MalayalamNewsableKannadaKannadaPrabhaTeluguTamilBanglaHindiMarathiMyNation
Add Preferred SourceGoogle-icon
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಗ್ಯಾಲರಿ
  • ಮನರಂಜನೆ
  • ಜ್ಯೋತಿಷ್ಯ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ಕ್ರೀಡೆ
  • ಜೀವನಶೈಲಿ
  • ವಾಣಿಜ್ಯ
TRENDING :
Ind vs SL 2nd Test
Today's Horoscope in Kannada
Mandya Jaggery Price
Bengaluru Garden City
Bengaluru Fake Medicine Racket
Karnataka-Tamil Nadu Border
Karnataka IAS Officer Missing
Pakistan-based Gang Doddaballapur
NICE Road Toll
Bhadra Irrigation Project
Minister B Nagendra
Valmiki Corporation Scam
BJP vs Minister B Nagendra
Bengaluru Airport Metro
Mysuru Chamundeshwari Temple Priest
Kabini Dam Water Level
  • Home
  • Karnataka Districts
  • ಸರ್ಕಾರದ ವಿರುದ್ಧ ಸಿಡಿದ ಮಡಿವಾಳ ಸಮುದಾಯ; ಎಚ್.ಎಂ. ಗೋಪಿಕೃಷ್ಣಗೆ MLC ಸ್ಥಾನ ಕೊಡುವಂತೆ ಆಗ್ರಹ

ಸರ್ಕಾರದ ವಿರುದ್ಧ ಸಿಡಿದ ಮಡಿವಾಳ ಸಮುದಾಯ; ಎಚ್.ಎಂ. ಗೋಪಿಕೃಷ್ಣಗೆ MLC ಸ್ಥಾನ ಕೊಡುವಂತೆ ಆಗ್ರಹ

ಚಿಕ್ಕಮಗಳೂರಿನಲ್ಲಿ, ತಮ್ಮನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಂಡು ಅಧಿಕಾರ ಹಂಚಿಕೆಯಲ್ಲಿ ಕಡೆಗಣಿಸಲಾಗಿದೆ ಎಂದು ಮಡಿವಾಳ ಸಮುದಾಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ. ಸಮುದಾಯದ ಮುಖಂಡ ಎಚ್.ಎಂ. ಗೋಪಿಕೃಷ್ಣ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡಬೇಕೆಂದು ಆಗ್ರಹಿಸಿದೆ.

1 Min read
Author : Sathish Kumar KH
Published : Jul 10 2026, 05:17 PM IST
Share this Photo Gallery
  • FB
  • TW
  • Linkdin
  • Whatsapp
15
Image Credit : Asianet News

ಚಿಕ್ಕಮಗಳೂರು (ಜು.10): 'ಅಹಿಂದ ವರ್ಗಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ, ಸಣ್ಣ ಸಣ್ಣ ಹಿಂದುಳಿದ ಸಮುದಾಯಗಳನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ' ಎಂದು ಮಡಿವಾಳ ಸಮುದಾಯದ ಮುಖಂಡರು ರಾಜ್ಯ ಸರ್ಕಾರದ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred
25
Image Credit : Asianet News

ಚಿಕ್ಕಮಗಳೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಮಡಿವಾಳ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಹನುಮಂತಪ್ಪ, ಕಾಂಗ್ರೆಸ್ ಸರ್ಕಾರದ ಕಾರ್ಯವೈಖರಿಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಚುನಾವಣಾ ಸಮಯದಲ್ಲಿ ಮತ್ತು ಪಕ್ಷ ಸಂಘಟನೆಯ ವಿವಿಧ ಹಂತಗಳಲ್ಲಿ ಮಡಿವಾಳ ಸಮುದಾಯದ ಜನರು ಸಕ್ರಿಯವಾಗಿ ಶ್ರಮಿಸಿದ್ದಾರೆ. ಪಾದಯಾತ್ರೆ ಹಾಗೂ ಹೋರಾಟಗಳಲ್ಲಿ ಮುಂಚೂಣಿಯಲ್ಲಿದ್ದರೂ, ಅಧಿಕಾರ ಹಂಚಿಕೆಯ ವಿಷಯಕ್ಕೆ ಬಂದಾಗ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ದೂರಿದರು.

Related Articles

Related image1
ಚಿಕ್ಕಮಗಳೂರು: ಆಶ್ರಮ ಶಾಲೆಯ ಸಿಬ್ಬಂದಿ ನಿರ್ಲಕ್ಷ್ಯ, ತಡರಾತ್ರಿ ಗಲಾಟೆಗೆ ಹೆದರಿ ಓಡಿಹೋದ 4 ಪುಟ್ಟ ಮಕ್ಕಳು!
Related image2
ಚಿಕ್ಕಮಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ, ಕಾಲಲ್ಲಿ ಹಾಕಿ ತುಳಿದ ಪಾಗಲ್ ಪ್ರೇಮಿ!
35
Image Credit : Asianet News

ಕಾಗದಕ್ಕೆ ಸೀಮಿತವಾದ 'ಸಮಪಾಲು-ಸಮಬಾಳು':

'ಸರ್ಕಾರ ಹೇಳುವ 'ಎಲ್ಲರಿಗೂ ಸಮಪಾಲು, ಸಮಬಾಳು' ಎಂಬ ನೀತಿ ಕೇವಲ ಘೋಷಣೆಗಳಿಗೆ ಮಾತ್ರ ಸೀಮಿತವಾಗಿದೆ. ವಾಸ್ತವದಲ್ಲಿ ಹಿಂದುಳಿದ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಸಿಗುತ್ತಿಲ್ಲ. ಸಣ್ಣ ಸಮುದಾಯಗಳ ನಿಷ್ಠಾವಂತ ನಾಯಕರನ್ನು ಗುರುತಿಸಿ ಅವರಿಗೆ ಸೂಕ್ತ ಸ್ಥಾನಮಾನ ನೀಡುವಲ್ಲಿ ಸರ್ಕಾರ ವಿಫಲವಾಗಿದೆ' ಎಂದು ಹನುಮಂತಪ್ಪ ಬೇಸರ ವ್ಯಕ್ತಪಡಿಸಿದರು.

45
Image Credit : Asianet News

ಎಚ್.ಎಂ. ಗೋಪಿಕೃಷ್ಣಗೆ MLC ಸ್ಥಾನಕ್ಕಾಗಿ ಆಗ್ರಹ:

ಮಡಿವಾಳ ಸಮುದಾಯದ ಪ್ರಬಲ ಧ್ವನಿಯಾಗಿ ಗುರುತಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ಎಚ್.ಎಂ. ಗೋಪಿಕೃಷ್ಣ ಅವರಿಗೆ ವಿಧಾನಪರಿಷತ್ ಸದಸ್ಯ (MLC) ಸ್ಥಾನವನ್ನು ನೀಡಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಲಾಯಿತು. 'ಕಳೆದ ಹದಿನೈದು ವರ್ಷಗಳಿಂದ ತರೀಕೆರೆ ಕ್ಷೇತ್ರದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಗೋಪಿಕೃಷ್ಣ ಅವರು ರಾಜ್ಯಾದ್ಯಂತ ಸಮುದಾಯದ ಸಂಘಟನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ನಿಷ್ಠೆ ಮತ್ತು ಸೇವೆಯನ್ನು ಪರಿಗಣಿಸಿ ಅವರಿಗೆ ವಿಧಾನಪರಿಷತ್‌ಗೆ ನಾಮನಿರ್ದೇಶನ ಮಾಡಬೇಕು' ಎಂದು ಮುಖಂಡರು ಸರ್ಕಾರವನ್ನು ಆಗ್ರಹಿಸಿದರು.

55
Image Credit : Asianet News

ಒಟ್ಟಾರೆಯಾಗಿ, ಸರ್ಕಾರದ ಇನ್ನುಳಿದ ಅವಧಿಯಲ್ಲಾದರೂ ಹಿಂದುಳಿದ ಮಡಿವಾಳ ಸಮುದಾಯಕ್ಕೆ ನ್ಯಾಯ ಒದಗಿಸದಿದ್ದರೆ ಮುಂದಿನ ದಿನಗಳಲ್ಲಿ ಸಮುದಾಯದ ವತಿಯಿಂದ ತೀವ್ರ ಹೋರಾಟ ನಡೆಸುವ ಮುನ್ಸೂಚನೆಯನ್ನು ಮುಖಂಡರು ನೀಡಿದ್ದಾರೆ.

About the Author

SK
Sathish Kumar KH
ವಿಜಯನಗರ ಜಿಲ್ಲೆ ಕಂದಗಲ್‌ಪುರ ಗ್ರಾಮದವನು ಮೂಲತಃ ಶಿಕ್ಷಕ. ಆದರೆ, ಆಕರ್ಷಿಸಿದ್ದು ಪತ್ರಿಕೋದ್ಯಮ. ಎಂಟು ವರ್ಷಗಳಿಂದ ಪ್ರಜಾವಾಣಿ, ವಿಜಯವಾಣಿ ನಂತರ ಇದೀಗ ಏಷ್ಯಾನೆಟ್ ಕನ್ನಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕರ್ನಾಟಕ ರಾಜಕಾರಣ ನೆಚ್ಚಿನ ಕ್ಷೇತ್ರ. ಡಿಜಿಟಲ್ ಮಾಧ್ಯಮಕ್ಕನುಗುಣವಾಗಿ ಶಿಕ್ಷಣ, ಆರೋಗ್ಯ, ಸಿನಿಮಾ ಸುದ್ದಿಗಳನ್ನೂ ಬರೆಯುತ್ತೇನೆ. ಕ್ರಿಕೆಟ್, ಕೃಷಿ ಇಷ್ಟ. ಓದು ನೆಚ್ಚಿನ ಹವ್ಯಾಸ.
ಕರ್ನಾಟಕ ರಾಜಕೀಯ
ರಾಜಕೀಯ ಸುದ್ದಿ
ಚಿಕ್ಕಮಗಳೂರು

Latest Videos
Recommended Stories
Recommended image1
Karnataka Politics: ಡೆಲ್ಲಿಯಲ್ಲಿ ರಾಹುಲ್ 'ಫೈಟ್'; ಬೆಂಗಳೂರಲ್ಲಿ ಡಿಕೆಶಿ 'ಊಟ್-ಬೈಟ್'! ಅದಾನಿ ಭೇಟಿಗೆ ಬಿಜೆಪಿ ಛಾಟಿ!
Recommended image2
Koppal: ಚಿರತೆ ಆತಂಕದ ಬೆನ್ನಲ್ಲೇ ಗಂಗಾವತಿಯಲ್ಲಿ ಹುಲಿ ಪ್ರತ್ಯಕ್ಷ: ಅರಣ್ಯ ಇಲಾಖೆ ಹೈ ಅಲರ್ಟ್!
Recommended image3
ನಾಳೆ ದಾವಣಗೆರೆ ಬಂದ್.. ತುರ್ತು ಸೇವೆ ಬಿಟ್ಟ ಎಲ್ಲಾ ಬಂದ್ ಬಂದ್! ಕಾರಣ ಏನು..?
Related Stories
Recommended image1
ಚಿಕ್ಕಮಗಳೂರು: ಆಶ್ರಮ ಶಾಲೆಯ ಸಿಬ್ಬಂದಿ ನಿರ್ಲಕ್ಷ್ಯ, ತಡರಾತ್ರಿ ಗಲಾಟೆಗೆ ಹೆದರಿ ಓಡಿಹೋದ 4 ಪುಟ್ಟ ಮಕ್ಕಳು!
Recommended image2
ಚಿಕ್ಕಮಗಳೂರು: ಪ್ರೀತಿ ನಿರಾಕರಿಸಿದ್ದಕ್ಕೆ ಅಪ್ರಾಪ್ತ ಬಾಲಕಿ ಮೇಲೆ ಹಲ್ಲೆ, ಕಾಲಲ್ಲಿ ಹಾಕಿ ತುಳಿದ ಪಾಗಲ್ ಪ್ರೇಮಿ!
News
kannada newslatest kannada newskarnataka newsbengaluru newsMysore newsindia news in kannadainternational news in kannada
Entertainment News
Kannada Cinema Newskannada movies reviewsandalwood newskannada tv shows
Sports News
sports news in kannadacricket news in kannadaOther Sports News in Kannada
Business News
Business news in kannadashare market news in kannadabusiness ideas in kannada
Science & Technology
technology news in kannadamobile tech newsscience and tech news
Astrology
rashi bhavishya in kannadadina bhavishyavara bhavishyavastu shastra in kannadakarnataka festivals
Lifestyle
Lifestyle news in kannadafood recipes in kannadahealth tips in kannadakitchen tips in kannada
Education & Career
job news in kannadaPrivate Jobsbank jobs in karnatakaGovernment jobs in karnatakaCentral Govt Jobs in KannadaIT Jobs
Asianet
Follow us on
  • Facebook
  • Twitter
  • whatsapp
  • YT video
  • insta
  • Download on Android
  • Download on IOS
  • About Website
  • About Tv
  • Terms of Use
  • Privacy Policy
  • CSAM Policy
  • Complaint Redressal - Website
  • Complaint Redressal - TV
  • Compliance Report Digital
  • Investors
© Copyright 2026 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved