4.0 ಲಾಕ್ಡೌನ್ಗೆ ದಿನಗಣನೆ: ಇತ್ತ ರಸ್ತೆ ಬಂದ್ಗೆ ಚಾಲನೆ..!
ದೇಶದಲ್ಲಿ ಸದ್ಯ ಮೂರನೇ ಹಂತದ ಲಾಕ್ಡೌನ್ ನಡೆಯುತ್ತಿದ್ದು, ಮೇ 17ಕ್ಕೆ ಅದರ ಅವಧಿ ಮುಕ್ತಾಯವಾಗಲಿದೆ. ಆದರೆ ದೇಶದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಅತ್ತ ನಾಲ್ಕನೇ ಹಂತದ ಲಾಕ್ಡೌನ್ ಘೊಷಣೆಯಾಗುತ್ತಿದ್ದಂತೆಯೇ, ಇತ್ತ ಕೊರೋನಾಗೆ ಎದುರಿ ರಸ್ತೆ ಬಂದ್ಗೆ ಪ್ರಕ್ರಿಯೆಗಳು ಶುರುವಾಗಿದೆ.

<p>ಕೊರೋನಾ ಭಯಕ್ಕೆ ಜಿಲ್ಲೆಯ ಪ್ರವೇಶ ರಸ್ತೆಗಳನ್ನು ಕಲ್ಲು-ಬಂಡೆಗಳಿಂದ ಬಂದ್ ಮಾಡಲಾಗುತ್ತಿದೆ.</p>
ಕೊರೋನಾ ಭಯಕ್ಕೆ ಜಿಲ್ಲೆಯ ಪ್ರವೇಶ ರಸ್ತೆಗಳನ್ನು ಕಲ್ಲು-ಬಂಡೆಗಳಿಂದ ಬಂದ್ ಮಾಡಲಾಗುತ್ತಿದೆ.
<p>ಮೊನ್ನೆ ಶಿವಮೊಗ್ಗ, ಈಗ ಹಾಸನದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದಂತೆ ಚಿಕ್ಕಮಗಳೂರಿನಲ್ಲಿ ಆತಂಕ ಶುರುವಾಗಿದೆ. </p>
ಮೊನ್ನೆ ಶಿವಮೊಗ್ಗ, ಈಗ ಹಾಸನದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದಂತೆ ಚಿಕ್ಕಮಗಳೂರಿನಲ್ಲಿ ಆತಂಕ ಶುರುವಾಗಿದೆ.
<p>ಹಾಸನದಲ್ಲಿ ಐದು ಪಾಸಿಟಿವ್ ಕೇಸ್ ಕಾಣಿಸಿಕೊಳ್ಳುತ್ತಿದ್ದಂತೆ ಕಾಫಿನಾಡಿನ ಮಲೆನಾಡು ಭಾಗದಲ್ಲಿ ಹಾಸನಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಮತ್ತೆ ಬಂದ್ ಮಾಡುತ್ತಿದ್ದಾರೆ.</p>
ಹಾಸನದಲ್ಲಿ ಐದು ಪಾಸಿಟಿವ್ ಕೇಸ್ ಕಾಣಿಸಿಕೊಳ್ಳುತ್ತಿದ್ದಂತೆ ಕಾಫಿನಾಡಿನ ಮಲೆನಾಡು ಭಾಗದಲ್ಲಿ ಹಾಸನಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗಗಳನ್ನು ಮತ್ತೆ ಬಂದ್ ಮಾಡುತ್ತಿದ್ದಾರೆ.
<p>ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಗ್ರಾಮೀಣ ಭಾಗದಿಂದ ಸಕಲೇಶಪುರ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಮರಗುಂದ-ದೇವಾಲಕೆರೆಯ ಜಪಾವತಿ ಸೇತುವೆ ಮೇಲೆ ಬೃಹತ್ ಬಂಡೆಕಲ್ಲುಗಳನ್ನು ರಸ್ತೆಗೆ ಅಡ್ಡಲಾಗಿ ಹಾಕಿ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ.</p>
ಮೂಡಿಗೆರೆ ತಾಲೂಕಿನ ಗೋಣಿಬೀಡು ಹೋಬಳಿಯ ಗ್ರಾಮೀಣ ಭಾಗದಿಂದ ಸಕಲೇಶಪುರ ಮಾರ್ಗಕ್ಕೆ ಸಂಪರ್ಕ ಕಲ್ಪಿಸುವ ಮರಗುಂದ-ದೇವಾಲಕೆರೆಯ ಜಪಾವತಿ ಸೇತುವೆ ಮೇಲೆ ಬೃಹತ್ ಬಂಡೆಕಲ್ಲುಗಳನ್ನು ರಸ್ತೆಗೆ ಅಡ್ಡಲಾಗಿ ಹಾಕಿ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿದ್ದಾರೆ.
<p>ರಸ್ತೆಗಳಿಗೆ ದೊಡ್ಡ-ದೊಡ್ಡ ಕಲ್ಲುಗಳನ್ನಿಟ್ಟು ಹಾಸನ-ಚಿಕ್ಕಮಗಳೂರು ಸಂಚಾರ ಬಂದ್ ಮಾಡಲಾಗಿದೆ.</p>
ರಸ್ತೆಗಳಿಗೆ ದೊಡ್ಡ-ದೊಡ್ಡ ಕಲ್ಲುಗಳನ್ನಿಟ್ಟು ಹಾಸನ-ಚಿಕ್ಕಮಗಳೂರು ಸಂಚಾರ ಬಂದ್ ಮಾಡಲಾಗಿದೆ.
<p>ಗ್ರೀನ್ ಝೋನ್ ಕಾಫಿನಾಡು ಹಸಿರು ಜಿಲ್ಲೆಯಾಗೇ ಉಳಿದುಕೊಳ್ಳಲಿ ಎಂದು ಹಳ್ಳಿಗರು ಈ ನಿರ್ಧಾರಕ್ಕೆ ಮುಂದಾಗಿದ್ದಾರೆ.</p>
ಗ್ರೀನ್ ಝೋನ್ ಕಾಫಿನಾಡು ಹಸಿರು ಜಿಲ್ಲೆಯಾಗೇ ಉಳಿದುಕೊಳ್ಳಲಿ ಎಂದು ಹಳ್ಳಿಗರು ಈ ನಿರ್ಧಾರಕ್ಕೆ ಮುಂದಾಗಿದ್ದಾರೆ.
<p>ಈಗಾಗಲೇ ಸರ್ಕಾರ ಕೂಡ ಲಾಕ್ ಡೌನ್ ಸಡಿಲಿಕೆ ಮಾಡಿರುವುದರಿಂದ ಹೊರಜಿಲ್ಲೆಗಳಿಗೆ ಹೋಗಿ ಬರುವವರ ಸಂಖ್ಯೆ ಕೂಡ ಗಣನೀಯವಾಗಿ ಹೆಚ್ಚಾಗಿದೆ. ಹಾಗಾಗಿ, ಮಲೆನಾಡಿಗರೇ ಸ್ವಯಂ ಪ್ರೇರಿತರಾಗಿ ರಸ್ತೆಗಳನ್ನು ಬಂದ್ ಮಾಡಿ ಕೊರೊನಾ ಮುಕ್ತ ಜಿಲ್ಲೆಯನ್ನಾಗಿಸಲು ಮುಂದಾಗಿದ್ದಾರೆ.</p>
ಈಗಾಗಲೇ ಸರ್ಕಾರ ಕೂಡ ಲಾಕ್ ಡೌನ್ ಸಡಿಲಿಕೆ ಮಾಡಿರುವುದರಿಂದ ಹೊರಜಿಲ್ಲೆಗಳಿಗೆ ಹೋಗಿ ಬರುವವರ ಸಂಖ್ಯೆ ಕೂಡ ಗಣನೀಯವಾಗಿ ಹೆಚ್ಚಾಗಿದೆ. ಹಾಗಾಗಿ, ಮಲೆನಾಡಿಗರೇ ಸ್ವಯಂ ಪ್ರೇರಿತರಾಗಿ ರಸ್ತೆಗಳನ್ನು ಬಂದ್ ಮಾಡಿ ಕೊರೊನಾ ಮುಕ್ತ ಜಿಲ್ಲೆಯನ್ನಾಗಿಸಲು ಮುಂದಾಗಿದ್ದಾರೆ.
<p>ಒಟ್ಟಾರೆ ಅಕ್ಕ-ಪಕ್ಕ ಜಿಲ್ಲೆಗಳಾದ ಹಾಸನ ಮತ್ತು ಚಿಕ್ಕಮಗಳೂರು ಮಾರ್ಗವಾಗಿ ಯಾರೂ ಹೋಗುವಂತಿಲ್ಲ, ಬರುವಂತಿಲ್ಲ.</p>
ಒಟ್ಟಾರೆ ಅಕ್ಕ-ಪಕ್ಕ ಜಿಲ್ಲೆಗಳಾದ ಹಾಸನ ಮತ್ತು ಚಿಕ್ಕಮಗಳೂರು ಮಾರ್ಗವಾಗಿ ಯಾರೂ ಹೋಗುವಂತಿಲ್ಲ, ಬರುವಂತಿಲ್ಲ.