ತಗ್ಗುಪ್ರದೇಶಗಳ ಮನೆ, ತೋಟ, ಕೃಷಿಗದ್ದೆಗಳು ಜಲಾವೃತ: ಇಲ್ಲಿವೆ ಫೊಟೋಸ್
ಸತತ ಮಳೆಗೆ ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬೆಳ್ವೆ, ಗಂಗೊಳ್ಳಿ, ತ್ರಾಸಿ, ಮರವಂತೆ, ನಾವುಂದ, ಹಕ್ಲಾಡಿ ಸೇರಿದಂತೆ ಎಲ್ಲ ಕಡೆಗಳಲ್ಲಿ ಗದ್ದೆಗಳಲ್ಲಿ ನೀರು ತುಂಬಿಕೊಂಡಿದ್ದು, ತಗ್ಗು ಪ್ರದೇಶಗಳಲ್ಲಿರುವ ರಸ್ತೆ, ತೋಟ ಹಾಗೂ ಮನೆಗಳಿಗೂ ನೀರು ನುಗ್ಗಿದೆ. ಇಲ್ಲಿವೆ ಫೋಟೋಸ್

<p>Kundapura Rain</p>
Kundapura Rain
<p>Kundapura Rain</p>
Kundapura Rain
<p>Kundapura Rain</p>
Kundapura Rain
<p>ಬೈಂದೂರು ಹಾಗೂ ಕುಂದಾಪುರ ಭಾಗಗಳಲ್ಲಿ ಮಂಗಳವಾರದಿಂದ ಬಿರುಸಿನ ಮಳೆಯಾಗುತ್ತಿದೆ.</p>
ಬೈಂದೂರು ಹಾಗೂ ಕುಂದಾಪುರ ಭಾಗಗಳಲ್ಲಿ ಮಂಗಳವಾರದಿಂದ ಬಿರುಸಿನ ಮಳೆಯಾಗುತ್ತಿದೆ.
<p>ತಗ್ಗುಪ್ರದೇಶಗಳು ಜಲಾವೃತಗೊಂಡು ಕೆಲವೆಡೆ ಕೃತಕ ನೆರೆ ಸೃಷ್ಟಿಯಾಗಿದೆ.</p>
ತಗ್ಗುಪ್ರದೇಶಗಳು ಜಲಾವೃತಗೊಂಡು ಕೆಲವೆಡೆ ಕೃತಕ ನೆರೆ ಸೃಷ್ಟಿಯಾಗಿದೆ.
<p>Kundapura Rain</p>
Kundapura Rain
<p>ಎರಡು ಮೂಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರಿಮಳೆಗೆ ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬೆಳ್ವೆ, ಗಂಗೊಳ್ಳಿ, ತ್ರಾಸಿ, ಮರವಂತೆ, ನಾವುಂದ, ಹಕ್ಲಾಡಿ ಸೇರಿದಂತೆ ಎಲ್ಲ ಕಡೆಗಳಲ್ಲಿ ಗದ್ದೆಗಳಲ್ಲಿ ನೀರು ತುಂಬಿಕೊಂಡಿದ್ದು, ತಗ್ಗು ಪ್ರದೇಶಗಳಲ್ಲಿರುವ ರಸ್ತೆ, ತೋಟ ಹಾಗೂ ಮನೆಗಳಿಗೂ ನೀರು ನುಗ್ಗಿದೆ.</p>
ಎರಡು ಮೂಡು ದಿನಗಳಿಂದ ಎಡಬಿಡದೆ ಸುರಿಯುತ್ತಿರುವ ಭಾರಿಮಳೆಗೆ ಕುಂದಾಪುರ, ತಲ್ಲೂರು, ಹೆಮ್ಮಾಡಿ, ಬೆಳ್ವೆ, ಗಂಗೊಳ್ಳಿ, ತ್ರಾಸಿ, ಮರವಂತೆ, ನಾವುಂದ, ಹಕ್ಲಾಡಿ ಸೇರಿದಂತೆ ಎಲ್ಲ ಕಡೆಗಳಲ್ಲಿ ಗದ್ದೆಗಳಲ್ಲಿ ನೀರು ತುಂಬಿಕೊಂಡಿದ್ದು, ತಗ್ಗು ಪ್ರದೇಶಗಳಲ್ಲಿರುವ ರಸ್ತೆ, ತೋಟ ಹಾಗೂ ಮನೆಗಳಿಗೂ ನೀರು ನುಗ್ಗಿದೆ.
<p>ಸೌಪರ್ಣಿಕಾ ನದಿ ತುಂಬಿ ಹರಿಯುತ್ತಿದ್ದು, ನಾವುಂದ, ಬಡಾಕೆರೆ, ಪಡುಕೋಣೆ, ಅರೆಹೊಳೆ, ಸೇನಾಪುರ, ಕೆಲಬದಿ, ಮತ್ತಿತರ ಕಡೆಗಳಲ್ಲಿ ಹಲವು ಮನೆಗಳ ಆಸುಪಾಸಿನಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.</p>
ಸೌಪರ್ಣಿಕಾ ನದಿ ತುಂಬಿ ಹರಿಯುತ್ತಿದ್ದು, ನಾವುಂದ, ಬಡಾಕೆರೆ, ಪಡುಕೋಣೆ, ಅರೆಹೊಳೆ, ಸೇನಾಪುರ, ಕೆಲಬದಿ, ಮತ್ತಿತರ ಕಡೆಗಳಲ್ಲಿ ಹಲವು ಮನೆಗಳ ಆಸುಪಾಸಿನಲ್ಲಿ ಕೃತಕ ನೆರೆ ಸೃಷ್ಟಿಯಾಗಿದೆ.
<p>ನಾವುಂದ, ಚಿಕ್ಕಳ್ಳಿ, ಕಡಿಕೆ, ನಾಡ ಮತ್ತಿತರ ಕಡೆಗಳ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ.</p>
ನಾವುಂದ, ಚಿಕ್ಕಳ್ಳಿ, ಕಡಿಕೆ, ನಾಡ ಮತ್ತಿತರ ಕಡೆಗಳ ಗದ್ದೆಗಳು ಸಂಪೂರ್ಣ ಜಲಾವೃತಗೊಂಡಿವೆ.
<p>ಈ ಪರಿಸರದಲ್ಲಿ 40-50 ಮಂದಿ ಕೃಷಿಕರ ಎಕರೆಗಟ್ಟಲೆ ಗದ್ದೆಗಳು ಸಂಪೂರ್ಣ ಮುಳುಗಡೆಯಾಗಿದ್ದು, ಹೆಚ್ಚಿನ ಗದ್ದೆಗಳಲ್ಲಿ ಈಗಷ್ಟೇ ನಾಟಿ ಕಾರ್ಯ ಮುಗಿದಿತ್ತು.</p>
ಈ ಪರಿಸರದಲ್ಲಿ 40-50 ಮಂದಿ ಕೃಷಿಕರ ಎಕರೆಗಟ್ಟಲೆ ಗದ್ದೆಗಳು ಸಂಪೂರ್ಣ ಮುಳುಗಡೆಯಾಗಿದ್ದು, ಹೆಚ್ಚಿನ ಗದ್ದೆಗಳಲ್ಲಿ ಈಗಷ್ಟೇ ನಾಟಿ ಕಾರ್ಯ ಮುಗಿದಿತ್ತು.
<p>ಕುಂದಾಪುರ, ಬೈಂದೂರು ಭಾಗದ ವಾರಾಹಿ, ಸೌಪರ್ಣಿಕಾ, ಕುಬ್ಜಾ, ಚಕ್ರ, ಸುಮನಾವತಿ ನದಿಗಳು ತುಂಬಿ ಹರಿಯುತ್ತಿದೆ.</p>
ಕುಂದಾಪುರ, ಬೈಂದೂರು ಭಾಗದ ವಾರಾಹಿ, ಸೌಪರ್ಣಿಕಾ, ಕುಬ್ಜಾ, ಚಕ್ರ, ಸುಮನಾವತಿ ನದಿಗಳು ತುಂಬಿ ಹರಿಯುತ್ತಿದೆ.
<p>ಕೋಡಿ, ಗಂಗೊಳ್ಳಿ, ಮರವಂತೆ, ತ್ರಾಸಿ ಭಾಗದ ಕಡಲ ತೀರದಲ್ಲಿ ಕಡಲಬ್ಬರ ಜೋರಾಗಿದ್ದು, ಕಂಚುಗೋಡು, ಮರವಂತೆ ಮತ್ತಿತರ ಕಡೆಗಳಲ್ಲಿ ಕಡಲ್ಕೊರೆತ ಉಂಟಾಗಿದೆ.</p>
ಕೋಡಿ, ಗಂಗೊಳ್ಳಿ, ಮರವಂತೆ, ತ್ರಾಸಿ ಭಾಗದ ಕಡಲ ತೀರದಲ್ಲಿ ಕಡಲಬ್ಬರ ಜೋರಾಗಿದ್ದು, ಕಂಚುಗೋಡು, ಮರವಂತೆ ಮತ್ತಿತರ ಕಡೆಗಳಲ್ಲಿ ಕಡಲ್ಕೊರೆತ ಉಂಟಾಗಿದೆ.
<p>ತೀರದ ಹತ್ತಾರು ಮನೆಗಳ ನಿವಾಸಿಗಳು ಆತಂಕದಲ್ಲಿದ್ದಾರೆ.</p>
ತೀರದ ಹತ್ತಾರು ಮನೆಗಳ ನಿವಾಸಿಗಳು ಆತಂಕದಲ್ಲಿದ್ದಾರೆ.