MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಗೆಳೆಯರ ಶವ ನೋಡಿ ಶವಾಗಾರದಿಂದ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ಸಾವನ್ನಪ್ಪಿದ ಸ್ನೇಹಿತ

ಗೆಳೆಯರ ಶವ ನೋಡಿ ಶವಾಗಾರದಿಂದ ಹೊರ ಬರುತ್ತಿದ್ದಂತೆ ಹೃದಯಾಘಾತದಿಂದ ಸಾವನ್ನಪ್ಪಿದ ಸ್ನೇಹಿತ

ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಇಬ್ಬರು ಸ್ನೇಹಿತರು ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ ಮೃತಪಟ್ಟ ಗೆಳೆಯರ ಶವವನ್ನು ನೋಡಲು ಬಂದ ಮತ್ತೋರ್ವ ಸ್ನೇಹಿತ, ಆಘಾತದಿಂದ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

1 Min read
Author : Kannadaprabha News
Published : Jan 22 2026, 10:04 AM IST
Share this Photo Gallery
  • FB
  • TW
  • Linkdin
  • Whatsapp
14
ಹೃದಯ ವಿದ್ರಾವಕ ಘಟನೆ
Image Credit : Asianet News

ಹೃದಯ ವಿದ್ರಾವಕ ಘಟನೆ

ಅಪಘಾತದಲ್ಲಿ ಮೃತ ಗೆಳೆಯರ ಶವ ನೋಡಿ ಮತ್ತೋರ್ವ ಸ್ನೇಹಿತ ಹೃದಯಾಘಾತದಿಂದ ನಿಧನವಾಗಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರು ದಕ್ಷಿಣ ಕನ್ನಡ ಜಿಲ್ಲೆಯ ಮಾಗಡಿಯಲ್ಲಿ ನಡೆದಿದೆ.

24
ಬೈಕ್ ಅಪಘಾತದಲ್ಲಿ ಗೆಳೆಯರ ಸಾವು
Image Credit : our own

ಬೈಕ್ ಅಪಘಾತದಲ್ಲಿ ಗೆಳೆಯರ ಸಾವು

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ತೀವ್ರವಾಗಿ ಗಾಯಗೊಂಡ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿ ತಾಲೂಕಿನ ಬೆಟ್ಟದಾಸಿ ಪಾಳ್ಯದ ಬಳಿ ನಡೆದಿದೆ. ಇದೇ ವೇಳೆ, ಶವಾಗಾರದಲ್ಲಿ ಇಟ್ಟಿದ್ದ ಮೃತದೇಹ ನೋಡಿದ ಸ್ನೇಹಿತ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾನೆ.

Related Articles

Related image1
Mandya News: ಸಾಲಬಾಧೆಯಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮ*ಹತ್ಯೆ; ತಾಯಿಗೆ ಹೃದಯಾಘಾತ
Related image2
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್
34
ಮೂವರ ಪೈಕಿ ಇಬ್ಬರ ಸಾವು
Image Credit : our own

ಮೂವರ ಪೈಕಿ ಇಬ್ಬರ ಸಾವು

ಮೂವರು ಸ್ನೇಹಿತರು ಬೈಕ್‌ನಲ್ಲಿ ಮಾಗಡಿಗೆ ತೆರಳುತ್ತಿದ್ದರು. ಬೆಟ್ಟದಾಸಿ ಪಾಳ್ಯದ ಬಳಿ ವೇಗವಾಗಿ ಬಂದ ಬೈಕ್‌, ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತು. ಡಿಕ್ಕಿ ರಭಸಕ್ಕೆ ಮಂಜುನಾಥ್ (33), ನಾಗರಾಜು (55) ಸ್ಥಳದಲ್ಲೇ ಮೃತಪಟ್ಟರು. ಬೈಕ್‌ನಲ್ಲಿದ್ದ ಮತ್ತೋರ್ವ ಸತೀಶ್ ಎಂಬಾತನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಇದನ್ನೂ ಓದಿ: ಕಟಕಟೆಯಲ್ಲಿ ಸಾಕ್ಷಿ ಹೇಳುತ್ತಿದ್ದ ವ್ಯಕ್ತಿ, ಪಲ್ಲಕ್ಕಿ ಹೊತ್ತಿದ್ದ ಅರ್ಚಕ ಹೃದಯಾಘಾತದಿಂದ ಸಾವು

44
ಶವಾಗಾರದಿಂದ ಹೊರ ಬರುತ್ತಲೇ ಸಾವು
Image Credit : Getty

ಶವಾಗಾರದಿಂದ ಹೊರ ಬರುತ್ತಲೇ ಸಾವು

ಮೃತದೇಹಗಳನ್ನು ಮಾಗಡಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿತ್ತು. ಈ ಮಧ್ಯೆ, ಸ್ನೇಹಿತರ ಮೃತದೇಹ ನೋಡಲು ಬಂದ ಶೇಖರ್‌ ಎಂಬಾತ ಮೃತದೇಹ ನೋಡಿ ಹೊರ ಬರುತ್ತಿದ್ದಂತೆ ಹೃದಯಾಘಾತಕ್ಕೆ ಒಳಗಾದರು. ತಕ್ಷಣವೇ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಇದನ್ನೂ ಓದಿ: ಧೂಮಪಾನಕ್ಕಿಂತಲೂ ಇದು ಡೇಂಜರ್ : ಸಾವನ್ನಪ್ಪಿದವರು ಅಧಿಕ

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಹೃದಯಾಘಾತ
ರಾಮನಗರ
ಸ್ನೇಹ

Latest Videos
Recommended Stories
Recommended image1
ಕಾಮಿಡಿ ಕಿಲಾಡಿಗಳು ಶೋನಲ್ಲಿ ಹಿಂದು ದೇವತೆಗಳ ಬಗ್ಗೆ ಅವಹೇಳನಕ್ಕೆ ‘ಹೈ’ ಕಿಡಿ
Recommended image2
ಗರ್ಭಗುಡಿ ಬಳಿ, ಚಾಮುಂಡಿಬೆಟ್ಟದ ತುದಿಯಲ್ಲಿ ಕಾಮಗಾರಿಯ ಆತಂಕ: ಮೈಸೂರಿನಲ್ಲಿ ಪ್ರತಿಭಟನೆ
Recommended image3
ಬೆಂಗಳೂರು ನಗರದಲ್ಲಿ ಶೀಘ್ರವೇ ಪೇ ಆ್ಯಂಡ್‌ ಪಾರ್ಕ್‌ ಜಾರಿ
Related Stories
Recommended image1
Mandya News: ಸಾಲಬಾಧೆಯಿಂದ ಕುತ್ತಿಗೆ ಕೊಯ್ದುಕೊಂಡು ಆತ್ಮ*ಹತ್ಯೆ; ತಾಯಿಗೆ ಹೃದಯಾಘಾತ
Recommended image2
ವಿಮಾನದಲ್ಲಿ ಹೃದಯಾಘಾತ- ಅಮೆರಿಕ ಪ್ರಜೆಯ ಜೀವ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved