ಅಯ್ಯಪ್ಪ ಸ್ವಾಮಿ ಮಾಲಾಧಾರಿಯಾದ ಗೃಹ ಸಚಿವ ಆರಗ ಜ್ಞಾನೇಂದ್ರ
ಚಿಕ್ಕಮಗಳೂರು (ಜ.16): ಅಯ್ಯಪ್ಪ ಸ್ವಾಮಿ ಮಾಲಾಧಾರಿಯಾಗಿ ಕೇರಳದ ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ತೆರಳಿದ್ದಾರೆ. ಕಳೆದ ಹಲವು ವರ್ಷಗಳಿಂದ ಅಯ್ಯಪ್ಪ ಸ್ವಾಮಿ ಭಕ್ತರಾಗಿರುವರ ಅಪೇಕ್ಷೆಯಂತೆ ಜ್ಞಾನೇಂದ್ರ ರಿಂದ ಶಬರಿಮಲೆ ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಕಳೆದ ಆರು ಏಳು ವರ್ಷಗಳ ಹಿಂದೆ ಅಯ್ಯಪ್ಪ ಮಾಲದಾರಿಯಾಗಿ ಶಬರಿಮಲೆ ಯಾತ್ರೆ ಮಾಡುವ ಸಂಕಲ್ಪ ತೊಟ್ಟಿದ್ದ ಆರಗ ಜ್ಞಾನೇಂದ್ರ ಇಂದು ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಇರುಮುಡಿ ಹೊತ್ತು ತೆರಳಿದ್ದಾರೆ. ಸ್ವತಃ ಜ್ಞಾನೇಂದ್ರರವರಿಗೂ ನಾನು ಅಯ್ಯಪ್ಪನಾ ಭಕ್ತನಾಗಿ ಅಯ್ಯಪ್ಪ ಸ್ವಾಮಿ ಭಕ್ತರ ಭಕ್ತಿಯಲ್ಲಿ ಕೈ ಜೊಡಿಸಬೇಕು ಎಂಬ ಅಭಿಲಾಷೆಯಿತ್ತು.
15

ಅಯ್ಯಪ್ಪಸ್ವಾಮಿಯ ದರ್ಶನ ಮಾಡಲೇಬೇಕೆನ್ನುವ ಸಂಕಲ್ಪದೊಂದಿಗೆ ಭಕ್ತರ ಜೊತೆಗೆ ಅಯ್ಯಪ್ಪನ ದರ್ಶನಕ್ಕೆ ಇರುಮುಡಿ ಹೊತ್ತು ತೆರಳಿದ ಅರಗ ಜ್ಞಾನೇಂದ್ರ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
25
ಹಲವು ಬಾರಿ ಪ್ರಯತ್ನಿಸಿದ್ದರೂ ಕಾರಣಾಂತರಗಳಿಂದ ಕಾಲ ಕೂಡಿ ಬಂದಿರಲಿಲ್ಲ. ಕಳೆದ ಹದಿನೈದು ದಿನದ ಹಿಂದೆ ಶಬರಿಮಲೆಗೆ ಪಾದಯಾತ್ರೆ ಮುಗಿಸಿ ಬಂದವರು ಈ ಬಾರಿ ನಿಮ್ಮನ್ನು ಕರೆದುಕೊಂಡು ಬಂದೇ ಬರುತ್ತೇವೆ ಎಂದು ಶಪತ ಮಾಡಿ ಬಂದಿದ್ದೇವೆ ಹೊರಡಲೇಬೇಕು ಎಂದಿದ್ದರು.
35
ಏನೇ ಕಾರ್ಯದೊತ್ತಡ ಇದ್ದರೂ ಸ್ವಾಮಿಯ ಸನ್ನಿದಾನಕ್ಕೆ ಭೇಟಿ ಕೊಡಲೇಬೇಕು ಎಂದು 15 ದಿನ ಹಿಂದೆ ನಿಶ್ಚಯಿಸಿದ್ದ ಸಚಿವ ಆರಗ ಜ್ಞಾನೇಂದ್ರ.
45
ಇಂದು ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಇರುಮುಡಿಯೊಂದಿಗೆ ತೆರಳಿದ್ದಾರೆ. ಈ ಮೂಲಕ ತಮ್ಮ ಹಲವು ವರ್ಷಗಳ ದೈವ ಸಂಕಲ್ಪ ಈಡೇರಿಸಿಕೊಂಡಿದ್ದಾರೆ.
55
ಇದರೊಂದಿಗೆ ತಮ್ಮ ಸ್ನೇಹಿತರು ಹಾಗೂ ಕಾರ್ಯಕರ್ತರ ಅಭಿಲಾಷೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನಡೆಸಿಕೊಟ್ಟಿದ್ದಾರೆ.
Latest Videos