MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ತಮಿಳುನಾಡು ಸರ್ಕಾರದ ನೂತನ ಸಚಿವರ ಖಾತೆ ಹಂಚಿಕೆ ಮಾಡಿದ ಸಿಎಂ ವಿಜಯ್‌, ಬಲಿಷ್ಠ ಖಾತೆ ತನ್ನಲ್ಲೇ ಇರಿಸಿಕೊಂಡ ದಳಪತಿ!

ತಮಿಳುನಾಡು ಸರ್ಕಾರದ ನೂತನ ಸಚಿವರ ಖಾತೆ ಹಂಚಿಕೆ ಮಾಡಿದ ಸಿಎಂ ವಿಜಯ್‌, ಬಲಿಷ್ಠ ಖಾತೆ ತನ್ನಲ್ಲೇ ಇರಿಸಿಕೊಂಡ ದಳಪತಿ!

ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' ಸರ್ಕಾರದ ನೂತನ ಸಚಿವ ಸಂಪುಟದ ಖಾತೆ ಹಂಚಿಕೆ ಅಧಿಕೃತವಾಗಿ ಪ್ರಕಟವಾಗಿದೆ. ಮುಖ್ಯಮಂತ್ರಿ ವಿಜಯ್ ಗೃಹ, ಪೊಲೀಸ್ ಸೇರಿದಂತೆ ಪ್ರಮುಖ ಖಾತೆಗಳನ್ನು ಉಳಿಸಿಕೊಂಡಿದ್ದು, ಒಟ್ಟು 10 ಸಚಿವರಿಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ.

2 Min read
Author : Santosh Naik
Published : May 16 2026, 06:41 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : X

ತಮಿಳುನಾಡಿನಲ್ಲಿ ಇತ್ತೀಚೆಗಷ್ಟೇ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಇತಿಹಾಸ ನಿರ್ಮಿಸಿದ್ದ ನಟ, ರಾಜಕಾರಣಿ ಸಿ. ಜೋಸೆಫ್ ವಿಜಯ್ ನೇತೃತ್ವದ ನೂತನ ಸರ್ಕಾರದ ಸಚಿವ ಸಂಪುಟದ ಖಾತೆ ಹಂಚಿಕೆಯನ್ನು ಶನಿವಾರ ಅಧಿಕೃತವಾಗಿ ಪ್ರಕಟಿಸಲಾಗಿದೆ. ತಮಿಳುನಾಡು ಲೋಕ ಭವನ ಈ ಕುರಿತು ಅಧಿಕೃತ ಅಧಿಸೂಚನೆಯನ್ನು ಹೊರಡಿಸಿದೆ.

Add Asianetnews Kannada as a Preferred SourcegooglePreferred
26
Image Credit : CMO Tamilnadu X

ರಾಜ್ಯದಲ್ಲಿ ದಶಕಗಳ ಕಾಲ ಆಳ್ವಿಕೆ ನಡೆಸಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳ ಪರ್ಯಾಯ ಆಡಳಿತಕ್ಕೆ ಪೂರ್ಣವಿರಾಮ ಹಾಡಿ ಅಧಿಕಾರಕ್ಕೆ ಬಂದಿರುವ 'ತಮಿಳಗ ವೆಟ್ರಿ ಕಳಗಂ' (TVK) ಸರ್ಕಾರದ ಈ ಖಾತೆ ಹಂಚಿಕೆ ಪ್ರಕ್ರಿಯೆಯು ತಮಿಳುನಾಡು ರಾಜಕಾರಣದ ಅತ್ಯಂತ ಪ್ರಮುಖ ಆಡಳಿತಾತ್ಮಕ ಬೆಳವಣಿಗೆಯಾಗಿದೆ. ನೂತನ ಸಚಿವ ಸಂಪುಟದಲ್ಲಿ ಮುಖ್ಯಮಂತ್ರಿ ವಿಜಯ್ ಸೇರಿದಂತೆ ಒಟ್ಟು 10 ಸಚಿವರಿಗೆ ಜವಾಬ್ದಾರಿಗಳನ್ನು ವಹಿಸಲಾಗಿದೆ.

Related Articles

Related image1
ರಾಜಕೀಯದ ಹುಚ್ಚು ಹಿಡಿಸಿದ್ದ ಅಪ್ಪನ ವಿರುದ್ಧವೇ ತಿರುಗಿ ನಿಂತ ವಿಜಯ್, ತಂದೆ ಪಕ್ಷ ವಿರೋಧಿಸಿ, ಟಿವಿಕೆ ಕಟ್ಟಿದ ಕಥೆ!
Related image2
ಮೊದಲ ಅಗ್ನಿಪರೀಕ್ಷೆಯಲ್ಲಿ ವಿಜಯ್ ಸರ್ಕಾರ ಪಾಸ್, ಬಹುಮತ ಸಾಬೀತುಪಡಿಸಿದ ಟಿವಿಕೆ ಸರ್ಕಾರ
36
Image Credit : CMO Tamilnadu X

ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ರಾಜ್ಯದ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಅತ್ಯಂತ ಪ್ರಮುಖವಾದ ಗೃಹ, ಪೊಲೀಸ್, ಸಾರ್ವಜನಿಕ ಆಡಳಿತ ಮತ್ತು ಸಾಮಾನ್ಯ ಆಡಳಿತ ಇಲಾಖೆಗಳನ್ನು ತಮ್ಮ ಬಳಿಯೇ ಉಳಿಸಿಕೊಂಡಿದ್ದಾರೆ. ಇದರೊಂದಿಗೆ ಮಹಿಳಾ ಕಲ್ಯಾಣ ಮತ್ತು ಯುವ ಸಬಲೀಕರಣ ಖಾತೆಗಳೂ ಸಿಎಂ ವಶದಲ್ಲಿವೆ. ಹಿಂದಿನ ಡಿಎಂಕೆ ಸರ್ಕಾರದ ರಚನೆಗಿಂತ ಭಿನ್ನವಾಗಿ, ಈ ಬಾರಿ ಕ್ರೀಡಾ ಅಭಿವೃದ್ಧಿ ಇಲಾಖೆಯನ್ನು ಸ್ವತಂತ್ರ ಸಚಿವಾಲಯವಾಗಿ ಪ್ರತ್ಯೇಕಿಸಿರುವುದು ವಿಜಯ್ ಅವರ ಆಡಳಿತ ಶೈಲಿಯ ಹೊಸ ಬದಲಾವಣೆಗೆ ಸಾಕ್ಷಿಯಾಗಿದೆ.

46
Image Credit : X

ನೂತನ ಸಚಿವ ಸಂಪುಟದಲ್ಲಿ ಹಿರಿಯ ನಾಯಕರು ಹಾಗೂ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಹೊಸ ಮುಖಗಳಿಗೆ ಆದ್ಯತೆ ನೀಡಲಾಗಿದ್ದು, ಶಿಕ್ಷಣ, ವಿದ್ಯುತ್, ನಗರಾಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಗಳನ್ನು ಹಂಚಿಕೆ ಮಾಡಲಾಗಿದೆ. ಜೋಸೆಫ್ ವಿಜಯ್ (ಮುಖ್ಯಮಂತ್ರಿ): ಸಾರ್ವಜನಿಕ ಆಡಳಿತ, ಸಾಮಾನ್ಯ ಆಡಳಿತ, ಪೊಲೀಸ್ (ಗೃಹ ಇಲಾಖೆ), ಮಹಿಳಾ ಕಲ್ಯಾಣ ಮತ್ತು ಯುವ ಅಭಿವೃದ್ಧಿ ಇಲಾಖೆಯ ನೇತೃತ್ವ ವಹಿಸಿದ್ದಾರೆ.

56
Image Credit : ANI

ಆದವ್ ಅರ್ಜುನ ಅವರಿಗೆ ಸಾರ್ವಜನಿಕ ಲೋಕೋಪಯೋಗಿ ಇಲಾಖೆ (PWD) ಮತ್ತು ಕ್ರೀಡಾ ಅಭಿವೃದ್ಧಿ, ಎನ್.ಆನಂದ್‌ಗೆ ಗ್ರಾಮೀಣಾಭಿವೃದ್ಧಿ ಇಲಾಖೆ, ಟಿವಿಕೆ ಹಿರಿಯ ಕೆ. ಎ. ಸೆಂಗೊಟ್ಟೈಯನ್ ಅವರಿಗೆ ಹಣಕಾಸು ಇಲಾಖೆ ನೀಡಲಾಗಿದೆ.

66
Image Credit : ANI

ಉಳಿದಂತೆ ಕೆ. ಜಿ. ಅರುಣ್‌ರಾಜ್ (ಆರೋಗ್ಯ ಇಲಾಖೆ), ಸಿಟಿಆರ್ ನಿರ್ಮಲ್ ಕುಮಾರ್ (ಇಂಧನ ಸಂಪನ್ಮೂಲ ಮತ್ತು ಕಾನೂನು ಇಲಾಖೆ), ರಾಜಮೋಹನ್ (ಶಾಲಾ ಶಿಕ್ಷಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಹಾಗೂ ತಮಿಳು ಅಭಿವೃದ್ಧಿ-ಪುರಾತತ್ವ ಇಲಾಖೆ ಒಳಗೊಂಡಂತೆ), ರಾಜ್ಯದ ಅತ್ಯಂತ ಕಿರಿಯ ಸಚಿವೆ ಎಸ್ ಕೀರ್ತನಾ (ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಇಲಾಖೆ), ಪಿ. ವೆಂಕಟರಾಮನ್ (ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ) ಹಾಗೂ ಟಿ. ಕೆ. ಪ್ರಭು (ನೈಸರ್ಗಿಕ ಸಂಪನ್ಮೂಲ ಇಲಾಖೆ) ಅವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ತಮಿಳುನಾಡು
ಚುನಾವಣೆ
ದಳಪತಿ ವಿಜಯ್
ಭಾರತ ಸುದ್ದಿ
ತಮಿಳಗ ವೆಟ್ರಿ ಕಳಗಂ

Latest Videos
Recommended Stories
Recommended image1
ಮಗ ದೂರ ಹೋದದ್ದಕ್ಕೆ ಮೆದುಳೇ ಕೆಲಸ ಮಾಡ್ತಿಲ್ಲ ಅಂದ್ರು ಈ ತಾಯಿ! ಫ್ರಿಡ್ಜ್‌ನಲ್ಲಿ ಏನಿಟ್ಟಿದ್ದಾರೆ ನೋಡಿ..
Recommended image2
ಈ ತಪ್ಪು ಮಾಡಿದ್ರೆ ಮಾತ್ರ Thalapathy Vijay ಸರ್ಕಾರ ಬೀಳೋದು ಪಕ್ಕಾ! ಎಚ್ಚರಿಕೆ ಕೊಟ್ಟ ಜ್ಯೋತಿಷಿ!
Recommended image3
'3ನೇ ಮಗು ಮಾಡ್ಕೊಂಡ್ರೆ 30 ಸಾವಿರ, 4ನೇ ಮಗುವಿಗೆ 40 ಸಾವಿರ..' ಆರ್ಥಿಕ ಪ್ರೋತ್ಸಾಹ ಧನ ಘೋಷಿಸಿದ ಸಿಎಂ ಚಂದ್ರಬಾಬು ನಾಯ್ಡು!
Related Stories
Recommended image1
ರಾಜಕೀಯದ ಹುಚ್ಚು ಹಿಡಿಸಿದ್ದ ಅಪ್ಪನ ವಿರುದ್ಧವೇ ತಿರುಗಿ ನಿಂತ ವಿಜಯ್, ತಂದೆ ಪಕ್ಷ ವಿರೋಧಿಸಿ, ಟಿವಿಕೆ ಕಟ್ಟಿದ ಕಥೆ!
Recommended image2
ಮೊದಲ ಅಗ್ನಿಪರೀಕ್ಷೆಯಲ್ಲಿ ವಿಜಯ್ ಸರ್ಕಾರ ಪಾಸ್, ಬಹುಮತ ಸಾಬೀತುಪಡಿಸಿದ ಟಿವಿಕೆ ಸರ್ಕಾರ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved