MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • News
  • India News
  • ಬೆದರಿಸಲು ಯಾರಪ್ಪಾ ನೀನು? ರಾಜ್ ಠಾಕ್ರೆಯ ರಸಮಲೈ ಟೀಕೆಗೆ ಕೆರಳಿದ ಅಣ್ಣಾಮಲೈ

ಬೆದರಿಸಲು ಯಾರಪ್ಪಾ ನೀನು? ರಾಜ್ ಠಾಕ್ರೆಯ ರಸಮಲೈ ಟೀಕೆಗೆ ಕೆರಳಿದ ಅಣ್ಣಾಮಲೈ

ಬೆದರಿಸಲು ಯಾರಪ್ಪಾ ನೀನು?, ರಾಜ್ ಠಾಕ್ರೆಯ ರಸಮಲೈ ವ್ಯಂಗ್ಯಕ್ಕೆ ಬಿಜೆಪಿ ನಾಯಕ ಅಣ್ಣಾಮಲೈ ತಿರುಗೇಟು ನೀಡಿದ್ದಾರೆ. ಮುಂಬೈ ಬರುತ್ತೇನೆ. ತಾಕತ್ ಇದ್ರೆ ಮುಟ್ಟಿ ನೋಡು ಎಂದು ಅಣ್ಣಾಮಲೈ ಸವಾಲು ಹಾಕಿದ್ದಾರೆ. 

2 Min read
Author : Chethan Kumar
Published : Jan 12 2026, 08:45 PM IST
Share this Photo Gallery
  • FB
  • TW
  • Linkdin
  • Whatsapp
15
ಆ ರಸಮಲೈ ಯಾರು?
Image Credit : Asianet News

ಆ ರಸಮಲೈ ಯಾರು?

ಎಂಎನ್ಎಸ್ ಮುಖ್ಯಸ್ಥ ರಾಜ್ ಠಾಕ್ರೆ ಹಾಗೂ ಬಿಜೆಪಿ ನಾಯಕ ಅಣ್ಣಾಮಲೈ ನಡುವಿನ ವಾಕ್ಸಮರ ತಾರಕ್ಕೇರಿದೆ. ಮುಂಬೈ ಅಂತಾರಾಷ್ಟ್ರೀಯ ನಗರ ಎಂದು ಹೇಳಿಕೆ ನೀಡಿದ್ದ ಅಣ್ಣಾಮಲೈ ವಿರುದ್ದ ರಾಜ್ ಠಾಕ್ರೆ ಆಕ್ರೋಶ ಹೊರಹಾಕಿದ್ದರು. ಮುಂಬೈ ವಿಷಯಗಳ ಕುರಿತು ಹೇಳಿಕೆ ನೀಡಲು ಆ ರಸಮಲೈ ಯಾರು ಎಂದು ಅಣ್ಣಾಮಲೈ ಲೇವಡಿ ಮಾಡಿದ್ದರು.

25
ರಾಜ್‌ ಠಾಕ್ರೆಗೆ ಸವಾಲೆಸೆದ ಅಣ್ಣಾಮಲೈ
Image Credit : x

ರಾಜ್‌ ಠಾಕ್ರೆಗೆ ಸವಾಲೆಸೆದ ಅಣ್ಣಾಮಲೈ

ಮುಂಬೈ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರ ವೇದಿಕೆಯಲ್ಲಿ ಆರೋಪ ಪ್ರತ್ಯಾರೋಪಗಳು ಹೆಚ್ಚಾಗುತ್ತಿದೆ. ರಾಜ್ ಠಾಕ್ರೆ ಹೇಳಿಕೆಗೆ ಅಣ್ಣಾಮಲೈ ತಿರುಗೇಟು ನೀಡಿದ್ದಾರೆ. ಈ ರೀತಿಯ ಬೆದರಿಕೆಗೆ ನಾನು ಹೆದರವುದಿಲ್ಲ. ನಾನು ರೈತನ ಮಗ, ರಾಜ್ ಠಾಕ್ರೆ, ಆದಿತ್ಯ ಠಾಕ್ರೆ ಯಾರು? ನನಗೆ ಬೆದರಿಕೆ ಹಾಕಲು ಅವರು ಯಾರು ಎಂದು ಅಣ್ಮಾಮಲೈ ಪ್ರಶ್ನಿಸಿದ್ದಾರೆ.

Related Articles

Related image1
K Annamalai: ನನಗೆ ಅದೆಲ್ಲಾ ಇಷ್ಟವಾಗಲ್ಲ ಪ್ಲೀಸ್: ಅಭಿಮಾನಿಗಳಿಗೆ ಅಣ್ಣಾಮಲೈ ವಿಶೇಷ ಮನವಿ
Related image2
Annamalai Arrest: ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಕಾರಣ ಬಿಜೆಪಿ ನಾಯಕ ಅಣ್ಣಾಮಲೈ ಬಂಧನ!
35
ಕಾಲು ಕಟ್ ಮಾಡುತ್ತೀರಾ, ಮುಂಬೈಗೆ ಬರುತ್ತೇನೆ
Image Credit : x

ಕಾಲು ಕಟ್ ಮಾಡುತ್ತೀರಾ, ಮುಂಬೈಗೆ ಬರುತ್ತೇನೆ

ಮುಂಬೈ ಬಂದರೆ ಕಾಲು ಕಟ್ ಮಾಡುತ್ತಾರೆ ಎಂದು ಬೆದರಿಕೆ ಹಾಕಿದ್ದಾರೆ. ಇಂತಹ ಬೆದರಿಗೆ ನನ್ನ ಮುಂದೆ ಬೇಡ. ನಾನು ಮುಂಬೈಗೆ ಬರುತ್ತೇನೆ. ನೋಡೇ ಬಿಡೋಣ ಏನು ಮಾಡುತ್ತೀರಿ ಎಂದು ಅಣ್ಣಾಮಲೈ, ರಾಜ್ ಠಾಕ್ರೆ ವಿರುದ್ಧ ಸತತ ವಾಗ್ದಾಳಿ ನಡೆಸಿದ್ದಾರೆ. ಕೆಲವರು ಸಭೆ ಮಾಡಿ ಮಾಡಿ ನನ್ನನ್ನು ನಿಂದಿಸುತ್ತಿದ್ದಾರೆ ಎಂದು ಅಣ್ಣಾಮಲೈ ಹೇಳಿದ್ದಾರೆ.

45
ಮುಂಬೈನಲ್ಲಿ ಪ್ರಚಾರ ಮಾಡಿದ್ದ ಅಣ್ಣಾಮಲೈ
Image Credit : google

ಮುಂಬೈನಲ್ಲಿ ಪ್ರಚಾರ ಮಾಡಿದ್ದ ಅಣ್ಣಾಮಲೈ

ಮಂಬೈ ಪಾಲಿಕೆ ಚುನಾವಣೆ ಪ್ರಯುಕ್ತ ಅಣ್ಮಾಮಲೈ ಧಾರಾವಿ ಸೇರಿದಂತೆ ಹಲವು ತಮಿಳಿಗರ ಪ್ರಾಬಲ್ಯದ ಪ್ರದೇಶಗಳಲ್ಲಿ ಪ್ರಚಾರ ಮಾಡಿದ್ದರು. ಈ ವೇಳೆ ಮುಂಬೈ ಕೇವಲ ಮಹಾರಾಷ್ಟ್ರದ ನಗರವಲ್ಲ, ಇದು ಅಂತಾರಾಷ್ಟ್ರೀಯ ನಗರ. ಮುಂಬೈ ನಗರದ ಬಜೆಟ್ 75,000 ಕೋಟಿ ರೂಪಾಯಿ ಎಂದು ಅಣ್ಣಾಮಲೈ ಹೇಳಿದ್ದರು.

ಮುಂಬೈನಲ್ಲಿ ಪ್ರಚಾರ ಮಾಡಿದ್ದ ಅಣ್ಣಾಮಲೈ

55
ತಿರುಗೇಟು ನೀಡೋ ಭರದಲ್ಲಿ ಠಾಕ್ರೆಯಿಂದ ನಿಂದನೆ
Image Credit : Asianet News

ತಿರುಗೇಟು ನೀಡೋ ಭರದಲ್ಲಿ ಠಾಕ್ರೆಯಿಂದ ನಿಂದನೆ

ಅಣ್ಣಾಮಲೈಗೆ ತಿರುಗೇಟು ನೀಡೋ ಭರದಲ್ಲಿ ರಾಜ್ ಠಾಕ್ರೆ ನಿಂದನೆ ಮಾಡಿ ಟೀಕೆಗೆ ಗುರಿಯಾಗಿದ್ದಾರೆ. ಇತರ ರಾಜ್ಯಗಳಿಂದ ಬಂದು ಮರಾಠಿ ಸಂಸ್ಕೃತಿ ಮೇಲೆ ಸವಾರಿ ಮಾಡುತ್ತಿದ್ದಾರೆ. ಹಿಂದಿ ಸೇರಿ ಇತರ ಭಾಷೆ ಹೇರುತ್ತಿದ್ದಾರೆ. ಇತರ ಭಾಷಿಕರು ಮುಂಬೈ ಮೇಲೆ ಸವಾರಿ ಮಾಡಲು ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ ಬಾಳ ಠಾಕ್ರೆಯ ಕ್ರಾಂತಿಕಾರಿ ಆಂದೋಲನ ಲುಂಗಿ ಉಟಾವೋ, ಪುಂಗಿ ಬಜಾವೋ ಮತ್ತೆ ಜಾರಿಗೊಳಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದರು. ಇದೇ ವೇಳೆ ಅಣ್ಣಾಮಲೈಗೆ ರಸಮಲೈ ಎಂದು ನಿಂದಿಸಿ, ದಕ್ಷಿಣ ಭಾರತೀಯರ ವಿರುದ್ದ ಕೆಂಡ ಕಾರಿದ್ದರು.

ತಿರುಗೇಟು ನೀಡೋ ಭರದಲ್ಲಿ ಠಾಕ್ರೆಯಿಂದ ನಿಂದನೆ

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

CK
Chethan Kumar
ಎಲೆಕ್ಟ್ರಾನಿಕ್, ಡಿಜಿಟಲ್ ಮಾಧ್ಯಮ ಸೇರಿ ಪತ್ರಿಕೋದ್ಯಮದಲ್ಲಿ 13 ವರ್ಷಗಳ ಅನುಭವ. ಊರು ಧರ್ಮಸ್ಥಳ. ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಪಡೆದಿದ್ದು ಉಜಿರೆ ಎಸ್‌ಡಿಎಂನಲ್ಲಿ. ಟಿವಿ9, ಸ್ಟಾರ್ ಸ್ಪೋರ್ಟ್ಸ್‌ನಲ್ಲಿ ಕಾರ್ಯ ನಿರ್ವಹಿಸಿದ ಅನುಭವವಿದೆ. ರಾಷ್ಟ್ರೀಯ, ಅಂತಾರಾಷ್ಟ್ರೀಯ, ಜಿಯೋ ಪಾಲಿಟಿಕ್ಸ್, ಆಟೋ, ಟೆಕ್, ಸ್ಪೋರ್ಟ್ಸ್..ಏನೇ ಕೊಟ್ಟರೂ ಬರೆಯೋದು ನನ್ನ ಶಕ್ತಿ.
ಅಣ್ಣಾಮಲೈ
ರಾಜ್ ಠಾಕ್ರೆ
ಮುಂಬೈ
ಚುನಾವಣೆ

Latest Videos
Recommended Stories
Recommended image1
ಭಿಕ್ಷೆ ಬೇಡಿ ಬಂದ ಹಣದಲ್ಲಿ 500 ನಿರ್ಗತಿಕರಿಗೆ ಕಂಬಳಿ ಖರೀದಿಸಿ ಹಂಚಿದ ಭಿಕ್ಷುಕ
Recommended image2
ಹದಿಹರೆಯದ ಪ್ರೇಮ ಪ್ರಕರಣ: 'ರೋಮಿಯೋ ಜ್ಯೂಲಿಯೆಟ್‌ ನಿಯಮ' ಜಾರಿಗೆ ಸುಪ್ರೀಂಕೋರ್ಟ್​ ಕೇಂದ್ರಕ್ಕೆ ಸೂಚನೆ
Recommended image3
ಮಾಜಿ ಉಪ ರಾಷ್ಟ್ರಪತಿ ಜಗ್‌ದೀಪ್ ಧನ್ಕರ್ ಆರೋಗ್ಯದಲ್ಲಿ ಏರುಪೇರು, ಏಮ್ಸ್ ಆಸ್ಪತ್ರೆ ದಾಖಲು
Related Stories
Recommended image1
K Annamalai: ನನಗೆ ಅದೆಲ್ಲಾ ಇಷ್ಟವಾಗಲ್ಲ ಪ್ಲೀಸ್: ಅಭಿಮಾನಿಗಳಿಗೆ ಅಣ್ಣಾಮಲೈ ವಿಶೇಷ ಮನವಿ
Recommended image2
Annamalai Arrest: ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಕಾರಣ ಬಿಜೆಪಿ ನಾಯಕ ಅಣ್ಣಾಮಲೈ ಬಂಧನ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved