MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Covid Vaccine: ಬೆಂಗ್ಳೂರಲ್ಲಿ ಇನ್ಮುಂದೆ 24/7 ಲಸಿಕೆ ಲಭ್ಯ..!

Covid Vaccine: ಬೆಂಗ್ಳೂರಲ್ಲಿ ಇನ್ಮುಂದೆ 24/7 ಲಸಿಕೆ ಲಭ್ಯ..!

ಬೆಂಗಳೂರು(ಜ.02):  ಸಂಭಾವ್ಯ ಕೋವಿಡ್‌ ಮೂರನೇ ಅಲೆ ಎದುರಿಸಲು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದು, ಈ ನಿಟ್ಟಿನಲ್ಲಿ 24/7 ಕಾರ್ಯನಿರ್ವಹಿಸುವ ಲಸಿಕಾ ಕೇಂದ್ರವನ್ನು(Vaccine Center) ನಗರದಲ್ಲಿ ಆರಂಭಿಸಲಾಗಿದೆ.

1 Min read
Kannadaprabha News | Asianet News
Published : Jan 02 2022, 05:46 AM IST| Updated : Jan 02 2022, 05:47 AM IST
Share this Photo Gallery
  • FB
  • TW
  • Linkdin
  • Whatsapp
15

ಶನಿವಾರ ಸುಬ್ರಹ್ಮಣ್ಯ ನಗರ ಮತ್ತು ವೈಯಾಲಿ ಕಾವಲ್‌ನಲ್ಲಿ ನೂತನ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಮಲ್ಲೇಶ್ವರ ಕೆ.ಸಿ.ಜನರಲ್‌ ಆಸ್ಪತ್ರೆ ಎದುರಿನ ಸರ್ಕಾರಿ ಶಾಲಾ ಆವರಣದಲ್ಲಿ 24/7 ಕೋವಿಡ್‌ ಲಸಿಕಾ ಕೇಂದ್ರ(24/7 Covid Vaccine Center) ಉದ್ಘಾಟಿಸಿದ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌.ಅಶ್ವತ್ಥ ನಾರಾಯಣ(CN Ashwathnarayan)

25

ಸೋಮವಾರದಿಂದ 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಅಭಿಯಾನ(Vaccination campaign for children) ಆರಂಭವಾಗಲಿದೆ. ಜೊತೆಗೆ ಆರೋಗ್ಯ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್‌ ಡೋಸ್‌(Booster Dose) ನೀಡಲಾಗುವುದು. ಇದಕ್ಕಾಗಿ ವೈದ್ಯರು, ಆರೋಗ್ಯ ಸಿಬ್ಬಂದಿ ಮತ್ತು ಔಷಧಿಗಳ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ ಸಚಿವರು 

35

ಕಳೆದೊಂದು ವಾರದಿಂದ ಕೋವಿಡ್‌(Covid19) ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ಮೂರನೇ ಅಲೆ ಎಂದು ಹೇಳಲು ಸಾಧ್ಯವಿಲ್ಲ. ಈ ಕುರಿತು ಇನ್ನೂ ಸ್ವಲ್ಪ ದಿನ ಕಾದು ನೋಡಬೇಕಿದೆ. ಆದರೂ ಮೂರನೇ ಅಲೆ ಎದುರಿಸಲು ಅಗತ್ಯ ಸಿದ್ಧತೆಯನ್ನು ರಾಜ್ಯ ಸರ್ಕಾರ(Government of Karnataka) ಪ್ರಾರಂಭಿಸಿದೆ ಎಂದ ಅಶ್ವತ್ಥ ನಾರಾಯಣ

45

ಕಾಡುಮಲ್ಲೇಶ್ವರ, ಸುಬ್ರಹ್ಮಣ್ಯ ನಗರ ವಾರ್ಡಿಗೆ ಹೊಸದಾಗಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮಂಜೂರು ಮಾಡಿದ್ದು, ವಿಳಂಬ ಮಾಡದೆ ಆರೋಗ್ಯ ಸೇವೆಗಳನ್ನು ನೀಡಬೇಕೆಂಬ ಉದ್ದೇಶದಿಂದ ತಾತ್ಕಾಲಿಕ ಕಟ್ಟಡದಲ್ಲಿ ಯುಪಿಎಚ್‌ಡಿ ಆರಂಭಿಸಲಾಗಿದೆ ಎಂದು ತಿಳಿಸಿದ ಸಚಿವರು.

55

ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಹೊಸ ಕಟ್ಟಡ ನಿರ್ಮಾಣ ಯೋಜನೆ ಸಿದ್ಧವಿದ್ದು, ಶೀಘ್ರವೇ ಕಾಮಗಾರಿ ಪ್ರಾರಂಭವಾಗಲಿದೆ. ಆರೋಗ್ಯ ಕೇಂದ್ರದಲ್ಲಿ ಎಂಬಿಬಿಎಸ್‌ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ಪ್ರತಿದಿನ ಲಭ್ಯವಿದ್ದು, ಆರೋಗ್ಯ ಸೇವೆಗಳನ್ನು ನೀಡಲಿದ್ದಾರೆ. ಮುಂದಿನ ದಿನಗಳಲ್ಲಿ ಪ್ರಯೋಗಾಲಯ, ಎಕ್ಸ್‌-ರೇ, ದಂತ ವೈದ್ಯಕೀಯ, ಕಣ್ಣಿನ ಹಾಗೂ ರೆಟಿನಾ ತಪಾಸಣೆ, ಫಿಜಿಯೋ ತೆರಪಿ, ಲಸಿಕಾ ಕೇಂದ್ರ, ಜನೌಷಧಿ ಹಾಗೂ ತಜ್ಞ ವೈದ್ಯರ ವರ್ಚುವಲ್‌ ಕ್ಲಿನಿಕ್‌ ಸೌಲಭ್ಯಗಳನ್ನು ಹೊಸ ಕಟ್ಟಡದಲ್ಲಿ ಒದಗಿಸಲಾಗುವುದು. ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಎಲ್ಲ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುವುದು ಎಂದು ಮಾಹಿತಿ ನೀಡಿದ ಪಶ್ಚಿಮ ವಲಯ ಜಂಟಿ ಆಯುಕ್ತ ಬಿ.ಶಿವಸ್ವಾಮಿ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬೆಂಗಳೂರು

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved