MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಕ್ರಿಶ್ಚಿಯನ್ ಧರ್ಮ ಪಾಲನೆ: ನಾಲ್ವರು ಸಿಬ್ಬಂದಿಯನ್ನು ವಜಾಗೊಳಿಸಿದ ಟಿಟಿಡಿ

ಕ್ರಿಶ್ಚಿಯನ್ ಧರ್ಮ ಪಾಲನೆ: ನಾಲ್ವರು ಸಿಬ್ಬಂದಿಯನ್ನು ವಜಾಗೊಳಿಸಿದ ಟಿಟಿಡಿ

ತಿರುಮಲ ತಿರುಪತಿ ದೇವಸ್ಥಾನ (TTD) ನಾಲ್ವರು ಸಿಬ್ಬಂದಿಯನ್ನು ಕ್ರಿಶ್ಚಿಯನ್ ಧರ್ಮ ಪಾಲಿಸುತ್ತಿದ್ದ ಕಾರಣಕ್ಕೆ ವಜಾಗೊಳಿಸಿದೆ. ಹಿಂದೂ ಧಾರ್ಮಿಕ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡು ಅನ್ಯ ಧರ್ಮ ಪಾಲಿಸುವುದು ಸಾಂಸ್ಥಿಕ ನೀತಿಯ ಉಲ್ಲಂಘನೆ ಎಂದು ಟಿಟಿಡಿ ಹೇಳಿದೆ. 

1 Min read
Mahmad Rafik
Published : Jul 19 2025, 01:28 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Social Media

ತಿರುಮಲ ತಿರುಪತಿ ದೇವಸ್ಥಾನ (TTD) ಆಡಳಿತ ಮಂಡಳಿ ನಾಲ್ವರು ಸಿಬ್ಬಂದಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದೆ. ಅಮಾನುತುಗೊಂಡಿರುವ ನಾಲ್ವರು ಉದ್ಯೋಗಿಗಳು ಕ್ರಿಶ್ಚಿಯನ್ ಧರ್ಮ ಅನುಸರಿಸುತ್ತಿದ್ದರು ಎಂದು ಟಿಟಿಡಿ ಹೇಳಿದೆ.

26
Image Credit : Social Media

ಹಿಂದೂ ಧಾರ್ಮಿಕ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡು ಅನ್ಯ ಧರ್ಮ ಪಾಲಿಸೋದು ಟ್ರಸ್ಟ್‌ನ ಸಾಂಸ್ಥಿಕ ನೀತಿ ಸಂಹಿತೆಯ ಉಲ್ಲಂಘನೆ ಎಂದು ಪರಿಗಣಿಸಲಾಗಿದೆ ಎಂದು ಟಿಟಿಡಿ ಹೇಳಿದೆ. ವಿಜಿಲೆನ್ಸ್ ವರದಿ ಮತ್ತು ಆಂತರಿಕ ತನಿಖೆಯ ನಂತರವೇ ನಾಲ್ವರು ಉದ್ಯೋಗಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಅಮಾನತುಗೊಂಡ ನೌಕರರು ಹಿಂದೂ ಧಾರ್ಮಿಕ ಸಂಸ್ಥೆಯಲ್ಲಿ ಕೆಲಸ ಮಾಡುವಾಗ ನಿರೀಕ್ಷಿತ ಧಾರ್ಮಿಕ ನಡವಳಿಕೆಯನ್ನು ಅನುಸರಿಸಲು ವಿಫಲರಾಗಿದ್ದಾರೆ. ನಿಯಮಗಳ ಪ್ರಕಾರ ನಾಲ್ವರನ್ನು ಅಮಾನತುಗೊಳಿಸಲಾಗಿದೆ ಎಂದು ಟ್ರಸ್ಟ್ ಹೇಳುತ್ತದೆ.

Related Articles

Related image1
ಮಂಗಳೂರು, ಹಾಸನ, ಸಕಲೇಶಪುರದ ತಿರುಪತಿ ಭಕ್ತಾದಿಗಳಿಗೆ ಗುಡ್‌ನ್ಯೂಸ್; ಪ್ರಯಾಣ ಸುಲಭ, ಆರಾಮದಾಯಕ!
Related image2
ತಿರುಪತಿ ಭಕ್ತರಿಗೆ ಟಿಟಿಡಿ ಮಹತ್ವದ ಎಚ್ಚರಿಕೆ, ಭಕ್ತರಿಂದ ಹಣ ವಸೂಲಿ ಪ್ರಕರಣ ಬೆಳಕಿಗೆ
36
Image Credit : Social Media

ಅಮಾನತುಗೊಂಡ ಅಧಿಕಾರಿಗಳ ವಿವರ

  1. ಬಿ. ಅಲಿಜರ್ - ಉಪ ಕಾರ್ಯನಿರ್ವಾಹಕ ಎಂಜಿನಿಯರ್ (ಗುಣಮಟ್ಟ ನಿಯಂತ್ರಣ ಅಧಿಕಾರಿ)
  2. ಎಸ್. ರೋಸ್ಸಿ - ಸ್ಟಾಫ್ ನರ್ಸ್, BIRD ಆಸ್ಪತ್ರೆ
  3. ಎಂ.ಪ್ರೇಮಾವತಿ - ಗ್ರೇಡ್-1 ಫಾರ್ಮಾಸಿಸ್ಟ್, ಬಿಆರ್‌ಡಿ ಆಸ್ಪತ್ರೆ
  4. ಡಾ. ಜಿ. ಅಸುಂತ - ಎಸ್‌ವಿ ಆಯುರ್ವೇದ ಫಾರ್ಮಸಿ
46
Image Credit : Social Media

2007ರಲ್ಲಿ ನಿಯಮ ಬದಲಾವಣೆ

ಹಿಂದೂ ಧಾರ್ಮಿಕ ಸಂಸ್ಥೆಯಲ್ಲಿ ಕೆಲಸ ಮಾಡುವ ನೌಕರರು ಸಂಸ್ಥೆಯ ಸಂಪ್ರದಾಯಗಳು ಮತ್ತು ಮೌಲ್ಯಗಳಿಗೆ ಅನುಗುಣವಾಗಿ ವರ್ತಿಸಬೇಕು. ಶಿಸ್ತು ಮತ್ತು ವಿಶ್ವಾಸಾರ್ಹತೆಯನ್ನು ಕಾಪಾಡಿಕೊಳ್ಳಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 2007ರಲ್ಲಿ TTD ಸೇವಾ ನಿಯಮಗಳನ್ನು ಬದಲಾವಣೆ ಮಾಡಲಾಗಿದ್ದು, ಹಿಂದೂಯೇತರರ ಹೊಸ ನೇಮಕಾತಿ ನಿಷೇಧಿಸಲಾಗಿದೆ. ಈ ನಿಯಮ ಬದಲಾವಣೆಗೂ ನೇಮಕಗೊಂಡ ಸಿಬ್ಬಂದಿ ಇನ್ನೂ ಸೇವೆ ಸಲ್ಲಿಸುತ್ತಿದ್ದಾರೆ.

56
Image Credit : Social Media

ಸದ್ಯ ಸೇವೆ ಟಿಟಿಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿಂದೂಯೇತರ ನೌಕರರನ್ನು ತೆಗೆದು ಹಾಕಲಾಗುವುದು. ಇವರನ್ನು ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾವಣೆ ಮಾಡಲಾಗುವುದು ಎಂದು ಆಂಧ್ರ ಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಸ್ಪಷ್ಟಪಡಿಸಿದ್ದಾರೆ.

66
Image Credit : Social Media

ಟಿಟಿಡಿಯ ಪ್ರಸ್ತುತ ನಿಯಮಗಳು

  • ಹಿಂದೂ ಧರ್ಮ ಪಾಲನೆ ಮಾಡುವ ಜನರು ಮಾತ್ರ ಟಿಟಿಡಿ ಸಂಸ್ಥೆಯಲ್ಲಿ ಕೆಲಸ ಮಾಡಲುಅ ಅರ್ಹರು.
  • ಎಲ್ಲಾ ಉದ್ಯೋಗಿಗಳು ಹಿಂದೂ ಧರ್ಮ ಮತ್ತು ದೇವಾಲಯದ ಸಂಪ್ರಾದಯ ಗೌರವಿಸಬೇಕು.
  • ಹಿಂದೂಯೇತರ ಉದ್ಯೋಗಿಗಳನ್ನು ರಾಜ್ಯ ಸರ್ಕಾರದ ಇತರ ಇಲಾಖೆಗಳಿಗೆ ವರ್ಗಾಯಿಸುವ ಕುರಿತು ಅಥವಾ ಸ್ವಯಂಪ್ರೇರಿತ ನಿವೃತ್ತಿ (ವಿಆರ್‌ಎಸ್) ನೀಡುತ್ತಿದೆ.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ತಿರುಪತಿ
ತಿರುಮಲ ತಿರುಪತಿ ದೇವಸ್ಥಾನಂ
ಭಾರತ ಸುದ್ದಿ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved