MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಆಶೀಕ್ ಜೊತೆ ಪರಾರಿಯಾಗಿರುವ ಶಂಕೆ; ಮಹಿಳೆ ಗಂಡನಿಂದ ದೂರು, ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಆಶೀಕ್ ಜೊತೆ ಪರಾರಿಯಾಗಿರುವ ಶಂಕೆ; ಮಹಿಳೆ ಗಂಡನಿಂದ ದೂರು, ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಚಿಕ್ಕಮಗಳೂರಿನಲ್ಲಿ 22 ವರ್ಷದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದು, ಪತಿ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿ ರಸ್ತೆ ತಡೆ ನಡೆಸಿದರು.

1 Min read
Mahmad Rafik
Published : Aug 14 2025, 03:41 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಚಿಕ್ಕಮಗಳೂರು: 22 ವರ್ಷದ ಮಹಿಳೆ ಸಂಧ್ಯಾ (ಹೆಸರು ಬದಲಾಯಿಸಲಾಗಿದೆ) ಎಂಬವರು ಆಶೀಕ್ ಎಂಬಾತನ ಜೊತೆ ಹೋಗಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ಮಹಿಳೆಯ ಗಂಡ ಗಣೇಶ್ (ಹೆಸರು ಬದಲಾಯಿಸಲಾಗಿದೆ) ಬಣಕಲ್‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

25
Image Credit : Asianet News

ಎರಡು ವರ್ಷದ ಹಿಂದೆ 22 ವರ್ಷದ ಸಂಧ್ಯಾ ಮದುವೆಯಾಗಿತ್ತು. ಇದೀಗ ದಿಢೀರ್ ಅಂತಾ ಸಂಧ್ಯಾ ಮನೆಯಿಂದ ನಾಪತ್ತೆಯಾಗಿದ್ದಾರೆ. ಸಂಧ್ಯಾ ಪತಿ ಗಣೇಶ್ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

Related Articles

Related image1
ಕಾಣೆಯಾಗಿಲ್ಲ, ಇಷ್ಟಪಟ್ಟವನೊಂದಿಗೆ ಮದುವೆ ಮಾಡ್ಕೊಂಡಿದ್ದೀನಿ: ಮಶಾಕ್ ಪಕ್ಕದಲ್ಲಿ ಕುಳಿತು ಹೇಳಿದ ಪಲ್ಲವಿ
Related image2
ಲವ್ ಜಿಹಾದ್ ನಂತ್ರ ಪುರುಷರ ಮೇಲೆ ನಂಬಿಕೆ ಹೋಯ್ತು, ಪರಸ್ಪರ ಮದುವೆಯಾದ ಹುಡುಗಿಯರು
35
Image Credit : Asianet News

ಈ ವಿಷಯ ತಿಳಿಯುತ್ತಿದ್ದಂತೆ ಬಣಕಲ್ ಪೊಲೀಸ್ ಠಾಣೆ ಮುಂದೆ ಗ್ರಾಮಸ್ಥರು ಮತ್ತು ಹಿಂದೂ ಸಂಘಟನೆಯ ಮುಖಂಡರು, ಕಾರ್ಯಕರ್ತರು ಯುವಕ ಆಶೀಕ್ ವಿರುದ್ಧ ಆಕ್ರೋಶ ಹೊರಹಾಕಿದರು. ಪೊಲೀಸರು ಮುಂಜಾಗ್ರತ ಕ್ರಮವಾಗಿ ಗೇಟ್ ಹಾಕಿದ್ದರಿಂದ ಪ್ರತಿಭಟನಾಕಾರರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

45
Image Credit : Asianet News

ಇದೇ ವೇಳೆ ಪ್ರತಿಭಟನಾನಿರತರು ರಾಷ್ಟ್ರೀಯ ಹೆದ್ದಾರಿ ರಸ್ತೆ ತಡೆ ನಡೆಸಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಯ್ತು. ಇದರಿಂದ ವಾಹನ ಸಂಚಾರದಲ್ಲಿ ತೀವ್ರ ಅಸ್ರವ್ಯಸ್ಥ ಉಂಟಾಗಿ ಸವಾರರು ಪರದಾಡುವಂತಾಯ್ತು. ಹಿಂದೂ ಸಂಘಟನೆ ಮತ್ತು ಗ್ರಾಮಸ್ಥರ ಮನವೊಲಿಸಲು ಪೊಲೀಸರು ಹರಸಾಹಸಪಟ್ಟರು. ಪೊಲೀಸರು ಸೂಕ್ತ ಕ್ರಮದ ಭರವಸೆ ನೀಡಿದ ಹಿನ್ನೆಲೆ ರಸ್ತೆ ತಡೆಯನ್ನು ಹಿಂಪಡೆದುಕೊಂಡರು

55
Image Credit : Asianet News

ಮಳೆ ನಡುವೆಯೂ ಅಪಾರ ಸಂಖ್ಯೆಯಲ್ಲಿ ಪ್ರತಿಭಟನಾಕಾರರು ಸೇರಿದ್ದರು. ಛತ್ರಿ ಹಿಡಿದುಕೊಂಡೇ ಜನರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಲವ್ ಜಿಹಾದ್
ಚಿಕ್ಕಮಗಳೂರು
ಸಂಬಂಧಗಳು
ಹಿಂದೂ ಸಂಘಟನೆ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved