MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Varamahalakshmi Wishes
Bengaluru New Elevated Corridor
H1N1 in Bengaluru
Karnataka Apartment Bill 2026
Bengaluru Medical Institutions Fined
Mandya Students Protest
MUDA Sites
Bengaluru Lokayukta Raid
Union Ministers Interaction with Gen Zs
Pakistan occupied Kashmir
  • Home
  • Karnataka Districts
  • ಹನೂರು ಎನ್‌ಕೌಂಟರ್ ಸೇಡು: ಕಾಡಿಗೆ ಬೆಂಕಿ ಹಚ್ಚಿ, ಶಿಬಿರಗಳನ್ನೇ ಸ್ಫೋಟಿಸಿದ ಕಳ್ಳಬೇಟೆಗಾರರು; ಅರಣ್ಯ ಇಲಾಖೆಗೆ ಆತಂಕ!

ಹನೂರು ಎನ್‌ಕೌಂಟರ್ ಸೇಡು: ಕಾಡಿಗೆ ಬೆಂಕಿ ಹಚ್ಚಿ, ಶಿಬಿರಗಳನ್ನೇ ಸ್ಫೋಟಿಸಿದ ಕಳ್ಳಬೇಟೆಗಾರರು; ಅರಣ್ಯ ಇಲಾಖೆಗೆ ಆತಂಕ!

ಹನೂರು ಎನ್‌ಕೌಂಟರ್ ಬಳಿಕ, ಕಾವೇರಿ ಮತ್ತು ಮಲೆ ಮಹದೇಶ್ವರ ವನ್ಯಧಾಮಗಳಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆಯುತ್ತಿದ್ದಾರೆ. ಜಿಲೆಟಿನ್ ಬಳಸಿ ಕಳ್ಳಬೇಟೆ ತಡೆ ಶಿಬಿರಗಳನ್ನು ಸ್ಫೋಟಿಸುತ್ತಿದ್ದು, 10 ಎಕರೆ ಕಾಡಿಗೆ ಬೆಂಕಿ ಹಚ್ಚಿದ್ದಾರೆ. ಈ ಕೇಸಿನ ತನಿಖೆಗೆ ಆ್ಯಂಟಿ ನಕ್ಸಲ್ ಫೋರ್ಸ್ (ANF) ಬರಬಹುದು.

2 Min read
Author : Sathish Kumar KH
Published : Aug 20 2026, 10:47 AM IST
Share this Photo Gallery
  • FB
  • TW
  • Linkdin
  • Whatsapp
16
Image Credit : Asianet News

ಚಾಮರಾಜನಗರ: ಹನೂರು ತಾಲೂಕಿನ ಅರಣ್ಯದಲ್ಲಿ ನಡೆದ ಎನ್‌ಕೌಂಟರ್ ಬೆನ್ನಲ್ಲೇ ಭುಗಿಲೆದ್ದಿರುವ ಕಿಚ್ಚು ಈಗ ಮತ್ತಷ್ಟು ವಿಕೋಪಕ್ಕೆ ಹೋಗಿದೆ. ಕಾವೇರಿ ವನ್ಯಧಾಮ ಮಾತ್ರವಲ್ಲದೆ, ಇದೀಗ ಮಲೆ ಮಹದೇಶ್ವರ (MM Hills) ವನ್ಯಧಾಮಕ್ಕೂ ಕಿಡಿಗೇಡಿಗಳ ಅಟ್ಟಹಾಸ ವ್ಯಾಪಿಸಿದೆ. ಅರಣ್ಯ ರಕ್ಷಣಾ ಶಿಬಿರಗಳನ್ನು ಜಿಲೆಟಿನ್, ಡೈನಾಮೈಟ್ ಬಳಸಿ ಸ್ಫೋಟಿಸುತ್ತಿರುವುದು ಹಾಗೂ ಕಾಡಿಗೆ ಬೆಂಕಿ ಹಚ್ಚುತ್ತಿರುವ ಪ್ರಕರಣಗಳು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ತನಿಖೆಗೆ ಆ್ಯಂಟಿ ನಕ್ಸಲ್ ಫೋರ್ಸ್ (ANF) ಅಖಾಡಕ್ಕಿಳಿಯುವ ಸಾಧ್ಯತೆಯಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
26
Image Credit : Asianet News

ಶಿಲುವೆಪುರ ಅರಣ್ಯದಲ್ಲಿ 10 ಎಕರೆ ಕಾಡಿಗೆ ಬೆಂಕಿ!

ಕೊಳ್ಳೇಗಾಲ ತಾಲೂಕಿನ ಶಿಲುವೆಪುರ ಅರಣ್ಯ ವ್ಯಾಪ್ತಿಗೆ ನುಗ್ಗಿರುವ ಕಿಡಿಗೇಡಿಗಳು ಕಾಡಿಗೆ ಬೆಂಕಿ ಹಚ್ಚಿದ್ದು, ಸುಮಾರು 10 ಎಕರೆಗೂ ಹೆಚ್ಚು ಅರಣ್ಯ ಸಂಪತ್ತು ಸುಟ್ಟು ಕರಕಲಾಗಿದೆ. ಇದರ ಜೊತೆಗೆ ಜಾಗೇರಿ ಬಳಿಯಿದ್ದ ಕಳ್ಳಬೇಟೆ ತಡೆ ಶಿಬಿರವನ್ನೂ ಧ್ವಂಸಗೊಳಿಸಲಾಗಿದೆ. ಅರಣ್ಯ ಇಲಾಖೆಯ ಸಿಬ್ಬಂದಿ ಈ ದುಷ್ಕೃತ್ಯದ ವಿಡಿಯೋಗಳನ್ನು ಒಂದೊಂದಾಗಿ ಬಿಡುಗಡೆ ಮಾಡುತ್ತಿದ್ದು, ಮಲೆ ಮಹದೇಶ್ವರ ವನ್ಯಧಾಮದ ಅಧಿಕಾರಿಗಳಲ್ಲಿ ತೀವ್ರ ಆತಂಕ ಮನೆಮಾಡಿದೆ.

Related Articles

Related image1
ಹನೂರು ಶೂಟೌಟ್ ಪ್ರಕರಣ ಬೆನ್ನಲ್ಲೇ; ಬಂಡೀಪುರದ ಹೋ ಸ್ಟೇನಲ್ಲಿ 46 ಜಿಂಕೆ ಕೊಂಬು, ನವಿಲುಗರಿ, ಕೋವಿಗಳು ಪತ್ತೆ
Related image2
ಹನೂರು ಶೂಟೌಟ್‌ನಲ್ಲಿ ಪರಾರಿಯಾಗಿದ್ದ 4ನೇ ಆರೋಪಿ ದಾಸ್ ಪ್ರತ್ಯಕ್ಷ; ಕೇಸಿಗೆ ಟ್ವಿಸ್ಟ್ ನೀಡಿದ ವಿಡಿಯೋ ಹೇಳಿಕೆ!
36
Image Credit : Asianet News

ಜಿಲೆಟಿನ್, ಡೈನಾಮೈಟ್ ಬ್ಲಾಸ್ಟ್: ಸ್ಥಳಕ್ಕೆ 'ಆ್ಯಂಟಿ ನಕ್ಸಲ್ ಫೋರ್ಸ್' ಭೇಟಿ ಸಾಧ್ಯತೆ

ಅರಣ್ಯದ ಒಳಗಿರುವ ಕಳ್ಳಬೇಟೆ ತಡೆ ಶಿಬಿರಗಳನ್ನು ಸ್ಫೋಟಿಸಲು ದುಷ್ಕರ್ಮಿಗಳು ಮಾರಕ ಜಿಲೆಟಿನ್ ಮತ್ತು ಡೈನಾಮೈಟ್ ಕಡ್ಡಿಗಳನ್ನು ಬಳಸಿರುವುದು ಭದ್ರತಾ ಪಡೆಗಳನ್ನು ಬೆಚ್ಚಿಬೀಳಿಸಿದೆ.

ದಟ್ಟ ಅರಣ್ಯದಲ್ಲಿ ಸ್ಫೋಟಕಗಳನ್ನು ಬಳಸಿ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಪೊಲೀಸರ ಜೊತೆಗೆ ಆ್ಯಂಟಿ ನಕ್ಸಲ್ ಫೋರ್ಸ್ (ANF) ತಂಡವು ಕಳ್ಳಬೇಟೆ ತಡೆ ಶಿಬಿರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಸ್ಫೋಟಕಗಳು ಇವರಿಗೆ ಎಲ್ಲಿಂದ ಪೂರೈಕೆಯಾಗುತ್ತಿವೆ? ಇದರ ಹಿಂದೆ ನಕ್ಸಲ್ ಅಥವಾ ಸಂಘಟಿತ ಕಳ್ಳಬೇಟೆ ಜಾಲಗಳ ಕೈವಾಡವಿದೆಯೇ ಎಂಬ ಆಯಾಮದಲ್ಲೂ ಮಾಹಿತಿ ಕಲೆಹಾಕಲಾಗುತ್ತಿದೆ.

46
Image Credit : Asianet News

8 ಶಿಬಿರಗಳು, 3 ವಸತಿ ಗೃಹ, ಜೀಪ್ ಧ್ವಂಸ: ACF ಮರಿಸ್ವಾಮಿ ಹೇಳಿಕೆ

ಘಟನೆಯ ಕುರಿತು ಕಾವೇರಿ ವನ್ಯಧಾಮದ ಎಸಿಎಫ್ (ACF) ಮರಿಸ್ವಾಮಿ ಅವರು ಮಾಹಿತಿ ನೀಡಿ, "ವನ್ಯಧಾಮದಲ್ಲಿ ಒಟ್ಟು 28 ಕಳ್ಳಬೇಟೆ ತಡೆ ಶಿಬಿರಗಳಿದ್ದು, ಈ ಪೈಕಿ 8 ಶಿಬಿರಗಳನ್ನು ಜಿಲೆಟಿನ್ ಮತ್ತು ಡೈನಾಮೈಟ್ ಬಳಸಿ ತೀವ್ರವಾಗಿ ಹಾನಿಗೊಳಿಸಲಾಗಿದೆ. 3 ಸಿಬ್ಬಂದಿ ವಸತಿ ಗೃಹ, ಸೋಲಾರ್ ಫೆನ್ಸಿಂಗ್, ಬ್ಯಾಟರಿಗಳು ಹಾಗೂ ಒಂದು ಇಲಾಖಾ ಜೀಪ್ ಅನ್ನು ನಾಶಮಾಡಲಾಗಿದೆ" ಎಂದು ತಿಳಿಸಿದ್ದಾರೆ.

56
Image Credit : Asianet News

'ನಾವು ರೈತರ ಮೇಲೆ ಯಾವುದೇ ಆರೋಪ ಮಾಡುತ್ತಿಲ್ಲ. ಆದರೆ ಅಕ್ರಮ ಕಳ್ಳಬೇಟೆಯಲ್ಲಿ ತೊಡಗಿರುವ ದುಷ್ಕರ್ಮಿಗಳೇ ದ್ವೇಷದಿಂದ ಇಂತಹ ಕೃತ್ಯ ಎಸಗಿದ್ದಾರೆ. ಕಾಡಿನಲ್ಲಿ ಹಲವು ಕಾಲುದಾರಿಗಳಿದ್ದು, ರಾತ್ರಿ ವೇಳೆ ನುಗ್ಗಿ ಸ್ಫೋಟಿಸುತ್ತಿದ್ದಾರೆ. ಈ ಶಿಬಿರಗಳ ನಾಶದಿಂದ ಮಾನವ-ವನ್ಯಪ್ರಾಣಿ ಸಂಘರ್ಷ ತಡೆಯುವುದು ಕಷ್ಟವಾಗಲಿದ್ದು, ಅರಣ್ಯ ರಕ್ಷಣೆಗೆ ಭಾರೀ ಹಿನ್ನಡೆಯಾಗಲಿದೆ. ದಾಳಿಗಳ ಬಗ್ಗೆ ಮಾಹಿತಿ ಇದ್ದರೆ ಸಾರ್ವಜನಿಕರು ಇಲಾಖೆಗೆ ತಿಳಿಸಬೇಕು' ಕಾವೇರಿ ವನ್ಯಧಾಮ ಎಸಿಎಫ್ ಮರಿಸ್ವಾಮಿ ಎಂದು ತಿಳಿಸಿದರು.

66
Image Credit : Asianet News

ತನಿಖೆ ತೀವ್ರ, ಅರಣ್ಯದಲ್ಲಿ ಹೈ ಅಲರ್ಟ್

ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ರಾಮಾಪುರ ಮತ್ತು ಹನೂರು ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಅರಣ್ಯದ ಒಳಗಿರುವ ಸೂಕ್ಷ್ಮ ಪ್ರದೇಶಗಳಿಗೆ ಹೆಚ್ಚುವರಿ ಪೊಲೀಸ್ ಭದ್ರತೆ ಒದಗಿಸಲಾಗಿದ್ದು, ಕಾಡು ನಾಶ ಮತ್ತು ಸ್ಫೋಟದಲ್ಲಿ ಭಾಗಿಯಾದ ಕಿಡಿಗೇಡಿಗಳ ಹೆಡೆಮುರಿ ಕಟ್ಟಲು ಪೊಲೀಸರು ಹಾಗೂ ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ ಆರಂಭಿಸಿವೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಚಾಮರಾಜನಗರ
ಕರ್ನಾಟಕ ಸುದ್ದಿ
ಅರಣ್ಯ
ಕಾಡ್ಗಿಚ್ಚು
ವನ್ಯಜೀವಿ

Latest Videos
Recommended Stories
Recommended image1
Gruha Lakshmi Scheme: ಗೃಹಲಕ್ಷ್ಮೀ ಯೋಜನೆಯ ಬಿಗ್ ಅಪ್‌ಡೇಟ್ ಕೊಟ್ಟ ಸಿಎಂ ಡಿಕೆ ಶಿವಕುಮಾರ್
Recommended image2
ಸಮಯಕ್ಕೆ ಸರಿಯಾಗಿ ಕಾರು ನೀಡದ ಶೋರೂಂಗೆ ಬಿತ್ತು ದಂಡ; ಗ್ರಾಹಕನಿಗೆ ಬಡ್ಡಿ ಸಹಿತ ಪರಿಹಾರ
Recommended image3
ಮಂಡ್ಯ ವಿವಿ ಮುಚ್ಚಿ ಮೈಸೂರು ವಿವಿಗೆ ಸೇರಿಸಿ: ವಿದ್ಯಾರ್ಥಿಗಳ ಪ್ರತಿಭಟನೆಗೆ ಕಾರಣ ಏನು?
Related Stories
Recommended image1
ಹನೂರು ಶೂಟೌಟ್ ಪ್ರಕರಣ ಬೆನ್ನಲ್ಲೇ; ಬಂಡೀಪುರದ ಹೋ ಸ್ಟೇನಲ್ಲಿ 46 ಜಿಂಕೆ ಕೊಂಬು, ನವಿಲುಗರಿ, ಕೋವಿಗಳು ಪತ್ತೆ
Recommended image2
ಹನೂರು ಶೂಟೌಟ್‌ನಲ್ಲಿ ಪರಾರಿಯಾಗಿದ್ದ 4ನೇ ಆರೋಪಿ ದಾಸ್ ಪ್ರತ್ಯಕ್ಷ; ಕೇಸಿಗೆ ಟ್ವಿಸ್ಟ್ ನೀಡಿದ ವಿಡಿಯೋ ಹೇಳಿಕೆ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved