MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಬೆಂಗಳೂರಿನಿಂದ ಸ್ಪ್ಲೆಂಡರ್ ಬೈಕ್ ಕದ್ದು ತೆಲುಗು ಸಿನಿಮಾ ಪುಷ್ಪ ಶೂಟಿಂಗ್ ಪ್ರದೇಶಕ್ಕೆ ಮಾರಾಟ ಮಾಡಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರಿನಿಂದ ಸ್ಪ್ಲೆಂಡರ್ ಬೈಕ್ ಕದ್ದು ತೆಲುಗು ಸಿನಿಮಾ ಪುಷ್ಪ ಶೂಟಿಂಗ್ ಪ್ರದೇಶಕ್ಕೆ ಮಾರಾಟ ಮಾಡಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರಿನಲ್ಲಿ 60 ಸ್ಪ್ಲೆಂಡರ್ ಬೈಕ್‌ಗಳನ್ನು ಕದ್ದಿದ್ದ ನಾಲ್ವರು ಖತರ್ನಾಕ್ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ನಕಲಿ ಕೀ ಬಳಸಿ ಬೈಕ್ ಕದ್ದು, ತಮಿಳುನಾಡಿನ ಬೆಟ್ಟ ಪ್ರದೇಶಗಳಲ್ಲಿ ಹಾಗೂ 'ಪುಷ್ಪ' ಸಿನಿಮಾ ಶೂಟಿಂಗ್ ನಡೆದ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದರು.   

2 Min read
Author : Gowthami K
Published : Jan 06 2026, 12:51 PM IST
Share this Photo Gallery
  • FB
  • TW
  • Linkdin
  • Whatsapp
16
 ಬೆಂಗಳೂರಿನಲ್ಲಿ ಖತರ್ನಾಕ್ ಬೈಕ್ ಕಳ್ಳರ ಬಂಧನ
Image Credit : Asianet News

ಬೆಂಗಳೂರಿನಲ್ಲಿ ಖತರ್ನಾಕ್ ಬೈಕ್ ಕಳ್ಳರ ಬಂಧನ

ಬೆಂಗಳೂರು ನಗರದಲ್ಲಿ ನಿರಂತರವಾಗಿ ನಡೆಯುತ್ತಿದ್ದ ಬೈಕ್ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಖತರ್ನಾಕ್ ಬೈಕ್ ಕಳ್ಳರ ಗ್ಯಾಂಗೊಂದನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ರಂಜಿತ್, ಯುವರಾಜ್, ವಿನೋದ್ ಹಾಗೂ ಮಣಿಕಂಠ ಎಂಬ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ಬರೋಬ್ಬರಿ 60 ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್‌ಗಳನ್ನು ಕಳ್ಳತನ ಮಾಡಿದ್ದು, ಕಳ್ಳತನ ಮಾಡಿದ್ದ ಬೈಕ್‌ಗಳ ಒಟ್ಟು ಮೌಲ್ಯ ಸುಮಾರು ₹50 ಲಕ್ಷ ಎಂದು ಅಂದಾಜಿಸಲಾಗಿದೆ. ಬಂಧಿತ ಆರೋಪಿಗಳು ಬೆಂಗಳೂರಿನಲ್ಲಿ ಕಳ್ಳತನ ಮಾಡಿದ ಕೆಲವು ಬೈಕ್‌ಗಳನ್ನು ತೆಲುಗು ಸಿನಿಮಾ ‘ಪುಷ್ಪ’ ಶೂಟಿಂಗ್ ನಡೆದಿದ್ದ ಪ್ರದೇಶಗಳಲ್ಲಿ ಮಾರಾಟ ಮಾಡಿದ್ದ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ

26
ಸ್ಪ್ಲೆಂಡರ್ ಬೈಕ್‌ಗಳೇ ಟಾರ್ಗೆಟ್ ಯಾಕೆ?
Image Credit : Asianet News

ಸ್ಪ್ಲೆಂಡರ್ ಬೈಕ್‌ಗಳೇ ಟಾರ್ಗೆಟ್ ಯಾಕೆ?

ಆರೋಪಿಗಳು ಇತರೆ ಲಕ್ಷುರಿ ಬೈಕ್‌ಗಳನ್ನು ಬಿಟ್ಟು ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್‌ಗಳನ್ನು ಮಾತ್ರ ಗುರಿಯಾಗಿಸಿಕೊಂಡು ಕಳ್ಳತನ ಮಾಡುತ್ತಿದ್ದರು. ಸ್ಪ್ಲೆಂಡರ್ ಬೈಕ್‌ಗಳನ್ನು ಕಡಿಮೆ ಬೆಲೆಯಲ್ಲಿ ಸುಲಭವಾಗಿ ಮಾರಾಟ ಮಾಡಬಹುದಾದ ಕಾರಣ ಹಾಗೂ ಅವುಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆ ಇರುವುದರಿಂದ ಈ ಬೈಕ್‌ಗಳನ್ನೇ ಆಯ್ಕೆ ಮಾಡಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿಶೇಷವಾಗಿ ತಮಿಳುನಾಡಿನಲ್ಲಿ ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್‌ಗಳಿಗೆ ಹೆಚ್ಚಿನ ಬೇಡಿಕೆ ಇರುವುದನ್ನು ಅರಿತಿದ್ದ ಆರೋಪಿಗಳು, ಈ ಬೈಕ್‌ಗಳನ್ನು ಕಳ್ಳತನ ಮಾಡಿ ಅಲ್ಲಿಗೆ ಸಾಗಿಸಿ ಮಾರಾಟ ಮಾಡುತ್ತಿದ್ದರು.

Related Articles

Related image1
ಮನೆಗೆಲಸದವರಿಂದ ₹1.37 ಕೋಟಿ ಚಿನ್ನಾಭರಣ ಕಳ್ಳತನ; ನಂಬಿಕಸ್ಥರಿಂದಲೇ 900 ಗ್ರಾಂ ಬಂಗಾರ ದರೋಡೆ!
Related image2
ಗಂಭೀರತೆ ಪಡೆದ ಕಲ್ಲಿದ್ದಲು ಕಳ್ಳತನ ಪ್ರಕರಣ, ಪವರ್ ಮೇಕ್ ಸಂಸ್ಥೆಯ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲು
36
ನಕಲಿ ಕೀ ಬಳಸಿ, ಹ್ಯಾಂಡಲ್ ಲಾಕ್ ಮುರಿದು ಕಳ್ಳತನ
Image Credit : Asianet News

ನಕಲಿ ಕೀ ಬಳಸಿ, ಹ್ಯಾಂಡಲ್ ಲಾಕ್ ಮುರಿದು ಕಳ್ಳತನ

ಬಂಧಿತ ಆರೋಪಿಗಳು ಕಳ್ಳತನಕ್ಕೆ ವಿಶೇಷ ತಂತ್ರಗಳನ್ನು ಬಳಸುತ್ತಿದ್ದರು. ನಕಲಿ ಕೀಲಿಗಳನ್ನು ಉಪಯೋಗಿಸಿ ಅಥವಾ ಹ್ಯಾಂಡಲ್ ಲಾಕ್ ಮುರಿದು ಕೆಲವೇ ನಿಮಿಷಗಳಲ್ಲಿ ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದರು. ದಿನಕ್ಕೆ ಸರಾಸರಿ ನಾಲ್ಕು ಬೈಕ್‌ಗಳನ್ನು ಕಳ್ಳತನ ಮಾಡುತ್ತಿದ್ದುದಾಗಿ ವಿಚಾರಣೆ ವೇಳೆ ಆರೋಪಿಗಳು ಒಪ್ಪಿಕೊಂಡಿದ್ದಾರೆ. ಆರೋಪಿಗಳು ಬೆಂಗಳೂರು ನಗರಕ್ಕೆ ಬಸ್‌ನಲ್ಲಿ ಬಂದು, ವಿವಿಧ ಪ್ರದೇಶಗಳಲ್ಲಿ ನಿಲ್ಲಿಸಿದ್ದ ಬೈಕ್‌ಗಳನ್ನು ಟಾರ್ಗೆಟ್ ಮಾಡಿಕೊಂಡು ಕಳ್ಳತನ ನಡೆಸಿ ಬೈಕ್‌ ಅನ್ನು ಡ್ರೈ ಮಾಡಿಕೊಂಡು ಹೋಗುತ್ತಿದ್ದರು.

46
ಸಿಸಿಟಿವಿ ಆಧಾರಿಸಿ ಬಂಧನ
Image Credit : Asianet News

ಸಿಸಿಟಿವಿ ಆಧಾರಿಸಿ ಬಂಧನ

ಬೈಕ್ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿದ್ದ ಹಿನ್ನೆಲೆ ಬೆಂಗಳೂರು ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ತನಿಖೆ ನಡೆಸಿದ್ದರು. ಸಿಸಿಟಿವಿ ದೃಶ್ಯಾವಳಿಗಳ ಸುಳಿವಿನ ಮೇರೆಗೆ ಆರೋಪಿಗಳನ್ನು ಗುರುತಿಸಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧನದ ಬಳಿಕ ಆರೋಪಿಗಳಿಂದ 60 ಕಳ್ಳತನಗೊಂಡ ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

56
ತಮಿಳುನಾಡಿಗೆ ಬೈಕ್ ಸಾಗಾಟ, ಬೆಟ್ಟ ಪ್ರದೇಶಗಳಲ್ಲಿ ಮಾರಾಟ
Image Credit : Asianet News

ತಮಿಳುನಾಡಿಗೆ ಬೈಕ್ ಸಾಗಾಟ, ಬೆಟ್ಟ ಪ್ರದೇಶಗಳಲ್ಲಿ ಮಾರಾಟ

ಪೊಲೀಸ್ ತನಿಖೆಯಲ್ಲಿ, ಬೆಂಗಳೂರಿನಲ್ಲಿ ಕಳ್ಳತನ ಮಾಡಿದ್ದ ಬೈಕ್‌ಗಳನ್ನು ತಮಿಳುನಾಡಿನ ಜೋಲಾರಪೇಟೆ ಹಾಗೂ ತಿರುಪತ್ತೂರು ಪ್ರದೇಶಗಳಿಗೆ ಸಾಗಿಸಿ ಮಾರಾಟ ಮಾಡುತ್ತಿದ್ದ ಸಂಗತಿ ಬಹಿರಂಗವಾಗಿದೆ. ಅಲ್ಲದೆ, ವೆಲ್ಲೂರು ಜಿಲ್ಲೆಯ ವಡಗೋತ್ತೂರು ಗ್ರಾಮದ ನಿವಾಸಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಬೈಕ್‌ಗಳನ್ನು ಮಾರಾಟ ಮಾಡಲಾಗುತ್ತಿತ್ತು. ವಡಗೋತ್ತೂರು ಗ್ರಾಮ ಬೆಟ್ಟ ಪ್ರದೇಶವಾಗಿರುವುದರಿಂದ, ಬೆಟ್ಟದ ರಸ್ತೆಗಳಲ್ಲಿ ಓಡಿಸಲು ಹೀರೋ ಹೋಂಡಾ ಸ್ಪ್ಲೆಂಡರ್ ಬೈಕ್‌ಗಳೇ ಸೂಕ್ತ . ಬೆಟ್ಟದ ರಸ್ತೆಗಳಲ್ಲಿ ಫಸ್ಟ್ ಗೇರ್‌ನಲ್ಲಿ ಸುಲಭವಾಗಿ ಈ ಬೈಕ್‌ ಅನ್ನು ಚಾಲನೆ ಮಾಡಬಹುದಾಗಿದ್ದು, ಉತ್ತಮ ಮೈಲೇಜ್ ಮತ್ತು ಬಾಳಿಕೆ ದೊರಕುವ ಕಾರಣ ಈ ಬೈಕ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

66
ತಮಿಳುನಾಡು ಮೂಲದ ಟೆಕ್ಕಿಯಿಂದ ಲಕ್ಷುರಿ ಲ್ಯಾಪ್‌ ಕಳ್ಳತನ, ಪಿಜಿಗಳೇ ಟಾರ್ಗೆಟ್‌!
Image Credit : Asianet News

ತಮಿಳುನಾಡು ಮೂಲದ ಟೆಕ್ಕಿಯಿಂದ ಲಕ್ಷುರಿ ಲ್ಯಾಪ್‌ ಕಳ್ಳತನ, ಪಿಜಿಗಳೇ ಟಾರ್ಗೆಟ್‌!

ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ಲ್ಯಾಪ್ಟಾಪ್ ಕಳ್ಳತನ ಪ್ರಕರಣದಲ್ಲಿ ರಾಜದೋರೈ ಮತ್ತು ಗೌತಮ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ರಾಜದೋರೈ ಪಿಜಿ ನಿವಾಸಗಳನ್ನು ಗುರಿಯಾಗಿಸಿಕೊಂಡು ಬೆಳಗಿನ ಜಾವ ಲ್ಯಾಪ್ಟಾಪ್‌ಗಳನ್ನು ಕಳ್ಳತನ ಮಾಡುತ್ತಿದ್ದರೆ, ತಮಿಳುನಾಡು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಹಾಗೂ ಡೇಟಾ ಅನಾಲಿಸ್ಟ್ ಆಗಿರುವ ಗೌತಮ್ ಕಳ್ಳತನವಾದ ಲ್ಯಾಪ್ಟಾಪ್‌ಗಳನ್ನು ಖರೀದಿಸಿ ಮಾರಾಟ ಮಾಡುತ್ತಿದ್ದನು. ಈತ ಲ್ಯಾಪ್ ಟಾಪ್ ಶಾಪ್ ಇಟ್ಟಿದ್ದ. ರಾಜದೊರೈ ಮೂಲಕ ಲ್ಯಾಪ್ ಟಾಪ್ ಕಳ್ಳತನ ಮಾಡಿಸಿ ಮಾರುತ್ತಿದ್ದ. ಸಿಸಿಟಿವಿ ದೃಶ್ಯಾವಳಿಗಳ ಆಧಾರದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಸುಮಾರು ₹40 ಲಕ್ಷ ಮೌಲ್ಯದ ವಿವಿಧ ಕಂಪನಿಗಳ 48 ಲ್ಯಾಪ್ಟಾಪ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ಬೆಂಗಳೂರು
ಬೈಕರ್
ಕಳ್ಳತನ ಪ್ರಕರಣ
ತಮಿಳುನಾಡು

Latest Videos
Recommended Stories
Recommended image1
ಕೊಗೀಲು ಅಕ್ರಮ ಮನೆಗಳ ತೆರವು ಪ್ರಕರಣ; 262 ಅರ್ಜಿಗಳ ಪೈಕಿ, 37 ಮಂದಿ ಮಾತ್ರ ಮನೆ ಪಡೆಯಲು ಅರ್ಹರು!
Recommended image2
ದೀರ್ಘಾವಧಿ ಸಿಎಂ ಬೆನ್ನಲ್ಲೇ, ಪೂರ್ಣಾವಧಿ ಸಿಎಂ ಆಸೆ ಬಿಚ್ಚಿಟ್ಟ ಸಿದ್ದರಾಮಯ್ಯ! ಹೈಕಮಾಂಡ್ ಮೇಲೆ ಹೆಚ್ಚಿದ ವಿಶ್ವಾಸ!
Recommended image3
ಸೌಜನ್ಯ ಪ್ರಕರಣ ಮರುತನಿಖೆಗೆ ಕೋರಿ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾರ್ಚ್ 23ಕ್ಕೆ ಮುಂದೂಡಿದ ಸುಪ್ರೀಂ
Related Stories
Recommended image1
ಮನೆಗೆಲಸದವರಿಂದ ₹1.37 ಕೋಟಿ ಚಿನ್ನಾಭರಣ ಕಳ್ಳತನ; ನಂಬಿಕಸ್ಥರಿಂದಲೇ 900 ಗ್ರಾಂ ಬಂಗಾರ ದರೋಡೆ!
Recommended image2
ಗಂಭೀರತೆ ಪಡೆದ ಕಲ್ಲಿದ್ದಲು ಕಳ್ಳತನ ಪ್ರಕರಣ, ಪವರ್ ಮೇಕ್ ಸಂಸ್ಥೆಯ ಇಬ್ಬರ ವಿರುದ್ಧ ಎಫ್‌ಐಆರ್‌ ದಾಖಲು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved