MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • India News
  • 'ಹೇಳು ಪಾರ್ಥ..' ಎಂದು ಚಟರ್ಜಿಗೆ ಗಂಟುಬಿದ್ದಿದ್ಯಾಕೆ ED, ಅಷ್ಟಕ್ಕೂ ಯಾರೀಕೆ ಅರ್ಪಿತಾ?

'ಹೇಳು ಪಾರ್ಥ..' ಎಂದು ಚಟರ್ಜಿಗೆ ಗಂಟುಬಿದ್ದಿದ್ಯಾಕೆ ED, ಅಷ್ಟಕ್ಕೂ ಯಾರೀಕೆ ಅರ್ಪಿತಾ?

ಕೋಲ್ಕತ್ತಾ (ಜುಲೈ 21): ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ (WBSSC) ಮತ್ತು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿ (WBBPE) ನೇಮಕಾತಿ ಅಕ್ರಮಗಳ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ತೃಣಮೂಲ ಕಾಂಗ್ರೆಸ್‌ ನಾಯಕ ಹಾಗೂ ಸಚಿವ  ಪಾರ್ಥ ಚಟರ್ಜಿ ಅವರ ಅತ್ಯಾಪ್ತೆ ಅರ್ಪಿತಾ ಮುಖರ್ಜಿ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಅಂದಾಜು 21 ಕೋಟಿ ನಗದು ಹಾಗೂ 50 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳು ಅರ್ಪಿತಾ ಅವರ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿದೆ. ಹಾಗಾದರೆ, ಈ ಹಗರಣಕ್ಕೂ ಅರ್ಪಿತಾ ಮುಖರ್ಜಿಗೆ ಇರುವ ಸಂಬಂಧವೇನು?  ನಗದು ಸಹಿತ ಇಡಿ ಅಧಿಕಾರಿಗಳು ಟಾಲಿಗಂಜ್‌ನ ಡೈಮಂಡ್ ಸಿಟಿ ಕಾಂಪ್ಲೆಕ್ಸ್‌ನಲ್ಲಿರುವ ಮುಖರ್ಜಿ ಅವರ ಐಷಾರಾಮಿ ನಿವಾಸದಿಂದ 20 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

2 Min read
Santosh Naik
Published : Jul 23 2022, 12:16 PM IST
Share this Photo Gallery
  • FB
  • TW
  • Linkdin
  • Whatsapp
110

ಸಚಿವ ಪಾರ್ಥ ಚಟರ್ಜಿಗೆ ಸಂಬಂಧಿಸಿದ ದಕ್ಷಿಣ ಕೋಲ್ಕತ್ತಾದ ಫ್ಲಾಟ್‌ನಿಂದ 21ಕೋಟಿ ರೂ. ಹಣವನ್ನು ಇಡಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಈ ಅಧಿಕೃತ ಹೇಳಿಕೆಯನ್ನು ನೀಡಿದೆ.

210

ಇಡಿ ಮೂಲಗಳ ಪ್ರಕಾರ ಅರ್ಪಿತಾ ಅವರ ಫ್ಲಾಟ್ ದಾಳಿ ಪಟ್ಟಿಯಲ್ಲಿ ಇರಲಿಲ್ಲ. ದಾಳಿಯ ಆರಂಭಿಕ ಪಟ್ಟಿಯಲ್ಲಿ ಅರ್ಪಿತಾ ಅವರ ಫ್ಲ್ಯಾಟ್‌ ಮೇಲೆ ದಾಳಿ ಮಾಡುವ ಇಂಗಿತವಿರಲಿಲ್ಲ. ಕೆಲವು ಸುಳಿವುಗಳನ್ನು ಪಡೆದ ನಂತರ, ಇಡಿ ಅವರ ಫ್ಲ್ಯಾಟ್‌ನ ಮೇಲೆ ದಾಳಿ ನಡೆಸಿದಾಗ ಈ ಹಣ ಪತ್ತೆಯಾಗಿದೆ.

310

ಅರ್ಪಿತಾ ಮುಖರ್ಜಿ ಎನ್ನುವ ಮಹಿಳೆ ವಾಸ ಮಾಡುತ್ತಿದ್ದ ಫ್ಲ್ಯಾಟ್‌ನಲ್ಲಿ ಇಷ್ಟು ಭಾರಿ ಪ್ರಮಾಣದ ಹಣ ಸಿಕ್ಕಿದೆ ಎಂದು ಹೇಳಲಾಗಿದೆ. ಅರ್ಪಿತಾ ಮುಖರ್ಜಿ ಪಾರ್ಥ ಮುಖರ್ಜಿ ಅವರ ಅತ್ಯಾಪ್ತೆ. ನಟಿ ಮತ್ತು ಮಾಡೆಲ್ ಕೂಡ ಆಗಿದ್ದಾರೆ. ಅರ್ಪಿತಾ ಒಡಿಶಾ ಚಿತ್ರರಂಗದಲ್ಲಿ ನಟಿಸಿದ್ದಾರೆ. ಅವರು ಅನೇಕ ತಮಿಳು ಚಿತ್ರಗಳಲ್ಲಿ ಕೆಲಸ ಮಾಡಿದ್ದಾರೆ.

410

ಐಷಾರಾಮಿ ಫ್ಲ್ಯಾಟ್‌ನಿಂದ 21 ಕೋಟಿ ರೂಪಾಯಿ ಹಣ ವಶಪಡಿಸಿಕೊಳ್ಳಲಾಗಿದ್ದು,ಈ ಫ್ಲ್ಯಾಟ್‌ನ ಮಾಲೀಕರು ಯಾರು ಎನ್ನುವುದನ್ನು ಇಡಿ ಪತ್ತೆ ಮಾಡುತ್ತಿದೆ. ಈ ಕುರಿತಂತೆ ಅರ್ಪಿತಾ ಮುಖರ್ಜಿ ಅವರನ್ನೂ ಬಂಧಿಸಿ ವಿಚಾರಣೆ ನಡೆಸುತ್ತಿದೆ.

510

ಅರ್ಪಿತಾ ಮುಖರ್ಜಿ ಸಚಿವ ಪಾರ್ಥ ಚಟರ್ಜಿ ಅವರ ಅತ್ಯಾಪ್ತರು ಎಂದು ಇಡಿ ಹೇಳಿಕೊಂಡಿದೆ. ಇಡಿ ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ ಡೈಮಂಡ್ ಸಿಟಿ ಕಾಂಪ್ಲೆಕ್ಸ್‌ನಲ್ಲಿರುವ ಪಾರ್ಥ್ ಅವರ ಮನೆಯಲ್ಲಿ ಕಾಣಿಸಿಕೊಂಡರು. ಇಡೀ ದಿನ ಮನೆಯ ಆವರಣವನ್ನು ಇಡಿ ಅಧಿಕಾರಿಗಳು ಜಾಲಾಡಿದ್ದಾರೆ.

610

ದಕ್ಷಿಣ ಕೋಲ್ಕತ್ತಾದ ನಿವಾಸಿ ಅರ್ಪಿತಾ ಅವರು ನಗರದ ಪ್ರಮುಖ ದುರ್ಗಾ ಪೂಜೆಯೊಂದಿಗೆ ಸಂಬಂಧ ಹೊಂದಿದ್ದಾರೆ. ಮೂಲಗಳ ಪ್ರಕಾರ, ಅವರು ಹಲವು ವರ್ಷಗಳಿಂದ ನಕ್ತಲಾ ಪೂಜೆಯನ್ನು ಪ್ರಚಾರ ಮಾಡುತ್ತಿದ್ದಾರೆ. ಬೆಹಾಲಾ ವೆಸ್ಟ್ ಸೆಂಟರ್‌ನಲ್ಲಿ ಪಾರ್ಥ ಚಟರ್ಜಿಯವರೊಂದಿಗೆ ಚುನಾವಣಾ ಪ್ರಚಾರವನ್ನೂ ಮಾಡುತ್ತಿದ್ದರು.

710

ವಿಶೇಷವೆಂದರೆ, ಪಾರ್ಥ ಚಟರ್ಜಿ ಕೂಡ ಆ ಪೂಜೆಯೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಪಾರ್ಥ ಅವರು ನಕ್ತಲಾ ಉದಯನ್ ಸಂಘದೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಅವರೇ ಈ ಪೂಜೆಯ ಅಧ್ಯಕ್ಷರು. ಪ್ರತಿ ವರ್ಷವೂ ಅದ್ದೂರಿಯಾಗಿ ಈ ಪೂಜೆಯನ್ನು ಮಾಡಲಾಗುತ್ತದೆ.

810

ಈ ದುರ್ಗಾ ಪೂಜೆಯ ಜಾಹೀರಾತಿನಲ್ಲೂ ಅರ್ಪಿತಾ ಕೆಲಸ ಮಾಡಿದ್ದರು. ಅದರೊಂದಿಗೆ ನಕ್ತಲಾ ಪೂಜೆಯ ಥೀಮ್‌ ಸಾಂಗ್‌ನಲ್ಲಿ ಇವರಿಬ್ಬರೂ ಆಕರ್ಷಕ ಫೋಟೋ ಶೂಟ್‌ನಲ್ಲೂ ಭಾಗಿಯಾಗಿದ್ದರು.

910

ಈ ಹಣವು ಶಿಕ್ಷಕರ ನೇಮಕಾತಿಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದ್ದು ಎಂದು ಇಡಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಮೂಲಗಳ ಪ್ರಕಾರ ಅರ್ಪಿತಾ ವಕೀಲಿ ವೃತ್ತಿ ಮಾಡತ್ತಿದ್ದಾರೆ. ಟಾಲಿಗಂಜ್‌ನ  ಎಲೈಟ್ ಹೌಸಿಂಗ್‌ನಲ್ಲಿ ವಾಸಿಸುತ್ತಿದ್ದಾರೆ. ಅರ್ಪಿತಾ ನಿಖರವಾಗಿ ಏನು ಮಾಡುತ್ತಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. 

1010

ಶುಕ್ರವಾರ ಬೆಳಗ್ಗೆ 8 ಗಂಟೆ ಸುಮಾರಿಗೆ ಇಡಿ ತನಿಖಾಧಿಕಾರಿಗಳು ಪಾರ್ಥ ಅವರ ಮನೆ ಸೇರಿದಂತೆ ಒಟ್ಟು 13 ಸ್ಥಳಗಳಲ್ಲಿ ಶೋಧ ಕಾರ್ಯ ಆರಂಭಿಸಿದ್ದಾರೆ. ಸಂಜೆ ಇಡಿ ತಂಡ ಅರ್ಪಿತಾ ಫ್ಲ್ಯಾಟ್ ಮೇಲೆ ದಾಳಿ ನಡೆಸಿತ್ತು. 20 ಕೋಟಿ ನಗದು ಮತ್ತು 20 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಜಾರಿ ನಿರ್ದೇಶನಾಲಯ
ತೃಣಮೂಲ ಕಾಂಗ್ರೆಸ್
ಪಶ್ಚಿಮ ಬಂಗಾಳ
Latest Videos
Recommended Stories
Recommended image1
ತೇಜಸ್ ಪತನ, ಕೊನೇ ಕ್ಷಣದವರೆಗೆ ನಿಯಂತ್ರಣಕ್ಕೆ ಪ್ರಯತ್ನಿಸಿದ ವಿಂಗ್ ಕಮಾಂಡರ್ ನಮಾಂಶ್ ಮೃತ
Recommended image2
ಸಂಸ್ಕೃತ "ಸತ್ತ ಭಾಷೆ" ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ಹೊಸ ವಿವಾದ! ಬಿಜೆಪಿ ಕೆಂಡಾಮಂಡಲ
Recommended image3
ತೇಜಸ್ ಯುದ್ಧ ವಿಮಾನ ಪತನದಲ್ಲಿ ಪೈಲೈಟ್ ಸಾವು, ಕೆಲವೇ ಸೆಕೆಂಡ್‌ಗಳಲ್ಲಿ ನಡೆಯಿತು ದುರಂತ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved