MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • Karnataka Districts
  • ಕೇಂದ್ರದಿಂದ ರಾಜ್ಯಕ್ಕೆ ಕೊಟ್ಟ ಯೂರಿಯಾ ಗೊಬ್ಬರ ಕೇರಳಕ್ಕೆ ಕಳಿಸಿದ ಸರ್ಕಾರಿ ಗೋದಾಮು; ರಾಜ್ಯ ರೈತರಿಗೆ ಪಂಗನಾಮ!

ಕೇಂದ್ರದಿಂದ ರಾಜ್ಯಕ್ಕೆ ಕೊಟ್ಟ ಯೂರಿಯಾ ಗೊಬ್ಬರ ಕೇರಳಕ್ಕೆ ಕಳಿಸಿದ ಸರ್ಕಾರಿ ಗೋದಾಮು; ರಾಜ್ಯ ರೈತರಿಗೆ ಪಂಗನಾಮ!

ನಂಜನಗೂಡಿನ ಗೋದಾಮಿನಿಂದ ಕೇರಳಕ್ಕೆ ಯೂರಿಯಾ ಗೊಬ್ಬರ ಕಳ್ಳಸಾಗಣೆ ಪ್ರಕರಣ ಬೆಳಕಿಗೆ. ಚೆಕ್ ಪೋಸ್ಟ್‌ನಲ್ಲಿ 15 ಟನ್ ಗೊಬ್ಬರ ವಶ. ಅಂತರರಾಜ್ಯ ಸಾಗಾಟ ನಿಷೇಧದ ನಡುವೆಯೂ ಅಕ್ರಮ ಸಾಗಾಟ ನಡೆದಿರುವುದು ತೀವ್ರ ಚರ್ಚೆಗೆ ಗ್ರಾಸ.

1 Min read
Sathish Kumar KH
Published : Aug 05 2025, 11:02 AM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ರಾಜ್ಯದಲ್ಲಿ ಗೊಬ್ಬರಕ್ಕಾಗಿ ರೈತರು ಸಾಲು ಸಾಲು ನಿಂತು ಪರದಾಡುತ್ತಿರುವ ಸಂದರ್ಭದಲ್ಲಿ, ನಂಜನಗೂಡಿನ ಗೋದಾಮಿನಿಂದ ಕೇರಳಕ್ಕೆ ಕಳ್ಳಸಾಗಣೆ ಮಾಡಲಾಗುತ್ತಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಕೃಷಿ ಇಲಾಖೆ ಮತ್ತು ಪೊಲೀಸರ ಜಂಟಿ ದಾಳಿಯಲ್ಲಿ ಸುಮಾರು 15 ಟನ್ ಯೂರಿಯಾ ಗೊಬ್ಬರವನ್ನು ವಶಪಡಿಸಿಕೊಳ್ಳಲಾಗಿದೆ.

25
Image Credit : Asianet News

ಈ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದ ಮೂಲೆಹೊಳೆ ಚೆಕ್ ಪೋಸ್ಟ್‌ನಲ್ಲಿ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು, ಸುಮಾರು 330 ಚೀಲ ಯೂರಿಯಾ ಹೊತ್ತೊಯ್ಯುತ್ತಿದ್ದ ಲಾರಿಯೊಂದನ್ನು ವಶಪಡಿಸಿ, ಲಾರಿ ಚಾಲಕನನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಂಡಿದ್ದಾರೆ.

Related Articles

Related image1
ಯೂರಿಯಾ ಪೂರೈಕೆಯಲ್ಲಿ ಕೇಂದ್ರ ಸರ್ಕಾರದ ನಿರ್ಲಕ್ಷ್ಯ: ಸಚಿವ ಚಲುವರಾಯಸ್ವಾಮಿ ವಾಗ್ದಾಳಿ
Related image2
ಯೂರಿಯಾ ಕಾಳಸಂತೆಯಲ್ಲಿ ಮಾರಾಟ, ಸಕಾಲಕ್ಕೆ ಗೊಬ್ಬರ ಸಿಗದೇ ರೈತರು ಪರದಾಟ
35
Image Credit : Asianet News

ಅಂತರಾಜ್ಯ ಸಾಗಾಟಕ್ಕೆ ಅನುಮತಿ ಇಲ್ಲ!

ರಾಜ್ಯದಲ್ಲಿ ಗೊಬ್ಬರದ ಕೊರತೆ ಇದ್ದು, ಸರ್ಕಾರದ ನಿಯಮಾನುಸಾರ ಅಂತರರಾಜ್ಯ ಸಾಗಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದನ್ನು ಉಲ್ಲಂಘಿಸಿ ಕೇರಳಕ್ಕೆ ಸಾಗಿಸುತ್ತಿದ್ದ ಪ್ರಕರಣವು ಗಂಭೀರ ಚರ್ಚೆಗೆ ಕಾರಣವಾಗಿದೆ.

45
Image Credit : Asianet News

ನಂಜನಗೂಡಿನ ಗೋದಾಮು ಮೂಲ!

ತದನಂತರದ ತನಿಖೆಯಲ್ಲಿ, ಈ ಗೊಬ್ಬರವನ್ನು ನಂಜನಗೂಡಿನ ಸರ್ಕಾರಿ ಗೋದಾಮಿನಿಂದ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಲಭಿಸಿದೆ. ಘಟನೆಯ ಸಂಬಂಧಪಟ್ಟಂತೆ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಮುಂದಿನ ತನಿಖೆ ಆರಂಭಿಸಲಾಗಿದೆ.

55
Image Credit : Asianet News

ಕಾನೂನು ಕ್ರಮಕ್ಕೆ ಕೋರಿಕೆ

ಈ ಮಧ್ಯೆ ರೈತ ಸಂಘಗಳ ಪ್ರತಿಕ್ರಿಯೆಯೂ ಹೊರಬಿದ್ದಿದ್ದು, 'ರಾಜ್ಯಕ್ಕೆ ಗೊಬ್ಬರ ಸಾಕಾಗದ ವೇಳೆ ಇಂತಹ ಅಕ್ರಮ ಸಾಗಾಟಗಳು ರೈತರ ಹಕ್ಕಿಗೆ ಧಕ್ಕೆ ಉಂಟುಮಾಡುತ್ತವೆ. ಗೋದಾಮಿನಲ್ಲಿ ಯಾವುದೇ ಅಧಿಕಾರಿಗಳ ಕೈವಾಡವಿದೆಯೇ ಎಂಬುದರ ಮೇಲೆ ಹೆಚ್ಚಿನ ತನಿಖೆ ನಡೆಯಬೇಕು' ಎಂಬ ಒತ್ತಾಯ ಕೇಳಿಬಂದಿದೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕೇರಳ
ಕರ್ನಾಟಕ ಸರ್ಕಾರ
ಚಾಮರಾಜನಗರ
ಸುದ್ದಿ
ಮೈಸೂರು

Latest Videos
Recommended Stories
Related Stories
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved