MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • Mandya ಮಾಜಿ ಸಂಸದೆ ಸುಮಲತಾ ಅಂಬರೀಶ್ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ

Mandya ಮಾಜಿ ಸಂಸದೆ ಸುಮಲತಾ ಅಂಬರೀಶ್ ನಿರ್ಮಿಸಿದ್ದ ಬಸ್ ತಂಗುದಾಣ ನೆಲಸಮ

ಮಾಜಿ ಸಂಸದೆ ಸುಮಲತಾ ಅಂಬರೀಶ್ ನಿರ್ಮಿಸಿದ ಬಸ್ ತಂಗುದಾಣವನ್ನು ನೆಲಸಮಗೊಳಿಸಲಾಗಿದೆ. ಕೇವಲ ಎರಡು ವರ್ಷದ ಹಳೆಯ ಬಸ್ ನಿಲ್ದಾಣವನ್ನು ಕೆಡವಿದ್ದಕ್ಕೆ ಆಕ್ರೋಶ ವ್ಯಕ್ತವಾಯಿತು.

1 Min read
Mahmad Rafik
Published : Aug 25 2025, 11:22 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಮಂಡ್ಯ ಮಾಜಿ ಸಂಸದೆ ಸುಮಲತಾ ಅಂಬರೀಶ್ ಅವರು ತಮ್ಮ ಅನುದಾನದಲ್ಲಿ ನಿರ್ಮಿಸಿದ್ದ ಬಸ್ ತಂಗುದಾಣವನ್ನು ನೆಲಸಮಗೊಳಿಸಿ ಅದೇ ಜಾಗದಲ್ಲಿ ಗ್ರಾಮ ಪಂಚಾಯ್ತಿ ನೂತನ ಕಟ್ಟಡ ನಿರ್ಮಾಣಕ್ಕೆ ಮುಂದಾಗಿದ್ದಾಗ ಬೆಂಬಲಿಗರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಚಿವ ಚಲುವರಾಸ್ವಾಮಿ ಅವರ ಗುದ್ದಲಿ ಪೂಜೆ ಕಾರ್ಯಕ್ರಮ ರದ್ದು ಮಾಡಲಾಯಿತು.

25
Image Credit : Asianet News

ಮದ್ದೂರು ತಾಲೂಕಿನ ಕೌಡ್ಲೆ ಗ್ರಾಮಸ್ಥರ ಒತ್ತಾಯದ ಮೇರೆಗೆ ಈ ಹಿಂದೆ ಸಂಸದರಾಗಿದ್ದ ಸುಮಲತಾ ಅಂಬರೀಶ್ ಅವರು ತಮ್ಮ 5 ಲಕ್ಷ ರು. ಅನುದಾನದಲ್ಲಿ ಬಸ್ ತಂಗುದಾಣ ನಿರ್ಮಾಣ ಮಾಡಿದ್ದರು. ಆದರೆ, ಇದೇ ಜಾಗದಲ್ಲಿ ಗ್ರಾಮ ಪಂಚಾಯ್ತಿ ನೂತನ ಕಟ್ಟಡ ಕಟ್ಟಲು ಬಸ್ ತಂಗುತಾಣವನ್ನು ಗ್ರಾಪಂ ಆಡಳಿತ ಮಂಡಳಿ ನೆಲಸಮ ಮಾಡಿತ್ತು.

Related Articles

Related image1
ಬಿಜೆಪಿ ನಿಮ್ಮನ್ನು ನಿರ್ಲಕ್ಷ್ಯ ಮಾಡಿದೆಯಾ? ಸುಮಲತಾ ಅಂಬರೀಶ್ ಉತ್ತರ ಹೀಗಿತ್ತು
Related image2
ಜನವರಿ ನಂತರ ಸಕ್ರಿಯ ರಾಜಕೀಯದಲ್ಲಿ ತೊಡಗುತ್ತೇನೆ: ಮಾಜಿ ಸಂಸದೆ ಸುಮಲತಾ ಅಂಬರೀಶ್
35
Image Credit : Sumalatha Fb

ಭಾನುವಾರ ಸಚಿವ ಚಲುವರಾಯಸ್ವಾಮಿ ಅವರು ಕೊಪ್ಪ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಜೊತೆ ಕೌಡ್ಲೆ ಗ್ರಾಮದಲ್ಲಿ ನೂತನ ಗ್ರಾಪಂ ಕಚೇರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

45
Image Credit : Sumalatha Fb

ಆದರೆ, ಈ ವಿಷಯ ತಿಳಿದ ಮಾಜಿ ಸಂಸದೆ ಸುಮಲತಾ ಬೆಂಬಲಿಗರು, ಗ್ರಾಮಸ್ಥರು ಬಸ್ ತಂಗುದಾಣ ನಿರ್ಮಾಣವಾದ ಎರಡೇ ವರ್ಷದಲ್ಲಿ ಕೆಡವಿ ಗ್ರಾಮ ಪಂಚಾಯ್ತಿ ಕಚೇರಿ ನಿರ್ಮಾಣಕ್ಕೆ ಮುಂದಾಗಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಉಸ್ತುವಾರಿ ಸಚಿವರು ಗುದ್ದಲಿ ಪೂಜೆ ನೆರವೇರಿಸದಂತೆ ಆಗ್ರಹ ಪಡಿಸಿದರು.

55
Image Credit : Sumalatha Fb

ಪಂಚಾಯ್ತಿ ಅಭಿವೃದ್ಧಿ ಅಧಿಕಾರಿಗಳು ನೂತನ ಗ್ರಾಮ ಪಂಚಾಯ್ತಿ ಕಟ್ಟಡ ನಿರ್ಮಾಣ ಮಾಡಲು ಬಸ್ ತಂಗುತಾಣ ನೆಲಸಮ ಮಾಡಲಾಯಿತು ಎಂದು ಹೇಳಿಕೆ ನೀಡಿ ಹಿನ್ನೆಲೆಯಲ್ಲಿ ಮಾಜಿ ಸಂಸದರ ಬೆಂಬಲಿಗರು ಸಾರ್ವಜನಿಕರ ದುಡ್ಡು ಹೊಡೆಯಲು ಹೊಸ ಕಾಮಗಾರಿ ನಡೆಸಲಾಗುತ್ತಿದೆ ಗ್ರಾಪಂ ಆಡಳಿತ ಮಂಡಳಿ ವಿರುದ್ಧ ಕಿಡಿಕಾರಿದ ಘಟನೆಯೂ ಜರುಗಿತು.

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಸುಮಲತಾ ಅಂಬರೀಶ್
ಮಂಡ್ಯ
ಬಿಜೆಪಿ

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved