ಅನ್ನೋ ಎಚ್ಚರಿಕೆ ಗಂಟೆ ಯಾರಿಗೆ?
Recommended image2
ನಾಯಿ ಮೇಲಿನ ಇಂತಹ ಕ್ರೌರ್ಯ ನೀವು ಜೀವಮಾನದಲ್ಲಿ ನೋಡಿರಲು ಸಾಧ್ಯವಿಲ್ಲ! ನಾಯಿಪಾಡು ಅಂದ್ರೆ ಇದೇನಾ? ವಿಡಿಯೋ ವೈರಲ್
Recommended image3
Breaking: ಡೇರಾ ಮುಖ್ಯಸ್ಥ ರಾಮ್ ರಹೀಮ್‌ಗೆ ಬಿಗ್ ರಿಲೀಫ್; ಜೀವಾವಧಿ ಶಿಕ್ಷೆ ರದ್ದುಗೊಳಿಸಿದ ಹೈಕೋರ್ಟ್!
Related Stories
Recommended image1
ಲೋಕಸಭೆಯಲ್ಲಿ ಸೋದರಿ ಪ್ರಿಯಾಂಕಾ ಕೆನ್ನೆ ಗಿಂಡಿದ ರಾಹುಲ್‌ ಗಾಂಧಿ, ಶಿಸ್ತಿನ ಪಾಠ ಮಾಡಿದ ಸ್ಪೀಕರ್ ಓಂ ಬಿರ್ಲಾ!
Recommended image2
ಸಂಸತ್‌ ಕಲಾಪದ ವೇಳೆ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ, ರಾಹುಲ್‌ ಗಾಂಧಿ ಜಟಾಪಟಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved