MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • Bengaluru: ಇನ್‌ಸ್ಟಾಗ್ರಾಂ ಪ್ರೀತಿ, ಆಮೇಲೆ ವಿಕೃತಿ: ಪ್ರೇಯಸಿ, ಆಕೆಯ ಪೋಷಕರಿಗೂ ಬೆಂಕಿ ಹಚ್ಚಿದ ಪಾಪಿ!

Bengaluru: ಇನ್‌ಸ್ಟಾಗ್ರಾಂ ಪ್ರೀತಿ, ಆಮೇಲೆ ವಿಕೃತಿ: ಪ್ರೇಯಸಿ, ಆಕೆಯ ಪೋಷಕರಿಗೂ ಬೆಂಕಿ ಹಚ್ಚಿದ ಪಾಪಿ!

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾದ ಪ್ರೇಯಸಿ ಮತ್ತು ಆಕೆಯ ಪೋಷಕರ ಮೇಲೆ ಚಂದು ಎಂಬ ಆರೋಪಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಬೈಕ್ ವಿಚಾರವಾಗಿ ನಡೆದ ಗಲಾಟೆಯೇ ಈ ಕೃತ್ಯಕ್ಕೆ ಕಾರಣವಾಗಿದ್ದು, ಗಾಯಾಳುಗಳು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

1 Min read
Author : Mahmad Rafik
Published : Mar 08 2026, 11:52 AM IST
Share this Photo Gallery
  • FB
  • TW
  • Linkdin
  • Whatsapp
15
 ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಆರೋಪಿ
Image Credit : Asianet News

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಆರೋಪಿ

ಪ್ರೇಯಸಿ ಸೇರಿದಂತೆ ಮೂವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾರ್ಚ್ 6ರಂದು ಬೆಂಗಳೂರಿನ ತರಬನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೂವರು ಗಾಯಾಳುಗಳು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರೇಯಸಿ ತಾಯಿ ಮಂಜಮ್ಮ ಆರೋಗ್ಯಸ್ಥಿತಿ ಗಂಭೀರವಾಗಿದೆ.

25
 ಇನ್‌ಸ್ಟಾಗ್ರಾಂ
Image Credit : Instagram

ಇನ್‌ಸ್ಟಾಗ್ರಾಂ

ಚಂದು ಅಲಿಯಾಸ್ ಪಾಂಡು ಬಂಧಿತ ಆರೋಪಿ. ಪ್ರೇಯಸಿ ಸುಮಲತಾ, ಪ್ರೇಯಸಿ ತಾಯಿ-ತಂದೆಗೆ ಬೆಂಕಿ ಹಚ್ಚಿದ್ದಾನೆ. ಮದುವೆಯಾಗಿ ಮಕ್ಕಳಿದ್ರೂ ಇನ್‌ಸ್ಟಾಗ್ರಾಂ ಮೂಲಕ ಸುಮಲತಾಳ ಪರಿಚಯ ಮಾಡಿಕೊಂಡಿದ್ದನು. ಕಳೆದ ಆರು ವರ್ಷಗಳಿಂದ ಇಬ್ಬರು ಪ್ರೀತಿ-ಪ್ರೇಮ ಅಂತ ಸುತ್ತಾಡಿದ್ದಾರೆ. ಆದ್ರೆ ಸುಮಲತಾಗೆ ಬೇರೊಬ್ಬನ ಜೊತೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಮದುವೆ ಬಳಿಕ ಚಂದುನಿಂದ ಸುಮಲತಾ ದೂರವಾಗಿದ್ದಳು.

Related Articles

Related image1
ಸ್ಯಾಂಡಲ್​ವುಡ್​ ಚೆಲುವೆ ಪ್ರೇಮಾ ಮದುವೆ? ಹಿಂಟ್ಸ್​ ಕೊಟ್ಟ ನಟಿ ತಾರಾ ಅನುರಾಧ- ಯಾರೀ ಚೆಲುವ?
Related image2
ತಾಳಿ ಕಟ್ಟೋವಾಗ ಮದುವೆ ಮಂಟಪಕ್ಕೆ ಪ್ರಿಯಕರನ ಎಂಟ್ರಿ, ಕೊನೆಯ ಕ್ಷಣದಲ್ಲಿ ವಧು ಮಾಡಿದ್ದೇನು? ಇದು ಸಿನಿಮಾ ಅಲ್ಲ, ರಿಯಲ್ ಸ್ಟೋರಿ
35
ಸಂಬಂಧ
Image Credit : Asianet News

ಸಂಬಂಧ

ಗಂಡನಿಗೆ ವಿಷಯ ಗೊತ್ತಾಗ್ತಿದ್ದಂತೆ ಸುಮಲತಾ ಚಂದು ಜೊತೆ ಹೋಗಿದ್ದಳು. ಆರಂಭದಲ್ಲಿ ಸುಮಲತಾಳನ್ನು ಚೆನ್ನಾಗಿಯೇ ನೋಡಿಕೊಂಡಿದ್ದ ಚಂದು ನಂತರ ಕಿರುಕುಳ ನೀಡಲು ಆರಂಭಿಸಿದ್ದನು. ನಂತರ ಮತ್ತೊಬ್ಬ ಮಹಿಳೆಯನ್ನು ಕರೆದುಕೊಂಡು ಬಂದು ಮನೆಯಲ್ಲಿಟ್ಟುಕೊಂಡಿದ್ದಾನೆ. ಇದನ್ನು ಸುಮಲತಾ ಪ್ರಶ್ನೆ ಮಾಡಿದ್ದಾಳೆ. ಚಂದು ಜೊತೆ ಬಂದಿರುವ ಮಹಿಳೆಗೆ 10 ವರ್ಷದ ಮಗನಿದ್ದಾನೆ ಎಂದು ಸುಮಲತಾ ಹೇಳಿದ್ದಾಳೆ. ಇದರಿಂದ ಚಂದುವಿನಿಂದ ಸುಮಲತಾ ದೂರವಾಗಿದ್ದಳು.

ಇದನ್ನೂ ಓದಿ: KSRTCಯಲ್ಲಿ ಕೆಲಸ ಕೊಡಿಸುವ ಆಮಿಷ: ಹೆಂಡತಿ, ಮಕ್ಕಳ ಮೇಲೆ ಆಣೆ ಮಾಡಿ 12 ಲಕ್ಷಕ್ಕೂ ಹೆಚ್ಚು ವಂಚನೆ

45
ಬೈಕ್ ವಿಚಾರವಾಗಿ ಗಲಾಟೆ
Image Credit : Asianet News

ಬೈಕ್ ವಿಚಾರವಾಗಿ ಗಲಾಟೆ

ಶುಕ್ರವಾರ ಸಂಜೆ ಸುಮಾರು 6 ಗಂಟೆಗೆ ಬೈಕ್ ವಿಚಾರವಾಗಿ ಸುಮಲತಾ ಮತ್ತು ಚಂದು ಜೊತೆ ಗಲಾಟೆಯಾಗಿದೆ. ಬೈಕ್ ಕೊಡಲ್ಲ ಎಂದು ಸುಮಲತಾ ಮತ್ತು ತಾಯಿ ಮಂಜಮ್ಮ, ತಂದೆ ಶ್ರೀರಾಮುಲು ಹೇಳಿದ್ದಾರೆ. ಇದರಿಂದ ಕೋಪಗೊಂಡ ಚಂದು ಮೂವರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾನೆ.

ಇದನ್ನೂ ಓದಿ: ಯಾರನ್ನ ನಂಬೋದು? ಸೈಟ್ ಮಾರಿದ ಹಣಕ್ಕಾಗಿ ಪ್ರಾಣ ಸ್ನೇಹಿತನೇ ನಕಲಿ ಪೊಲೀಸ್ ಬಳಸಿ ದರೋಡೆ ಮಾಡಿಸಿದ!

55
ವಿಕ್ಟೋರಿಯಾ ಆಸ್ಪತ್ರೆ
Image Credit : Asianet News

ವಿಕ್ಟೋರಿಯಾ ಆಸ್ಪತ್ರೆ

ಬೆಂಕಿ ದಾಳಿಗೆ ಒಳಗಾದ ಮೂವರನ್ನು ಸ್ಥಳೀಯರು ರಕ್ಷಣೆ ಮಾಡಿ, ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಸದ್ಯ ಹೆಚ್ಚಿನ ಚಿಕಿತ್ಸೆಗಾಗಿ ಮೂವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಶ್ರೀರಾಮುಲು ಮತ್ತು ಸುಮಲತಾ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಜಮ್ಮ ಗಂಭೀರವಾಗಿದ್ದಾರೆ. ಈ ಹಿಂದೆ ಸೋಲದೇವನಹಳ್ಳಿ ಅಲ್ಲಿ ದೂರು ದಾಖಲಾಗಿತ್ತು.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಬೆಂಗಳೂರು
ಕ್ರೈಮ್ ನ್ಯೂಸ್
ಸಂಬಂಧಗಳು

Latest Videos
Recommended Stories
Recommended image1
ತಂಗಿಯ ಮದುವೆಗೆ ಆಮಂತ್ರಣ ಕೊಡಲು ಹೋಗಿದ್ದಾಗ ಮಧ್ಯರಾತ್ರಿ ಹೊತ್ತಿ ಉರಿದ ಕಾರು!ಅದೃಷ್ಟವಶಾತ್ ಅಣ್ಣ ಪಾರು!
Recommended image2
PM e-bus scheme: ಹಳ್ಳಿ ಹಳ್ಳಿಗೂ ಎಲೆಕ್ಟ್ರಿಕ್ ಬಸ್ ಓಡಿಸಲು KSRTC ಸಿದ್ಧತೆ? ಏನಿದು ಪೋಗ್ರಾಮ್?
Recommended image3
ಯಾರನ್ನ ನಂಬೋದು? ಸೈಟ್ ಮಾರಿದ ಹಣಕ್ಕಾಗಿ ಪ್ರಾಣ ಸ್ನೇಹಿತನೇ ನಕಲಿ ಪೊಲೀಸ್ ಬಳಸಿ ದರೋಡೆ ಮಾಡಿಸಿದ!
Related Stories
Recommended image1
ಸ್ಯಾಂಡಲ್​ವುಡ್​ ಚೆಲುವೆ ಪ್ರೇಮಾ ಮದುವೆ? ಹಿಂಟ್ಸ್​ ಕೊಟ್ಟ ನಟಿ ತಾರಾ ಅನುರಾಧ- ಯಾರೀ ಚೆಲುವ?
Recommended image2
ತಾಳಿ ಕಟ್ಟೋವಾಗ ಮದುವೆ ಮಂಟಪಕ್ಕೆ ಪ್ರಿಯಕರನ ಎಂಟ್ರಿ, ಕೊನೆಯ ಕ್ಷಣದಲ್ಲಿ ವಧು ಮಾಡಿದ್ದೇನು? ಇದು ಸಿನಿಮಾ ಅಲ್ಲ, ರಿಯಲ್ ಸ್ಟೋರಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved