MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Sri Krishna Janmashtami Wishes
Teacher's Day Wishes 2026
ISRO GSLV F17 Launch
Bengaluru Suburban Rail
Bike Taxi Approval
Karnataka KPSC Scam
Bengaluru Airport Flyover
Mysuru Dasara 2026 Scehdule
Rohit Sharma Retirement Rumors
Gowri Ganesha Festival
Yeshwantpur Mangaluru Vande Bharat
India Iran Relationship
  • Home
  • Karnataka Districts
  • ಬೆಂಗಳೂರು ಮರಣ ಮಳೆಗೆ 7 ಬಲಿ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಜಿಬಿಎ ಅಧಿಕಾರಿಗಳಿಗೆ ಫುಲ್ ಕ್ಲಾಸ್!

ಬೆಂಗಳೂರು ಮರಣ ಮಳೆಗೆ 7 ಬಲಿ: ಬೌರಿಂಗ್ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಜಿಬಿಎ ಅಧಿಕಾರಿಗಳಿಗೆ ಫುಲ್ ಕ್ಲಾಸ್!

ಬೆಂಗಳೂರಿನಲ್ಲಿ ಸುರಿದ ಭಾರಿ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಹಳೆಯ ಕಾಂಪೌಂಡ್ ಗೋಡೆ ಕುಸಿದು 7 ಬೀದಿ ಬದಿ ವ್ಯಾಪಾರಿಗಳು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ. ನಗರದಾದ್ಯಂತ ಶಿಥಿಲಗೊಂಡ ಕಟ್ಟಡಗಳ ಸಮೀಕ್ಷೆಗೆ ಆದೇಶ.

2 Min read
Author : Sathish Kumar KH
Published : Apr 29 2026, 07:48 PM IST
Share this Photo Gallery
  • FB
  • TW
  • Linkdin
  • Whatsapp
17
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ಸ್ಥಳಕ್ಕೆ ಸಿಎಂ ಭೇಟಿ
Image Credit : Asianet News

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ಸ್ಥಳಕ್ಕೆ ಸಿಎಂ ಭೇಟಿ

ಬೆಂಗಳೂರು (ಏ.29): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸುರಿದ ಭೀಕರ ಮಳೆಗೆ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು 7 ಮಂದಿ ಬೀದಿ ಬದಿ ವ್ಯಾಪಾರಿಗಳು ಸಾವನ್ನಪ್ಪಿದ ಘಟನೆ ರಾಜ್ಯವನ್ನೇ ನಡುಗಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಲ್ಲದೆ, ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಕೆಂಡಾಮಂಡಲರಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
27
ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಫುಲ್ ಕ್ಲಾಸ್
Image Credit : Asianet News

ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಫುಲ್ ಕ್ಲಾಸ್

ದುರಂತ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಮತ್ತು ಪಾಲಿಕೆ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. 'ಈ ಗೋಡೆ ಯಾವಾಗ ಕಟ್ಟಿದ್ದು? ಯಾವಾಗ ಪ್ಲಾನ್ ಆಗಿದ್ದು? ಇದು ಹಳೆಯ ಗೋಡೆ ಅಂತ ನಿಮಗೆ ಗೊತ್ತಿರಲಿಲ್ವಾ? ಚೀಫ್ ಇಂಜಿನಿಯರ್ ಯಾರು?' ಎಂದು ಪ್ರಶ್ನೆಗಳ ಸುರಿಮಳೆಗೈಯುವ ಮೂಲಕ ಅಧಿಕಾರಿಗಳ ಚಳಿ ಬಿಡಿಸಿದರು.

Related Articles

Related image1
ಒಂದೇ ಮಳೆಗೆ ಹಾಳೂರಾದ ಬೆಂಗಳೂರು, 7 ಸಾವು, ಸಂಪೂರ್ಣ ಅಸ್ತವ್ಯಸ್ತಕ್ಕೆ ಯಾರು ಹೊಣೆ?
Related image2
ಬೆಂಗಳೂರು ಮಹಾಮಳೆಗೆ 7 ಬಲಿ: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಭೀಕರ ದುರಂತ; ಮೂವರು ಪುಟ್ಟ ಮಕ್ಕಳೂ ಸಾವು!
37
ಗೋಡೆ ಪರಿಶೀಲಿಸಿದ್ದರೆ 7 ಜೀವ ಉಳಿಯುತ್ತಿದ್ದವು
Image Credit : Asianet News

ಗೋಡೆ ಪರಿಶೀಲಿಸಿದ್ದರೆ 7 ಜೀವ ಉಳಿಯುತ್ತಿದ್ದವು

'ಗೋಡೆ ಹಳೆಯದ್ದು ಅಂತ ಪರಿಶೀಲನೆ ನಡೆಸುವ ಕನಿಷ್ಠ ಜ್ಞಾನ ನಿಮಗಿಲ್ಲವೇ? ನಿಮ್ಮ ನಡುವೆ ಕೋ-ಆರ್ಡಿನೇಷನ್ ಇಲ್ವಾ? ನೀವು ಸರಿಯಾಗಿ ಎಚ್ಚರವಹಿಸಿದ್ದರೆ ಇವತ್ತು 7  ಬಡ ಜೀವಗಳು ಉಳಿಯುತ್ತಿದ್ದವು' ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಿಎಂ, ಇಂಜಿನಿಯರ್‌ಗಳ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿದರು.

47
ಬ್ರಿಟಿಷರ ಕಾಲದ ಗೋಡೆ
Image Credit : Asianet News

ಬ್ರಿಟಿಷರ ಕಾಲದ ಗೋಡೆ

ಸಾವನ್ನಪ್ಪಿದ ಎಂಟು ಮಂದಿ ಕೂಡ ಬೀದಿ ಬದಿಯಲ್ಲಿ ವ್ಯಾಪಾರ ಮಾಡಿಕೊಂಡಿದ್ದ ಬಡವರಾಗಿದ್ದಾರೆ. ಬೌರಿಂಗ್ ಆಸ್ಪತ್ರೆಯ ಈ ಗೋಡೆಯನ್ನು ಬ್ರಿಟಿಷರ ಕಾಲದಲ್ಲಿ ನಿರ್ಮಾಣ ಮಾಡಲಾಗಿತ್ತು ಎಂದು ಹೇಳಲಾಗುತ್ತಿದೆ. ಬೆಂಗಳೂರು ನಗರಸಭೆಯಿಂದ ಹಿಡಿದು ಇಂದಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ)ವರೆಗೂ ಹತ್ತಾರು ಆಡಳಿತ ಮಂಡಳಿಗಳು ಬದಲಾಗಿವೆ.

57
ಗೋಡೆ ಕುಸಿಯುವುದಕ್ಕೂ ಮುನ್ನ ಇದ್ದ ಚಿತ್ರಣ
Image Credit : Asianet News

ಗೋಡೆ ಕುಸಿಯುವುದಕ್ಕೂ ಮುನ್ನ ಇದ್ದ ಚಿತ್ರಣ

ಬೆಂಗಳೂರು ನಗರದ ಅಭಿವೃದ್ಧಿ ಹೆಸರಲ್ಲಿ ಲಕ್ಷಾಂತರ ಕೋಟಿ ರೂಪಾಯಿ ಖರ್ಚು ಮಾಡಲಾಗಿದ್ದರೂ, ಶಿಥಿಲಾವಸ್ಥೆಯಲ್ಲಿದ್ದ ಈ ಹಳೆಯ ಗೋಡೆಯನ್ನು ದುರಸ್ತಿ ಮಾಡುವ ಅಥವಾ ಹೊಸದಾಗಿ ನಿರ್ಮಿಸುವ ಗೋಜಿಗೆ ಅಧಿಕಾರಿಗಳು ಹೋಗಿಲ್ಲ. ಇದು ವ್ಯವಸ್ಥಿತ ಕೊಲೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

67
ಆಸ್ಪತ್ರೆಗೆ ಭೇಟಿ, ಗಾಯಾಳುಗಳ ಆರೋಗ್ಯ ವಿಚಾರಣೆ:
Image Credit : Asianet News

ಆಸ್ಪತ್ರೆಗೆ ಭೇಟಿ, ಗಾಯಾಳುಗಳ ಆರೋಗ್ಯ ವಿಚಾರಣೆ:

ಘಟನಾ ಸ್ಥಳದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಬೌರಿಂಗ್ ಆಸ್ಪತ್ರೆಗೆ ಭೇಟಿ ನೀಡಿದರು. ಕಾಂಪೌಂಡ್ ಕುಸಿತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯ ವಿಚಾರಿಸಿದ ಸಿಎಂ, ಸಂತ್ರಸ್ತರಿಗೆ ಧೈರ್ಯ ತುಂಬಿದರು. ಗಾಯಾಳುಗಳಿಗೆ ಅತ್ಯಂತ ಗುಣಮಟ್ಟದ ಮತ್ತು ಉಚಿತ ಚಿಕಿತ್ಸೆ ನೀಡುವಂತೆ ಆಸ್ಪತ್ರೆ ಸಿಬ್ಬಂದಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

77
ಕಟ್ಟುನಿಟ್ಟಿನ ಆದೇಶ:
Image Credit : Asianet News

ಕಟ್ಟುನಿಟ್ಟಿನ ಆದೇಶ:

ನಗರದಾದ್ಯಂತ ಇರುವ ಇಂತಹ ಹಳೆಯ ಕಾಂಪೌಂಡ್ ಗೋಡೆಗಳು ಮತ್ತು ಶಿಥಿಲಗೊಂಡ ಕಟ್ಟಡಗಳ ಬಗ್ಗೆ ತಕ್ಷಣವೇ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಜಿಬಿಎ ಅಧಿಕಾರಿಗಳಿಗೆ ಸಿಎಂ ಆದೇಶಿಸಿದರು. 'ಇನ್ನೊಮ್ಮೆ ಇಂತಹ ಘಟನೆ ಮರುಕಳಿಸಿದರೆ ನಿಮ್ಮನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು' ಎಂದು ಎಚ್ಚರಿಕೆ ನೀಡಿದರು.

ಬಡ ವ್ಯಾಪಾರಿಗಳ ಸಾವಿನಿಂದ ಶಿವಾಜಿನಗರದಲ್ಲಿ ಸ್ಮಶಾನ ಮೌನ ಆವರಿಸಿದ್ದು, ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸರ್ಕಾರದ ನಿರ್ಲಕ್ಷ್ಯಕ್ಕೆ ಅಮಾಯಕರು ಬಲಿಯಾಗುತ್ತಿರುವುದು ಸಾರ್ವಜನಿಕರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಬೆಂಗಳೂರು
ಕರ್ನಾಟಕ ಮಳೆ
ಮಳೆ

Latest Videos
Recommended Stories
Recommended image1
Shri Krishna Janmashtami 2026: ಉಡುಪಿಯಲ್ಲಿ ಇಂದು ರಾತ್ರಿ 12:12ಕ್ಕೆ ನಡೆಯುವ ಈ ಕಾರ್ಯಕ್ರಮಕ್ಕೆ ಜನಸಾಗರವೇ ಕಾಯುತ್ತಿದೆ!
Recommended image2
​ಬೆಂಗಳೂರು ಮಹಿಳೆಯರೇ ಹುಷಾರ್! ಮಾರ್ನಿಂಗ್ ವಾಕ್ ಮಾಡುವವರ ವಿಡಿಯೋ ಮಾಡ್ತಿದ್ದವನ ಮೊಬೈಲ್‌ನಲ್ಲಿ ಏನೇನಿತ್ತು?
Recommended image3
26ನೇ ವಯಸ್ಸಿಗೇ ₹1 ಕೋಟಿ, 29ಕ್ಕೆ ₹5 ಕೋಟಿ, 31ಕ್ಕೆ ₹7 ಕೋಟಿ, ಬೆಂಗಳೂರಿನ ಟೆಕ್ಕಿಯ FIRE ಸಕ್ಸಸ್‌ ಸ್ಟೋರಿ
Related Stories
Recommended image1
ಒಂದೇ ಮಳೆಗೆ ಹಾಳೂರಾದ ಬೆಂಗಳೂರು, 7 ಸಾವು, ಸಂಪೂರ್ಣ ಅಸ್ತವ್ಯಸ್ತಕ್ಕೆ ಯಾರು ಹೊಣೆ?
Recommended image2
ಬೆಂಗಳೂರು ಮಹಾಮಳೆಗೆ 7 ಬಲಿ: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು ಭೀಕರ ದುರಂತ; ಮೂವರು ಪುಟ್ಟ ಮಕ್ಕಳೂ ಸಾವು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved