MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ಬಿಗ್ ಬಾಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Bengaluru Weather: ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!

Bengaluru Weather: ರಾಜ್ಯಕ್ಕೆ ಈಶಾನ್ಯ ಮಾರುತ- ದಶಕದ ದಾಖಲೆಯ ಚಳಿಗೆ ಸಿದ್ಧರಾಗಿ; ಬೆಂಗಳೂರು ಸ್ಥಿತಿ ಏನು ನೋಡಿ!

ರಾಜ್ಯದಲ್ಲಿ ಈಶಾನ್ಯ ಮಾರುತದ ಪ್ರಭಾವದಿಂದಾಗಿ ಚಳಿಯ ತೀವ್ರತೆ ಹೆಚ್ಚಾಗಿದೆ. ಹವಾಮಾನ ಇಲಾಖೆಯು ಬೆಂಗಳೂರಿನಲ್ಲಿ ಕಳೆದ 9 ವರ್ಷಗಳಲ್ಲಿಯೇ ದಾಖಲೆಯ ಚಳಿ ಉಂಟಾಗುವ ಮುನ್ಸೂಚನೆ ನೀಡಿದ್ದು, ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿದೆ.

2 Min read
Suchethana D
Published : Dec 09 2025, 01:08 PM IST
Share this Photo Gallery
  • FB
  • TW
  • Linkdin
  • Whatsapp
17
ಹಿಂದೆಂದಿಗಿಂತಲೂ ಹೆಚ್ಚು ಚಳಿ
Image Credit : social media

ಹಿಂದೆಂದಿಗಿಂತಲೂ ಹೆಚ್ಚು ಚಳಿ

ಇದಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಚಳಿಯ ವಾತಾವರಣ ಇರುವುದನ್ನು ನೋಡಬಹುದು. ಅದರಲ್ಲಿಯೂ ಕೆಲವು ದಿನಗಳಿಂದ ಈಶಾನ್ಯ ಮಾರುತ ರಾಜ್ಯಕ್ಕೆ ಅಪ್ಪಳಿಸಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಚಳಿಯ ಮುನ್ಸೂಚನೆ ನೀಡಲಾಗಿದೆ. ಅದರಲ್ಲಿಯೂ ಬೆಂಗಳೂರಿನಲ್ಲಿ, ಕಳೆದ ಒಂಬತ್ತು ವರ್ಷಗಳಲ್ಲಿಯೇ ದಾಖಲೆಯ ಚಳಿ ಎದುರಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

27
ಬೆಂಗಳೂರಿನಲ್ಲಿ ವಿಪರೀತ ಚಳಿ
Image Credit : our own

ಬೆಂಗಳೂರಿನಲ್ಲಿ ವಿಪರೀತ ಚಳಿ

ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ವಿಪರೀತ ಚಳಿ ಇರಲಿದ್ದು, ಕಳೆದ ವಾರದಿಂದ 16 ಡಿಗ್ರಿ ಸೆಲ್ಸಿಯಸ್‌ಗೆ ಹತ್ತಿರದಲ್ಲಿರುವ ಕನಿಷ್ಠ ತಾಪಮಾನವು ಮುಂದಿನ ವಾರ 12 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Related Articles

Related image1
ದೇವಾಲಯಕ್ಕೆ ಅಪಪ್ರಚಾರ ಹಿನ್ನೆಲೆ: ಈ ದೇವಸ್ಥಾನದಲ್ಲಿ ಮದುವೆ ನಿಷೇಧ- ಸರ್ಕಾರಕ್ಕೆ ಹೀಗೊಂದು ಪತ್ರ!
Related image2
2026ರಲ್ಲಿ ಟೂರ್​ ಪ್ಲ್ಯಾನ್​ ಮಾಡ್ತಿದ್ದೀರಾ? ರಜೆಗಳ ಫುಲ್​ ಡಿಟೇಲ್ಸ್​ ನಿಮಗಾಗಿ- ತಿಂಗಳು ಆಯ್ಕೆ ಮಾಡಿ, ಪ್ಲ್ಯಾನ್​ ಮಾಡಿ
37
2016ರಲ್ಲೂ ಆಗಿತ್ತು!
Image Credit : our own

2016ರಲ್ಲೂ ಆಗಿತ್ತು!

2016ರ ಡಿಸೆಂಬರ್‌ 11ರಂದು ಬೆಂಗಳೂರಿನ ಕನಿಷ್ಠ ತಾಪಮಾನ 12 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿತ್ತು. ಇದು 2011ರಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನವಾಗಿದೆ. ಅದರ ಬಳಿಕ ಇದೀಗ ರಾಜ್ಯ ಅದರಲ್ಲಿಯೂ ಬೆಂಗಳೂರು ಇಂಥ ತಾಪಮಾನ ಕಾಣಲಿದೆ.

47
ಮಂಜು ಕವಿದ ವಾತಾವರಣ
Image Credit : our own

ಮಂಜು ಕವಿದ ವಾತಾವರಣ

ಬೆಂಗಳೂರಿನಲ್ಲಿ ತಾಪಮಾನವು ತುಂಬಾ ಕಡಿಮೆಯಾಗದಿದ್ದರೂ, ಬೆಳಿಗ್ಗೆ ಮಂಜು ಕವಿದ ವಾತಾವರಣದೊಂದಿಗೆ ಅದು ಇನ್ನೂ ಸಾಮಾನ್ಯಕ್ಕಿಂತ ಕಡಿಮೆ ಇರುತ್ತದೆ. ಐಎಂಡಿ ದತ್ತಾಂಶದ ಪ್ರಕಾರ, ಡಿಸೆಂಬರ್‌ನಲ್ಲಿ ಬೆಂಗಳೂರಿನ ಸರಾಸರಿ ಕನಿಷ್ಠ ತಾಪಮಾನ 16.4 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

57
12- 14ರ ಮಧ್ಯೆ ಚಳಿ
Image Credit : unsplush

12- 14ರ ಮಧ್ಯೆ ಚಳಿ

ಮೊನ್ನೆ ಭಾನುವಾರ, ಭಾನುವಾರ, ಬೆಂಗಳೂರಿನ ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ಆಗಿತ್ತು. ಈ ವಾರ ತಾಪಮಾನವು 12 ಡಿಗ್ರಿ ಸೆಲ್ಸಿಯಸ್ ಮತ್ತು 14 ಡಿಗ್ರಿ ಸೆಲ್ಸಿಯಸ್ ನಡುವೆ ಇರುತ್ತದೆ. ಈಶಾನ್ಯ ಮಾರುತಗಳು, ಸ್ಪಷ್ಟ ಆಕಾಶ, ಒಣ ಗಾಳಿ ಮತ್ತು ಸ್ಥಿರವಾದ ಗಾಳಿಯಿಂದಾಗಿ ಚಳಿ ಹೆಚ್ಚಾಗಿ ಉಂಟಾಗುತ್ತದೆ ಎಂದು ಇಲಾಖೆ ಹೇಳಿದೆ.

67
 ಶೀತಲಗಾಳಿ
Image Credit : others

ಶೀತಲಗಾಳಿ

ಇನ್ನು, ಉತ್ತರ ಹಾಗೂ ದಕ್ಷಿಣ ಭಾರತದೆಲ್ಲಡೆ ಶೀತಗಾಳಿ ಬೀಸುವ ಸಾಧ್ಯತೆಯೂ ಹೆಚ್ಚಾಗಿದೆ. ಈ ವಾರ ಶೀತಗಾಳಿ ಹೆಚ್ಚಾಗಲಿದ್ದು, ಮುಂದಿನ ವಾರ ಸಾಮಾನ್ಯ ಚಳಿಗಾಲದ ತಾಪಮಾನ ಇರಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

77
ಈಶಾನ್ಯ ಮಾರುತ ಬರುವುದು ಎಲ್ಲಿಂದ?
Image Credit : Getty

ಈಶಾನ್ಯ ಮಾರುತ ಬರುವುದು ಎಲ್ಲಿಂದ?

ಹಿಮಾಲಯ ಅಥವಾ ಧ್ರುವ ಪ್ರದೇಶಗಳಂಥ ಅತ್ಯಂತ ಎತ್ತರದ ಪ್ರದೇಶಗಳಿಂದ ಬೀಸುವ ಗಾಳಿಗೆ ಈಶಾನ್ಯ ಮಾರುತ ಎನ್ನುತ್ತಾರೆ. ಇದು ಸಹಜವಾಗಿ ಉತ್ತರ ಮತ್ತು ಪೂರ್ವ ದಿಕ್ಕಿನಿಂದ ಬೀಸುವ ಗಾಳಿಯಾಗಿದೆ. ಚಳಿಗಾಲದಲ್ಲಿ, ಈ ಮಾರುತವು ಉತ್ತರ ಭಾರತದ ಮೇಲಿರುವ ಬೆಚ್ಚಗಿನ ಗಾಳಿಯನ್ನು ಸ್ಥಳಾಂತರಿಸುತ್ತದೆ. ಇದರಿಂದಾಗಿ ತಾಪಮಾನದಲ್ಲಿ ಏಕಾಏಕಿ ಕುಸಿತ ಉಂಟಾಗುವುದರ ಪರಿಣಾಮ ಹೀಗೆ ಆಗುತ್ತದೆ ಎನ್ನುತ್ತಾರೆ ತಜ್ಞರು.

About the Author

SD
Suchethana D
Suchetana ಮಲೆನಾಡಿನ ಹೆಬ್ಬಾಗಿಲು ಶಿರಸಿಯವಳು. ಓದಿದ್ದು LLB, ಒಲಿದದ್ದು ಪತ್ರಿಕೋದ್ಯಮ, ಪ್ರಜಾವಾಣಿಯಲ್ಲಿ 15 ವರ್ಷಗಳ ಅನುಭವ. ಇದರಲ್ಲಿ 10 ವರ್ಷ ನ್ಯಾಯಾಂಗ ವರದಿಗಾರಿಕೆ. ಕಾನೂನು ಮತ್ತು ಮಹಿಳಾ ಸಂವೇದನೆಗೆ ಸಂಬಂಧಿಸಿದ ಲೇಖನಗಳಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಮುಂಬೈನ ಲಾಡ್ಲಿ ಮೀಡಿಯಾ ಅವಾರ್ಡ್​, ರೋಟರಿ ಎಕ್ಸಲೆನ್ಸ್​ ಅವಾರ್ಡ್​ ಸೇರಿದಂತೆ ಕೆಲವು ಪ್ರಶಸ್ತಿಗಳು ಲಭಿಸಿವೆ. ಚೀನಾದಲ್ಲಿ ನಡೆದ ಭಾರತ ಮಟ್ಟದ ಯುವ ನಿಯೋಗದಲ್ಲಿ ಮಾಧ್ಯಮ ಕ್ಷೇತ್ರದಿಂದ ಪ್ರತಿನಿಧಿಯಾಗಿ ಆಯ್ಕೆ. ವಿಜಯವಾಣಿಯಲ್ಲಿ ಕೆಲಸ ಮಾಡಿ ಈಗ ದೂರದರ್ಶನ ಚಂದನದಲ್ಲಿ ಮತ್ತು ಏಷ್ಯಾನೆಟ್​ ಸುವರ್ಣದಲ್ಲಿ ಫ್ರೀಲ್ಯಾನ್ಸರ್​ ಆಗಿ ಕೆಲಸ ನಿರ್ವಹಣೆ.
ಕರ್ನಾಟಕ ಸುದ್ದಿ
ಹವಾಮಾನ ಮುನ್ಸೂಚನೆ
ಬೆಂಗಳೂರು

Latest Videos
Recommended Stories
Recommended image1
ಕೆಕೆಆರ್‌ಟಿಸಿ ಬಸ್ ಪಲ್ಟಿ; ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ; ಕಂಡಕ್ಟರ್ ಸ್ಥಿತಿ ಗಂಭೀರ!
Recommended image2
ದಯಮಾಡಿ ಅರ್ಥ ಮಾಡಿಕೊಳ್ಳಿ ತಪ್ಪು ತಿಳಿಯಬೇಡಿ: ಸೋದರನ ಪೋಸ್ಟ್‌ಗೆ ಹೆಬ್ಬಾಳ್ಕರ್ ಪ್ರತಿಕ್ರಿಯೆ
Recommended image3
ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!
Related Stories
Recommended image1
ದೇವಾಲಯಕ್ಕೆ ಅಪಪ್ರಚಾರ ಹಿನ್ನೆಲೆ: ಈ ದೇವಸ್ಥಾನದಲ್ಲಿ ಮದುವೆ ನಿಷೇಧ- ಸರ್ಕಾರಕ್ಕೆ ಹೀಗೊಂದು ಪತ್ರ!
Recommended image2
2026ರಲ್ಲಿ ಟೂರ್​ ಪ್ಲ್ಯಾನ್​ ಮಾಡ್ತಿದ್ದೀರಾ? ರಜೆಗಳ ಫುಲ್​ ಡಿಟೇಲ್ಸ್​ ನಿಮಗಾಗಿ- ತಿಂಗಳು ಆಯ್ಕೆ ಮಾಡಿ, ಪ್ಲ್ಯಾನ್​ ಮಾಡಿ
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved