MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • Karnataka Districts
  • Kalaburagi
  • ಕಲಬುರಗಿ: ಅಫಜಲಪುರ ಮಾಜಿ ತಹಶೀಲ್ದಾರ್‌ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌

ಕಲಬುರಗಿ: ಅಫಜಲಪುರ ಮಾಜಿ ತಹಶೀಲ್ದಾರ್‌ಗೆ 4 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್‌

ಕಲಬುರಗಿಯ ಅಫಜಲಪುರದಲ್ಲಿ 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಮತ್ತು ಮತ್ತೊಬ್ಬರಿಗೆ ವಿಶೇಷ ನ್ಯಾಯಾಲಯವು ನಾಲ್ಕು ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 

2 Min read
Author : Santosh Naik
Published : Jul 10 2026, 03:43 PM IST
Share this Photo Gallery
  • FB
  • TW
  • Linkdin
  • Whatsapp
15
ತಹಶೀಲ್ದಾರ್ ಸೇರಿ ಇಬ್ಬರಿಗೆ 4 ವರ್ಷ ಜೈಲು ಮತ್ತು ದಂಡ
Image Credit : X

ತಹಶೀಲ್ದಾರ್ ಸೇರಿ ಇಬ್ಬರಿಗೆ 4 ವರ್ಷ ಜೈಲು ಮತ್ತು ದಂಡ

ಕಲಬುರಗಿ ಜಿಲ್ಲೆಯ ಅಫಜಲಪುರದಲ್ಲಿ 1 ಲಕ್ಷ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದ ಮಾಜಿ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಹಾಗೂ ಅವರಿಗೆ ಲಂಚದ ಹಣ ತಲುಪಿಸಿದ್ದ ಶಿವಾನಂದ ಜಮಖಂಡಿಗೆ ಕಲಬುರಗಿಯ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಇದರೊಂದಿಗೆ ಇಬ್ಬರಿಗೂ ತಲಾ 20 ಸಾವಿರ ರೂಪಾಯಿ ದಂಡವನ್ನು ವಿಧಿಸಿ ನ್ಯಾಯಾಧೀಶರಾದ ಜಿ.ಎಲ್. ಲಕ್ಷ್ಮೀನಾರಾಯಣ ಅವರು ಮಹತ್ವದ ಆದೇಶ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಪ್ರಕರಣದ ಹಿನ್ನೆಲೆ ಮತ್ತು ಲಂಚಕ್ಕೆ ಬೇಡಿಕೆ
Image Credit : X

ಪ್ರಕರಣದ ಹಿನ್ನೆಲೆ ಮತ್ತು ಲಂಚಕ್ಕೆ ಬೇಡಿಕೆ

2017ರಲ್ಲಿ ಅಫಜಲಪುರ ತಾಲ್ಲೂಕಿನ ಕರಜಗಿ ನಾಡ ಕಚೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಡೇಟಾ ಎಂಟ್ರಿ ಆಪರೇಟರ್ ಆಗಿ ಶಿವಲಿಂಗಯ್ಯ ಬಸಯ್ಯ ಮಠ ಅವರು ಕೆಲಸ ಮಾಡುತ್ತಿದ್ದರು. ಇವರು ಸಾರ್ವಜನಿಕರಿಂದ ಹಣ ಪಡೆಯುತ್ತಿದ್ದಾರೆ ಎಂಬ ದೂರು ತಹಶೀಲ್ದಾರ್ ಶಶಿಕಲಾ ಅವರಿಗೆ ಬಂದಿತ್ತು. ಈ ಪ್ರಕರಣದಲ್ಲಿ ತಮಗೆ ಸಹಾಯ ಮಾಡುವಂತೆ ಶಿವಲಿಂಗಯ್ಯ ಅವರು ಕೋರಿದಾಗ, ತಹಶೀಲ್ದಾರ್ ಶಶಿಕಲಾ ಅವರು 1 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ, ಹಣವನ್ನು ಶಿವಾನಂದ ಜಮಖಂಡಿಗೆ ತಲುಪಿಸಬೇಕು, ಇಲ್ಲದಿದ್ದರೆ ಕೆಲಸಕ್ಕೆ ಬೇರೆಯವರನ್ನು ನೇಮಿಸಿಕೊಳ್ಳಲಾಗುವುದು ಎಂದು ಬೆದರಿಕೆ ಹಾಕಿದ್ದರು.

Related Articles

Related image1
ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಬಸ್ ಚಾಲನೆ: ಕಲಬುರಗಿ ಕೆಕೆಆರ್‌ಟಿಸಿ ಚಾಲಕ ಅಮಾನತು, ತಾಂತ್ರಿಕ ಸಿಬ್ಬಂದಿಗೂ ಶಾಕ್!
Related image2
ಕಲಬುರಗಿ: ನಿವೃತ್ತ ಇಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ. ಬ್ಯಾಂಕ್ ಲಾಕರ್‌ನಲ್ಲಿ ₹9 ಲಕ್ಷ ಹಳೆಯ ನೋಟು, 20 ತೊಲೆ ಚಿನ್ನ ಪತ್ತೆ!
35
ಲೋಕಾಯುಕ್ತ ಪೊಲೀಸರ ದಾಳಿ ಮತ್ತು ಬಂಧನ
Image Credit : X

ಲೋಕಾಯುಕ್ತ ಪೊಲೀಸರ ದಾಳಿ ಮತ್ತು ಬಂಧನ

ಲಂಚದ ಬೇಡಿಕೆಯಿಂದ ಬೇಸತ್ತ ಶಿವಲಿಂಗಯ್ಯ ಅವರು ಈ ಕುರಿತು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ, 2017ರ ಆಗಸ್ಟ್ 31ರಂದು ಶಿವಲಿಂಗಯ್ಯ ಅವರಿಂದ ಲಂಚದ ಹಣವನ್ನು ಪಡೆದ ಶಿವಾನಂದ ಜಮಖಂಡಿ, ಅದನ್ನು ತಹಶೀಲ್ದಾರ್ ಶಶಿಕಲಾ ಅವರಿಗೆ ತಲುಪಿಸಲು ಹೋಗಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ರೆಡ್‌ಹ್ಯಾಂಡ್ ಆಗಿ ಬಂಧಿಸಿದ್ದರು. ಲೋಕಾಯುಕ್ತ ಡಿವೈಎಸ್‌ಪಿ ಸಂತೋಷ ಬನ್ನಟ್ಟಿ ಪ್ರಕರಣ ದಾಖಲಿಸಿಕೊಂಡಿದ್ದರು.

45
ಕಡ್ಡಾಯ ನಿವೃತ್ತಿ ನೀಡಿದ್ದ ಸರ್ಕಾರ
Image Credit : X

ಕಡ್ಡಾಯ ನಿವೃತ್ತಿ ನೀಡಿದ್ದ ಸರ್ಕಾರ

ಲೋಕಾಯುಕ್ತ ಬಲೆಗೆ ಬಿದ್ದಿದ್ದ ತಹಶೀಲ್ದಾರ್ ಶಶಿಕಲಾ ಪಾದಗಟ್ಟಿ ಅವರು ಪ್ರಸ್ತುತ ಯಾದಗಿರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆದರೆ, ಈ ಭ್ರಷ್ಟಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಕಳೆದ ವಾರವಷ್ಟೇ ರಾಜ್ಯ ಸರ್ಕಾರ ಅವರಿಗೆ ಕಡ್ಡಾಯ ನಿವೃತ್ತಿಗೆ (Compulsory Retirement) ಸೂಚಿಸಿ, ಕೆಲಸದಿಂದ ಬಿಡುಗಡೆ ಮಾಡಿ ಆದೇಶ ಹೊರಡಿಸಿತ್ತು.

55
ತನಿಖೆ ಮತ್ತು ನ್ಯಾಯಾಲಯದ ಅಂತಿಮ ತೀರ್ಪು
Image Credit : X

ತನಿಖೆ ಮತ್ತು ನ್ಯಾಯಾಲಯದ ಅಂತಿಮ ತೀರ್ಪು

ಈ ಗಂಭೀರ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಅಧಿಕಾರಿ ಕೃಷ್ಣಪ್ಪ ಕಲ್ಲದೇವರ ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು. ನ್ಯಾಯಾಲಯದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ (SPP) ಅಶೋಕ ಎಸ್. ಚಾಂದಕವಠ ಅವರು ಸರ್ಕಾರದ ಪರವಾಗಿ ಪ್ರಬಲ ವಾದ ಮಂಡಿಸಿದ್ದರು. ಸುದೀರ್ಘ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ವಿಶೇಷ ನ್ಯಾಯಾಲಯವು ಇಬ್ಬರೂ ಆರೋಪಿಗಳು ಅಪರಾಧಿಗಳು ಎಂದು ತೀರ್ಪು ನೀಡಿ ಜೈಲು ಶಿಕ್ಷೆ ಪ್ರಕಟಿಸಿದೆ.

About the Author

SN
Santosh Naik
ನಾನು ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಮುಖ್ಯ ಉಪಸಂಪಾದಕ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳದವನು. 13 ವರ್ಷಗಳಿಂದಲೂ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ. ಹೊಸದಿಗಂತದ ಮೂಲಕ ಮಾಧ್ಯಮ ಜಗತ್ತಿಗೆ ಕಾಲಿಟ್ಟವನು. ಕ್ರೀಡಾ ವರದಿಯಲ್ಲಿ ಹೆಚ್ಚು ಆಸಕ್ತಿ. ಆದರೆ, ಡಿಜಿಟಲ್ ಮಾಧ್ಯಮ ಎಲ್ಲ ವಿಷಯದಲ್ಲೂ ಪಳಗಿಸಿದೆ. ವಿಜಯವಾಣಿ, ಸ್ಟಾರ್‌ ಸ್ಪೋರ್ಟ್ಸ್‌ನಲ್ಲಿ ಕೆಲಸ ಮಾಡಿದ್ದೇನೆ. ಓದು, ಪ್ರವಾಸ ನೆಚ್ಚಿನ ಹವ್ಯಾಸ
ಕಲಬುರಗಿ
ಸುದ್ದಿ
ಕರ್ನಾಟಕ ಸುದ್ದಿ
ನ್ಯಾಯಾಲಯ

Latest Videos
Recommended Stories
Recommended image1
ಮಹಾಪ್ರಭು ಮೋದಿ ಸ್ವಶಕ್ತಿ ಮೇಲೆ ನಿಂತಿಲ್ಲ, ಪವನ್-ನಿತೀಶ್ ಆಸರೆ ಬೇಕು -ಪ್ರಕಾಶ್ ರಾಜ್ ಮತ್ತೆ ತೀವ್ರ ವಾಗ್ದಾಳಿ
Recommended image2
ಅಂದು ಮನೆಗಾಗಿ 1 ಹಸು ಖರೀದಿ, ಇಂದು 100 ಎಮ್ಮೆಗಳ ಒಡತಿ ಕಲಬುರಗಿ ಮಹಿಳೆ; Dairy Farming
Recommended image3
ಕುಡಿದು ‘ಯಾರಿವಳು ಯಾರಿವಳು’ ಎಂದು ಹಾಡಿದ ಮರುಳಾರಾಧ್ಯ ಶ್ರೀ! ಹಾಡು ಹಾಡಿದ ಖಾವಿಧಾರಿ
Related Stories
Recommended image1
ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಬಸ್ ಚಾಲನೆ: ಕಲಬುರಗಿ ಕೆಕೆಆರ್‌ಟಿಸಿ ಚಾಲಕ ಅಮಾನತು, ತಾಂತ್ರಿಕ ಸಿಬ್ಬಂದಿಗೂ ಶಾಕ್!
Recommended image2
ಕಲಬುರಗಿ: ನಿವೃತ್ತ ಇಂಜಿನಿಯರ್ ಮೇಲೆ ಲೋಕಾಯುಕ್ತ ದಾಳಿ. ಬ್ಯಾಂಕ್ ಲಾಕರ್‌ನಲ್ಲಿ ₹9 ಲಕ್ಷ ಹಳೆಯ ನೋಟು, 20 ತೊಲೆ ಚಿನ್ನ ಪತ್ತೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved