MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Yash Toxic Movie Live Updates
Toxic Movie Review
Karnataka Cabinet Reshuffle
KPSC Exam Scam
Karnataka BJP Padayatra
RSS vs Priyank Kharge
Onion Price Hike
FSSAI New Guidelines
Ajit Doval China Visit
Operation Sindoor 2025
  • Home
  • Karnataka Districts
  • ಚಿಕ್ಕಮಗಳೂರಿನಲ್ಲಿ ಕೋಮು ಘರ್ಷಣೆ; ಇಡೀ ನಗರ ಬೂದಿ ಮುಚ್ಚಿದ ಕೆಂಡ: ರಾತ್ರೋರಾತ್ರಿ ನಡೆದಿದ್ದೇನು?

ಚಿಕ್ಕಮಗಳೂರಿನಲ್ಲಿ ಕೋಮು ಘರ್ಷಣೆ; ಇಡೀ ನಗರ ಬೂದಿ ಮುಚ್ಚಿದ ಕೆಂಡ: ರಾತ್ರೋರಾತ್ರಿ ನಡೆದಿದ್ದೇನು?

ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿ ಹಿಂದೂಗಳ ಮನೆ ಮೇಲೆ ಅನ್ಯಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ಆರೋಪದ ಮೇಲೆ ಕೋಮು ಘರ್ಷಣೆ ಉಂಟಾಗಿದೆ. ಈ ಘಟನೆಯಿಂದಾಗಿ ಎರಡೂ ಕೋಮಿನ ಯುವಕರು ಪೊಲೀಸ್ ಠಾಣೆ ಹಾಗೂ ಆಸ್ಪತ್ರೆ ಮುಂದೆ ಜಮಾಯಿಸಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.

1 Min read
Author : Mahmad Rafik
Published : Feb 17 2026, 07:54 AM IST
Share this Photo Gallery
  • FB
  • TW
  • Linkdin
  • Whatsapp
15
ಕೋಮು ಘರ್ಷಣೆ
Image Credit : Asianet News

ಕೋಮು ಘರ್ಷಣೆ

ಚಿಕ್ಕಮಗಳೂರು ನಗರದಲ್ಲಿ ಕೋಮು ಘರ್ಷಣೆ ಉಂಟಾಗಿದ್ದು, ಜನರು ರಾತ್ರೋರಾತ್ರಿ ಪೊಲೀಸ್ ಠಾಣೆ ಮುಂದೆ ಜಮಾಯಿಸಿದ್ದಾರೆ. ಮಧ್ಯರಾತ್ರಿ ಇಡೀ ಚಿಕ್ಕಮಗಳೂರು ನಗರ ಅಕ್ಷರಶಃ ಬೂದಿ ಮುಚ್ಚಿದ ಕೆಂಡದಂತಾಗಿತ್ತು. ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
ಕಲ್ಲು ತೂರಾಟ
Image Credit : Asianet News

ಕಲ್ಲು ತೂರಾಟ

ವಿಜಯಪುರ ಬಡಾವಣೆಯಲ್ಲಿನ ಹಿಂದೂಗಳ ಮನೆ ಮೇಲೆ ಅನ್ಯಕೋಮಿನ ಐದರಿಂದ ಆರು ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಕಳೆದ ಮೂರು ದಿನಗಳಿಂದ ಹೆಣ್ಣು ಮಕ್ಕಳ ಹಿಂದೆ ಹೋಗೋದು, ಕಲ್ಲು ಹೊಡೆಯೋದು ಮಾಡುತ್ತಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ವೇಳೆ ಇಬ್ಬರನ್ನು ಹಿಡಿದ ಹಿಂದೂ ಸಂಘಟನೆಯವರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದರು.

Related Articles

Related image1
ಬೇಲೂರು To ಕುಣಿಗಲ್ To ಬಿಹಾರ: ರಿವೀಲ್ ಆಯ್ತು ಆಂಟಿ ಪ್ರಿಯಾಂಕಾ ಖತರ್ನಾಕ್ ಪ್ಲಾನ್‌
Related image2
ಯಾರೇ ನೀನು ಚೆಲುವೆ? ಹುಡ್ಗೀರೂ ಹೊಟ್ಟೆ ಉರಿದುಕೊಳ್ಳುವಷ್ಟು ಸುಂದರಿ, ಯಾರೀ ಮಾಯಗಾತಿ?
35
ಬಸವನಹಳ್ಳಿ ಪೊಲೀಸ್ ಠಾಣೆ
Image Credit : Asianet News

ಬಸವನಹಳ್ಳಿ ಪೊಲೀಸ್ ಠಾಣೆ

ಹಲ್ಲೆ ವಿಷಯ ತಿಳಿಯುತ್ತಿದ್ದಂತೆ ಬಸವನಹಳ್ಳಿ ಪೊಲೀಸ್ ಠಾಣೆ ಮುಂದೆ ಎರಡೂ ಕೋಮಿನ ನೂರಾರು ಯುವಕರ ಜಮಾವಣೆಗೊಂಡಿದ್ದರು. ಹಲ್ಲೆಗೊಳಗಾದವರು ಕಲ್ಲು ಹೊಡೆದಿಲ್ಲ. ಹಲ್ಲೆ ನಡೆಸಿದವರ ಮೇಲೆಯೂ ಕಾನೂನು ಕ್ರಮ ಜರುಗಿಸಬೇಕು ಎಂದು ಒಂದು ಕೋಮಿನ ಯುವಕರು ಆಗ್ರಹಿಸಿದ್ದಾರೆ. ಇತ್ತ ಆಸ್ಪತ್ರೆ ಮುಂದೆಯೂ ನೂರಾರು ಸಂಖ್ಯೆಯಲ್ಲಿ ಜನರು ಸೇರಿದ್ದರು.

45
ಆಸ್ಪತ್ರೆಗೆ ದಾಖಲು
Image Credit : Asianet News

ಆಸ್ಪತ್ರೆಗೆ ದಾಖಲು

ಹಲ್ಲೆಗೊಳಗಾದ ಯುವಕರಿಗೆ ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ನೂರಾರು ಸಂಖ್ಯೆಯಲ್ಲಿ ಜನರು ಸೇರುತ್ತಿದ್ದಂತೆ ಅಲರ್ಟ್ ಆದ ಪೊಲೀಸರು, ಎರಡೂ ಕೋಮಿನ ಯುವಕರನ್ನ ಕಳಿಸುವಲ್ಲಿ ಸಕ್ಸಸ್ ಆಗಿದ್ದಾರೆ. ಪೊಲೀಸರ ಭರವಸೆ ನೀಡುತ್ತಿದ್ದಂತೆ ಜನರು ಹಿಂದಿರುಗಿದ್ದಾರೆ.

ಇದನ್ನೂ ಓದಿ: ತಾನೇ ಹೆಣೆದ ಬಲೆಯಲ್ಲಿ ಸಿಲುಕಿದ್ದೇಗೆ ಐನಾತಿ ಪ್ರಿಯಾಂಕಾ ಆಂಟಿ? ನೌಟಂಕಿ ಲೇಡಿ ಎಡವಿದ್ದೆಲ್ಲಿ?

55
 ಸಿಸಿಟಿವಿ ಕ್ಯಾಮೆರಾ
Image Credit : Asianet News

ಸಿಸಿಟಿವಿ ಕ್ಯಾಮೆರಾ

ಇನ್ನು ಕೆಲ ಯವಕರು ರಾತ್ರಿ ಓಡಾಟ ನಡೆಸಿರುವ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ವಿಜಯಪುರ ಬಡಾವಣೆಯ ಸುಧಾ ಎಂಬವರ ಮನೆ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಇನ್ನು ಈ ಘಟನೆ ಕುರಿತು ಪ್ರತಿಕ್ರಿಯಿಸಿರುವ ಎಸ್‌ಡಿಪಿಐ ಮುಖಂಡ ಮುನೀರ್, ಹಲ್ಲೆಗೈದ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: 2ನೇ ಮಹಡಿಯಿಂದ ಜಿಗಿದ SSLC ವಿದ್ಯಾರ್ಥಿ; ನಿನ್ನೆಯೇ ಅಪ್ಪನಿಗೆ ವಿಷಯ ಹೇಳಿದ್ದ ಮಗ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

About the Author

MR
Mahmad Rafik
ಮಹ್ಮದ್ ರಫಿಕ್ವಿಜಯಪುರದ ಬೇನಾಳ RC ಗ್ರಾಮದವನು. ಪಬ್ಲಿಕ್ ಟಿವಿ ಡಿಜಿಟಲ್, ನ್ಯೂಸ್ 18 ಕನ್ನಡ, ಇದೀಗ ಏಷ್ಯಾನೆಟ್ ಕನ್ನಡ ಸೇರಿ ಡಿಜಿಟಲ್ ಮಾಧ್ಯಮದಲ್ಲಿ 8 ವರ್ಷಗಳ ಅನುಭವ. ಎಂ.ಕಾಂ. ಓದಿ ಕೆಲಸ ಆರಂಭಿಸಿದ್ದು ಖಾಸಗಿ ಬ್ಯಾಂಕ್‌ವೊಂದರಲ್ಲಿ. ಆಕರ್ಷಿಸಿದ್ದು ಪತ್ರಿಕೋದ್ಯಮ. ಯಾವ ಟಾಪಿಕ್ ಕೊಟ್ಟರೂ ಬರೆಯಬಲ್ಲೆ. ಓಟಿಟಿ ಮೂವಿ ನೋಡೋದು ಇಷ್ಟ.
ಚಿಕ್ಕಮಗಳೂರು
ಕೋಮು ಗಲಭೆ

Latest Videos
Recommended Stories
Recommended image1
B Nagendra Resignation: ಬಿ ನಾಗೇಂದ್ರ ರಾಜೀನಾಮೆಗೆ ವೇದಿಕೆ ಸಿದ್ಧ ಮಾಡ್ತಾ ಕಾಂಗ್ರೆಸ್? ಸಂವಿಧಾನಿಕ ಬಿಕ್ಕಟ್ಟು ತಪ್ಪಿಸಲು ಸಚಿವ ತಲೆದಂಡ?
Recommended image2
ಸೊರಬ ಮತದಾರರ ಪಟ್ಟಿ: 16,209 ಹೆಸರುಗಳು ಕಣ್ಮರೆ! 4081 ಮತದಾರರಿಗೆ ನೋಟಿಸ್
Recommended image3
Vijayapura: ಬೆಳ್ಳಂಬೆಳಗ್ಗೆ ಭೂತನಾಳ ಕೆರೆಯಲ್ಲಿ ತೇಲಿ ಬಂತು ಹೆಣಗಳ ರಾಶಿ; ಮಕ್ಕಳು ಸೇರಿ 6 ಮೃತದೇಹಗಳು ಪತ್ತೆ
Related Stories
Recommended image1
ಬೇಲೂರು To ಕುಣಿಗಲ್ To ಬಿಹಾರ: ರಿವೀಲ್ ಆಯ್ತು ಆಂಟಿ ಪ್ರಿಯಾಂಕಾ ಖತರ್ನಾಕ್ ಪ್ಲಾನ್‌
Recommended image2
ಯಾರೇ ನೀನು ಚೆಲುವೆ? ಹುಡ್ಗೀರೂ ಹೊಟ್ಟೆ ಉರಿದುಕೊಳ್ಳುವಷ್ಟು ಸುಂದರಿ, ಯಾರೀ ಮಾಯಗಾತಿ?
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved