MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಬೆಂಗಳೂರು: ನಿರಾಶ್ರಿತರ ಆಶ್ರಮದಲ್ಲಿ ಇರಿಸಿದ್ದ ಅಕ್ರಮ ವಿದೇಶಿ ಮಹಿಳಾ ಪ್ರಜೆಗಳು ಗ್ರಿಲ್ ಮುರಿದು ಎಸ್ಕೇಪ್

ಬೆಂಗಳೂರು: ನಿರಾಶ್ರಿತರ ಆಶ್ರಮದಲ್ಲಿ ಇರಿಸಿದ್ದ ಅಕ್ರಮ ವಿದೇಶಿ ಮಹಿಳಾ ಪ್ರಜೆಗಳು ಗ್ರಿಲ್ ಮುರಿದು ಎಸ್ಕೇಪ್

ಬೆಂಗಳೂರಿನ ಕೊತ್ತನೂರು ಬಳಿಯ 'ಹೋಮ್ ಆಫ್ ಹೋಪ್' ನಿರಾಶ್ರಿತ ಕೇಂದ್ರದಿಂದ ನಾಲ್ವರು ಅಕ್ರಮ ವಿದೇಶಿ ಮಹಿಳೆಯರು ಕಿಟಕಿಯ ಗ್ರಿಲ್ ಮುರಿದು ಪರಾರಿಯಾಗಿದ್ದಾರೆ. ವೀಸಾ ಅವಧಿ ಮುಗಿದಿದ್ದರಿಂದ FRRO ವಶದಲ್ಲಿದ್ದ ಉಗಾಂಡ ಮತ್ತು ನೈಜೀರಿಯಾ ಮೂಲದ ಈ ಮಹಿಳೆಯರಿಗಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.

2 Min read
Author : Gowthami K
Published : May 17 2026, 03:30 PM IST
Share this Photo Gallery
  • FB
  • TW
  • Linkdin
  • Whatsapp
16
ನಿರಾಶ್ರಿತ ಕೇಂದ್ರದಿಂದ ಅಕ್ರಮ ವಿದೇಶಿ ಮಹಿಳೆಯರ ಎಸ್ಕೇಪ್
Image Credit : Asianet News

ನಿರಾಶ್ರಿತ ಕೇಂದ್ರದಿಂದ ಅಕ್ರಮ ವಿದೇಶಿ ಮಹಿಳೆಯರ ಎಸ್ಕೇಪ್

ಬೆಂಗಳೂರು: ನಗರದಲ್ಲಿ ಆತಂಕಕ್ಕೆ ಕಾರಣವಾಗುವಂತಹ ಘಟನೆ ಒಂದು ನಡೆದಿದೆ. ನಿರಾಶ್ರಿತರಿಗಾಗಿ ಕಾರ್ಯನಿರ್ವಹಿಸುತ್ತಿರುವ ಆಶ್ರಮದಲ್ಲಿ ಅಕ್ರಮ ವಿದೇಶಿ ಪ್ರಜೆಗಳು ಇರಿಸಲಾಗಿತ್ತು. ಆದರೆ ವಿದೇಶಿ ಮಹಿಳೆಯರು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ‘ಹೋಮ್ ಆಫ್ ಹೋಪ್’ ನಿರಾಶ್ರಿತ ಕೇಂದ್ರದಿಂದ ನಾಲ್ವರು ವಿದೇಶಿ ಮಹಿಳೆಯರು ಎಸ್ಕೇಪ್ ಆಗಿದ್ದಾರೆ.

Add Asianetnews Kannada as a Preferred SourcegooglePreferred
26
ಕಿಟಕಿಯ ಗ್ರಿಲ್ ಮುರಿದು ಪರಾರಿ
Image Credit : Asianet News

ಕಿಟಕಿಯ ಗ್ರಿಲ್ ಮುರಿದು ಪರಾರಿ

ಮೇ 11ರಂದು ಬೆಳಗ್ಗೆ ಸುಮಾರು 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಶ್ರಮದ ಎರಡನೇ ಅಂತಸ್ತಿನ ಕಿಟಕಿಯ ಗ್ರಿಲ್ ಮುರಿದು ಮಹಿಳೆಯರು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಘಟನೆ ಆಶ್ರಮದ ಭದ್ರತಾ ವ್ಯವಸ್ಥೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಮೇ 11ರಂದು ಘಟನೆ ನಡೆದಿದ್ದು, ಈವರೆಗೆ ಅವರ ಸುಳಿವು ಪತ್ತೆಯಾಗಿಲ್ಲ.

Related Articles

Related image1
ಯೋಗಿ ಮಾದರಿಯಲ್ಲೇ ಪಶ್ಚಿಮ ಬಂಗಾಳ, 24 ಬುಲ್ಡೋಜರ್ ಮೂಲಕ ಅಕ್ರಮ ಕಟ್ಟಡ ನೆಲೆಸಮ
Related image2
Now Playing
ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
36
ಉಗಾಂಡ ಮತ್ತು ನೈಜೀರಿಯಾ ಮೂಲದ ಮಹಿಳೆಯರು
Image Credit : Asianet News

ಉಗಾಂಡ ಮತ್ತು ನೈಜೀರಿಯಾ ಮೂಲದ ಮಹಿಳೆಯರು

ಪರಾರಿಯಾಗಿರುವ ಮಹಿಳೆಯರನ್ನು ಉಗಾಂಡ ಹಾಗೂ ನೈಜೀರಿಯಾ ಮೂಲದವರು ಎಂದು ಗುರುತಿಸಲಾಗಿದೆ. ಅವರ ಹೆಸರುಗಳನ್ನು ತೋಪಿಷ್ಟ, ನಗವ, ಸಫಿನಾ ಮತ್ತು ಪಿತೀನ ಎಂದು ತಿಳಿದುಬಂದಿದೆ. ಇವರು ವೀಸಾ ಅವಧಿ ಮುಗಿದ ಬಳಿಕವೂ ತಮ್ಮ ದೇಶಕ್ಕೆ ಮರಳದೇ ಭಾರತದಲ್ಲೇ ಅಕ್ರಮವಾಗಿ ಉಳಿದಿದ್ದರು.

46
FRRO ವಶದಲ್ಲಿದ್ದ ವಲಸಿಗರು
Image Credit : Asianet News

FRRO ವಶದಲ್ಲಿದ್ದ ವಲಸಿಗರು

ವೀಸಾ ನಿಯಮ ಉಲ್ಲಂಘನೆ ಹಿನ್ನೆಲೆ ಈ ವಿದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ನಂತರ ವಿದೇಶಿಗರ ನೋಂದಣಿ ಕಚೇರಿ (FRRO) ಅಧಿಕಾರಿಗಳು ಜೈಲಿನಲ್ಲಿ ಜಾಗದ ಕೊರತೆಯ ಕಾರಣದಿಂದ ಅವರನ್ನು ‘ಹೋಮ್ ಆಫ್ ಹೋಪ್’ ಆಶ್ರಮದಲ್ಲಿ ಇರಿಸಿದ್ದರು. ಆಶ್ರಮದಲ್ಲಿ ಸಾಕಷ್ಟು ವಿದೇಶಿ ಪ್ರಜೆಗಳನ್ನು ಇಟ್ಟುಕೊಳ್ಳಲಾಗಿದ್ದು, ಅವರ ಮೇಲ್ವಿಚಾರಣೆ FRRO ಅಧಿಕಾರಿಗಳ ಜವಾಬ್ದಾರಿಯಲ್ಲಿತ್ತು.

56
ಅಕ್ರಮ ಚಟುವಟಿಕೆಗಳ ಅನುಮಾನ
Image Credit : Asianet News

ಅಕ್ರಮ ಚಟುವಟಿಕೆಗಳ ಅನುಮಾನ

ಈ ಕೇಂದ್ರದಲ್ಲಿ ತಂಗಿದ್ದ ಕೆಲವು ವಿದೇಶಿಗರ ಬಳಿ ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾದ ಹಿನ್ನೆಲೆಯಲ್ಲಿ ಈಗಾಗಲೇ ಅಕ್ರಮ ಚಟುವಟಿಕೆಗಳ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಪರಾರಿಯಾದ ಮಹಿಳೆಯರು ಕೂಡ ಇದೇ ರೀತಿಯ ಚಟುವಟಿಕೆಯಲ್ಲಿ ಭಾಗಿಯಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

66
ಪೊಲೀಸರ ತನಿಖೆ ಆರಂಭ
Image Credit : Asianet News

ಪೊಲೀಸರ ತನಿಖೆ ಆರಂಭ

ಈ ಘಟನೆಗೆ ಸಂಬಂಧಿಸಿದಂತೆ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಮಹಿಳೆಯರಿಗಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ. ನಗರದ ವಿವಿಧ ಭಾಗಗಳಲ್ಲಿ ನಾಕಾಬಂದಿ ಹಾಗೂ ಪರಿಶೀಲನೆ ಹೆಚ್ಚಿಸಲಾಗಿದೆ. ನಿರಾಶ್ರಿತ ಕೇಂದ್ರದಿಂದ ವಿದೇಶಿ ಮಹಿಳೆಯರು ಪರಾರಿಯಾಗಿರುವುದು ನಗರ ಭದ್ರತೆಗೆ ಸವಾಲಾಗಿದ್ದು, ಅಕ್ರಮ ವಲಸಿಗರ ಮೇಲ್ವಿಚಾರಣೆ ಹಾಗೂ ಭದ್ರತಾ ಕ್ರಮಗಳ ಬಗ್ಗೆ ಗಂಭೀರ ಪ್ರಶ್ನೆಗಳು ಎದ್ದಿವೆ. ಪ್ರಕರಣದ ತನಿಖೆ ಮುಂದುವರಿದಿದ್ದು, ಪರಾರಿಯಾದವರ ಪತ್ತೆಗೆ ಪೊಲೀಸರು ಕಾರ್ಯಾಚರಣೆ ತೀವ್ರಗೊಳಿಸಿದ್ದಾರೆ.

About the Author

GK
Gowthami K
ಒನ್ ಇಂಡಿಯಾ, ಡೈಲಿಹಂಟ್‌, ವಿಜಯ ಕರ್ನಾಟಕ ವೆಬ್‌, ಈಗ ಏಷ್ಯಾನೆಟ್ ಕನ್ನಡ ಸೇರಿ 10 ವರ್ಷಗಳಿಂದಲೂ ಡಿಜಿಟಲ್ ಮಾಧ್ಯಮದಲ್ಲಿದ್ದೇನೆ. ಉಜಿರೆಯ ಎಸ್‌ಡಿಎಂನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯಾಗಿದೆ. ಸುಳ್ಯ ತಾಲೂಕಿನ ಕುಕ್ಕುಜಡ್ಕದವಳು. ಉದ್ಯೋಗ, ರಾಜಕೀಯ, ದೇಶ-ವಿದೇಶ, ವಿಜ್ಞಾನ ಮತ್ತು ವಾಣಿಜ್ಯ, ಸಿನೆಮಾವೆಂದರೆ ಹೆಚ್ಚು ಆಸಕ್ತಿ. ಹಿನ್ನೆಲೆ ಧ್ವನಿ ನೀಡುವುದು ಹವ್ಯಾಸ.
ವಿದೇಶಿಯರು
ಬೆಂಗಳೂರು
ಕರ್ನಾಟಕ ಸುದ್ದಿ
ವಲಸೆ

Latest Videos
Recommended Stories
Recommended image1
ರಾಯಚೂರು:ದಿನಾಲು ಕುಡಿದು ತಾಯಿ ಜತೆಗೆ ಜಗಳವಾಡ್ತಿದ್ದ ಅಣ್ಣನ ಕೊಂದ ತಮ್ಮಆತ್ಮ*ಹತ್ಯೆ ಎಂದು ನಂಬಿಸಲು ಹೆಣ ನೇತು ಹಾಕಿದ!
Recommended image2
NEET: 'ಪರೀಕ್ಷಾ ಪೇ ಚರ್ಚಾ' ಮಾಡೋ ಮೋದಿಯವರೇ ನೀಟ್ ಬಗ್ಗೆ ಯಾವಾಗ? ಆರೆಸ್ಸೆಸ್ ಬಿಜೆಪಿ ವಿರುದ್ಧ ಖರ್ಗೆ ಗಂಭೀರ ಆರೋಪ
Recommended image3
ಬೆಳಗಾವಿ ಶಿವಂ ಅಸೋಸಿಯೇಟ್ಸ್ 4500 ಕೋಟಿ ರೂ ಹಗರಣ ಸಿಐಡಿಗೆ, ಪ್ರಕರಣ ಬೆಳಕಿಗೆ ಬರಲು ಕಾರಣ 15 ಸಾವಿರ ಬಂದೂಕು!
Related Stories
Recommended image1
ಯೋಗಿ ಮಾದರಿಯಲ್ಲೇ ಪಶ್ಚಿಮ ಬಂಗಾಳ, 24 ಬುಲ್ಡೋಜರ್ ಮೂಲಕ ಅಕ್ರಮ ಕಟ್ಟಡ ನೆಲೆಸಮ
Recommended image2
Now Playing
ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved