MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
  • Home
  • Karnataka Districts
  • ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!

ಬೆಳ್ಳಂಬೆಳಗ್ಗೆಯೇ ದೇವರ ಜಾತ್ರೆಗೆ ಹೊರಟ ಭಕ್ತ; ದೈವ ದರ್ಶನಕ್ಕೂ ಮುನ್ನವೇ ಯಮರಾಜ ಕರೆದೊಯ್ದ!

ಹುಮನಾಬಾದ್‌ನ ಶ್ರೀ ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದ ಬಸವಕಲ್ಯಾಣದ ಯುವಕನೋರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ರಾಷ್ಟ್ರೀಯ ಹೆದ್ದಾರಿ 65ರಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ, ವಿಶ್ವಜೀತ್ (30) ಎಂಬ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

1 Min read
Author : Sathish Kumar KH
Published : Jan 27 2026, 03:37 PM IST
Share this Photo Gallery
  • FB
  • TW
  • Linkdin
  • Whatsapp
15
ಶ್ರೀ ವೀರಭದ್ರೇಶ್ವರ ಜಾತ್ರೆ
Image Credit : Asianet News

ಶ್ರೀ ವೀರಭದ್ರೇಶ್ವರ ಜಾತ್ರೆ

ಬೀದರ್ (ಜ.27): ಶ್ರದ್ಧೆ ಮತ್ತು ಸಂಭ್ರಮದ ಪ್ರತೀಕವಾದ ಹುಮನಾಬಾದ್‌ನ ಶ್ರೀ ವೀರಭದ್ರೇಶ್ವರ ಜಾತ್ರೆಗೆ ತೆರಳುತ್ತಿದ್ದ ಯುವಕನೋರ್ವ ದಾರಿ ಮಧ್ಯೆಯೇ ಸಂಭವಿಸಿದ ಅಪಘಾತದಲ್ಲಿ ಅಕಾಲಿಕವಾಗಿ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ. ಬಸವಕಲ್ಯಾಣ ಪಟ್ಟಣದ ನಿವಾಸಿ ವಿಶ್ವಜೀತ್ (30) ಎಂಬುವವರೇ ಈ ದುರ್ಘಟನೆಯಲ್ಲಿ ವಿಧಿವಶರಾದ ದುರ್ದೈವಿ.

25
ಘಟನೆಯ ವಿವರ
Image Credit : Asianet News

ಘಟನೆಯ ವಿವರ

ಪ್ರತಿವರ್ಷದಂತೆ ಈ ಬಾರಿಯೂ ಹುಮನಾಬಾದ್ ವೀರಭದ್ರೇಶ್ವರ ಜಾತ್ರೆಯು ಅದ್ದೂರಿಯಾಗಿ ನಡೆಯುತ್ತಿದ್ದು, ಜಿಲ್ಲೆಯಾದ್ಯಂತ ಭಕ್ತರು ಆಗಮಿಸುತ್ತಿದ್ದಾರೆ. ಅದರಂತೆ ಬಸವಕಲ್ಯಾಣದ ವಿಶ್ವಜೀತ್ ಅವರು ಇಂದು ನಸುಕಿನ ಜಾವ ಸುಮಾರು 4 ಗಂಟೆಯ ವೇಳೆಗೆ ತಮ್ಮ ಎರ್ಟಿಗಾ ಕಾರಿನಲ್ಲಿ ಹುಮನಾಬಾದ್‌ ಕಡೆಗೆ ಪ್ರಯಾಣ ಬೆಳೆಸಿದ್ದರು. ರಾಷ್ಟ್ರೀಯ ಹೆದ್ದಾರಿ 65 ರ ರಾಜೇಶ್ವರ ಗ್ರಾಮದ ಸಮೀಪ ಬರುತ್ತಿದ್ದಂತೆ, ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

Related Articles

Related image1
ಕಲಬುರಗಿ: ಧ್ಯಾನಕ್ಕೆ ಕುಳಿತಾಗಲೇ ಹೃದಯಾಘಾತ; ಗಾಣಗಾಪುರದಲ್ಲಿ ಪದ್ಮಾಸನ ಸ್ಥಿತಿಯಲ್ಲೇ ಭಕ್ತ ಸಾವು!
Related image2
ಚಾಮರಾಜನಗರ: ಪಾದಯಾತ್ರೆಗೆ ಹೋರಟಿದ್ದವರ ಮೇಲೆ ಚಿರತೆ ಅಟ್ಯಾಕ್, ಮಾದಪ್ಪ ಭಕ್ತ ಸಾವು!
35
ಸ್ಥಳದಲ್ಲೇ ಕೊನೆಯುಸಿರು
Image Credit : Asianet News

ಸ್ಥಳದಲ್ಲೇ ಕೊನೆಯುಸಿರು

ಅಪಘಾತದ ತೀವ್ರತೆಗೆ ಕಾರು ಜಖಂಗೊಂಡಿದ್ದು, ಚಾಲಕ ವಿಶ್ವಜೀತ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ನಸುಕಿನ ಜಾವದಲ್ಲಿ ಸಂಭವಿಸಿದ ಈ ಘಟನೆಯು ಸ್ಥಳೀಯರಲ್ಲಿ ಮತ್ತು ಅವರ ಕುಟುಂಬವರ್ಗದಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಈ ಸುದ್ದಿ ಬರಸಿಡಿಲಿನಂತೆ ಎರಗಿದೆ. ವಿಶ್ವಜೀತ್ ಅವರು ಸಮಾಜದಲ್ಲಿ ಸಕ್ರಿಯರಾಗಿದ್ದ ಮೃದು ಸ್ವಭಾವದ ಯುವಕನಾಗಿದ್ದರು ಎಂದು ತಿಳಿದುಬಂದಿದೆ.

45
ಪೊಲೀಸ್ ಭೇಟಿ ಮತ್ತು ಪರಿಶೀಲನೆ
Image Credit : Asianet News

ಪೊಲೀಸ್ ಭೇಟಿ ಮತ್ತು ಪರಿಶೀಲನೆ

ವಿಷಯ ತಿಳಿಯುತ್ತಿದ್ದಂತೆ ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ಹೆದ್ದಾರಿಯಲ್ಲಿ ವಾಹನಗಳನ್ನು ನಿಲ್ಲಿಸುವಾಗ ಪಾಲಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

55
ಗ್ರಾಮಸ್ಥರಲ್ಲಿ ನೋವು
Image Credit : Asianet News

ಗ್ರಾಮಸ್ಥರಲ್ಲಿ ನೋವು

ಶ್ರೀ ವೀರಭದ್ರೇಶ್ವರನ ದರ್ಶನ ಪಡೆಯಬೇಕೆಂಬ ಹಂಬಲದಿಂದ ಹೊರಟಿದ್ದ ಭಕ್ತನೊಬ್ಬ ದಾರಿಮಧ್ಯೆಯೇ ಇಹಲೋಕ ತ್ಯಜಿಸಿರುವುದು ಬಸವಕಲ್ಯಾಣ ಮತ್ತು ಸುತ್ತಮುತ್ತಲ ಗ್ರಾಮಸ್ಥರಲ್ಲಿ ನೋವು ತಂದಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ಸುದ್ದಿ
ಬೀದರ್
ದೇವಸ್ಥಾನ

Latest Videos
Recommended Stories
Recommended image1
ಬೆಂಗಳೂರಿಗೆ ಹೋಗಲು ತಾಯಿಗೆ ದುಡ್ಡು ಕೇಳಿದ ಪುಂಡ ಮಗ; ಹಣ ಕೊಡದ ತಾಯಿ ತಲೆಯನ್ನು ಕಲ್ಲಿನಿಂದ ಜಜ್ಜಿ ಕೊಂ*ದ ಪಾಪಿ!
Recommended image2
ಆಸ್ತಿಗಾಗಿ ಅಪ್ಪನಿಗೇ ವಿಷವಿಕ್ಕಿ ಕೊಂದನಾ ಪುತ್ರ; ದೂರು ಕೊಟ್ಟ ಬೆನ್ನಲ್ಲೇ ತಂದೆಯ ಅನುಮಾನಾಸ್ಪದ ಸಾವು!
Recommended image3
ದಾವಣಗೆರೆ ನವ ವಿವಾಹಿತನ ಆತ್ಮ*ಹತ್ಯೆಗೆ ಮೇಜರ್ ಟ್ವಿಸ್ಟ್; ಹೆಂಡತಿ ಬೇರೆಯವನೊಟ್ಟಿಗೆ ಹೋಗಿದ್ದೇ ಸಾವಿಗೆ ಕಾರಣವಾ?
Related Stories
Recommended image1
ಕಲಬುರಗಿ: ಧ್ಯಾನಕ್ಕೆ ಕುಳಿತಾಗಲೇ ಹೃದಯಾಘಾತ; ಗಾಣಗಾಪುರದಲ್ಲಿ ಪದ್ಮಾಸನ ಸ್ಥಿತಿಯಲ್ಲೇ ಭಕ್ತ ಸಾವು!
Recommended image2
ಚಾಮರಾಜನಗರ: ಪಾದಯಾತ್ರೆಗೆ ಹೋರಟಿದ್ದವರ ಮೇಲೆ ಚಿರತೆ ಅಟ್ಯಾಕ್, ಮಾದಪ್ಪ ಭಕ್ತ ಸಾವು!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved