MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಬಂಗಾಳದಲ್ಲಿ ಬಿಜೆಪಿ ಸರ್ಕಾರ, 15 ವರ್ಷ ಬಳಿಕ ಸಿಪಿಎಂ ಪತ್ರಿಕೆಗೆ ಸಿಕ್ತು ಸರ್ಕಾರಿ ಜಾಹೀರಾತು

ಬಂಗಾಳದಲ್ಲಿ ಬಿಜೆಪಿ ಸರ್ಕಾರ, 15 ವರ್ಷ ಬಳಿಕ ಸಿಪಿಎಂ ಪತ್ರಿಕೆಗೆ ಸಿಕ್ತು ಸರ್ಕಾರಿ ಜಾಹೀರಾತು

ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ತಮ್ಮ ಪಕ್ಷದ ಬೆಂಬಲದ, ನಾಯಕರ ಪತ್ರಿಕೆ, ತಮ್ಮ ಪರವಾಗಿರುವ ಪತ್ರಿಕೆ, ಮಾಧ್ಯಮಗಳಿಗೆ ಜಾಹೀರಾತು ನೀಡುವ ಪದ್ಧತಿ ಇತ್ತು. ಇದೀಗ ಬಿಜೆಪಿ ಸರ್ಕಾರ ಬಂದ ಬೆನ್ನಲ್ಲೇ ಸಿಪಿಎಂ ಪಕ್ಷದ ಪತ್ರಿಕೆಗೆ ಜಾಹೀರಾತು ಸಿಕ್ಕಿದೆ.

1 Min read
Author : Chethan Kumar
Published : May 09 2026, 05:17 PM IST
Share this Photo Gallery
  • FB
  • TW
  • Linkdin
  • Whatsapp
15
15 ವರ್ಷ ಜಾಹೀರಾತು ನಿಷೇಧಿಸಿದ್ದ ಮಮತಾ ಬ್ಯಾನರ್ಜಿ
Image Credit : stockPhoto

15 ವರ್ಷ ಜಾಹೀರಾತು ನಿಷೇಧಿಸಿದ್ದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಬರೋಬ್ಬರಿ 35 ವರ್ಷಗಳ ಕಾಲ ಅಧಿಕಾರದಲ್ಲಿದ್ದ ಸಿಪಿಎಂ, ಅಧಿಕಾರ ಕಳೆದುಕೊಂಡ ನಂತರ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿತ್ತು. ಅದರಲ್ಲೂ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿಯಾದ ಮೇಲೆ, ಕಳೆದ 15 ವರ್ಷಗಳಲ್ಲಿ ಸಿಪಿಎಂ ಪಕ್ಷದ ಪತ್ರಿಕೆಗೆ ಒಂದೇ ಒಂದು ಸರ್ಕಾರಿ ಜಾಹೀರಾತು ಸಿಕ್ಕಿರಲಿಲ್ಲ. ಆದರೆ ಈಗ, ಬಿಜೆಪಿ ಮೊದಲ ಬಾರಿಗೆ ಅಧಿಕಾರಕ್ಕೆ ಬಂದು, ಪ್ರಮಾಣ ವಚನ ಸ್ವೀಕರಿಸಿದ ದಿನವೇ ಸಿಪಿಎಂ ಪತ್ರಿಕೆಗೆ ಸರ್ಕಾರಿ ಜಾಹೀರಾತು ಹುಡುಕಿಕೊಂಡು ಬಂದಿದೆ.

Add Asianetnews Kannada as a Preferred SourcegooglePreferred
25
ಗಣಶಕ್ತಿ ಮೊದಲ ಪುಟದಲ್ಲಿ ಸರ್ಕಾರದ ಜಾಹೀರಾತು
Image Credit : Asianet News

ಗಣಶಕ್ತಿ ಮೊದಲ ಪುಟದಲ್ಲಿ ಸರ್ಕಾರದ ಜಾಹೀರಾತು

ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಹಲವು ಪತ್ರಿಕೆಗಳಿಗೆ ಜಾಹೀರಾತು ನಿಷೇಧಿಸಲಾಗಿತ್ತು. ಆದರೆ ಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬೆನ್ನಲ್ಲೇ ಸಿಪಿಎಂ ಮುಖವಾಣಿ 'ಗಣಶಕ್ತಿ'ಯ ಮೊದಲ ಪುಟದಲ್ಲೇ ಇಂದು ಸರ್ಕಾರದ ಅಧಿಕೃತ ಜಾಹೀರಾತು ಪ್ರಕಟವಾಗಿದೆ. ಈ ಜಾಹೀರಾತಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಇಂದು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಸುವೇಂದು ಅಧಿಕಾರಿ ಅವರ ಫೋಟೋಗಳಿವೆ.

Related Articles

Related image1
ಸಿಎಂ ಆಗಿ ಸುವೇಂದು ಪ್ರಮಾಣವಚನ, ವೇದಿಕೆಯಲ್ಲಿ ಬಂಗಾಳ ಬಿಜೆಪಿಯ ಹಿರಿಯ ನಾಯಕನ ಕಾಲಿಗೆ ನಮಸ್ಕರಿಸಿದ ಪ್ರಧಾನಿ ಮೋದಿ!
Related image2
PM Modi Bengaluru visit: ಪಶ್ಚಿಮ ಬಂಗಾಳ ಗೆದ್ದ ಮೋದಿಗೆ ಮೇ 10ಕ್ಕೆ ಬೆಂಗಳೂರಲ್ಲಿ ಅಭಿನಂದನೆ
35
ಸರ್ವಾಧಿಕಾರಿ ಧೋರಣೆ ಬದಲು ಉತ್ತಮ ನಿರ್ಧಾರ
Image Credit : X

ಸರ್ವಾಧಿಕಾರಿ ಧೋರಣೆ ಬದಲು ಉತ್ತಮ ನಿರ್ಧಾರ

ಮಮತಾ ಬ್ಯಾನರ್ಜಿ ಸರ್ಕಾರದ ಸರ್ವಾಧಿಕಾರಿ ಧೋರಣೆಯಿಂದ ಬದಲಾವಣೆ ಆಗುತ್ತಿರುವುದು ಒಳ್ಳೆಯ ಬೆಳವಣಿಗೆ ಅಂತ ಸಿಪಿಎಂ ಪಾಲಿಟ್‌ಬ್ಯೂರೋ ಸದಸ್ಯ ಹಾಗೂ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಸಲೀಂ ಪ್ರತಿಕ್ರಿಯಿಸಿದ್ದಾರೆ. 'ಗಣಶಕ್ತಿ'ಗೆ ಜಾಹೀರಾತು ನಿಷೇಧಿಸಿದ್ದ ಮಮತಾ ಸರ್ಕಾರದ ನಿಲುವಿನ ವಿರುದ್ಧ ಸಿಪಿಎಂ ಕಾನೂನು ಹೋರಾಟವನ್ನೂ ನಡೆಸಿತ್ತು, ಆದರೆ ಅದರಿಂದ ಯಾವುದೇ ಪ್ರಯೋಜನವಾಗಿರಲಿಲ್ಲ. ಈ ಸಮಯದಲ್ಲಿ ಪತ್ರಿಕೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿತ್ತು. ಈಗ ಬಿಜೆಪಿ ಅಧಿಕಾರಕ್ಕೆ ಬಂದಿದ್ದರಿಂದ ಈ ಸಂಕಷ್ಟ ದೂರವಾಗಿದೆ ಎಂದು ಸಿಪಿಎಂ ರಾಜ್ಯ ನಾಯಕರು ನಿಟ್ಟುಸಿರು ಬಿಟ್ಟಿದ್ದಾರೆ.

45
ಪ್ರಮಾಣವಚನದಲ್ಲಿ ಸಿಪಿಎಂ ನಾಯಕರ ಮೆಚ್ಚಿದ ಬಿಜೆಪಿ
Image Credit : X

ಪ್ರಮಾಣವಚನದಲ್ಲಿ ಸಿಪಿಎಂ ನಾಯಕರ ಮೆಚ್ಚಿದ ಬಿಜೆಪಿ

ಇಂದು ನಡೆದ ಪ್ರಮಾಣ ವಚನ ಸಮಾರಂಭದಲ್ಲೂ ಬಿಜೆಪಿ ನಾಯಕರು ಸಿಪಿಎಂ ನಾಯಕರನ್ನು ಹಾಡಿ ಹೊಗಳಿದ್ದಾರೆ. ಮಾಜಿ ಮುಖ್ಯಮಂತ್ರಿ, ದಿವಂಗತ ಬುದ್ಧದೇಬ್ ಭಟ್ಟಾಚಾರ್ಯ ಮತ್ತು ಪಶ್ಚಿಮ ಬಂಗಾಳ ಎಡರಂಗದ ಅಧ್ಯಕ್ಷ ಬಿಮನ್ ಬೋಸ್ ಅವರನ್ನು ಬಿಜೆಪಿ ನಾಯಕರು ಪ್ರಶಂಸಿದ್ದಾರೆ.

55
ಸಿಪಿಎಂ ನಾಯಕರ ಹೊಗಳಿದ ಸುವೇಂಧು
Image Credit : X

ಸಿಪಿಎಂ ನಾಯಕರ ಹೊಗಳಿದ ಸುವೇಂಧು

ಸುವೆಂಧು ಅಧಿಕಾರಿ ಅವರು ಬುದ್ಧದೇಬ್ ಭಟ್ಟಾಚಾರ್ಯರನ್ನು 'ಒಳ್ಳೆಯ ಹೃದಯದ ವ್ಯಕ್ತಿ' ಎಂದು ಪದೇ ಪದೇ ಹೇಳಿದರು. ಸೈದ್ಧಾಂತಿಕ ಭಿನ್ನಾಭಿಪ್ರಾಯಗಳಿದ್ದರೂ, ಸಿಪಿಎಂ ನಾಯಕರು ಭ್ರಷ್ಟಾಚಾರದ ಕಳಂಕ ಅಂಟಿಸಿಕೊಳ್ಳದ ನಾಯಕರು ಎಂದು ಹೊಗಳಲು ಬಿಜೆಪಿ ನಾಯಕರು ಹಿಂದೆ ಮುಂದೆ ನೋಡಲಿಲ್ಲ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಪಶ್ಚಿಮ ಬಂಗಾಳ
ಬಿಜೆಪಿ
ಸುವೇಂದು ಅಧಿಕಾರಿ

Latest Videos
Recommended Stories
Recommended image1
BREAKING: ಕೊನೆಗೂ ಮುಗಿದ ಅನಿಶ್ಚಿತತೆ: ತಮಿಳುನಾಡಿನ ಇತಿಹಾಸದಲ್ಲೇ ಮೊದಲು ಮೈತ್ರಿ ಸರ್ಕಾರ; ವಿಜಯ್ ಕೈಹಿಡಿದ ತಿರುಮಾವಳವನ್!
Recommended image2
ರೇ*ಪಿಸ್ಟ್​ಗೆ ಪೊಲೀಸರ ರಕ್ಷಣೆ; ಪದೇ ಪದೇ ಜಾಮೀನು- ಕೋರ್ಟ್​ನಲ್ಲಿಯೇ ಇರಿದು ಕೊಂದ ಮಹಿಳೆಯರು
Recommended image3
Alcohol Price: ಗೋವಾ ಅಲ್ಲ, ಈ ರಾಜ್ಯದಲ್ಲಿ ಮಾತ್ರ ಅರ್ಧ ಬೆಲೆಗೆ ಮದ್ಯ ಸಿಗುತ್ತೆ! ಕಾರಣವೇನು?
Related Stories
Recommended image1
ಸಿಎಂ ಆಗಿ ಸುವೇಂದು ಪ್ರಮಾಣವಚನ, ವೇದಿಕೆಯಲ್ಲಿ ಬಂಗಾಳ ಬಿಜೆಪಿಯ ಹಿರಿಯ ನಾಯಕನ ಕಾಲಿಗೆ ನಮಸ್ಕರಿಸಿದ ಪ್ರಧಾನಿ ಮೋದಿ!
Recommended image2
PM Modi Bengaluru visit: ಪಶ್ಚಿಮ ಬಂಗಾಳ ಗೆದ್ದ ಮೋದಿಗೆ ಮೇ 10ಕ್ಕೆ ಬೆಂಗಳೂರಲ್ಲಿ ಅಭಿನಂದನೆ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved