MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Bengaluru Weather Today
Kasturi Rangan Report
Karnataka Kodava Language
Wife Appreciation Day
Milk Price Hike Karnataka
Amit Shah Karnataka Visit
Karnataka Govt Social Pension
US Tariff on India
Mysuru Dasara 2026
Abhishek Sharma
Bengaluru Cantonment Railway Station
Kalyana Karnataka Development
Vande Mataram Row
Karnataka SSLC Mid-term Exam
Mangaluru Dharmasthala Railway Line
Shivamogga Mega Job Fair
Bengaluru Traffic
Mangaluru Cabinet Meeting
  • Home
  • Karnataka Districts
  • ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!

ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ; ಪ್ರೌಢಶಾಲೆಗೆ ನುಗ್ಗಿ ಪ್ರಾಂಶುಪಾಲನಿಗೆ ಧರ್ಮದೇಟು ಕೊಟ್ಟ ಗ್ರಾಮಸ್ಥರು!

ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಪ್ರೌಢಶಾಲೆಯ ಪ್ರಾಂಶುಪಾಲ, ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪೋಷಕರು ಮತ್ತು ಸ್ಥಳೀಯರಿಂದ ಧರ್ಮದೇಟು ತಿಂದಿದ್ದಾನೆ. ಘಟನೆಯ ನಂತರ, ಪೊಲೀಸರು ಆರೋಪಿ ಪ್ರಾಂಶುಪಾಲನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

1 Min read
Author : Sathish Kumar KH
Published : Dec 12 2025, 03:26 PM IST
Share this Photo Gallery
  • FB
  • TW
  • Linkdin
  • Whatsapp
16
ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ
Image Credit : Asianet News

ವಿದ್ಯಾರ್ಥಿನಿಯರ ಮೈಮುಟ್ಟಿ ಅಸಭ್ಯ ವರ್ತನೆ

ಶಾಲಾ ವಿದ್ಯಾರ್ಥಿನಿಯರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಪ್ರೌಢ ಶಾಲೆಯ ಪ್ರಾಂಶುಪಾಲನಿಗೆ ಸ್ಥಳೀಯರು ಮತ್ತು ಪೋಷಕರು ಧರ್ಮದೇಟು ನೀಡಿರುವ ಘಟನೆ ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ಹೆಣ್ಣು ಮಕ್ಕಳ ಹೈಸ್ಕೂಲ್‌ನಲ್ಲಿ ನಡೆದಿದೆ. ಈ ಘಟನೆ ಗ್ರಾಮದಲ್ಲಿ ತೀವ್ರ ಆಕ್ರೋಶ ಮತ್ತು ಸಂಚಲನ ಮೂಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
ಪ್ರಾಂಶುಪಾಲರ ಮೇಲೆ ಗಂಭೀರ ಆರೋಪ
Image Credit : Asianet News

ಪ್ರಾಂಶುಪಾಲರ ಮೇಲೆ ಗಂಭೀರ ಆರೋಪ

ಬೆಳಗುಂದಿ ಹೆಣ್ಣು ಮಕ್ಕಳ ಹೈಸ್ಕೂಲ್‌ನ (Belagundi Girls High School) ಪ್ರಾಂಶುಪಾಲನಾಗಿರುವ ಕಲ್ಲಪ್ಪ ಬೆಳಗಾಂವಕರ್ ಎಂಬಾತನ ಮೇಲೆ ಶಾಲೆಯ ವಿದ್ಯಾರ್ಥಿನಿಯರ ಜೊತೆಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪ ಕೇಳಿ ಬಂದಿದೆ. ಕಳೆದ ಕೆಲವು ದಿನಗಳಿಂದ ಪ್ರಾಂಶುಪಾಲನ ವರ್ತನೆ ಅಸಹಜವಾಗಿದ್ದು, ಆತ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ನಡೆದುಕೊಳ್ಳುತ್ತಿದ್ದ ಎನ್ನಲಾಗಿದೆ.

Related Articles

Related image1
ಬಸ್ಸಿನಲ್ಲಿ ರೊಮ್ಯಾನ್ಸ್ ಮಾಡಿದ ಹೈಸ್ಕೂಲ್ ಮಕ್ಕಳು; ವಿಡಿಯೋ ವೈರಲ್
Related image2
ಹೈಸ್ಕೂಲ್ ಹುಡುಗರು ಕಿರುಕುಳ ನೀಡುತ್ತಿದ್ದಾರೆಂದು ಸಾವಿಗೆ ಶರಣಾದ 9ನೇ ತರಗತಿ ವಿದ್ಯಾರ್ಥಿನಿ!
36
ಪೋಷಕರ ಗಮನಕ್ಕೆ
Image Credit : Asianet News

ಪೋಷಕರ ಗಮನಕ್ಕೆ

ಪ್ರಾಂಶುಪಾಲನ ಈ ದುರ್ವರ್ತನೆ ಕುರಿತು ವಿದ್ಯಾರ್ಥಿನಿಯರು ತಮ್ಮ ಪೋಷಕರು ಮತ್ತು ಗ್ರಾಮದ ಮುಖಂಡರ ಗಮನಕ್ಕೆ ತಂದಿದ್ದಾರೆ. ಇದರಿಂದ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ಮತ್ತು ಪೋಷಕರು ತಕ್ಷಣವೇ ಶಾಲೆಯತ್ತ ಧಾವಿಸಿದ್ದಾರೆ.

46
ಶಾಲೆಯೊಳಗೆ ನುಗ್ಗಿ ಹೊಡೆದ ಪೋಷಕರು:
Image Credit : Asianet News

ಶಾಲೆಯೊಳಗೆ ನುಗ್ಗಿ ಹೊಡೆದ ಪೋಷಕರು:

ಶುಕ್ರವಾರ (ಡಿ.12) ಶಾಲೆಯ ಒಳಗೆ ನುಗ್ಗಿದ ಪೋಷಕರು ಮತ್ತು ಸ್ಥಳೀಯರು, ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್‌ನನ್ನು ಹೊರಗೆ ಎಳೆತಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ಆತನಿಗೆ ಹಿಗ್ಗಾಮುಗ್ಗಾ ಗೂಸಾ ನೀಡಿದ್ದಾರೆ. ಪ್ರಾಂಶುಪಾಲನ ವಿರುದ್ಧ ವಿದ್ಯಾರ್ಥಿನಿಯರು ಕೂಡಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲೆಯ ಆವರಣದಲ್ಲಿ ಕೆಲಹೊತ್ತು ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

56
ಪೊಲೀಸರ ವಶಕ್ಕೆ ಆರೋಪಿ:
Image Credit : Asianet News

ಪೊಲೀಸರ ವಶಕ್ಕೆ ಆರೋಪಿ:

ಪ್ರಾಂಶುಪಾಲನಿಗೆ ಜನರು ಥಳಿಸುತ್ತಿರುವ ಮಾಹಿತಿ ತಿಳಿದ ಕೂಡಲೇ ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ರೊಚ್ಚಿಗೆದ್ದಿದ್ದ ಜನಸಮೂಹದಿಂದ ಪ್ರಾಂಶುಪಾಲ ಕಲ್ಲಪ್ಪ ಬೆಳಗಾಂವಕರ್‌ನನ್ನು ರಕ್ಷಿಸಿದ ಪೊಲೀಸರು, ಆತನನ್ನು ವಶಕ್ಕೆ ಪಡೆದುಕೊಂಡು ಠಾಣೆಗೆ ಕರೆದೊಯ್ದಿದ್ದಾರೆ.

66
ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಕೇಸ್
Image Credit : Asianet News

ಬೆಳಗಾವಿ ಗ್ರಾಮೀಣ ಠಾಣೆಯಲ್ಲಿ ಕೇಸ್

ಪ್ರಾಂಶುಪಾಲನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಶಾಲೆಯಿಂದ ಆತನನ್ನು ವಜಾಗೊಳಿಸಬೇಕು ಎಂದು ಸ್ಥಳೀಯರು ಹಾಗೂ ವಿದ್ಯಾರ್ಥಿನಿಯರ ಪೋಷಕರು ಪೊಲೀಸರ ಬಳಿ ತೀವ್ರವಾಗಿ ಒತ್ತಾಯಿಸಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿದ್ಯಾರ್ಥಿನಿಯರು ಮತ್ತು ಪೋಷಕರಿಂದ ಮಾಹಿತಿ ಪಡೆದು ತನಿಖೆ ಮುಂದುವರೆಸಿದ್ದಾರೆ. ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದಲೇ ಇಂತಹ ದುಷ್ಕೃತ್ಯ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಖಂಡನೆಗೆ ಗುರಿಯಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ವಿದ್ಯಾರ್ಥಿ
ಬೆಳಗಾವಿ
 

Latest Videos
Recommended Stories
Recommended image1
ಗಣೇಶ ಮೂರ್ತಿ ಮುಂದೆ ದೀಪ ಕಾಯುತ್ತಿದ್ದ 13 ವರ್ಷದ ಬಾಲಕನ ಮೇಲೆ ಪೆಟ್ರೋಲ್ ಸುರಿದು ಬೆಂಕಿ: ಮುಂದೇನಾಯ್ತು?
Recommended image2
ನಾಡಿಗೆ ಸುಂದರ ಸಂದೇಶ ಸಾರಿದ ಕರ್ನಾಟಕದ ಈ ಪುಟ್ಟ ಗ್ರಾಮ, ಅಪರೂಪದ ಘಟನೆ
Recommended image3
'ಹೀಗೆ ಹೇಳೋರು ಮೊದಲೇ ದೂರ ಇರಬೇಕಿತ್ತು' ಸಿದ್ದರಾಮಯ್ಯಗೆ ಆಪ್ತ ಮಹದೇವಪ್ಪ ಟಾಂಗ್, ಹಳಸಿತಾ ಗೆಳೆತನಾ?
Related Stories
Recommended image1
ಬಸ್ಸಿನಲ್ಲಿ ರೊಮ್ಯಾನ್ಸ್ ಮಾಡಿದ ಹೈಸ್ಕೂಲ್ ಮಕ್ಕಳು; ವಿಡಿಯೋ ವೈರಲ್
Recommended image2
ಹೈಸ್ಕೂಲ್ ಹುಡುಗರು ಕಿರುಕುಳ ನೀಡುತ್ತಿದ್ದಾರೆಂದು ಸಾವಿಗೆ ಶರಣಾದ 9ನೇ ತರಗತಿ ವಿದ್ಯಾರ್ಥಿನಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved