MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಕರ್ನಾಟಕ ಸೇರಿ 17 ರಾಜ್ಯಗಳಿಗೆ ಹವಾಮಾನ ಇಲಾಖೆ ಮಳೆ ಎಚ್ಚರಿಕೆ, ಹಲೆವೆಡೆ ರಜೆ ಘೋಷಣೆ

ಕರ್ನಾಟಕ ಸೇರಿ 17 ರಾಜ್ಯಗಳಿಗೆ ಹವಾಮಾನ ಇಲಾಖೆ ಮಳೆ ಎಚ್ಚರಿಕೆ, ಹಲೆವೆಡೆ ರಜೆ ಘೋಷಣೆ

ಕರ್ನಾಟಕ ಸೇರಿದಂತೆ 17 ರಾಜ್ಯಗಳಲ್ಲಿ ಭಾರಿ ಮಳೆ ಎಚ್ಚರಿಕೆ ನೀಡಲಾಗಿದೆ. ಈ ಪೈಕಿ ಕೆಲೆವೆಡೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾವ ರಾಜ್ಯಗಳಿಗೆ ಯಾವ ಅಲರ್ಟ್?

2 Min read
Author : Chethan Kumar
Published : Jul 27 2026, 11:41 AM IST
Share this Photo Gallery
  • FB
  • TW
  • Linkdin
  • Whatsapp
16
ಮಳೆ ಅಲರ್ಟ್, 17 ರಾಜ್ಯಗಳಿಗೆ ಎಚ್ಚರಿಕೆ
Image Credit : Asianet News

ಮಳೆ ಅಲರ್ಟ್, 17 ರಾಜ್ಯಗಳಿಗೆ ಎಚ್ಚರಿಕೆ

ಈ ಬಾರಿ ಮುಂಗಾರು ಮಳೆ ಕೈಕೊಟ್ಟಿದೆ. ಇದೀಗ ಜುಲೈ ಅಂತ್ಯದಲ್ಲಿದ್ದರೂ ಹಲವು ಕಡೆ ಸರಿಯಾದ ಪ್ರಮಾಣದಲ್ಲಿ ಮಳೆಯಾಗಿಲ್ಲ. ಇನ್ನು ಅಸ್ಸಾಂ, ಗುಜರಾತ್, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಕರ್ನಾಟಕ ಕೆಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾದರೆ, ಬಹುತೇಕ ಜಿಲ್ಲೆಗಳು ಬರಪೀಡಿತವಾಗಿದೆ. ಇದೀಗ ಹವಾಮಾನ ಇಲಾಖೆ ಕರ್ನಾಟಕ ಸೇರಿದಂತೆ 17 ರಾಜ್ಯಗಳಿಗೆ ಅಲರ್ಟ್ ನೀಡಿದೆ. ಉತ್ತರ ಭಾರತಗಳಲ್ಲಿ ಮಳೆ ತೀವ್ರಗೊಳ್ಳುತ್ತಿದ್ದರೆ, ದಕ್ಷಿಣ ಭಾರತದಲ್ಲಿ ಕ್ಷೀಣಿಸುತ್ತಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಕರ್ನಾಟಕ ಕರಾವಳಿಗೆ ಮಳೆ
Image Credit : Asianet News

ಕರ್ನಾಟಕ ಕರಾವಳಿಗೆ ಮಳೆ

ಕರ್ನಾಟಕ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಆದರೆ ಕರ್ನಾಟರ ಇತರ ಭಾಗದಲ್ಲಿ ಮಳೆ ಕೊರತೆ ಮುಂದುವರಿಯಲಿದೆ. ದಕ್ಷಿಣ ಕನ್ನಡ, ಉಡುಪಿ, ಕಾರವಾರ, ಉತ್ತರಕನ್ನಡ ಸೇರಿದಂತೆ ಕರಾವಳಿ ಭಾಗದಲ್ಲಿ ಮಳೆ ಸೂಚನೆ ನೀಡಲಾಗಿದೆ. ಆದರೆ ಕೊಡಗು ಸೇರಿದಂತೆ ಇತರ ಹಲವೆಡೆ ಮಳೆ ಕೊರತೆ ಎದುರಾಗಲಿದೆ. ಕೊಡಗಿನ ಮಳೆ ಕೊರತೆಯಿಂದ ಕಾವೇರಿ ತುಂಬಿ ಹರಿಯದೆ ಕೆಆರ್‌ಎಸ್ ಸೇರಿದಂತೆ ರಾಜ್ಯದ ಪ್ರಮುಖ ಭಾಗದಲ್ಲಿ ನೀರಿನ ಕೊರತೆಯಾಗುವ ಸಾಧ್ಯತೆ ಇದೆ.

Related Articles

Related image1
ಮಳೆ ಕೊರತೆ ನಡುವೆಯೂ ಒಂದೊಳ್ಳೆ ಸುದ್ದಿ.. ಸಂಪೂರ್ಣ ತುಂಬಿದ ಹಾರಂಗಿ ಜಲಾಶಯ..!
Related image2
ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ದೂಧಗಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ; ರಾಜ್ಯದ ಜಲಾಶಯಗಳ ನೀರಿನ ಮಟ್ಟ ಎಷ್ಟು?
36
ಭಾರಿ ಮಳೆ, ರೆಡ್ ಅಲರ್ಟ್
Image Credit : ANI

ಭಾರಿ ಮಳೆ, ರೆಡ್ ಅಲರ್ಟ್

ಈಶಾನ್ಯ ಭಾರತದಲ್ಲಿ ಭಾರಿ ಮಳೆಯಾಗುತ್ತಿದ್ದು, ಅಸ್ಸಾಂನಲ್ಲಿ ಕಳೆದ 60 ವರ್ಷದಲ್ಲಿ ಆಗದಂತೆ ಮಳೆಯಿಂದ ಪ್ರವಾಹ ಸೃಷ್ಟಿಯಾಗಿದೆ. ಹಲವರು ಮೃತಪಟ್ಟಿದ್ದರೆ, ಮನೆಗಳು, ಕಟ್ಟಡಗಳು, ಕಾರು, ವಾಹನಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ರಕ್ಷಣಾ ತಂಡಗಳು, ಕಾರ್ಯಾಚರಣೆ ತೀವ್ರಗೊಂಡಿದೆ. ಅಸ್ಸಾಂ ಸೇರಿದಂತೆ ಈಶಾನ್ಯ ರಾಜ್ಯದಲ್ಲಿ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಅಸ್ಸಾಂನಲ್ಲಿ ಬಹುತೇಕ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

46
ಉತ್ತರ ಭಾರತದಲ್ಲೂ ಮಳೆ ಎಚ್ಚರಿಕೆ
Image Credit : Asianet News

ಉತ್ತರ ಭಾರತದಲ್ಲೂ ಮಳೆ ಎಚ್ಚರಿಕೆ

ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಉತ್ತರಖಂಡ್ ರಾಜ್ಯಗಳಲ್ಲಿ ಭಾರಿ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಇದೆ ಎಂದಿದೆ. ಭೂಕುಸಿತ ಸಂಭವಿಸಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆಯಿಂದ ಹಲವು ಪ್ರದೇಶಗಳ ರಸ್ತೆ ಸಂಪರ್ಕ ಕಡಿದುಕೊಂಡಿದೆ. ಹಿಮಾಚಲ ಪ್ರದೇಶ ಹಾಗೂ ಉತ್ತರಖಂಡದಲ್ಲಿ ಭೂಕುಸಿತಗಳು ಸಂಭವಿಸಿದೆ.

56
ಇಂದಿನಿಂದೆ ಕೆಲ ರಾಜ್ಯದಲ್ಲಿ ಮಳೆ
Image Credit : ANI

ಇಂದಿನಿಂದೆ ಕೆಲ ರಾಜ್ಯದಲ್ಲಿ ಮಳೆ

ಪಂಜಾಬ್,ಚಂಡಿಘಡ, ಉತ್ತರ ಪ್ರದೇಶ,ರಾಜಸ್ಥಾನ, ಹರ್ಯಾಣದ ಕೆಲ ಭಾಗದಲ್ಲಿ ಇಂದಿನಿಂದ ಮಳೆ ತೀವ್ರಗೊಳ್ಳಲಿದೆ. ಈ ರಾಜ್ಯದ ಕೆಲ ಭಾಗದಲ್ಲಿ ಒಂದೇ ಸಮನೇ ಮಳೆ ಸುರಿದು ಪ್ರವಾಹ ಪರಿಸ್ಥಿತಿಗಳು ಸೃಷ್ಟಿಯಾಗಲಿದೆ. ಆದರೂ ಈ ರಾಜ್ಯಗಳು ಮಳೆ ಕೊರತೆ ಎದುರಿಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

66
ಒಡಿಶಾದ ಕೆಲ ಭಾಗದಲ್ಲಿ ಶಾಲಾ ಕಾಲೇಜಿಗೆ ರಜೆ
Image Credit : ANI

ಒಡಿಶಾದ ಕೆಲ ಭಾಗದಲ್ಲಿ ಶಾಲಾ ಕಾಲೇಜಿಗೆ ರಜೆ

ಮಧ್ಯಪ್ರದೇಶ, ಚತ್ತೀಸಘಡ ಸೇರಿದಂತೆ ಹಲೆವೆಡೆ ಭಾರಿ ಮಳೆ ಜನಜೀವನ ಅಸ್ತವ್ಯಸ್ತ ಮಾಡಲಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಇನ್ನು ಒಡಿಶಾದಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಒಡಿಶಾ ಕರಾವಳಿ ತೀರದ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಭಾರತೀಯ ಹವಾಮಾನ ಇಲಾಖೆ
ಮಳೆ
ಮಾನ್ಸೂನ್
ಕರ್ನಾಟಕ ಮಳೆ

Latest Videos
Recommended Stories
Recommended image1
ನೀಟ್ ಪರೀಕ್ಷೆ ಪೇಪರ್ ಲೀಕ್; ಸುಧಾರಣೆ ತರಲು ಶಿರಸಿಯ ನಂದನ್ ನಿಲೇಕಣಿ ನೇಮಿಸಿದ ಪ್ರಧಾನಿ, ಯಾರದು?
Recommended image2
‘ಕಲಿಯುಗದ ಸುಧಾಮ’: 10 ವರ್ಷ ಕೋರ್ಟ್ ಸುತ್ತಿ ಗೆದ್ದ ಆಸ್ತಿ... ಕೊನೆಗೆ ದೇವರ ಹೆಸರಿಗೆ ಬರೆದು ಕೊಟ್ಟ ರೈತ!
Recommended image3
'ನೀವು ನನಗಾಗಿ ಎಲ್ಲಾ ತ್ಯಾಗ ಮಾಡಿದ್ರಿ, ಕ್ಷಮಿಸಿ ಅಮ್ಮ' ಮತ್ತೊಂದು ಬಲಿ ಪಡೆದ NEET
Related Stories
Recommended image1
ಮಳೆ ಕೊರತೆ ನಡುವೆಯೂ ಒಂದೊಳ್ಳೆ ಸುದ್ದಿ.. ಸಂಪೂರ್ಣ ತುಂಬಿದ ಹಾರಂಗಿ ಜಲಾಶಯ..!
Recommended image2
ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ಮಳೆ ಅಬ್ಬರ: ದೂಧಗಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ; ರಾಜ್ಯದ ಜಲಾಶಯಗಳ ನೀರಿನ ಮಟ್ಟ ಎಷ್ಟು?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved