MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಬಕೆಟ್ ನೀರಲ್ಲಿ ಮುಳುಗಿ ಸತ್ತ 11 ತಿಂಗಳ ಮಗು; ಪತ್ರ ಬರೆದಿಟ್ಟು ನೇಣಿಗೆ ಶರಣಾದ ಟೆಕ್ಕಿ ತಾಯಿ

ಬಕೆಟ್ ನೀರಲ್ಲಿ ಮುಳುಗಿ ಸತ್ತ 11 ತಿಂಗಳ ಮಗು; ಪತ್ರ ಬರೆದಿಟ್ಟು ನೇಣಿಗೆ ಶರಣಾದ ಟೆಕ್ಕಿ ತಾಯಿ

ಬೆಂಗಳೂರಿನ ಚಂದ್ರಲೇಔಟ್‌ನಲ್ಲಿ 11 ತಿಂಗಳ ಮಗು ಆಕಸ್ಮಿಕವಾಗಿ ಬಕೆಟ್ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದೆ. ಇದರಿಂದ ತೀವ್ರವಾಗಿ ನೊಂದ ಟೆಕ್ಕಿ ತಾಯಿ, ಮಗುವಿನ ಸಾವಿಗೆ ನಾನೇ ಕಾರಣ ಎಂದು ಡೆತ್‌ನೋಟ್ ಬರೆದಿಟ್ಟು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ.

1 Min read
Author : Mahmad Rafik
| Updated : Apr 02 2026, 11:47 AM IST
Share this Photo Gallery
  • FB
  • TW
  • Linkdin
  • Whatsapp
15
ಹೃದಯವಿದ್ರಾವಕ ಘಟನೆ
Image Credit : Asianet News

ಹೃದಯವಿದ್ರಾವಕ ಘಟನೆ

11 ತಿಂಗಳು ಮಗು ಬಕೆಟ್ ನೀರಿನಲ್ಲಿ ಮುಳುಗಿ ಸತ್ತಿದ್ದರಿಂದ ನೊಂದ ತಾಯಿ ಆತ್ಮ*ಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನನ್ನ ಮಗುವನ್ನು ಉಳಿಸಿಕೊಳ್ಳಲು ಆಗಲಿಲ್ಲ ಎಂದು ಮಹಿಳೆ ಡೆತ್‌ನೋಟ್ ಬರೆದಿದ್ದಾರೆ.

25
ಟೆಕ್ಕಿ ದಂಪತಿ
Image Credit : Asianet News

ಟೆಕ್ಕಿ ದಂಪತಿ

11 ತಿಂಗಳ ಗಂಡು ಮಗು ಅಗಸ್ತ್ಯ ಮತ್ತು ಪ್ರತಿಭಾ (29) ಮೃತರು. ಭೈರವೇಶ್ವರ ನಗರದಲ್ಲಿ ವಾಸವಾಗಿದ್ದ ಪ್ರತಿಭಾ ಸಾಫ್ಟ್‌ವೇರ್ ಇಂಜಿನೀಯರ್ ಆಗಿದ್ದು, ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಗಂಡ ಮಹಾಂತೇಶ್ ಸಹ ಟೆಕ್ಕಿಯಾಗಿದ್ದು, ಘಟನೆ ನಡೆದ ಸಂದರ್ಭದಲ್ಲಿ ಮಗು ಮತ್ತು ಪ್ರತಿಭಾ ಮಾತ್ರ ಇದ್ರು ಎಂದು ತಿಳಿದು ಬಂದಿದೆ. (ತಂದೆ ಮಹಾಂತೇಶ್)

Related Articles

Related image1
Holi Horror: ಬಣ್ಣ ಹಾಕಿದ್ದಕ್ಕೆ 4 ವರ್ಷದ ಮಗು ಮೇಲೆ ಕೊತ ಕೊತ ಕುದಿಯುವ ಬಿಸಿನೀರು ಎರಚಿದ ಅಜ್ಜಿ
Related image2
ಹಾವೇರಿ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ನಿಂತವರ ಮೇಲೆ ನುಗ್ಗಿದ ಬಸ್; ನಾಲ್ವರಿಗೆ ಗಾಯ, 2 ವರ್ಷದ ಮಗು ಸಾವು!
35
ಪ್ರತಿಭಾ ದುಡುಕಿನ ನಿರ್ಧಾರ
Image Credit : Asianet News

ಪ್ರತಿಭಾ ದುಡುಕಿನ ನಿರ್ಧಾರ

ಒಣಗಲು ಹಾಕಿದ್ದ ಬಟ್ಟೆ ತೆಗೆದುಕೊಂಡು ಬರಲು ಪ್ರತಿಭಾ ಮನೆಯಿಂದ ಹೊರಗೆ ಬಂದಿದ್ದಾರೆ. ಅಷ್ಟರಲ್ಲಿ ನೀರು ತುಂಬಿಸಿದ್ದ ಬಕೆಟ್‌ಗೆ ಬಿದ್ದು ಸಾವನ್ನಪ್ಪಿದೆ. ಇದರಿಂದ ನೊಂದ ಪ್ರತಿಭಾ, ಯಾರಿಗೂ ವಿಷಯ ತಿಳಿಸದೇ ಡೆತ್‌ ನೋಟ್ ಬರೆದಿಟ್ಟು ಆತ್ಮ*ಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೂ ಮೊದಲು ಕೈಕುಯ್ದುಕೊಂಡು ಆತ್ಮ*ಹತ್ಯೆ ಮಾಡಿಕೊಳ್ಳಲು ಪ್ರತಿಭಾ ಪ್ರಯತ್ನಿಸಿದ್ದಾರೆ.

45
ಗಂಡ ಬಂದಾಗ ಪ್ರಕರಣ ಬೆಳಕಿಗೆ
Image Credit : Asianet News

ಗಂಡ ಬಂದಾಗ ಪ್ರಕರಣ ಬೆಳಕಿಗೆ

ರಾತ್ರಿ ಮಹಾಂತೇಶ್ ಮನೆಗೆ ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿ ಬಾಗಿಲು ಓಪನ್ ಮಾಡದಿದ್ದಾಗ ತನ್ನ ಬಳಿ ಇದ್ದ ಕೀಲಿಯಿಂದ ಬಾಗಿಲು ಓಪನ್ ಮಾಡಿದ್ದಾರೆ. ಪ್ರತಿಭಾ ಶವ ನೇತಾಡುತ್ತಿದ್ರೆ, ಬೆಡ್ ಮೇಲೆ ಮಗುವಿನ ಶವವಿತ್ತು ಎಂದು ಮಹಾಂತೇಶ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ರಿಸರ್ವೇಶನ್ ಇರಲಿಲ್ಲ, ಟಾಯ್ಲೆಟ್ ಬಳಿ ಮಲಗಿದ್ದ ಸೈನಿಕರಿಗೆ ಸೀಟ್ ಕೊಟ್ಟ TTE; ಹೃದಯ ಗೆದ್ದ ವಿಡಿಯೋ

55
ಡೆತ್‌ನೋಟ್‌
Image Credit : Asianet News

ಡೆತ್‌ನೋಟ್‌

ನಾನು ಬಟ್ಟೆ ಒಣಹಾಕಿದ್ದು ಅದನ್ನ ತರಲು ಟೆರೆಸ್ ಗೆ ಹೋಗಿದ್ದೆ. ಈ ವೇಳೆ ಮಗು ಆಟ ಆಡಿಕೊಂಡು ಬಚ್ಚಲು ಮನೆಗೆ ಹೋಗಿದೆ. ಆ ವೇಳೆ ಬಕೆಟ್ ನಲ್ಲಿ ಮುಳುಗಿ ಸತ್ತಿದೆ. ನನ್ನ ಮಗುವನ್ನ ಉಳಿಸಿಕೊಳ್ಳಲು ಆಗಿಲ್ಲ. ನನ್ನ ಮಗುವಿನ ಸಾವಿಗೆ ನಾನೇ ಕಾರಣ. ಹೀಗಾಗಿ ನಾನು ಆತ್ಮ*ಹತ್ಯೆ ಮಾಡಿಕೊಳ್ಳುತ್ತಿರೋದಾಗಿ ಪ್ರತಿಭಾ ಡೆತ್ ನೋಟ್‌ನಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: Chitradurga: ಅಧ್ಯಾಪಕನೊಂದಿಗೆ ಸಂಬಂಧ ಅಪಪ್ರಚಾರ; ನೇಣಿಗೆ ಶರಣಾದ BAMS ವಿದ್ಯಾರ್ಥಿನಿ ನಿಖಿತಾ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬೆಂಗಳೂರು
ಆತ್ಮಹತ್ಯೆ
ಕ್ರೈಮ್ ನ್ಯೂಸ್
ಮಹಿಳೆಯರು

Latest Videos
Recommended Stories
Recommended image1
ಬೆಳ್ಳಂಬೆಳಗ್ಗೆ ಶಿವಾನಂದ ಸರ್ಕಲ್ ಬಳಿ ಭೀಕರ ಅಪಘಾತ: ಡಿವೈಡರ್‌ಗೆ ಡಿಕ್ಕಿ ಹೊಡೆದ ಆಂಧ್ರ ಸಾರಿಗೆ ಬಸ್!
Recommended image2
ರಾಜ್ಯದಲ್ಲಿ ಕೆಂಡದಂತಹ ಬಿಸಿಲು ಹವಾಮಾನ ಇಲಾಖೆಯ ಎಚ್ಚರಿಕೆ ಗಂಟೆ, 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲು!
Recommended image3
ಉಪಚುನಾವಣೆ ಕಾವೇರಿದ ಹೊತ್ತಲ್ಲಿ ನಾಳೆ ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಎಂಟ್ರಿ, ಚಾಣಕ್ಯನ ಭೇಟಿ ಭಾರೀ ಸಂಚಲನ!
Related Stories
Recommended image1
Holi Horror: ಬಣ್ಣ ಹಾಕಿದ್ದಕ್ಕೆ 4 ವರ್ಷದ ಮಗು ಮೇಲೆ ಕೊತ ಕೊತ ಕುದಿಯುವ ಬಿಸಿನೀರು ಎರಚಿದ ಅಜ್ಜಿ
Recommended image2
ಹಾವೇರಿ ಬಸ್ ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ನಿಂತವರ ಮೇಲೆ ನುಗ್ಗಿದ ಬಸ್; ನಾಲ್ವರಿಗೆ ಗಾಯ, 2 ವರ್ಷದ ಮಗು ಸಾವು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved