MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕಣ್ಣಿಲ್ಲದವರಿಗೆ ನೇತ್ರದಾನ ಮಾಡಿ: ಸಚಿವ ಸುಧಾಕರ್‌

ಕಣ್ಣಿಲ್ಲದವರಿಗೆ ನೇತ್ರದಾನ ಮಾಡಿ: ಸಚಿವ ಸುಧಾಕರ್‌

ಬೆಂಗಳೂರು(ನ.10):  ಮರಣ ಹೊಂದಿದ ನಂತರ ಕಣ್ಣಿಲ್ಲದ ನಾಲ್ಕು ಜನರು ಜಗತ್ತು ನೋಡಲು ನೇತ್ರದಾನದ(Eye Donation) ಬಗ್ಗೆ ವ್ಯಾಪಕ ಪ್ರಮಾಣದಲ್ಲಿ ಅರಿವು ಮೂಡಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್‌(Dr K Sudhakar) ಹೇಳಿದರು.

2 Min read
Kannadaprabha News | Asianet News
Published : Nov 10 2021, 08:37 AM IST| Updated : Nov 10 2021, 08:38 AM IST
Share this Photo Gallery
  • FB
  • TW
  • Linkdin
  • Whatsapp
15

ಮಿಂಟೋ ಕಣ್ಣಾಸ್ಪತ್ರೆಯ(Minto Hospital) 125ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಮಾತನಾಡಿದ ಸಚಿವರು, ಇತ್ತೀಚೆಗೆ ನಿಧನರಾದ ನಟ ಪುನೀತ್‌ ರಾಜ್‌ಕುಮಾರ್‌(Puneeth Rajkumar) ನೇತ್ರದಾನ ಮಾಡಿ ನಾಲ್ಕು ಜನರಿಗೆ ದೃಷ್ಟಿನೀಡಿದ್ದಾರೆ. ತಂತ್ರಜ್ಞಾನ ಬೆಳೆದಿರುವುದರಿಂದ ಒಬ್ಬರು ನಾಲ್ಕು ಜನರಿಗೆ ದೃಷ್ಟಿನೀಡಲು ಸಾಧ್ಯವಾಗುತ್ತದೆ ಎಂದು ಹೇಳಿದ ಡಾ. ಕೆ.ಸುಧಾಕರ್‌

25

ದೇಶದಲ್ಲಿ(India) 3-4 ಕೋಟಿ ಜನರಿಗೆ ಅಂಧತ್ವ(Blindness) ಇದೆ. ಆದ್ದರಿಂದ ನೇತ್ರ ದಾನಿಗಳ ಸಂಖ್ಯೆ ಹೆಚ್ಚಬೇಕಿದೆ. ಮರಣ(Death) ಹೊಂದಿದ ನಂತರವೂ ನಾಲ್ಕು ಜನರಿಗೆ ದೃಷ್ಟಿನೀಡಿ ಅವರಿಗೆ ಜಗತ್ತು ನೋಡಲು ಅವಕಾಶ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ಅವರು ಕೂಡ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ತಾವು ಕೂಡ ಕಳೆದ ವರ್ಷ ನೇತ್ರದಾನ ಮಾಡಲು ಪ್ರತಿಜ್ಞೆ ಮಾಡಿದ್ದೇನೆ. ಇದನ್ನು ಆಂದೋಲನದಂತೆ ನಡೆಸಿ ನೇತ್ರದಾನದ ಬಗ್ಗೆ ಅರಿವು ಮೂಡಿಸಬೇಕು ಎಂದು ಸಚಿವರು ಕರೆ ನೀಡಿದರು.

35

ಕೋವಿಡ್‌(Covid19) ಸಮಯದಲ್ಲಿ ಮಿಂಟೋ, ವಿಕ್ಟೋರಿಯಾ ಆಸ್ಪತ್ರೆಯನ್ನು ಕೋವಿಡ್‌ ಚಿಕಿತ್ಸೆಗೆ ಮೀಸಲಿಡಲಾಗಿತ್ತು. ಆದರೆ ಈಗ ಎಲ್ಲ ಬಗೆಯ ಚಿಕಿತ್ಸೆ ನೀಡಲಾಗುತ್ತಿದೆ. ಜನರು ಧೈರ್ಯವಾಗಿ ಬಂದು ಇತರೆ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಬಹುದು ಎಂದು ಡಾ. ಸುಧಾಕರ್‌ ತಿಳಿಸಿದರು.

45

1896ರಲ್ಲಿ ಡಿಸ್ಪೆನ್ಸರಿಯಾಗಿ ಆರಂಭವಾದ ಸಂಸ್ಥೆ 125 ವರ್ಷದವರೆಗೂ ಸೇವೆ ನೀಡಿದೆ. ಪ್ಲೇಗ್‌ನಿಂದ ಆರಂಭವಾಗಿ ಇತ್ತೀಚೆಗೆ ಕೋವಿಡ್‌ ತಡೆಗಟ್ಟುವವರೆಗೂ ಈ ಸಂಸ್ಥೆ ಕಾರ್ಯನಿರ್ವಹಿಸಿದೆ. 125ನೇ ವರ್ಷಾಚರಣೆ ಕಾರ್ಯಕ್ರಮಕ್ಕೆ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳನ್ನು ಆಹ್ವಾನಿಸುವ ಉದ್ದೇಶಿಸಲಾಗಿತ್ತು. ಆದರೆ ಕೋವಿಡ್‌ ಕಾರಣದಿಂದಾಗಿ ಸರಳವಾಗಿ ಆಚರಣೆ ಮಾಡುತ್ತಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ಲಭಿಸಿ 75 ವರ್ಷವಾಗಿದೆ. ಜಗತ್ತಿನ ಅನೇಕ ದೇಶಗಳು 100 ವರ್ಷವನ್ನೇ ಪೂರೈಸಿಲ್ಲ. ಅಂತಹದ್ದರಲ್ಲಿ ಮಿಂಟೋ ಸಂಸ್ಥೆ 125 ವರ್ಷ ಪೂರೈಸಿರುವುದು ಕನ್ನಡಿಗರಿಗೆ(Kannadigas) ಹೆಮ್ಮೆ ತರುವ ವಿಷಯ ಎಂದು ಹೇಳಿದರು. ಶಾಸಕ ಜಮೀರ್‌ ಅಹ್ಮದ್‌ಖಾನ್‌, ಮಿಂಟೋ ಆಸ್ಪತ್ರೆಯ ನಿರ್ದೇಶಕಿ ಡಾ. ಸುಜಾತಾ ರಾಥೋಡ್‌, ಬೆಂಗಳೂರು ಮೆಡಿಕಲ್‌ ಕಾಲೇಜಿನ ಡೀನ್‌ ಡಾ. ಜಯಂತಿ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

55

ಮಿಂಟೋ ಆಸ್ಪತ್ರೆ 125 ವರ್ಷಗಳ ನೆನಪಿನಾರ್ಥ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರ ಬೆಳಗ್ಗೆ 10.30ಕ್ಕೆ 125 ಸಸಿಗಳನ್ನು ನೆಡುವ ಮೂಲಕ ಸರಳ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತ. ಭಾನುವಾರವೇ ಮಿಂಟೋ ಆಸ್ಪತ್ರೆಯ ಕಟ್ಟಡವನ್ನು ವಿದ್ಯುತ್‌ ದೀಪಗಳಿಂದ ಅಲಂಕಾರಿಸಲಾಗಿದೆ. ಸಚಿವ ಡಾ ಕೆ.ಸುಧಾಕರ್‌, ಶಾಸಕ ಜಮೀರ್‌, ಇನ್ನಿತರ ಗಣ್ಯರ ಉಪಸ್ಥಿತಿಯಲ್ಲಿ ಸಸಿಗಳನ್ನು ನೆಡಲಾಯಿತು.

About the Author

KN
Kannadaprabha News
1967ರ ನವೆಂಬರ್ 4ರಂದು ಆರಂಭವಾದ ಕನ್ನಡಪ್ರಭ ಕನ್ನಡ ಪತ್ರಿಕೋದ್ಯಮದಲ್ಲಿಯೇ ವಿಶೇಷ ಛಾಪು ಮೂಡಿಸಿದ ಕನ್ನಡ ದಿನ ಪತ್ರಿಕೆ. ದೇಶ, ವಿದೇಶ, ವಾಣಿಜ್ಯ, ಕ್ರೀಡೆ, ಮನೋರಂಜನೆ ಸೇರಿ ವೈವಿಧ್ಯಮಯ ಸುದ್ದಿಗಳ ಹೂರಣ ಹೊತ್ತು ತರುವ ಕನ್ನಡಪ್ರಭ, ಕನ್ನಡಿಗರ ಅಸ್ಮಿತೆಯ ಸಂಕೇತ. ಸದಾ ಕರುನಾಡು, ನುಡಿ, ಸಂಸ್ಕೃತಿ ಪರ ಧ್ವನಿ ಎತ್ತುವ ಕನ್ನಡಪ್ರಭ ದಿನ ಪತ್ರಿಕೆಯಲ್ಲಿ ಪ್ರಕಟಗೊಳ್ಳುವ ಸುದ್ದಿಗಳು ಸುವರ್ಣ ನ್ಯೂಸ್ ವೆಬ್‌ಸೈಟಲ್ಲೂ ಲಭ್ಯ.
ಬೆಂಗಳೂರು
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved