MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ನಿಮ್ಮ ದಿಟ್ಟ, ಸೈದಾಂತಿಕ ನಿಲುವು ಭರವಸೆಯ ಬೆಳಕಾಗಿದೆ: ಮೆಹಬೂಬಾ ಮುಫ್ತಿ ಅಭಿನಂದನೆ

ನಿಮ್ಮ ದಿಟ್ಟ, ಸೈದಾಂತಿಕ ನಿಲುವು ಭರವಸೆಯ ಬೆಳಕಾಗಿದೆ: ಮೆಹಬೂಬಾ ಮುಫ್ತಿ ಅಭಿನಂದನೆ

Waqf amendment bill 2025: ವಕ್ಫ್‌ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿ ಸಿದ್ದರಾಮಯ್ಯ, ಸ್ಟಾಲಿನ್‌ ಮತ್ತು ಮಮತಾ ಬ್ಯಾನರ್ಜಿ ಅವರ ನಡೆಗೆ ಮೆಹಬೂಬಾ ಮುಫ್ತಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮೂವರೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ನಿಮ್ಮ ದಿಟ್ಟ ನಿಲುವು ಭರವಸೆಯ ಬೆಳಕಾಗಿದೆ ಎಂದಿದ್ದಾರೆ.

1 Min read
Author : Kannadaprabha News
| Updated : Apr 13 2025, 08:29 AM IST
Share this Photo Gallery
  • FB
  • TW
  • Linkdin
  • Whatsapp
15

ವಕ್ಫ್‌ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌ ಮತ್ತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ನಡೆಗೆ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

25

ಈ ಸಂಬಂಧ ಮೂವರೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಅವರು, ನಿಮ್ಮ ದಿಟ್ಟ ಮತ್ತು ಸೈದ್ಧಾಂತಿಕ ನಿಲುವು ಎಲ್ಲರ ಪಾಲಿಗೆ ಭರವಸೆಯ ಬೆಳಕಾಗಿದೆ ಎಂದು ಮಾಜಿ ಸಿಎಂ ಮೆಹಬೂಬಾ ಮುಫ್ತಿ ಹೇಳಿದ್ದಾರೆ.

35

ಈ ಬಗ್ಗೆ ಟ್ವಿಟ್‌ ಮಾಡಿರುವ ಮೆಹಬೂಬಾ , ಇಂದಿನ ಭಾರತದಲ್ಲಿ ವಿರೋಧದ ಧ್ವನಿಯನ್ನು ಅಪರಾಧವೆಂಬಂತೆ ನೋಡಲಾಗುತ್ತದೆ. ಇಂಥ ಪರಿಸ್ಥಿತಿಯಲ್ಲಿ ನಿಮ್ಮ ಧ್ವನಿಗಳು ನೆಮ್ಮದಿಯ ನಿಟ್ಟುಸಿರು ಮೂಡುವಂತೆ ಮಾಡಿದೆ. ಕಳೆದೊಂದು ದಶಕದಿಂದ ಭಾರತದ ಬಹುಸಂಖ್ಯಾತವಾದವು ದೇಶದ ಮೂಲ ಮೌಲ್ಯಗಳಾದ ವೈವಿಧ್ಯತೆ ಮತ್ತು ಬಹುತ್ವಕ್ಕೆ ಬೆದರಿಕೆಯೊಡ್ಡುತ್ತಿದೆ ಎಂದು ಹೇಳಿದ್ದಾರೆ.

45

ಹೆಚ್ಚಿನ ನಾಗರಿಕರು ಈ ಅಜೆಂಡಾವನ್ನು ತಿರಸ್ಕರಿಸಿದರೂ ಈಗ, ದ್ವೇಷ ಮತ್ತು ವಿಭಜನೆಗೆ ಉತ್ತೇಜಿಸುವವರೇ ಅಧಿಕಾರದಲ್ಲಿದ್ದಾರೆ. ಸಂವಿಧಾನ, ಸಂಸ್ಥೆಗಳು ಮತ್ತು ಜಾತ್ಯತೀತ ಚೌಕಟ್ಟನ್ನು ಅವರು ಗುರಿ ಮಾಡುತ್ತಿದ್ದಾರೆ. ಇದರ ಬಿಸಿಯನ್ನು ಅಲ್ಪಸಂಖ್ಯಾತರು ಅದರಲ್ಲೂ ಮುಖ್ಯವಾಗಿ ಮುಸ್ಲಿಮರು ಅನುಭವಿಸಬೇಕಾಗಿದೆ. ವಕ್ಫ್ ತಿದ್ದುಪಡಿ ವಿಧೇಯಕವು ನಮ್ಮ ಧಾರ್ಮಿಕ ಸ್ವಾತಂತ್ರ್ಯವನ್ನು ಕಡೆಗಣಿಸುತ್ತದೆ ಎಂದು ಮೆಹೆಬೂಬಾ ಮುಫ್ತಿ ಹೇಳಿದ್ದಾರೆ.

55
Kolkata

Kolkata

ಮಮತಾ ಬ್ಯಾನರ್ಜಿ ಪುನರುಚ್ಚಾರ

ವಕ್ಫ್ ತಿದ್ದುಪಡಿ ಕಾಯ್ದೆಯನ್ನು ಬಂಗಾಳದಲ್ಲಿ ಜಾರಿಗೆ ತರುವುದಿಲ್ಲ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಪುನರುಚ್ಚರಿಸಿದ್ದಾರೆ. ಹಲವರ ಆಕ್ರೋಶಕ್ಕೆ ಕಾರಣವಾಗಿರುವ ಕಾನೂನನ್ನು ನಾವು ರಚಿಸಿಲ್ಲ. ಕೇಂದ್ರ ಸರ್ಕಾರ ಮಾಡಿದೆ. ಆದ್ದರಿಂದ ನಿಮಗೆ ಬೇಕಾದ ಉತ್ತರವನ್ನು ಕೇಂದ್ರ ಸರ್ಕಾರದಿಂದ ಪಡೆಯಬೇಕು ಎಂದಿದ್ದಾರೆ. 

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ವಕ್ಫ್
ಮಮತಾ ಬ್ಯಾನರ್ಜಿ
ಭಾರತ ಸುದ್ದಿ

Latest Videos
Recommended Stories
Recommended image1
ಅಕ್ರಮ ಸಂಬಂಧ ನೋಡಿದ ಮಾವ; ಪ್ರಿಯಕರನೊಂದಿಗೆ ಸೇರಿ ನಡು ರಸ್ತೆಯಲ್ಲಿ ಮಾವನಿಗೆ ಬೆಂಕಿ ಹಚ್ಚಿದ ಸೊಸೆ!
Recommended image2
11 ವರ್ಷಗಳ ನಂತರದ ಚಮತ್ಕಾರ, ಫೆಬ್ರವರಿ 2026 ಅನ್ನು 'ಪರ್ಫೆಕ್ಟ್ ಮಂತ್' ಅಂತಾ ಹೇಳ್ತಿರೋದೇಕೆ?
Recommended image3
ಸ್ವಂತ ಮಗಳು, ಅಣ್ಣನ ಮಗಳು ಇಬ್ಬರನ್ನು 7 ವರ್ಷ ನಿರಂತರ ಅತ್ಯಾ**ರ, ಮಕ್ಕಳ ಕಣ್ಣೀರ ಕತೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved