- Home
- Karnataka Districts
- NH 169: ತನಿಕೋಡ್ನಿಂದ SK ಬಾರ್ಡರ್ವರೆಗೆ ಭಾರೀ ವಾಹನಗಳಿಗೆ ನಿಷೇಧ; ಪರ್ಯಾಯ ಮಾರ್ಗ ಹೀಗಿದೆ
NH 169: ತನಿಕೋಡ್ನಿಂದ SK ಬಾರ್ಡರ್ವರೆಗೆ ಭಾರೀ ವಾಹನಗಳಿಗೆ ನಿಷೇಧ; ಪರ್ಯಾಯ ಮಾರ್ಗ ಹೀಗಿದೆ
ರಾಷ್ಟ್ರೀಯ ಹೆದ್ದಾರಿ 169ರಲ್ಲಿನ ಕಿರು ಸೇತುವೆಗಳು ಶಿಥಿಲಾವಸ್ಥೆಯಲ್ಲಿರುವುದರಿಂದ ಕುಸಿಯುವ ಅಪಾಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ, 2026ರ ಸೆಪ್ಟೆಂಬರ್ 30ರವರೆಗೆ 12 ಟನ್ಗಿಂತ ಅಧಿಕ ಭಾರದ ವಾಹನಗಳ ಸಂಚಾರವನ್ನು ತನಿಕೋಡ್ನಿಂದ ಎಸ್.ಕೆ. ಬಾರ್ಡರ್ವರೆಗೆ ನಿಷೇಧಿಸಲಾಗಿದೆ. ಪ

ರಾಷ್ಟ್ರೀಯ ಹೆದ್ದಾರಿ 169
ರಾಷ್ಟ್ರೀಯ ಹೆದ್ದಾರಿ 169ರ ಕಿ.ಮೀದಲ್ಲಿನ ಸೇತುವೆಗಳನ್ನು ಪರಿವೀಕ್ಷಣೆ ಮಾಡಿದ್ದು, ಸದರಿ ಕಿರು ಸೇತುವೆಗಳ ಕಲ್ಲುಗಳು ಅಲ್ಲಲ್ಲಿ ಕಿತ್ತು ಬಂದಿರುವುದು, ಕಂಬಗಳು ಭಾಗಶಃ ಹಾನಿಗೊಳಗಾಗಿರೋದು ಕಂಡು ಬಂದಿದ. ಸೇತುವೆ ಸ್ಲಾಬ್ ನ ಬೀಮ್ ಗಳ ಕಾಂಕ್ರೀಟ್ ಅಲ್ಲಲ್ಲಿ ಬಿದ್ದು ಹೋಗಿದ್ದು ಸರಳುಗಳು ಹೊರಚಾಚಿರುವುದು ಮತ್ತು ಸೇತುವೆಗಳ ಕೈಪಿಡಿಗಳು ಬಿದ್ದು ಹೋಗಿರುವುದು ಕಂಡು ಬಂದಿರುತ್ತದೆ.
ರಸ್ತೆ ಕುಸಿಯುವ ಸಾಧ್ಯತೆ
ಈ ಹೆದ್ದಾರಿ ವಲಯದಲ್ಲಿ ಬರುವ ನಾಲ್ಕು ಕಿರು ಸೇತುವೆಗಳು ತೀರಾ ಶಿಥಿಲಾವಸ್ಥೆಯಲ್ಲಿದ್ದು, ಭಾರಿ ವಾಹನಗಳು ಸಂಚರಿಸಿದರೆ ಕುಸಿಯುವ ಅಪಾಯವಿದೆ. ನಿರಂತರ ಮಳೆಯಿಂದಾಗಿ ರಸ್ತೆಯ ಇಕ್ಕೆಲಗಳ (ಬದಿಗಳ) ಮಣ್ಣು ಕೊಚ್ಚಿ ಹೋಗುತ್ತಿದ್ದು, ಭಾರಿ ವಾಹನಗಳು ಚಲಿಸಿದಾಗ ರಸ್ತೆ ಕುಸಿದು ದೊಡ್ಡ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ.
30-09-2026 ರವರೆಗೆ ನಿಷೇಧ
ಈ ಹಿನ್ನೆಲೆ ದಿನಾಂಕ 30-09-2026 ರವರೆಗೆ 12 ಟನ್ ಗಿಂತ ಅಧಿಕ ಭಾರದ ಸರಕು ಸಾಗಾಣಿಕೆಯ (ಟಿಪ್ಪರ್, ಲಾರಿ ಮತ್ತು ಕಟ್ಟಡ ನಿರ್ಮಾಣದ ಸಾಮಾಗ್ರಿಗಳು ಮತ್ತು ಇನ್ನಿತರೆ) ಭಾರಿ ವಾಹನಗಳ ಸಂಚಾರವನ್ನು ನಿಷೇಧಿಸಿ ಹಾಗೂ ಬದಲಿ ಮಾರ್ಗದ ವ್ಯವಸ್ಥೆಯನ್ನು ಕಲ್ಪಿಸಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಆದೇಶಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ರ ತನಿಕೋಡ್ನಿಂದ ಎಸ್.ಕೆ. ಬಾರ್ಡರ್ವರೆಗೆ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಪರ್ಯಾಯ ಮಾರ್ಗಗಳು
1. ಚಿಕ್ಕಮಗಳೂರಿನಿಂದ ಬರುವ ಭಾರಿ ವಾಹನಗಳು ಬಾಳೆಹೊನ್ನೂರು-ಮಾಗುಂಡಿ-ಕಳಸ-ಕುದುರೆಮುಖ-ಎಸ್.ಕೆ.ಬಾರ್ಡರ್ ಮಾರ್ಗವಾಗಿ ಸಂಚರಿಸುವುದು.
2. ನರಸಿಂಹರಾಜಪುರ ಕಡೆಯಿಂದ ಬರುವ ಭಾರಿ ವಾಹನಗಳು ಬಾಳೆಹೊನ್ನೂರು- ಮಾಗುಂಡಿ-ಕಳಸ -ಕುದುರೆಮುಖ-ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವುದು.
3. ಕೊಪ್ಪ ಕಡೆಯಿಂದ ಬರುವ ಭಾರಿ ವಾಹನಗಳು ಕೊಪ್ಪ-ಜಯಪುರ - ಬಾಳೆಹೊನ್ನೂರು- ಮಾಗುಂಡಿ-ಕಳಸ-ಕುದುರೆಮುಖ - ಎಸ್.ಕೆ. ಬಾರ್ಡರ್ ಮಾರ್ಗವಾಗಿ ಸಂಚರಿಸುವುದು.
ಸೇತುವೆಗಳು ಕುಸಿಯುವ ಭೀತಿ
ಈ ಹೆದ್ದಾರಿಯು ತೀವ್ರ ತಿರುವುಗಳು, ಕಡಿದಾದ ಏರಿ ಹಾಗೂ ಏಕಪಥ (Single Lane) ರಸ್ತೆಯಾಗಿರುವುದರಿಂದ ಮಳೆಗಾಲದಲ್ಲಿ ಸಂಚಾರ ಅತ್ಯಂತ ಅಪಾಯಕಾರಿ. ನಿರಂತರ ಮಳೆಯಿಂದಾಗಿ ರಸ್ತೆಯ ಇಕ್ಕೆಲಗಳ (ಬದಿಗಳ) ಮಣ್ಣು ಕೊಚ್ಚಿ ಹೋಗುತ್ತಿದ್ದು, ಭಾರಿ ವಾಹನಗಳು ಚಲಿಸಿದಾಗ ರಸ್ತೆ ಕುಸಿದು ದೊಡ್ಡ ಅಪಘಾತಗಳು ಸಂಭವಿಸುವ ಆತಂಕ ಎದುರಾಗಿದೆ.

