MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ರಮೇಶ್ ಕತ್ತಿ ಅಣುಕು ಶವಯಾತ್ರೆ ನಡೆಸಿ ರಸ್ತೆಯಲ್ಲೇ ಅಂತ್ಯಕ್ರಿಯೆ ನೆರವೇರಿಸಿದ ವಾಲ್ಮೀಕಿ ಸಮುದಾಯ!

ರಮೇಶ್ ಕತ್ತಿ ಅಣುಕು ಶವಯಾತ್ರೆ ನಡೆಸಿ ರಸ್ತೆಯಲ್ಲೇ ಅಂತ್ಯಕ್ರಿಯೆ ನೆರವೇರಿಸಿದ ವಾಲ್ಮೀಕಿ ಸಮುದಾಯ!

ರಮೇಶ್ ಕತ್ತಿ ಅವರ ಅವಹೇಳನಕಾರಿ ಹೇಳಿಕೆ ಖಂಡಿಸಿ ಬಾಗಲಕೋಟೆಯಲ್ಲಿ ವಾಲ್ಮೀಕಿ ಸಮುದಾಯದಿಂದ ಅಣುಕು ಶವಯಾತ್ರೆ ನಡೆಸಿ, ರಸ್ತೆಯಲ್ಲೇ ಅಂತ್ಯಕ್ರಿಯೆ ನಡೆಸಿದರು. ನಂತರ ರಮೇಶ್ ಕತ್ತಿ ಬಂಧನಕ್ಕೆ ಆಗ್ರಹಿಸಿ ನಡೆಸಿದ ಪ್ರತಿಭಟನೆಯ ಸಂಪೂರ್ಣ ವರದಿ ಇಲ್ಲಿದೆ.

2 Min read
Sathish Kumar KH
Published : Oct 27 2025, 12:49 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ವಾಲ್ಮೀಕಿ ಸಮುದಾಯದ ಬಗ್ಗೆ ರಾಜಕೀಯ ನಾಯಕ ರಮೇಶ್ ಕತ್ತಿ ನೀಡಿರುವ ಅವಹೇಳನಕಾರಿ ಹೇಳಿಕೆಗಳ ವಿರುದ್ಧ ಬಾಗಲಕೋಟೆಯಲ್ಲಿ ವಾಲ್ಮೀಕಿ ಸಮುದಾಯವು ವಿನೂತನ ಹಾಗೂ ಉಗ್ರ ಪ್ರತಿಭಟನೆ ನಡೆಸಿತು. ಆಕ್ರೋಶದ ಮಡುವಿನಲ್ಲಿರುವ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರು, ರಮೇಶ್ ಕತ್ತಿ ಅವರ ಪ್ರತಿಕೃತಿಯ ಅಣುಕು ಶವ ಯಾತ್ರೆ ನಡೆಸಿ, ಜಿಲ್ಲಾಡಳಿತ ಭವನದ ಎದುರು ಅಂತ್ಯಸಂಸ್ಕಾರ ಮಾಡುವ ಮೂಲಕ ತಮ್ಮ ವಿರೋಧವನ್ನು ವ್ಯಕ್ತಪಡಿಸಿದರು.

26
Image Credit : Asianet News

ವಾಲ್ಮೀಕಿ ಸಮುದಾಯದ ಮುಖಂಡರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಇಂದು ನಗರದ ತಹಶೀಲ್ದಾರ್ ಕಚೇರಿಯಿಂದ ನವನಗರದ ಜಿಲ್ಲಾಡಳಿತ ಭವನದವರೆಗೆ ಬೃಹತ್ ಮೆರವಣಿಗೆಯಲ್ಲಿ ಸಾಗಿದರು. ಪ್ರತಿಭಟನಕಾರರು, ರಮೇಶ್ ಕತ್ತಿ ಅವರ ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ, ಅಣುಕು ಶವದ ಮುಂದೆ ಹಲಗೆ, ಶಹನಾಯಿ ಬಾರಿಸುತ್ತಾ, ಮೃತರ ಅಂತಿಮ ಯಾತ್ರೆಯ ಸಂಪ್ರದಾಯವನ್ನು ಅನುಕರಿಸಿ ಮೆರವಣಿಗೆ ನಡೆಸಿದರು.

Related Articles

Related image1
ರಮೇಶ್ ಕತ್ತಿಗೆ ವಾಲ್ಮೀಕಿ ಸಮಾಜ ಉತ್ತರ ನೀಡಲಿದೆ: ಜಾರಕಿಹೊಳಿ ಎಚ್ಚರಿಕೆ
Related image2
ಬೆಳಗಾವಿ: ವಾಲ್ಮೀಕಿ ಸಮಾಜದ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ, ರಮೇಶ್ ಕತ್ತಿ ವಿರುದ್ಧ ಅಟ್ರಾಸಿಟಿ ಕೇಸ್!
36
Image Credit : Asianet News

ಚಪ್ಪಲಿಗಳಿಂದ ಹೊಡೆದು ಆಕ್ರೋಶ

ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ಪ್ರತಿಭಟನಾಕಾರರು ರಮೇಶ್ ಕತ್ತಿ ಅವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಅವಹೇಳನಕಾರಿ ಹೇಳಿಕೆಗಳನ್ನು ನೀಡಿ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ, ಕತ್ತಿಯವರ ಭಾವಚಿತ್ರವಿದ್ದ ಅಣುಕು ಶವಕ್ಕೆ ಚಪ್ಪಲಿಗಳಿಂದ ಹೊಡೆದು ತಮ್ಮ ತೀವ್ರ ಆಕ್ರೋಶವನ್ನು ಹೊರಹಾಕಿದರು. ರಮೇಶ್ ಕತ್ತಿಯವರ ಹೇಳಿಕೆಗಳು ಕೇವಲ ಜಾತಿ ನಿಂದನೆ ಮಾತ್ರವಲ್ಲ, ಇಡೀ ಸಮುದಾಯದ ಘನತೆಗೆ ಧಕ್ಕೆ ತಂದಿದೆ ಎಂದು ಮುಖಂಡರು ಖಂಡಿಸಿದರು.

46
Image Credit : Asianet News

ಜಿಲ್ಲಾಡಳಿತ ಭವನದ ಮುಂದೆ ಆಗಮಿಸಿದ ಪ್ರತಿಭಟನಕಾರರು, ಅಣುಕು ಶವ ಸಂಸ್ಕಾರದ ಎಲ್ಲ ವಿಧಿವಿಧಾನಗಳನ್ನು ನೆರವೇರಿಸಿದರು. ಈ ಮೂಲಕ ರಮೇಶ್ ಕತ್ತಿ ಅವರ ರಾಜಕೀಯ ಮತ್ತು ಸಾಮಾಜಿಕ ಜೀವನಕ್ಕೆ ಅಂತ್ಯ ಹಾಡಬೇಕು ಎಂದು ಪ್ರತಿಭಟನೆಯ ರೂಪದಲ್ಲಿ ಸಂದೇಶ ನೀಡಿದರು.

56
Image Credit : Asianet News

ರಸ್ತೆ ತಡೆ, ಕತ್ತಿ ಬಂಧನಕ್ಕೆ ಆಗ್ರಹ

ಪ್ರತಿಭಟನೆಯ ತೀವ್ರತೆಯನ್ನು ಹೆಚ್ಚಿಸಲು, ಸಮುದಾಯದ ಸದಸ್ಯರು ನವನಗರದ ಜಿಲ್ಲಾಡಳಿತ ಭವನದ ಮುಖ್ಯ ರಸ್ತೆಯಲ್ಲಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ರಮೇಶ್ ಕತ್ತಿ ವಿರುದ್ಧ ಜಾತಿ ನಿಂದನೆ ಆರೋಪದ ಅಡಿಯಲ್ಲಿ (SC/ST ಕಾಯ್ದೆ ಅಡಿಯಲ್ಲಿ) ಕೂಡಲೇ ಪ್ರಕರಣ ದಾಖಲಿಸಿ, ಅವರನ್ನು ಬಂಧಿಸಬೇಕು ಎಂದು ಪ್ರತಿಭಟನಾಕಾರರು ಜಿಲ್ಲಾಡಳಿತಕ್ಕೆ ಆಗ್ರಹಿಸಿದರು. ಇಲ್ಲವಾದರೆ, ರಾಜ್ಯಾದ್ಯಂತ ಪ್ರತಿಭಟನೆ ತೀವ್ರಗೊಳಿಸುವುದಾಗಿ ಸಮುದಾಯದ ಮುಖಂಡರು ಎಚ್ಚರಿಕೆ ನೀಡಿದರು.

66
Image Credit : Asianet News

ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ಸಮುದಾಯದವರು, ಇಂತಹ ಹೇಳಿಕೆಗಳು ಸಮಾಜದಲ್ಲಿ ಅಶಾಂತಿ ಮತ್ತು ದ್ವೇಷವನ್ನು ಸೃಷ್ಟಿಸುತ್ತವೆ. ಕೂಡಲೇ ಸರ್ಕಾರ ಮಧ್ಯಪ್ರವೇಶಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಕರ್ನಾಟಕ ರಾಜಕೀಯ
ಬೆಳಗಾವಿ
ಬಾಗಲಕೋಟೆ
Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved