MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಬೆಳಗಾವಿ ಕಾರಕೂನ ದುರಂತ ಅಂತ್ಯ; ಹೆಂಡತಿ ಮೇಲೆ ಕಣ್ಣಾಕಿದ ಕ್ಲರ್ಕ್ ಕಥೆ ಮುಗಿಸಿದ ಗಂಡ!

ಬೆಳಗಾವಿ ಕಾರಕೂನ ದುರಂತ ಅಂತ್ಯ; ಹೆಂಡತಿ ಮೇಲೆ ಕಣ್ಣಾಕಿದ ಕ್ಲರ್ಕ್ ಕಥೆ ಮುಗಿಸಿದ ಗಂಡ!

ಸ್ನೇಹಿತನ ಹೆಂಡತಿಯೊಂದಿಗೆ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜು ಕ್ಲರ್ಕ್ ಮಹಾಂತೇಶ್ ಬುಕನಟ್ಟಿ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರಾತ್ರಿ ಮನೆಗೆ ಹಿಂದಿರುಗುತ್ತಿದ್ದ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆ ಮಾಡಿದ್ದಾನೆ.

1 Min read
Sathish Kumar KH
Published : Sep 18 2025, 12:59 PM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಬೆಳಗಾವಿ (ಸೆ.18): ಅನೈತಿಕ ಸಂಬಂಧದ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಶಹಾಬಂದರ ಗ್ರಾಮದಲ್ಲಿ ನಡೆದಿದೆ. ಮಹಾಂತೇಶ್ ಬುಕನಟ್ಟಿ (24) ಎಂಬ ಯುವಕ ಹತ್ಯೆಯಾದ ದುರ್ದೈವಿ.

26
Image Credit : Asianet News

ಘಟನೆಯ ಹಿನ್ನೆಲೆ: 

ಕೊಲೆಯಾದ ಮಹಾಂತೇಶ್ ಹಾಗೂ ಆರೋಪಿ ಬಸವರಾಜ್ ಬುಕನಟ್ಟಿ ಅವರ ಪತ್ನಿ ನಡುವೆ ಅನೈತಿಕ ಸಂಬಂಧವಿತ್ತು ಎನ್ನಲಾಗಿದೆ. ಈ ವಿಷಯ ಒಂದು ವರ್ಷದ ಹಿಂದೆಯೇ ಬೆಳಕಿಗೆ ಬಂದಿತ್ತು. ಆಗ ಈ ಕುರಿತು ಪೊಲೀಸರ ಬಳಿ ಎಫ್‌ಐಆರ್ ಕೂಡ ದಾಖಲಾಗಿತ್ತು. ನಂತರ ಹಿರಿಯರ ಮಧ್ಯಸ್ಥಿಕೆಯಲ್ಲಿ ರಾಜಿ ಸಂಧಾನ ಮಾಡಲಾಗಿತ್ತು.

Related Articles

Related image1
ಬೆಳಗಾವಿ-ಧಾರವಾಡ ರೈಲು ಮಾರ್ಗ ವಿಳಂಬಕ್ಕೆ ಸಚಿವ ಲಾಡ್ ಕಾರಣ: ವಿ.ಸೋಮಣ್ಣ ಆರೋಪ
Related image2
ಶೃಂಗೇರಿ ಲಾಡ್ಜ್ ರಹಸ್ಯ: ಹಿಂದೂ ಮಹಿಳೆ ಸಂಬಂಧಕ್ಕಾಗಿ ರಮೇಶನಾಗಿ ಬದಲಾದ ಅಬ್ದುಲ್!
36
Image Credit : Asianet News

ಆದರೆ, ಇದೇ ವಿಚಾರವನ್ನು ಮನಸ್ಸಿನಲ್ಲಿಟ್ಟುಕೊಂಡಿದ್ದ ಬಸವರಾಜ್, ಮಹಾಂತೇಶನ ಕೊಲೆಗೆ ಸಂಚು ರೂಪಿಸಿದ್ದಾನೆ. ಮಹಾಂತೇಶನು ಬೆಳಗಾವಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದು, ಪ್ರತಿದಿನ ರಾತ್ರಿ ಕೆಲಸ ಮುಗಿಸಿ ಶಹಾಬಂದರ ಗ್ರಾಮಕ್ಕೆ ಹಿಂದಿರುಗುತ್ತಿದ್ದನು. ಇದನ್ನು ಗಮನಿಸಿದ ಆರೋಪಿಗಳು, ನಿನ್ನೆ ರಾತ್ರಿ ಆತನಿಗಾಗಿ ಕಾದು ಕುಳಿತಿದ್ದಾರೆ.

46
Image Credit : Asianet News

ಘಟನೆ ನಡೆದ ರೀತಿ:

ಮಹಾಂತೇಶ್ ಬಸ್‌ನಿಂದ ಇಳಿದು ಮನೆಯತ್ತ ನಡೆದುಕೊಂಡು ಹೋಗುತ್ತಿದ್ದಾಗ, ಬಸವರಾಜ್ ಮತ್ತು ಆತನ ಮೂರ್ನಾಲ್ಕು ಮಂದಿ ಸ್ನೇಹಿತರು ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಲಾಂಗ್ ಮತ್ತು ಮಚ್ಚುಗಳಿಂದ ಕತ್ತು, ಹೊಟ್ಟೆ, ಬೆನ್ನು ಸೇರಿದಂತೆ ಎಲ್ಲೆಂದರಲ್ಲಿ ಮನಬಂದಂತೆ ಕೊಚ್ಚಿ ಹತ್ಯೆ ಮಾಡಿದ್ದಾರೆ. ಹತ್ಯೆ ಮಾಡಿದ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

56
Image Credit : Asianet News

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮಹಾಂತೇಶ್ ಮನೆಯತ್ತ ಹೋಗುತ್ತಿದ್ದ ದೃಶ್ಯ ಹಾಗೂ ಆತನನ್ನು ಹಿಂಬಾಲಿಸಿಕೊಂಡು ಹೋಗುತ್ತಿರುವ ಯುವಕನ ದೃಶ್ಯ ದಾಖಲಾಗಿದೆ. ಇದೇ ಯುವಕ ಬಸವರಾಜ್‌ಗೆ ಮಾಹಿತಿ ನೀಡಿ ಕೊಲೆಗೆ ಸಹಕರಿಸಿದ್ದಾನೆ ಎಂದು ತಿಳಿದುಬಂದಿದೆ.

66
Image Credit : Asianet News

ಪೊಲೀಸ್ ತನಿಖೆ:

ಘಟನೆ ನಡೆದ ತಕ್ಷಣ ಸ್ಥಳಕ್ಕಾಗಮಿಸಿದ ಯಮಕನಮರಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಾಂತೇಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಆಸ್ಪತ್ರೆಗೆ ಬಂದ ಮೃತ ಯುವಕನ ಕುಟುಂಬಸ್ಥರು, ಒಂದು ವರ್ಷದ ಹಿಂದಿನ ಸೇಡಿಗಾಗಿ ಕೊಲೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಬೆಳಗಾವಿ
ಸಂಬಂಧಗಳು
ಅಕ್ರಮ ಸಂಬಂಧ
ಕ್ರೈಮ್ ನ್ಯೂಸ್

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved