MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಸರ್ಕಾರ ರಚಿಸಲು ಎಲ್ಲರ ಬೆಂಬಲ ಪಡೆದ ದಳಪತಿ ವಿಜಯ್‌, ಆದ್ರೆ ಪ್ರತಿಜ್ಞಾವಿಧಿ ಬೋಧಿಸೋಕೆ ರಾಜ್ಯಪಾಲರೇ ಇರಲ್ಲ!

ಸರ್ಕಾರ ರಚಿಸಲು ಎಲ್ಲರ ಬೆಂಬಲ ಪಡೆದ ದಳಪತಿ ವಿಜಯ್‌, ಆದ್ರೆ ಪ್ರತಿಜ್ಞಾವಿಧಿ ಬೋಧಿಸೋಕೆ ರಾಜ್ಯಪಾಲರೇ ಇರಲ್ಲ!

ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಮುಂದಾಗಿರುವ ನಟ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಕಾಂಗ್ರೆಸ್‌, ವಿಸಿಕೆ ಹಾಗೂ ಐಯುಎಂಎಲ್‌ ಬೆಂಬಲ ನೀಡಿವೆ, ಇದರಿಂದ ಶಾಸಕರ ಬಲ 120ಕ್ಕೆ ಏರಿದೆ. ಸರ್ಕಾರ ರಚನೆಗೆ ಹಕ್ಕು ಮಂಡಿಸಲು ಸಂಜೆ 6 ಗಂಟೆಗೆ ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ.

2 Min read
Author : Santosh Naik
Published : May 09 2026, 05:41 PM IST
Share this Photo Gallery
  • FB
  • TW
  • Linkdin
  • Whatsapp
16
ಕೊನೆಗೂ ವಿಜಯ್‌ಗೆ ಸಿಕ್ಕ ಬೆಂಬಲ
Image Credit : X

ಕೊನೆಗೂ ವಿಜಯ್‌ಗೆ ಸಿಕ್ಕ ಬೆಂಬಲ

ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ಸರ್ಕಾರ ರಚನೆಯಲ್ಲಿ ಸೃಷ್ಟಿಯಾಗಿರುವ ಅತಂತ್ರ ಸ್ಥಿತಿ ಈಗ ಮುಕ್ತಾಯವಾಗುವ ಸನಿಹ ಬಂದಿದೆ. ಸರ್ಕಾರ ರಚಿಸಲು ವಿಜಯ್‌ ಕಾಂಗ್ರೆಸ್‌, ವಿಸಿಕೆ ಹಾಗೂ ಐಯುಎಂಎಲ್‌ ಪಕ್ಷದ ಬೆಂಬಲ ಪಡೆಯುವುದರೊಂದಿಗೆ ಅವರ ಬೆಂಬಲ 120ಕ್ಕೆ ಏರಿದೆ. ಆದರೆ, ಪ್ರತಿಜ್ಞಾವಿಧಿ ಬೋಧಿಸಲು ರಾಜ್ಯಪಾಲರು ಸಿಗುವುದೇ ಅನುಮಾನವಾಗಿದೆ.

Add Asianetnews Kannada as a Preferred SourcegooglePreferred
26
ಸಂಜೆ 6 ಗಂಟೆಗೆ ಮತ್ತೆ ರಾಜ್ಯಪಾಲರ ಭೇಟಿ ಮಾಡಲಿರುವ ವಿಜಯ್‌
Image Credit : X

ಸಂಜೆ 6 ಗಂಟೆಗೆ ಮತ್ತೆ ರಾಜ್ಯಪಾಲರ ಭೇಟಿ ಮಾಡಲಿರುವ ವಿಜಯ್‌

ವಿಜಯ್‌ ಅವರ ಟಿವಿಕೆ ಪಕ್ಷಕ್ಕೆ 120 ಶಾಸಕರು ಬೆಂಬಲ ನೀಡಿದ್ದಾರೆ. ಇದರಿಂದಾಗಿ ಸರ್ಕಾರ ರಚಿಸುವ ನಿಟ್ಟಿನಲ್ಲಿ ಸಂಜೆ 6 ಗಂಟೆಗೆ ರಾಜ್ಯಪಾಲರ ಭೇಟಿಗೆ ಅವಕಾಶ ಕೇಳಿದ್ದಾರೆ ಎಂದು ವರದಿಯಾಗಿದೆ. ಹಾಗೇನಾದರೂ ವಿಜಯ್‌ ಈ ಸಮಯದಲ್ಲಿ ರಾಜ್ಯಪಾಲರ ಭೇಟಿಗೆ ಹೋಗದೇ ಇದ್ದಲ್ಲಿ, ಪ್ರಮಾಣವಚನ ಸ್ವೀಕಾರ ಸಮಾರಂಭ ಇನ್ನಷ್ಟು ದಿನ ತಡವಾಗಬಹುದು ಎನ್ನಲಾಗಿದೆ.

Related Articles

Related image1
BREAKING: ಕೊನೆಗೂ ಮುಗಿದ ಅನಿಶ್ಚಿತತೆ: ತಮಿಳುನಾಡಿನ ಇತಿಹಾಸದಲ್ಲೇ ಮೊದಲು ಮೈತ್ರಿ ಸರ್ಕಾರ; ವಿಜಯ್ ಕೈಹಿಡಿದ ತಿರುಮಾವಳವನ್!
Related image2
ಸಿಎಂ ಆಗೋಕು ಮುನ್ನವೇ ವಿಸಿಕೆ ಡಿಮಾಂಡ್‌ ಕೇಳಿ ಕಂಗಾಲಾದ ದಳಪತಿ ವಿಜಯ್‌, ಮೈತ್ರಿ ಉಳಿಯುತ್ತಾ?
36
7 ಗಂಟೆಗೆ ಕೇರಳಕ್ಕೆ ಹೊರಡಲಿರುವ ರಾಜ್ಯಪಾಲ
Image Credit : Asianet News

7 ಗಂಟೆಗೆ ಕೇರಳಕ್ಕೆ ಹೊರಡಲಿರುವ ರಾಜ್ಯಪಾಲ

ತಮಿಳುನಾಡು ಹಾಗೂ ಕೇರಳ ಎರಡೂ ರಾಜ್ಯಕ್ಕೂ ಆರ್‌ವಿ ಅರ್ಲೇಕರ್‌ ರಾಜ್ಯಪಾಲರಾಗಿದ್ದಾರೆ. ಕೇರಳದಲ್ಲೂ ಸರ್ಕಾರ ರಚನೆಯ ಕಸರತ್ತು ನಡೆಯುತ್ತಿರುವ ಕಾರಣ ಅಲ್ಲಿಗೆ ಭೇಟಿ ನೀಡುವುದೂ ಕೂಡ ಅಗತ್ಯವಾಗಿದೆ. ಇಷ್ಟು ದಿನಗಳ ಕಾಲ ತಮಿಳುನಾಡಿನಲ್ಲಿ ಸರ್ಕಾರ ರಚನೆ ಆಗುವ ನಿರೀಕ್ಷೆಯಲ್ಲಿದ್ದ ಅರ್ಲೇಕರ್‌, ಇಂದು ಸಂಜೆ 7 ಗಂಟೆ ವೇಳೆಗೆ ಕೇರಳಕ್ಕೆ ತೆರಳಲಿದ್ದಾರೆ ಎನ್ನಲಾಗಿದೆ.

46
ಈ ವಾರವೇ ಸಿಎಂ ಆಗಲು ವಿಜಯ್‌ಗೆ ಕೊನೇ ಅವಕಾಶ
Image Credit : Asianet News

ಈ ವಾರವೇ ಸಿಎಂ ಆಗಲು ವಿಜಯ್‌ಗೆ ಕೊನೇ ಅವಕಾಶ

ಇದರಿಂದಾಗಿ ವಿಜಯ್‌ ಸಂಜೆ 6 ಗಂಟೆಯ ಒಳಗಡೆ ರಾಜ್ಯಪಾಲರ ಭೇಟಿ ಮಾಡಿ ಸರ್ಕಾರ ರಚನೆಗೆ ಅನುಮತಿ ನೀಡುವಂತೆ ಮನವಿ ಮಾಡಲಿದ್ದಾರೆ. ಸರ್ಕಾರಕ್ಕೆ ಇರುವ ಬೆಂಬಲ ಪತ್ರವನ್ನು ನೋಡಿದ ಬಳಿಕ ಅರ್ಲೇಕರ್‌ ಇದರ ಬಗ್ಗೆ ನಿರ್ಧಾರ ಮಾಡಲಿದ್ದಾರೆ. ಹಾಗೇನಾದರೂ ಬೆಂಬಲ ಇರುವುದು ಖಚಿತವಾದಲ್ಲಿ ಮಾತ್ರವೇ, ಕೇರಳ ಪ್ರವಾಸವನ್ನು ರದ್ದು ಮಾಡಲಿದ್ದಾರೆ ಎನ್ನಲಾಗಿದೆ.

56
ದಳಪತಿ ವಿಜಯ್‌ಗೆ ರಾಜ್ಯಪಾಲರ ಖಡಕ್ ಸಂದೇಶ
Image Credit : Asianet News

ದಳಪತಿ ವಿಜಯ್‌ಗೆ ರಾಜ್ಯಪಾಲರ ಖಡಕ್ ಸಂದೇಶ

ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ' (TVK) ಈಗಾಗಲೇ ಸರ್ಕಾರ ರಚಿಸಲು ಹಕ್ಕು ಮಂಡಿಸಿದೆ. ಆದರೆ, ರಾಜ್ಯಪಾಲರು ಈ ವಿಚಾರದಲ್ಲಿ ಅತ್ಯಂತ ಜಾಗರೂಕತೆಯ ಹೆಜ್ಜೆ ಇರಿಸಿದ್ದಾರೆ. "ಕೇವಲ ಹಕ್ಕು ಮಂಡಿಸಿದರೆ ಸಾಲದು, ಸರ್ಕಾರ ರಚನೆಗೆ ಅಗತ್ಯವಿರುವ ಸಂಖ್ಯಾಬಲದ (Magic Figure) ಬೆಂಬಲ ಪತ್ರಗಳೊಂದಿಗೆ ಬನ್ನಿ" ಎಂದು ವಿಜಯ್ ನೇತೃತ್ವದ ನಿಯೋಗಕ್ಕೆ ರಾಜ್ಯಪಾಲರು ಸ್ಪಷ್ಟಪಡಿಸಿದ್ದರು.

66
ರಾಜ್ಯಪಾಲರ ಅಚಲ ನಿಲುವು
Image Credit : Asianet News

ರಾಜ್ಯಪಾಲರ ಅಚಲ ನಿಲುವು

ಯಾವುದೇ ಪಕ್ಷ ಅಥವಾ ಮೈತ್ರಿಕೂಟವು ಅಗತ್ಯ ಶಾಸಕರ ಬೆಂಬಲ ಪತ್ರಗಳನ್ನು ಸಲ್ಲಿಸಿ ಸಂಖ್ಯಾಬಲವನ್ನು ಸಾಬೀತುಪಡಿಸಿದರೆ, ತಕ್ಷಣವೇ ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಲಾಗುತ್ತದೆ. ತದನಂತರ ನಿಗದಿತ ಸಮಯದೊಳಗೆ ವಿಧಾನಸಭೆಯ ಸದನದಲ್ಲಿ ಬಹುಮತ ಸಾಬೀತುಪಡಿಸಲು ಅವಕಾಶ ನೀಡಲಾಗುತ್ತದೆ. ಆದರೆ, ಈ ಹಂತದಲ್ಲಿ ಕಾಂಕ್ರೀಟ್ ದಾಖಲೆಗಳಿಲ್ಲದೆ ಯಾವುದೇ ಪಕ್ಷವನ್ನು ಆಹ್ವಾನಿಸುವುದು ಸೂಕ್ತವಲ್ಲ ಎಂಬುದು ರಾಜ್ಯಪಾಲರ ನಿಲುವಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ತಮಿಳಗ ವೆಟ್ರಿ ಕಳಗಂ
ದಳಪತಿ ವಿಜಯ್
ತಮಿಳುನಾಡು
ರಾಜಕೀಯ ಸುದ್ದಿ
ಸುದ್ದಿ
ಭಾರತ ಸುದ್ದಿ

Latest Videos
Recommended Stories
Recommended image1
ಬಂಗಾಳದಲ್ಲಿ ಬಿಜೆಪಿ ಸರ್ಕಾರ, 15 ವರ್ಷ ಬಳಿಕ ಸಿಪಿಎಂ ಪತ್ರಿಕೆಗೆ ಸಿಕ್ತು ಸರ್ಕಾರಿ ಜಾಹೀರಾತು
Recommended image2
BREAKING: ಕೊನೆಗೂ ಮುಗಿದ ಅನಿಶ್ಚಿತತೆ: ತಮಿಳುನಾಡಿನ ಇತಿಹಾಸದಲ್ಲೇ ಮೊದಲು ಮೈತ್ರಿ ಸರ್ಕಾರ; ವಿಜಯ್ ಕೈಹಿಡಿದ ತಿರುಮಾವಳವನ್!
Recommended image3
ರೇ*ಪಿಸ್ಟ್​ಗೆ ಪೊಲೀಸರ ರಕ್ಷಣೆ; ಪದೇ ಪದೇ ಜಾಮೀನು- ಕೋರ್ಟ್​ನಲ್ಲಿಯೇ ಇರಿದು ಕೊಂದ ಮಹಿಳೆಯರು
Related Stories
Recommended image1
BREAKING: ಕೊನೆಗೂ ಮುಗಿದ ಅನಿಶ್ಚಿತತೆ: ತಮಿಳುನಾಡಿನ ಇತಿಹಾಸದಲ್ಲೇ ಮೊದಲು ಮೈತ್ರಿ ಸರ್ಕಾರ; ವಿಜಯ್ ಕೈಹಿಡಿದ ತಿರುಮಾವಳವನ್!
Recommended image2
ಸಿಎಂ ಆಗೋಕು ಮುನ್ನವೇ ವಿಸಿಕೆ ಡಿಮಾಂಡ್‌ ಕೇಳಿ ಕಂಗಾಲಾದ ದಳಪತಿ ವಿಜಯ್‌, ಮೈತ್ರಿ ಉಳಿಯುತ್ತಾ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved