MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • ಬೆಂಗಳೂರಿಗೆ ಬಂದು ಅರಿಶಿಣ-ಕುಂಕುಮ ಪಡೆದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ತಾಯಿ: ಬೀಗತಿ ಸುಧಾಮೂರ್ತಿ ಸಾಥ್

ಬೆಂಗಳೂರಿಗೆ ಬಂದು ಅರಿಶಿಣ-ಕುಂಕುಮ ಪಡೆದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ತಾಯಿ: ಬೀಗತಿ ಸುಧಾಮೂರ್ತಿ ಸಾಥ್

ಬೆಂಗಳೂರು (ಸೆ.10): ದೇಶದಲ್ಲಿ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ಆಗಮಿಸಿದ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ದಂಪತಿಯೊಂದಿಗೆ ಅವರ ತಾಯಿ ಉಷಾ ಸುನಕ್‌ ಕೂಡ ಭಾರತಕ್ಕೆ ಆಗಮಿಸಿದ್ದಾರೆ. ಇದೇ ವೇಳೆ ದೆಹಲಿಯಿಂದ ಬೆಂಗಳೂರಿಗೆ ಬಂದ ಉಷಾ ಸುನಕ್‌ ಅವರು ತಮ್ಮ ಬೀಗತಿ ಸುಧಾಮೂರ್ತಿ ಅವರೊಂದಿಗೆ ಬೆಂಗಳೂರಿನ ಶಾಸಕ ಉದಯ ಗರುಡಾಚಾರ್‌ ಅವರ ಪತ್ನಿ ಮೇದಿನಿ ಗರುಡಾಚಾರ್‌ ಅವರಿಂದ ಭಾರತೀಯ ಸಂಪ್ರದಾಯದಂತೆ ಅರಿಶಿಣ-ಕುಂಕುಮ ಪಡೆದುಕೊಂಡಿದ್ದಾರೆ.

1 Min read
Sathish Kumar KH
Published : Sep 10 2023, 04:51 PM IST| Updated : Sep 10 2023, 04:53 PM IST
Share this Photo Gallery
  • FB
  • TW
  • Linkdin
  • Whatsapp
15

ಕೃಷ್ಣ ಜನ್ಮಾಷ್ಠಮಿ ಹಿನ್ನೆಲೆಯಲ್ಲಿ ಕಳೆದ ಒಂದು ವಾರದಿಂದ ಚಿಕ್ಕಪೇಟೆ ಶಾಸಕ ಡಾ. ಉದಯ್‌ ಬಿ ಗರುಡಾಚಾರ್‌ ಅವರ ಜಯನಗರದ ನಿವಾಸದಲ್ಲಿ ಕೃಷ್ಣನ ವಿವಿಧ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ಉಷಾ ಸುನಕ್ ಅವರು ಕೃಷ್ಣನ ವೈಶಿಷ್ಟ್ಯಗಳನ್ನು ಕಣ್ತುಂಬಿಕೊಂಡರು.  

25

ಬ್ರಿಟನ್‌ ಪ್ರಧಾನಮಂತ್ರಿ ರಿಷಿ ಸುನಕ್‌ ಅವರ ತಾಯಿ ಉಷಾ ಸುನಕ್‌ ಅವರು ಬೆಂಗಳೂರಿನ ಶ್ರೀ ಕೃಷ್ಣ ಜನ್ಮಾಷ್ಠಮಿ ಸಂಭ್ರಮಾಚಾರಣೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಉಷಾ ಸುನಕ್‌ ಸಾಂಪ್ರದಾಯಿಕವಾಗಿ ಕೃಷ್ಣನಿಗೆ ಪೂಜೆ ನೆರವೇರಿಸಿದರು.

35

ಇನ್ಪೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಹಾಗೂ ಉಷಾ ಸುನಕ್‌ ಅವರ ಬೀಗತಿ ಡಾ. ಸುಧಾಮೂರ್ತಿ, ಡಾ. ಉದಯ್‌ ಗರುಡಾಚಾರ್, ಮೇದಿನಿ ಉದಯ್‌ ಗರುಡಾಚಾರ್‌, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ವಿ. ಮಂಜುನಾಥ್‌, ವಿವಿಧ ನಿವಾಸಿಗಳ ಕಲ್ಯಾಣ ಸಂಘದ ಸದಸ್ಯರು ಭಾಗವಹಿಸಿದ್ದರು.
 

45

ಜಿ-20 ಶೃಂಘಸಭೆಗೆ ಆಗಮಿಸಿದ್ದ ಯುಕೆ ಪ್ರಧಾನಿ ರಿಷಿ ಸುನಾಕ್ ಹಾಗೂ ಪತ್ನಿ ಅಕ್ಷತಾ ಮೂರ್ತಿ ದೆಹಲಿಯ ಅಕ್ಷರಧಾಮ ದೇವಾಲಯಕ್ಕೆ ಭೇಟಿ ಮಾಡಿದರು.

55

ದೆಹಲಿಯಲ್ಲಿ ನಡೆಯುತ್ತಿರುವ ಜಿ20 ಶೃಂಗ ಸಭೆ ಹಿನ್ನೆಲೆಯಲ್ಲಿ ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರು ಕುಟುಂಬ ಸಮೇತ ಭಾರತಕ್ಕೆ ಭೇಟಿ ನೀಡಿದ್ದಾರೆ. ದೆಹಲಿಗೆ ಆಗಮಿಸಿದ ಉಷಾ ಸುನಕ್‌ ಅವರು ಬೆಂಗಳೂರಿನ ತಮ್ಮ ಬೀಗರ ಮನೆಗೆ ಆಗಮಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಶ್ರೀ ಕೃಷ್ಣ ಜನ್ಮಾಷ್ಟಮಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved